Homeಮುಖಪುಟಬಿಜೆಪಿಯೇತರ ಆಡಳಿತದ ರಾಜ್ಯಗಳಿಗೆ ಬಜೆಟ್‌ನಲ್ಲಿ ತಾರತಮ್ಯ ಆರೋಪ; ಇಂಡಿಯಾ ಬಣದಿಂದ ಪ್ರತಿಭಟನೆ

ಬಿಜೆಪಿಯೇತರ ಆಡಳಿತದ ರಾಜ್ಯಗಳಿಗೆ ಬಜೆಟ್‌ನಲ್ಲಿ ತಾರತಮ್ಯ ಆರೋಪ; ಇಂಡಿಯಾ ಬಣದಿಂದ ಪ್ರತಿಭಟನೆ

- Advertisement -
- Advertisement -

2024ರ ಕೇಂದ್ರ ಬಜೆಟ್ ಕುರಿತು ವಿರೋಧ ಪಕ್ಷದ ಇಂಡಿಯಾ ಬ್ಲಾಕ್‌ನ ಸಂಸದರು ಇಂದು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು, ಅನೇಕ ಪಕ್ಷಗಳು ಬಿಜೆಪಿಯೇತರ ಆಡಳಿತದ ರಾಜ್ಯಗಳ ವಿರುದ್ಧ ಬಜೆಟ್‌ನಲ್ಲಿ “ತಾರತಮ್ಯ” ಮಾಡಲಾಗಿದೆ ಎಂದು ಆರೋಪ ಮಾಡಿವೆ.

ಪ್ರತಿಭಟನೆಯಲ್ಲಿ ಭಾಗವಹಿಸುವ ಪ್ರಮುಖ ನಾಯಕರಲ್ಲಿ ಕಾಂಗ್ರೆಸ್‌ನ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಇದ್ದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಸತತ ಏಳನೇ ಬಜೆಟ್ ಮಂಡಿಸಿದ ನಂತರ ಪ್ರತಿಪಕ್ಷಗಳ ಕಾರ್ಯತಂತ್ರವನ್ನು ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರಾಜಾಜಿ ಮಾರ್ಗದ ನಿವಾಸದಲ್ಲಿ ಇಂಡಿಯಾ ಬ್ಲಾಕ್ ಪಕ್ಷಗಳ ನಾಯಕರು ಸಭೆ ಸೇರಿದ ಒಂದು ದಿನದ ನಂತರ ಬುಧವಾರದ ಈ ಬೆಳವಣಿಗೆ ನಡೆದಿದೆ.

ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಸಂಸದರಾದ ರಾಹುಲ್ ಗಾಂಧಿ ಮತ್ತು ಕೆಸಿ ವೇಣುಗೋಪಾಲ್, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್, ಶಿವಸೇನೆ (ಯುಬಿಟಿ) ಸಂಸದರಾದ ಸಂಜಯ್ ರಾವುತ್ ಮತ್ತು ಅರವಿಂದ್ ಸಾವಂತ್, ಡಿಎಂಕೆ ಸಂಸದರಾದ ಟಿಆರ್ ಬಾಲು ಮತ್ತು ತಿರುಚಿ ಶಿವ, ಜಾರ್ಖಂಡ್ ಮುಕ್ತಿ ಮುಂತಾದ ನಾಯಕರು ಭಾಗವಹಿಸಿದ್ದರು.ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ, ಆಮ್ ಆದ್ಮಿ ಪಕ್ಷದ ಸಂಸದರಾದ ಸಂಜಯ್ ಸಿಂಗ್ ಮತ್ತು ರಾಘವ್ ಚಡ್ಡಾ ಇತರರು ಇದ್ದರು.

ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೆ.ಸಿ.ವೇಣುಗೋಪಾಲ್, ಈ ಬಾರಿಯ ಕೇಂದ್ರ ಬಜೆಟ್‌ನಿಂದ ಈಗಾಗಲೇ ಬಜೆಟ್ ಪರಿಕಲ್ಪನೆಯನ್ನು ನಾಶಪಡಿಸಲಾಗಿದೆ, ಅವರು ಬಹುತೇಕ ರಾಜ್ಯಗಳನ್ನು ಸಂಪೂರ್ಣವಾಗಿ ತಾರತಮ್ಯ ಮಾಡಿದ್ದಾರೆ” ಎಂದರು.

