Homeಮುಖಪುಟಬಿಜೆಪಿಯೇತರ ಆಡಳಿತದ ರಾಜ್ಯಗಳಿಗೆ ಬಜೆಟ್‌ನಲ್ಲಿ ತಾರತಮ್ಯ ಆರೋಪ; ಇಂಡಿಯಾ ಬಣದಿಂದ ಪ್ರತಿಭಟನೆ

ಬಿಜೆಪಿಯೇತರ ಆಡಳಿತದ ರಾಜ್ಯಗಳಿಗೆ ಬಜೆಟ್‌ನಲ್ಲಿ ತಾರತಮ್ಯ ಆರೋಪ; ಇಂಡಿಯಾ ಬಣದಿಂದ ಪ್ರತಿಭಟನೆ

- Advertisement -
- Advertisement -

2024ರ ಕೇಂದ್ರ ಬಜೆಟ್ ಕುರಿತು ವಿರೋಧ ಪಕ್ಷದ ಇಂಡಿಯಾ ಬ್ಲಾಕ್‌ನ ಸಂಸದರು ಇಂದು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು, ಅನೇಕ ಪಕ್ಷಗಳು ಬಿಜೆಪಿಯೇತರ ಆಡಳಿತದ ರಾಜ್ಯಗಳ ವಿರುದ್ಧ ಬಜೆಟ್‌ನಲ್ಲಿ “ತಾರತಮ್ಯ” ಮಾಡಲಾಗಿದೆ ಎಂದು ಆರೋಪ ಮಾಡಿವೆ.

ಪ್ರತಿಭಟನೆಯಲ್ಲಿ ಭಾಗವಹಿಸುವ ಪ್ರಮುಖ ನಾಯಕರಲ್ಲಿ ಕಾಂಗ್ರೆಸ್‌ನ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಇದ್ದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಸತತ ಏಳನೇ ಬಜೆಟ್ ಮಂಡಿಸಿದ ನಂತರ ಪ್ರತಿಪಕ್ಷಗಳ ಕಾರ್ಯತಂತ್ರವನ್ನು ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರಾಜಾಜಿ ಮಾರ್ಗದ ನಿವಾಸದಲ್ಲಿ ಇಂಡಿಯಾ ಬ್ಲಾಕ್ ಪಕ್ಷಗಳ ನಾಯಕರು ಸಭೆ ಸೇರಿದ ಒಂದು ದಿನದ ನಂತರ ಬುಧವಾರದ ಈ ಬೆಳವಣಿಗೆ ನಡೆದಿದೆ.

ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಸಂಸದರಾದ ರಾಹುಲ್ ಗಾಂಧಿ ಮತ್ತು ಕೆಸಿ ವೇಣುಗೋಪಾಲ್, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್, ಶಿವಸೇನೆ (ಯುಬಿಟಿ) ಸಂಸದರಾದ ಸಂಜಯ್ ರಾವುತ್ ಮತ್ತು ಅರವಿಂದ್ ಸಾವಂತ್, ಡಿಎಂಕೆ ಸಂಸದರಾದ ಟಿಆರ್ ಬಾಲು ಮತ್ತು ತಿರುಚಿ ಶಿವ, ಜಾರ್ಖಂಡ್ ಮುಕ್ತಿ ಮುಂತಾದ ನಾಯಕರು ಭಾಗವಹಿಸಿದ್ದರು.ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ, ಆಮ್ ಆದ್ಮಿ ಪಕ್ಷದ ಸಂಸದರಾದ ಸಂಜಯ್ ಸಿಂಗ್ ಮತ್ತು ರಾಘವ್ ಚಡ್ಡಾ ಇತರರು ಇದ್ದರು.

ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೆ.ಸಿ.ವೇಣುಗೋಪಾಲ್, ಈ ಬಾರಿಯ ಕೇಂದ್ರ ಬಜೆಟ್‌ನಿಂದ ಈಗಾಗಲೇ ಬಜೆಟ್ ಪರಿಕಲ್ಪನೆಯನ್ನು ನಾಶಪಡಿಸಲಾಗಿದೆ, ಅವರು ಬಹುತೇಕ ರಾಜ್ಯಗಳನ್ನು ಸಂಪೂರ್ಣವಾಗಿ ತಾರತಮ್ಯ ಮಾಡಿದ್ದಾರೆ” ಎಂದರು.

