Homeಮುಖಪುಟವಿಕಾಸ್ ದುಬೆ ಹತ್ಯೆ ತನಿಖೆಗೆ ವಿಶೇಷ ತಂಡ: ವಿವಾದಾತ್ಮಕ ಎನ್ ಕೌಂಟರ್ ಆರೋಪಿ ರವೀಂದರ್ ಗೌಡ್...

ವಿಕಾಸ್ ದುಬೆ ಹತ್ಯೆ ತನಿಖೆಗೆ ವಿಶೇಷ ತಂಡ: ವಿವಾದಾತ್ಮಕ ಎನ್ ಕೌಂಟರ್ ಆರೋಪಿ ರವೀಂದರ್ ಗೌಡ್ ಸದಸ್ಯ!

DIG ಜೆ. ರವೀಂದ್ರ ಗೌಡ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ಭೂಸ್ರೆಡ್ಡಿ, ಹೆಚ್ಚುವರಿ ಪೊಲೀಸ್ DG ಹರಿರಾಮ್ ಶರ್ಮಾ ಈ ಮೂವರು SITಯ ಸದಸ್ಯರಾಗಿದ್ದಾರೆ.

- Advertisement -
- Advertisement -

ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಅವರನ್ನು ಕಳೆದ ವಾರ ವಿವಾದಾತ್ಮಕವಾಗಿ ಹತ್ಯೆಗೈದಿರುವ ಬಗ್ಗೆ ತನಿಖೆ ನಡೆಸಲು ಉತ್ತರ ಪ್ರದೇಶ ಸರ್ಕಾರ ಸ್ಥಾಪಿಸಿದ ವಿಶೇಷ ತನಿಖಾ ತಂಡದ (SIT) ಸದಸ್ಯರೊಬ್ಬರು 13 ವರ್ಷಗಳ ಹಿಂದೆ ನಕಲಿ ಎನ್‌ಕೌಂಟರ್‌ನಲ್ಲಿ  ಒಬ್ಬ ಅಮಾಯಕ ವ್ಯಕ್ತಿಯನ್ನು ಕೊಂದ ಆರೋಪ ಎದುರಿಸುತ್ತಿದ್ದಾರೆ.

DIG ಜೆ. ರವೀಂದರ್ ಗೌಡ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ಭೂಸ್ರೆಡ್ಡಿ, ಹೆಚ್ಚುವರಿ ಪೊಲೀಸ್ DG ಹರಿರಾಮ್ ಶರ್ಮಾ ಈ ಮೂವರು SITಯ ಸದಸ್ಯರಾಗಿದ್ದಾರೆ.

2007 ರ ಎನ್‌ಕೌಂಟರ್‌ನಲ್ಲಿ ಬರೇಲಿಯಲ್ಲಿ ಯುವ ಔಷಧ ವ್ಯಾಪಾರಿ ಕೊಲ್ಲಲ್ಪಟ್ಟಿದ್ದರು. ಇದರ ಸಿಬಿಐ ತನಿಖೆಗೆ ಅಲಹಾಬಾದ್ ಹೈಕೋರ್ಟ್ ಆದೇಶಿಸಿತ್ತು. ನಂತರ ಸಿಬಿಐ ಗೌಡ್ ಅವರ ಮೇಲೆ ಚಾರ್ಜ್ ಶೀಟ್ ಸಲ್ಲಿಸಿತ್ತು. ಆದರೆ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಸರ್ಕಾರವು ಕಾನೂನು ಕ್ರಮ ಜರುಗಿಸಲು ಅನುಮತಿಯನ್ನು ತಡೆಹಿಡಿದಿತ್ತು. ಯೋಗಿ ಆದಿತ್ಯನಾಥ್ ಬಿಜೆಪಿ ಸರ್ಕಾರವು ಅನುಮತಿ ನೀಡಿಲ್ಲ.

