Homeಮುಖಪುಟವಿಕಾಸ್ ದುಬೆ ಹತ್ಯೆ ತನಿಖೆಗೆ ವಿಶೇಷ ತಂಡ: ವಿವಾದಾತ್ಮಕ ಎನ್ ಕೌಂಟರ್ ಆರೋಪಿ ರವೀಂದರ್ ಗೌಡ್...

ವಿಕಾಸ್ ದುಬೆ ಹತ್ಯೆ ತನಿಖೆಗೆ ವಿಶೇಷ ತಂಡ: ವಿವಾದಾತ್ಮಕ ಎನ್ ಕೌಂಟರ್ ಆರೋಪಿ ರವೀಂದರ್ ಗೌಡ್ ಸದಸ್ಯ!

DIG ಜೆ. ರವೀಂದ್ರ ಗೌಡ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ಭೂಸ್ರೆಡ್ಡಿ, ಹೆಚ್ಚುವರಿ ಪೊಲೀಸ್ DG ಹರಿರಾಮ್ ಶರ್ಮಾ ಈ ಮೂವರು SITಯ ಸದಸ್ಯರಾಗಿದ್ದಾರೆ.

- Advertisement -
- Advertisement -

ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಅವರನ್ನು ಕಳೆದ ವಾರ ವಿವಾದಾತ್ಮಕವಾಗಿ ಹತ್ಯೆಗೈದಿರುವ ಬಗ್ಗೆ ತನಿಖೆ ನಡೆಸಲು ಉತ್ತರ ಪ್ರದೇಶ ಸರ್ಕಾರ ಸ್ಥಾಪಿಸಿದ ವಿಶೇಷ ತನಿಖಾ ತಂಡದ (SIT) ಸದಸ್ಯರೊಬ್ಬರು 13 ವರ್ಷಗಳ ಹಿಂದೆ ನಕಲಿ ಎನ್‌ಕೌಂಟರ್‌ನಲ್ಲಿ  ಒಬ್ಬ ಅಮಾಯಕ ವ್ಯಕ್ತಿಯನ್ನು ಕೊಂದ ಆರೋಪ ಎದುರಿಸುತ್ತಿದ್ದಾರೆ.

DIG ಜೆ. ರವೀಂದರ್ ಗೌಡ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ಭೂಸ್ರೆಡ್ಡಿ, ಹೆಚ್ಚುವರಿ ಪೊಲೀಸ್ DG ಹರಿರಾಮ್ ಶರ್ಮಾ ಈ ಮೂವರು SITಯ ಸದಸ್ಯರಾಗಿದ್ದಾರೆ.

2007 ರ ಎನ್‌ಕೌಂಟರ್‌ನಲ್ಲಿ ಬರೇಲಿಯಲ್ಲಿ ಯುವ ಔಷಧ ವ್ಯಾಪಾರಿ ಕೊಲ್ಲಲ್ಪಟ್ಟಿದ್ದರು. ಇದರ ಸಿಬಿಐ ತನಿಖೆಗೆ ಅಲಹಾಬಾದ್ ಹೈಕೋರ್ಟ್ ಆದೇಶಿಸಿತ್ತು. ನಂತರ ಸಿಬಿಐ ಗೌಡ್ ಅವರ ಮೇಲೆ ಚಾರ್ಜ್ ಶೀಟ್ ಸಲ್ಲಿಸಿತ್ತು. ಆದರೆ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಸರ್ಕಾರವು ಕಾನೂನು ಕ್ರಮ ಜರುಗಿಸಲು ಅನುಮತಿಯನ್ನು ತಡೆಹಿಡಿದಿತ್ತು. ಯೋಗಿ ಆದಿತ್ಯನಾಥ್ ಬಿಜೆಪಿ ಸರ್ಕಾರವು ಅನುಮತಿ ನೀಡಿಲ್ಲ.

