Homeಸಿನಿಮಾಕ್ರೀಡೆಪಾಕ್ ಗೆಲುವಿಗೆ ಸಂಭ್ರಮ ಆರೋಪ: ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ಮೇಲೆ UAPA ಪ್ರಕರಣ

ಪಾಕ್ ಗೆಲುವಿಗೆ ಸಂಭ್ರಮ ಆರೋಪ: ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ಮೇಲೆ UAPA ಪ್ರಕರಣ

ನೀವು ಒಪ್ಪಬಹುದು ಅಥವಾ ಬಿಡಬಹುದು, ಪಾಕ್ ಗೆದ್ದಾಗ ಆ ತಂಡವನ್ನು ಮೊದಲು ಅಭಿನಂದಿಸಿದ ವಿರಾಟ್ ಕೊಹ್ಲಿಯವರ ಸರಿಯಾದ ಸ್ಫೂರ್ತಿಯನ್ನು ತೆಗೆದುಕೊಳ್ಳೋಣ - ಮುಫ್ತಿ

- Advertisement -
- Advertisement -

ಭಾರತ ಪಾಕಿಸ್ತಾನದ ನಡುವೆ ನಡೆದ ಐಸಿಸಿ ಟಿಟ್ವೆಂಟಿ ವಿಶ್ವಕಪ್ ಪಂದ್ಯದಲ್ಲಿ ಪಾಕ್ ಗೆದ್ದಾಗ ಸಂಭ್ರಮಿಸಿ ಪಾಕ್ ಪರ ಘೋಷಣೆ ಕೂಗಿದ ಆರೋಪದ ಮೇಲೆ ಶ್ರೀನಗರದ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ(UAPA)ಯ ಅಡಿಯಲ್ಲಿ ಎರಡು ಪ್ರಕರಣ ದಾಖಲಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಶ್ರೀ ಕಾಶ್ಮೀರ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ಶ್ರೀನಗರದ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಪಾಕ್ ಪರ ಘೋಷಣೆಗಳನ್ನು ಕೂಗಲಾಗಿದೆ ಎಂದು ಆರೋಪಿಸುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಅವುಗಳ ಆಧಾರದ ಮೇಲೆ ಶ್ರೀನಗರದ ಕರಣ್ ನಗರ್ ಮತ್ತು ಸೌರ ಪೊಲೀಸ್ ಠಾಣೆಗಳಲ್ಲಿ ಭಯೋತ್ಪಾದನಾ ವಿರೋಧಿ ಪ್ರಕರಣಗಳ ಅಡಿಯಲ್ಲಿ ಕೇಸು ದಾಖಲಾಗಿಸಲಾಗದೆ.