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದಲ್ಲಿ (ಎನ್‌ಡಿಎ) ಬಿಜೆಪಿಯ ಎರಡು ಪ್ರಮುಖ ಮಿತ್ರಪಕ್ಷಗಳು ಆಳುತ್ತಿರುವ ರಾಜ್ಯಗಳಾದ ಬಿಹಾರ ಮತ್ತು ಆಂಧ್ರಪ್ರದೇಶದ ಕಡೆಗೆ ಬಜೆಟ್ ಪಕ್ಷಪಾತವಾಗಿದೆ ಎಂದು ಅನೇಕ ವಿರೋಧ ಪಕ್ಷದ ನಾಯಕರು ಟೀಕಿಸಿದರು. ಆಂಧ್ರಪ್ರದೇಶದ ಹೊಸ ರಾಜಧಾನಿ ಅಮರಾವತಿ ಅಭಿವೃದ್ಧಿಗೆ ಹಣಕಾಸು ಸಚಿವರು 15,000 ಕೋಟಿ ರೂ.ಗಳನ್ನು ವಿನಿಯೋಗಿಸಿದರೆ, ಬಿಹಾರಕ್ಕೆ ಹಲವು ರಸ್ತೆ ಸಂಪರ್ಕ ಯೋಜನೆಗಳಿಗೆ 26,000 ಕೋಟಿ ರೂ. ನೀಡಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇದನ್ನು “ಕುರ್ಸಿ ಬಚಾವೋ” ಬಜೆಟ್ ಎಂದು ಕರೆದಿದ್ದಾರೆ. “ಮಿತ್ರರನ್ನು ಸಮಾಧಾನಪಡಿಸಿ: ಇತರ ರಾಜ್ಯಗಳ ವೆಚ್ಚದಲ್ಲಿ ಮಿತ್ರಪಕ್ಷಗಳನ್ನು ಸಮಾಧಾನಪಡಿಸುವ ಪೊಳ್ಳು ಭರವಸೆಗಳು. ಕ್ರೋನಿಗಳನ್ನು ಸಮಾಧಾನಪಡಿಸಿ: ಸಾಮಾನ್ಯ ಭಾರತೀಯರಿಗೆ ಯಾವುದೇ ಪರಿಹಾರವಿಲ್ಲ. ಇದು ಕಾಂಗ್ರೆಸ್ ಪ್ರಣಾಳಿಕೆ ಮತ್ತು ಹಿಂದಿನ ಬಜೆಟ್‌ಗಳ ಕಾಪಿ ಮತ್ತು ಪೇಸ್ಟ್‌” ಎಂದು ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಬಜೆಟ್‌ನಲ್ಲಿ ರಾಜ್ಯಕ್ಕೆ ಖಾಲಿ ಚೊಂಬು ಸಿಕ್ಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಂತರ ಮಾತನಾಡಿದ ಅವರು, ಬಜೆಟ್ ಪೂರ್ವ ಚರ್ಚೆಯ ವೇಳೆ ಕರ್ನಾಟಕವು ಹಣಕಾಸು ಸಚಿವರನ್ನು ಭೇಟಿ ಮಾಡಲು ನಿಯೋಗವನ್ನು ಕಳುಹಿಸಿದೆ ಮತ್ತು 15 ನೇ ಹಣಕಾಸು ಆಯೋಗದ ಶಿಫಾರಸಿನಂತೆ 5,400 ಕೋಟಿ ರೂ. ಕೇಳಿತ್ತು ಎಂದರು.

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವನ್ನು ಬೆಂಬಲಿಸುತ್ತಿರುವ ರಾಜ್ಯಗಳನ್ನು ಹೊರತುಪಡಿಸಿ ಹಣಕಾಸು ಸಚಿವೆ ಸೀತಾರಾಮನ್ ಬಜೆಟ್‌ನಲ್ಲಿ ಇತರ ಎಲ್ಲ ರಾಜ್ಯಗಳನ್ನು ಮರೆತಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹೇಳಿದ್ದಾರೆ.

“ತಮಿಳುನಾಡಿಗೆ ಯಾವುದೇ ವಿಶೇಷ ಯೋಜನೆಗಳನ್ನು ಘೋಷಿಸಲಾಗಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸಲಾಗಿಲ್ಲ. ನಮಗೆ ಯಾವುದೇ ಹೊಸ ರೈಲ್ವೆ ಯೋಜನೆಗಳನ್ನು ಘೋಷಿಸಲಾಗಿಲ್ಲ” ಎಂದು ಡಿಎಂಕೆ ಮುಖ್ಯಸ್ಥರು ಹೇಳಿದರು.

ಸಂಸದರ ಪ್ರತಿಭಟನೆಯ ಜೊತೆಗೆ ಕಾಂಗ್ರೆಸ್ ಮುಖ್ಯಮಂತ್ರಿಗಳು ಜುಲೈ 27 ರಂದು ನಡೆಯಲಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲಿದ್ದಾರೆ.

ಇದನ್ನೂ ಓದಿ; ಕೇಂದ್ರ ಬಜೆಟ್‌ನಲ್ಲಿ ರಾಜ್ಯಗಳ ಕಡೆಗಣನೆ: ನೀತಿ ಆಯೋಗದ ಸಭೆ ಬಹಿಷ್ಕರಿಸಲು ಸಿಎಂಗಳ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...