“ಇಂತಹ ಅಧಿಕಾರಿಯನ್ನು ಮೂರು ಸದಸ್ಯರ ಉನ್ನತ ಮಟ್ಟದ SITಯಲ್ಲಿ ಏಕೆ ಸೇರಿಸಬೇಕು. ನಕಲಿ ಎನ್ಕೌಂಟರ್ ನಿಂದ ಕಳಂಕಿತರಾದವರನ್ನು, ನಕಲಿ ಎನ್ಕೌಂಟರ್ ಎಂದು ಆರೋಪಿಸಿ ವ್ಯಾಪಕವಾಗಿ ಚರ್ಚೆಯಾಗುತ್ತಿರುವ ಮತ್ತೊಂದು ಪ್ರಕರಣದಲ್ಲಿ ತನಿಖೆ ಮಾಡಲು ಸೇರಿಸಿದ್ದಾರೆ ಎಂಬುದು ನಿಜವಾಗಿಯೂ ಆಘಾತಕಾರಿ” ಎಂದು ಹೈಕೋರ್ಟ್‌ನ ಹಿರಿಯ ವಕೀಲ ಐ.ಬಿ. ಸಿಂಗ್ ಹೇಳಿದ್ದಾರೆ.

ಜುಲೈ 31 ರೊಳಗೆ ತನ್ನ ವರದಿಯನ್ನು ಸಲ್ಲಿಸುವಂತೆ SIT ಗೆ ಕೋರಲಾಗಿದೆ. ಆದರೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ಭೂಸ್ರೆಡ್ಡಿ, ಹೆಚ್ಚುವರಿ ಪೊಲೀಸ್ DG ಹರಿರಾಮ್ ಶರ್ಮಾ ಅವರೊಂದಿಗೆ ಈ ಮೇಲಿನ ಆರೋಪ ಹೊತ್ತಿರುವ ಗೌಡ್ ಸೇರ್ಪಡೆ ಅನುಮಾನಗಳನ್ನು ಹುಟ್ಟುಹಾಕಿದೆ.

2005 ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಗೌಡ್, ಜೂನ್ 30, 2007 ರಂದು ಬರೇಲಿಯಲ್ಲಿ ಯುವ ಔಷಧ ವ್ಯಾಪಾರಿ ಮುಕುಲ್ ಗುಪ್ತಾ ಅವರ ನಕಲಿ ಎನ್‌ಕೌಂಟರ್‌ನಲ್ಲಿನ ಪಾತ್ರಕ್ಕಾಗಿ ಅಪಖ್ಯಾತಿಗೆ ಗುರಿಯಾಗಿದ್ದರು. ಈ ಅಧಿಕಾರಿ ಕೇವಲ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದರು.

ಗುಪ್ತಾ ಅವರ ತಂದೆ ಬ್ರಿಜೇಂದ್ರ ಗುಪ್ತಾ ತಮ್ಮ ಮುಗ್ಧ ಮಗನಿಗೆ ನಡೆದ ಅನ್ಯಾಯದ ವಿರುದ್ಧ ಹೋರಾಡಲು ನಿರ್ಧರಿಸಿದ್ದರು. ಸಿಬಿಐ ತನಿಖೆಗಾಗಿ ಅಲಹಾಬಾದ್ ಹೈಕೋರ್ಟ್ ಗೆ ಸಲ್ಲಿಸಿದ್ದ ಅವರ ಮನವಿಯನ್ನು ಕೋರ್ಟ್ ಅಂಗೀಕರಿಸಿತು. ಇದರಲ್ಲಿ ಗೌಡ್ ಸೇರಿದಂತೆ 10 ಪೊಲೀಸರನ್ನು ಆಗಸ್ಟ್ 26, 2014 ರಂದು ಚಾರ್ಜ್ ಶೀಟ್ ಮಾಡಲಾಗಿತ್ತು. ಆಘಾತಕಾರಿ ಸಂಗತಿಯೆಂದರೆ, ಗುಪ್ತಾ ಅವರ ಹೆತ್ತವರನ್ನು ಒಂದು ವರ್ಷದ ನಂತರ, ಏಪ್ರಿಲ್ 2015 ರಲ್ಲಿ ಕೊಲ್ಲಲಾಯಿತು. ಈ ಕೊಲೆಗಳ ಬಗ್ಗೆಯೂ ತನಿಖೆ ಪೂರ್ಣಗೊಂಡಿಲ್ಲ.

ಇಷ್ಟೆಲ್ಲಾ ಆರೋಪಗಳನ್ನು ಎದುರಿಸುತ್ತಿರುವ ಪೋಲಿಸರನ್ನು, ತನಿಖೆ ನಡೆಸುವ ತಂಡದಲ್ಲಿ ಸೇರಿಸಿರುವುದರ ಕುರಿತು ಸರ್ಕಾರ ಮತ್ತು ಅಧಿಕಾರಿಗಳು ಮೌನ ವಹಿಸಿದ್ದಾರೆ.


ಇದನ್ನೂ ಓದಿ: ವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...