ಶ್ರೀ ಕಾಶ್ಮೀರ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಧಿಕಾರಿಗಳು ಈ ಕುರಿತು ಫ್ಯಾಕ್ಟ್ ಫೈಂಡಿಂಗ್ ಸಮಿತಿ ರಚಿಸಲಾಗಿದ್ದು ಪ್ರಕರಣದ ಬಗ್ಗೆ ಮಾಹಿತಿ ಕಲೆ ಹಾಕುವುದು ಮತ್ತು ವಿಡಿಯೋ ವೈರಲ್ ಆಗಿದ್ದು ಹೇಗೆ ಎಂದು ತನಿಖೆ ನಡೆಸಲು ನಿರ್ಧರಿಸಿದ್ದಾರೆ. 48 ಗಂಟೆಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ. “ನಮ್ಮ ಸಂಸ್ಥೆಯಲ್ಲಿ ಸಂಭ್ರಮಾಚರಣೆ ನಡೆದಿದೆ ಎನ್ನುವುದಕ್ಕೆ ಯಾವುದೇ ಸಾಕ್ಷಿಗಳಿಲ್ಲ. ಆಗಿದ್ದರೂ ಸತ್ಯಶೋಧನಾ ಸಮಿತಿ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ವೈರಲ್ ಆಗಿರುವ ವಿಡಿಯೋಗಳನ್ನು ಮತ್ತು ಅವುಗಳಲ್ಲಿರುವ ಜನರನ್ನು ಪರಿಶೀಲಿಸುವಲ್ಲಿ ನಿರತರಾಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ವಿದ್ಯಾರ್ಥಿಗಳ ಮೇಲಿನ ಪೊಲೀಸರ ಶಿಸ್ತುಕ್ರಮವನ್ನು ಜಮ್ಮು ಕಾಶ್ಮೀರ ಪೀಪಲ್ಸ್ ಕಾನ್ಸರೆನ್ಸ್‌ನ ಮುಖಂಡ ಸಾಜಿದ್ ಲೋನ್ ಬಲವಾಗಿ ಖಂಡಿಸಿದ್ದಾರೆ. “ಇದನ್ನು ನಾನು ಒಪ್ಪುವುದಿಲ್ಲ. ಅವರು ಬೇರೆ ತಂಡಕ್ಕೆ ಹುರಿದುಂಬಿಸಿದ ಕಾರಣ ಅವರು ದೇಶಭಕ್ತರಲ್ಲ ಎಂದು ನೀವು ಭಾವಿಸಿದರೆ- ಅವರು ದೇಶಭಕ್ತಿಯ ದಾರಿ ತಪ್ಪಿದ್ದಾರೆಂದು ನೀವು ಭಾವಿಸಿದರೆ ಅವರನ್ನು ಹಿಂದಕ್ಕೆ ಕರೆತರುವ ಧೈರ್ಯ ಮತ್ತು ನಂಬಿಕೆಯನ್ನು ನೀವು ಹೊಂದಿರಬೇಕು. ದಂಡನಾತ್ಮಕ ಕ್ರಮಗಳು ಸಹಾಯ ಮಾಡುವುದಿಲ್ಲ. ಈ ಹಿಂದೆಯೂ ಸಹಾಯ ಮಾಡಿಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಮೆಹಬೂಬ ಮುಫ್ತಿಯವರು ಟ್ವೀಟ್ ಮಾಡಿ, “ಗೃಹ ಸಚಿವರು ಕಾಶ್ಮೀರಿ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಯುಎಪಿಎ ಕೇಸು ಹಾಕುವ ಮೂಲಕ ತಮ್ಮ ಮನ್ ಕಿ ಬಾತ್ ಶುರು ಮಾಡಿದ್ದಾರೆ. ವಿದ್ಯಾವಂತ ಯುವಜನರು ಏಕೆ ಪಾಕಿಸ್ತಾನದೊಂದಿಗೆ ಗುರುತಿಸಿಕೊಳ್ಳಲು ಬಯಸುತ್ತಾರೆ ಎಂಬುದನ್ನು ಅರಿಯುವ ಬದಲು ಭಾರತ ಸರ್ಕಾರ ಅವರ ಮೇಲೆ ಪ್ರತೀಕಾರದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಂತಹ ಕ್ರಮಗಳು ಅವರನ್ನು ಮತ್ತಷ್ಟು ದೂರ ತಳ್ಳುತ್ತವೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, “ಪಾಕ್ ಗೆಲುವನ್ನು ಸಂಭ್ರಮಿಸುತ್ತಿರುವ ಕಾಶ್ಮೀರಿಗಳ ಮೇಲೆ ಇಷ್ಟೊಂದು ಕೋಪ ಏಕೆ? ಕೆಲವರು ದೇಶದ್ರೋಹಿಗಳ ಮೇಲೆ ಗುಂಡು ಹಾರಿಸಿ ಎಂದು ಕೊಲೆಗಡುಕ ಘೋಷಣೆಗಳನ್ನೂ ಕೂಗುತ್ತಿದ್ದಾರೆ. ಜಮ್ಮು ಕಾಶ್ಮೀರ ಛಿದ್ರಗೊಂಡಾಗ ಮತ್ತು ವಿಶೇಷ ಸ್ಥಾನಮಾನವನ್ನು ಕಸಿದುಕೊಂಡಾಗ ಎಷ್ಟು ಮಂದಿ ಸಿಹಿ ಹಂಚಿ ಸಂಭ್ರಮಿಸಿದರು ಎಂಬುದನ್ನು ಯಾರೂ ಮರೆತಿಲ್ಲ. ನೀವು ಒಪ್ಪಬಹುದು ಅಥವಾ ಬಿಡಬಹುದು, ಪಾಕ್ ಗೆದ್ದಾಗ ಆ ತಂಡವನ್ನು ಮೊದಲು ಅಭಿನಂದಿಸಿದ ವಿರಾಟ್ ಕೊಹ್ಲಿಯವರ ಸರಿಯಾದ ಸ್ಫೂರ್ತಿಯನ್ನು ತೆಗೆದುಕೊಳ್ಳೋಣ” ಎಂದು ಮುಫ್ತಿ ಹೇಳಿದ್ದಾರೆ.

