Homeಮುಖಪುಟವಿಕಾಸ್ ದುಬೆ ಹತ್ಯೆ ತನಿಖೆಗೆ ವಿಶೇಷ ತಂಡ: ವಿವಾದಾತ್ಮಕ ಎನ್ ಕೌಂಟರ್ ಆರೋಪಿ ರವೀಂದರ್ ಗೌಡ್...

ವಿಕಾಸ್ ದುಬೆ ಹತ್ಯೆ ತನಿಖೆಗೆ ವಿಶೇಷ ತಂಡ: ವಿವಾದಾತ್ಮಕ ಎನ್ ಕೌಂಟರ್ ಆರೋಪಿ ರವೀಂದರ್ ಗೌಡ್ ಸದಸ್ಯ!

DIG ಜೆ. ರವೀಂದ್ರ ಗೌಡ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ಭೂಸ್ರೆಡ್ಡಿ, ಹೆಚ್ಚುವರಿ ಪೊಲೀಸ್ DG ಹರಿರಾಮ್ ಶರ್ಮಾ ಈ ಮೂವರು SITಯ ಸದಸ್ಯರಾಗಿದ್ದಾರೆ.

- Advertisement -
- Advertisement -

ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಅವರನ್ನು ಕಳೆದ ವಾರ ವಿವಾದಾತ್ಮಕವಾಗಿ ಹತ್ಯೆಗೈದಿರುವ ಬಗ್ಗೆ ತನಿಖೆ ನಡೆಸಲು ಉತ್ತರ ಪ್ರದೇಶ ಸರ್ಕಾರ ಸ್ಥಾಪಿಸಿದ ವಿಶೇಷ ತನಿಖಾ ತಂಡದ (SIT) ಸದಸ್ಯರೊಬ್ಬರು 13 ವರ್ಷಗಳ ಹಿಂದೆ ನಕಲಿ ಎನ್‌ಕೌಂಟರ್‌ನಲ್ಲಿ  ಒಬ್ಬ ಅಮಾಯಕ ವ್ಯಕ್ತಿಯನ್ನು ಕೊಂದ ಆರೋಪ ಎದುರಿಸುತ್ತಿದ್ದಾರೆ.

DIG ಜೆ. ರವೀಂದರ್ ಗೌಡ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ಭೂಸ್ರೆಡ್ಡಿ, ಹೆಚ್ಚುವರಿ ಪೊಲೀಸ್ DG ಹರಿರಾಮ್ ಶರ್ಮಾ ಈ ಮೂವರು SITಯ ಸದಸ್ಯರಾಗಿದ್ದಾರೆ.

2007 ರ ಎನ್‌ಕೌಂಟರ್‌ನಲ್ಲಿ ಬರೇಲಿಯಲ್ಲಿ ಯುವ ಔಷಧ ವ್ಯಾಪಾರಿ ಕೊಲ್ಲಲ್ಪಟ್ಟಿದ್ದರು. ಇದರ ಸಿಬಿಐ ತನಿಖೆಗೆ ಅಲಹಾಬಾದ್ ಹೈಕೋರ್ಟ್ ಆದೇಶಿಸಿತ್ತು. ನಂತರ ಸಿಬಿಐ ಗೌಡ್ ಅವರ ಮೇಲೆ ಚಾರ್ಜ್ ಶೀಟ್ ಸಲ್ಲಿಸಿತ್ತು. ಆದರೆ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಸರ್ಕಾರವು ಕಾನೂನು ಕ್ರಮ ಜರುಗಿಸಲು ಅನುಮತಿಯನ್ನು ತಡೆಹಿಡಿದಿತ್ತು. ಯೋಗಿ ಆದಿತ್ಯನಾಥ್ ಬಿಜೆಪಿ ಸರ್ಕಾರವು ಅನುಮತಿ ನೀಡಿಲ್ಲ.