“ಇಂತಹ ಅಧಿಕಾರಿಯನ್ನು ಮೂರು ಸದಸ್ಯರ ಉನ್ನತ ಮಟ್ಟದ SITಯಲ್ಲಿ ಏಕೆ ಸೇರಿಸಬೇಕು. ನಕಲಿ ಎನ್ಕೌಂಟರ್ ನಿಂದ ಕಳಂಕಿತರಾದವರನ್ನು, ನಕಲಿ ಎನ್ಕೌಂಟರ್ ಎಂದು ಆರೋಪಿಸಿ ವ್ಯಾಪಕವಾಗಿ ಚರ್ಚೆಯಾಗುತ್ತಿರುವ ಮತ್ತೊಂದು ಪ್ರಕರಣದಲ್ಲಿ ತನಿಖೆ ಮಾಡಲು ಸೇರಿಸಿದ್ದಾರೆ ಎಂಬುದು ನಿಜವಾಗಿಯೂ ಆಘಾತಕಾರಿ” ಎಂದು ಹೈಕೋರ್ಟ್‌ನ ಹಿರಿಯ ವಕೀಲ ಐ.ಬಿ. ಸಿಂಗ್ ಹೇಳಿದ್ದಾರೆ.

ಜುಲೈ 31 ರೊಳಗೆ ತನ್ನ ವರದಿಯನ್ನು ಸಲ್ಲಿಸುವಂತೆ SIT ಗೆ ಕೋರಲಾಗಿದೆ. ಆದರೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ಭೂಸ್ರೆಡ್ಡಿ, ಹೆಚ್ಚುವರಿ ಪೊಲೀಸ್ DG ಹರಿರಾಮ್ ಶರ್ಮಾ ಅವರೊಂದಿಗೆ ಈ ಮೇಲಿನ ಆರೋಪ ಹೊತ್ತಿರುವ ಗೌಡ್ ಸೇರ್ಪಡೆ ಅನುಮಾನಗಳನ್ನು ಹುಟ್ಟುಹಾಕಿದೆ.

2005 ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಗೌಡ್, ಜೂನ್ 30, 2007 ರಂದು ಬರೇಲಿಯಲ್ಲಿ ಯುವ ಔಷಧ ವ್ಯಾಪಾರಿ ಮುಕುಲ್ ಗುಪ್ತಾ ಅವರ ನಕಲಿ ಎನ್‌ಕೌಂಟರ್‌ನಲ್ಲಿನ ಪಾತ್ರಕ್ಕಾಗಿ ಅಪಖ್ಯಾತಿಗೆ ಗುರಿಯಾಗಿದ್ದರು. ಈ ಅಧಿಕಾರಿ ಕೇವಲ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದರು.

ಗುಪ್ತಾ ಅವರ ತಂದೆ ಬ್ರಿಜೇಂದ್ರ ಗುಪ್ತಾ ತಮ್ಮ ಮುಗ್ಧ ಮಗನಿಗೆ ನಡೆದ ಅನ್ಯಾಯದ ವಿರುದ್ಧ ಹೋರಾಡಲು ನಿರ್ಧರಿಸಿದ್ದರು. ಸಿಬಿಐ ತನಿಖೆಗಾಗಿ ಅಲಹಾಬಾದ್ ಹೈಕೋರ್ಟ್ ಗೆ ಸಲ್ಲಿಸಿದ್ದ ಅವರ ಮನವಿಯನ್ನು ಕೋರ್ಟ್ ಅಂಗೀಕರಿಸಿತು. ಇದರಲ್ಲಿ ಗೌಡ್ ಸೇರಿದಂತೆ 10 ಪೊಲೀಸರನ್ನು ಆಗಸ್ಟ್ 26, 2014 ರಂದು ಚಾರ್ಜ್ ಶೀಟ್ ಮಾಡಲಾಗಿತ್ತು. ಆಘಾತಕಾರಿ ಸಂಗತಿಯೆಂದರೆ, ಗುಪ್ತಾ ಅವರ ಹೆತ್ತವರನ್ನು ಒಂದು ವರ್ಷದ ನಂತರ, ಏಪ್ರಿಲ್ 2015 ರಲ್ಲಿ ಕೊಲ್ಲಲಾಯಿತು. ಈ ಕೊಲೆಗಳ ಬಗ್ಗೆಯೂ ತನಿಖೆ ಪೂರ್ಣಗೊಂಡಿಲ್ಲ.

ಇಷ್ಟೆಲ್ಲಾ ಆರೋಪಗಳನ್ನು ಎದುರಿಸುತ್ತಿರುವ ಪೋಲಿಸರನ್ನು, ತನಿಖೆ ನಡೆಸುವ ತಂಡದಲ್ಲಿ ಸೇರಿಸಿರುವುದರ ಕುರಿತು ಸರ್ಕಾರ ಮತ್ತು ಅಧಿಕಾರಿಗಳು ಮೌನ ವಹಿಸಿದ್ದಾರೆ.


ಇದನ್ನೂ ಓದಿ: ವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...