ಐಸಿಸಿ ಟಿಟ್ವೆಂಟಿ ವಿಶ್ವಕಪ್‌ನ ತನ್ನ ಆರಂಭಿಕ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ಎದರು 10 ವಿಕೆಟ್‌ಗಳ ಸೋಲು ಕಂಡಿತು. ಆದರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪಂದ್ಯ ಮುಗಿದ ವೇಳೆ ಪಾಕಿಸ್ತಾನದ ಆಟಗಾರ ಮೊಹಮ್ಮದ್ ರಿಜ್ವಾನ್‌ರನ್ನು ಅಪ್ಪಿಕೊಂಡು ಅಭಿನಂದಿಸಿದರು. ಮತ್ತೊಬ್ಬ ಆಟಗಾರ ಪಾಕ್ ನಾಯಕ ಬಾಬರ್ ಅಜಂರಿಗೆ ಅಭಿನಂದನೆ ತಿಳಿಸಿದರು. ಈ ಫೋಟೊ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ “ನಿಜವಾದ ಕ್ರೀಡಾಸ್ಪೂರ್ತಿ” ಎಂಬ ಹೆಗ್ಗಳಿಕೆಗೆ ಪಾತ್ರವಾಗಿವೆ. ಅದೇ ರೀತಿ ಪಂದ್ಯದ ನಂತರ ಭಾರತದ ತಂಡದ ಮೆಂಟರ್ ಮಹೇಂದ್ರ ಸಿಂಗ್ ಧೋನಿ ಪಾಕಿಸ್ತಾನದ ಆಟಗಾರರ ಜೊತೆ ಮಾತುಕತೆ ನಡೆಸಿ ಕ್ರೀಡಾಭಿಮಾನಿಗಳ ಮನಗೆದ್ದಿದ್ದಾರೆ.


ಇದನ್ನೂ ಓದಿ: ಮೊಹಮ್ಮದ್ ಶಮಿ ಪರ ನಿಂತ ರಾಹುಲ್ ಗಾಂಧಿ, ಸಚಿನ್ ತೆಂಡೂಲ್ಕರ್


ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ದುಕೊಂಡಿತು. ಪಾಕಿಸ್ತಾನದ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ಗಳು ತತ್ತರಿಸಿದರು. 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡ ಭಾರತ 151 ರನ್ ಪೇರಿಸಲಷ್ಟೇ ಸಾಧ್ಯವಾಯಿತು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಯಾವುದೇ ವಿಕೆಟ್ ನಷ್ಟವಿಲ್ಲದೆ 152 ರನ್ ಗಳಿಸಿ ಗೆಲುವಿನ ಸಿಹಿ ಉಂಡಿತು. ಆ ಮೂಲಕ ಪಾಕಿಸ್ತಾನ ತಂಡವು ವಿಶ್ವಕಪ್ ಪಂದ್ಯಾವಳಿಗಳಲ್ಲಿ ಮೊದಲ ಬಾರಿಗೆ ಭಾರತದ ಎದುರು ಜಯ ದಾಖಲಿಸಿತು. ಬಾಬರ್ ಅಜಂ ಮತ್ತು ಮೊಹಮ್ಮದ್ ರಿಜ್ವಾನ್‌ ಅದ್ಭುತ ಜೊತೆಯಾಟವಾಡಿದರು.

ಪಾಕ್ ಪಂದ್ಯ ಗೆದ್ದ ನಂತರ ವಿರಾಟ್ ಕೊಹ್ಲಿ ಪಾಕ್ ಆಟಗಾರರನ್ನು ಅಭಿನಂದಿಸುತ್ತಿರುವ ಫೋಟೊ ಹಂಚಿಕೊಂಡಿರುವ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ “Spirit of Cricket” ಎಂದು ಬರೆದಿದೆ.


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...