“ಇಂತಹ ಅಧಿಕಾರಿಯನ್ನು ಮೂರು ಸದಸ್ಯರ ಉನ್ನತ ಮಟ್ಟದ SITಯಲ್ಲಿ ಏಕೆ ಸೇರಿಸಬೇಕು. ನಕಲಿ ಎನ್ಕೌಂಟರ್ ನಿಂದ ಕಳಂಕಿತರಾದವರನ್ನು, ನಕಲಿ ಎನ್ಕೌಂಟರ್ ಎಂದು ಆರೋಪಿಸಿ ವ್ಯಾಪಕವಾಗಿ ಚರ್ಚೆಯಾಗುತ್ತಿರುವ ಮತ್ತೊಂದು ಪ್ರಕರಣದಲ್ಲಿ ತನಿಖೆ ಮಾಡಲು ಸೇರಿಸಿದ್ದಾರೆ ಎಂಬುದು ನಿಜವಾಗಿಯೂ ಆಘಾತಕಾರಿ” ಎಂದು ಹೈಕೋರ್ಟ್‌ನ ಹಿರಿಯ ವಕೀಲ ಐ.ಬಿ. ಸಿಂಗ್ ಹೇಳಿದ್ದಾರೆ.

ಜುಲೈ 31 ರೊಳಗೆ ತನ್ನ ವರದಿಯನ್ನು ಸಲ್ಲಿಸುವಂತೆ SIT ಗೆ ಕೋರಲಾಗಿದೆ. ಆದರೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ಭೂಸ್ರೆಡ್ಡಿ, ಹೆಚ್ಚುವರಿ ಪೊಲೀಸ್ DG ಹರಿರಾಮ್ ಶರ್ಮಾ ಅವರೊಂದಿಗೆ ಈ ಮೇಲಿನ ಆರೋಪ ಹೊತ್ತಿರುವ ಗೌಡ್ ಸೇರ್ಪಡೆ ಅನುಮಾನಗಳನ್ನು ಹುಟ್ಟುಹಾಕಿದೆ.

2005 ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಗೌಡ್, ಜೂನ್ 30, 2007 ರಂದು ಬರೇಲಿಯಲ್ಲಿ ಯುವ ಔಷಧ ವ್ಯಾಪಾರಿ ಮುಕುಲ್ ಗುಪ್ತಾ ಅವರ ನಕಲಿ ಎನ್‌ಕೌಂಟರ್‌ನಲ್ಲಿನ ಪಾತ್ರಕ್ಕಾಗಿ ಅಪಖ್ಯಾತಿಗೆ ಗುರಿಯಾಗಿದ್ದರು. ಈ ಅಧಿಕಾರಿ ಕೇವಲ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದರು.

ಗುಪ್ತಾ ಅವರ ತಂದೆ ಬ್ರಿಜೇಂದ್ರ ಗುಪ್ತಾ ತಮ್ಮ ಮುಗ್ಧ ಮಗನಿಗೆ ನಡೆದ ಅನ್ಯಾಯದ ವಿರುದ್ಧ ಹೋರಾಡಲು ನಿರ್ಧರಿಸಿದ್ದರು. ಸಿಬಿಐ ತನಿಖೆಗಾಗಿ ಅಲಹಾಬಾದ್ ಹೈಕೋರ್ಟ್ ಗೆ ಸಲ್ಲಿಸಿದ್ದ ಅವರ ಮನವಿಯನ್ನು ಕೋರ್ಟ್ ಅಂಗೀಕರಿಸಿತು. ಇದರಲ್ಲಿ ಗೌಡ್ ಸೇರಿದಂತೆ 10 ಪೊಲೀಸರನ್ನು ಆಗಸ್ಟ್ 26, 2014 ರಂದು ಚಾರ್ಜ್ ಶೀಟ್ ಮಾಡಲಾಗಿತ್ತು. ಆಘಾತಕಾರಿ ಸಂಗತಿಯೆಂದರೆ, ಗುಪ್ತಾ ಅವರ ಹೆತ್ತವರನ್ನು ಒಂದು ವರ್ಷದ ನಂತರ, ಏಪ್ರಿಲ್ 2015 ರಲ್ಲಿ ಕೊಲ್ಲಲಾಯಿತು. ಈ ಕೊಲೆಗಳ ಬಗ್ಗೆಯೂ ತನಿಖೆ ಪೂರ್ಣಗೊಂಡಿಲ್ಲ.

ಇಷ್ಟೆಲ್ಲಾ ಆರೋಪಗಳನ್ನು ಎದುರಿಸುತ್ತಿರುವ ಪೋಲಿಸರನ್ನು, ತನಿಖೆ ನಡೆಸುವ ತಂಡದಲ್ಲಿ ಸೇರಿಸಿರುವುದರ ಕುರಿತು ಸರ್ಕಾರ ಮತ್ತು ಅಧಿಕಾರಿಗಳು ಮೌನ ವಹಿಸಿದ್ದಾರೆ.


ಇದನ್ನೂ ಓದಿ: ವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...