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದಲ್ಲಿ (ಎನ್‌ಡಿಎ) ಬಿಜೆಪಿಯ ಎರಡು ಪ್ರಮುಖ ಮಿತ್ರಪಕ್ಷಗಳು ಆಳುತ್ತಿರುವ ರಾಜ್ಯಗಳಾದ ಬಿಹಾರ ಮತ್ತು ಆಂಧ್ರಪ್ರದೇಶದ ಕಡೆಗೆ ಬಜೆಟ್ ಪಕ್ಷಪಾತವಾಗಿದೆ ಎಂದು ಅನೇಕ ವಿರೋಧ ಪಕ್ಷದ ನಾಯಕರು ಟೀಕಿಸಿದರು. ಆಂಧ್ರಪ್ರದೇಶದ ಹೊಸ ರಾಜಧಾನಿ ಅಮರಾವತಿ ಅಭಿವೃದ್ಧಿಗೆ ಹಣಕಾಸು ಸಚಿವರು 15,000 ಕೋಟಿ ರೂ.ಗಳನ್ನು ವಿನಿಯೋಗಿಸಿದರೆ, ಬಿಹಾರಕ್ಕೆ ಹಲವು ರಸ್ತೆ ಸಂಪರ್ಕ ಯೋಜನೆಗಳಿಗೆ 26,000 ಕೋಟಿ ರೂ. ನೀಡಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇದನ್ನು “ಕುರ್ಸಿ ಬಚಾವೋ” ಬಜೆಟ್ ಎಂದು ಕರೆದಿದ್ದಾರೆ. “ಮಿತ್ರರನ್ನು ಸಮಾಧಾನಪಡಿಸಿ: ಇತರ ರಾಜ್ಯಗಳ ವೆಚ್ಚದಲ್ಲಿ ಮಿತ್ರಪಕ್ಷಗಳನ್ನು ಸಮಾಧಾನಪಡಿಸುವ ಪೊಳ್ಳು ಭರವಸೆಗಳು. ಕ್ರೋನಿಗಳನ್ನು ಸಮಾಧಾನಪಡಿಸಿ: ಸಾಮಾನ್ಯ ಭಾರತೀಯರಿಗೆ ಯಾವುದೇ ಪರಿಹಾರವಿಲ್ಲ. ಇದು ಕಾಂಗ್ರೆಸ್ ಪ್ರಣಾಳಿಕೆ ಮತ್ತು ಹಿಂದಿನ ಬಜೆಟ್‌ಗಳ ಕಾಪಿ ಮತ್ತು ಪೇಸ್ಟ್‌” ಎಂದು ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಬಜೆಟ್‌ನಲ್ಲಿ ರಾಜ್ಯಕ್ಕೆ ಖಾಲಿ ಚೊಂಬು ಸಿಕ್ಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಂತರ ಮಾತನಾಡಿದ ಅವರು, ಬಜೆಟ್ ಪೂರ್ವ ಚರ್ಚೆಯ ವೇಳೆ ಕರ್ನಾಟಕವು ಹಣಕಾಸು ಸಚಿವರನ್ನು ಭೇಟಿ ಮಾಡಲು ನಿಯೋಗವನ್ನು ಕಳುಹಿಸಿದೆ ಮತ್ತು 15 ನೇ ಹಣಕಾಸು ಆಯೋಗದ ಶಿಫಾರಸಿನಂತೆ 5,400 ಕೋಟಿ ರೂ. ಕೇಳಿತ್ತು ಎಂದರು.

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವನ್ನು ಬೆಂಬಲಿಸುತ್ತಿರುವ ರಾಜ್ಯಗಳನ್ನು ಹೊರತುಪಡಿಸಿ ಹಣಕಾಸು ಸಚಿವೆ ಸೀತಾರಾಮನ್ ಬಜೆಟ್‌ನಲ್ಲಿ ಇತರ ಎಲ್ಲ ರಾಜ್ಯಗಳನ್ನು ಮರೆತಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹೇಳಿದ್ದಾರೆ.

“ತಮಿಳುನಾಡಿಗೆ ಯಾವುದೇ ವಿಶೇಷ ಯೋಜನೆಗಳನ್ನು ಘೋಷಿಸಲಾಗಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸಲಾಗಿಲ್ಲ. ನಮಗೆ ಯಾವುದೇ ಹೊಸ ರೈಲ್ವೆ ಯೋಜನೆಗಳನ್ನು ಘೋಷಿಸಲಾಗಿಲ್ಲ” ಎಂದು ಡಿಎಂಕೆ ಮುಖ್ಯಸ್ಥರು ಹೇಳಿದರು.

ಸಂಸದರ ಪ್ರತಿಭಟನೆಯ ಜೊತೆಗೆ ಕಾಂಗ್ರೆಸ್ ಮುಖ್ಯಮಂತ್ರಿಗಳು ಜುಲೈ 27 ರಂದು ನಡೆಯಲಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲಿದ್ದಾರೆ.

ಇದನ್ನೂ ಓದಿ; ಕೇಂದ್ರ ಬಜೆಟ್‌ನಲ್ಲಿ ರಾಜ್ಯಗಳ ಕಡೆಗಣನೆ: ನೀತಿ ಆಯೋಗದ ಸಭೆ ಬಹಿಷ್ಕರಿಸಲು ಸಿಎಂಗಳ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...