Homeಕರ್ನಾಟಕನಕಲಿ ಮೈಸೂರು ಸ್ಯಾಂಡಲ್ ಸೋಪ್ ಪ್ರಕರಣ: ಬಂಧಿತರು ಬಿಜೆಪಿಯ ಸಕ್ರಿಯ ಕಾರ್ಯಕರ್ತರು; ಪ್ರಿಯಾಂಕ್ ಖರ್ಗೆ

ನಕಲಿ ಮೈಸೂರು ಸ್ಯಾಂಡಲ್ ಸೋಪ್ ಪ್ರಕರಣ: ಬಂಧಿತರು ಬಿಜೆಪಿಯ ಸಕ್ರಿಯ ಕಾರ್ಯಕರ್ತರು; ಪ್ರಿಯಾಂಕ್ ಖರ್ಗೆ

- Advertisement -
- Advertisement -

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕರಿಗೂ ಬಿಜೆಪಿ ನಾಯಕರಿಗೂ ಅತ್ಯುತ್ತಮ ಒಡನಾಟವಿದ್ದು, ಈ ಅಕ್ರಮದಲ್ಲಿ ಬಿಜೆಪಿ ನಾಯಕರ ಪಾಲೆಷ್ಟು?” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಈ ವಿಚಾರವಾಗಿ ಮಾಹಿತಿ ನೀಡಿದ ಪ್ರಿಯಾಂಕ್ ಖರ್ಗೆ, “ನಮ್ಮ ವಿಶ್ವ ವಿಖ್ಯಾತ ಮೈಸೂರು ಸ್ಯಾಂಡಲ್ ಸೋಪಿನ ನಕಲಿ ಉತ್ಪನ್ನಗಳ ಮಾರಾಟದ ಬಗ್ಗೆ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಗಿದೆ. ಜನವರಿ ಮೊದಲ ವಾರದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರಿಗೆ ಅನಾಮಿಕ ಕರೆ ಬಂದಿತ್ತು. ಅದರಲ್ಲಿ ಈ ವಿಚಾರ ಪ್ರಸ್ತಾಪಿಸಲಾಗಿತ್ತು. ಕೂಡಲೇ ಸಚಿವರು ಕೆಎಎಸ್‌ಡಿಎಲ್ ಎಂಡಿ ಪ್ರಶಾಂತ್ ಅವರಿಗೆ ಮಾಹಿತಿ ನೀಡಿದ್ದರು ಎಂದು ತಿಳಿಸಿದ್ದಾರೆ.

ಸಚಿವರ ಮಾಹಿತಿ ನಂತರ ನಕಲಿ ಜಾಲದ ಹುಡುಕಾಟ ನಡೆಸಲಾಗಿತ್ತು. ಈ ವೇಳೆ ನಕಲಿ ಸೋಪ್ ತಯಾರಿಕಾ ಘಟಕ ಹೈದರಾಬಾದ್‌ನಲ್ಲಿದೆ ಎಂದು ತಿಳಿದು ಬಂದಿತ್ತು. ಅದನ್ನು ತಡೆಗಟ್ಟಲು ಕೆಲವು ಅಧಿಕಾರಿಗಳು ಹೋಗಿ 25 ಲಕ್ಷದ ರೂಪಾಯಿಯ ಸೋಪ್ ಆರ್ಡರ್ ಕೊಟ್ಟಿದ್ದರು. ನಕಲಿ ತಯಾರಕರು ಅದನ್ನು ಪೂರೈಸುವುದಾಗಿ ಒಪ್ಪಿಕೊಂಡಿದ್ದರು. ಇದು ದೊಡ್ಡ ಮಟ್ಟದ ಆರ್ಡರ್ ಆಗಿರುವುದರಿಂದ ನಿಮ್ಮ ಕಾರ್ಖಾನೆಗೆ ಬಂದು ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದ್ದರು. ಅದಕ್ಕೆ ನಕಲಿ ತಯಾರಕರು ಒಪ್ಪಿದ್ದರು. ನಕಲಿ ಸೋಪ್ ಉತ್ಪಾದನಾ ಘಟಕದ ವಿಳಾಸ ತಿಳಿದ ತಕ್ಷಣ ಅಲ್ಲಿಗೆ ದಾಳಿ ಮಾಡಿ ನಕಲಿ ಸೋಪ್ ಮತ್ತು ಅದನ್ನು ತಯಾರಿಸಲು ಬಳಸುತ್ತಿದ್ದ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿತ್ತು. ಈ ಕುರಿತು ತೆಲಂಗಾಣ ಮತ್ತು ಆಂಧ್ರಪ್ರದೇಶದ ಮೈಸೂರು ಸ್ಯಾಂಡಲ್ ಸೋಪ್ ಸೇಲ್ಸ್ ಮ್ಯಾನೇಜರ್ ದೂರು ನೀಡಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಬಂಧಿತರು ಬಿಜೆಪಿ ಕಾರ್ಯಕರ್ತರು:

ನಕಲಿ ಸೋಪ್ ತಯಾರಿಸುತ್ತಿದ್ದ ಹೈದರಾಬಾದ್‌ನ ರಾಕೇಶ್ ಜೈನ್ ಹಾಗೂ ಮಹಾವೀರ್ ಜೈನ್ ಎಂಬ ಇಬ್ಬರು ವ್ಯಕ್ತಿಗಳ ವಿರುದ್ದ ಅಲ್ಲಿನ ಮಲಕ್‌ಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಪ್ರಸ್ತುತ ಇಬ್ಬರೂ ಪೊಲೀಸರ ವಶದಲ್ಲಿದ್ದಾರೆ. ವಿಚಾರಣೆ ವೇಳೆ ಹೊರಬಂದ ಅಚ್ಚರಿ ಹಾಗೂ ಮುಖ್ಯ ಸಂಗತಿ ಎಂದರೆ, ಬಂಧಿತ ಇಬ್ಬರು ವ್ಯಕ್ತಿಗಳೂ ಬಿಜೆಪಿಯ ಸಕ್ರಿಯ ಕಾರ್ಯಕರ್ತರು. ಇವರು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ತೆಲಂಗಾಣ ಶಾಸಕ ರಾಜಾ ಸಿಂಗ್ ಅವರ ಒಡನಾಡಿಗಳಿದ್ದಾರೆ ಎಂದು ಸಚಿವ ಪ್ರಯಾಂಕ್ ಖರ್ಗೆ ಆರೋಪಿಸಿದ್ದಾರೆ. ಇಷ್ಟೆಲ್ಲಾ ಒಡನಾಟ ಇಟ್ಟುಕೊಂಡಿರುವವರ ಜೊತೆ ರಾಜ್ಯ ಬಿಜೆಪಿ ನಾಯಕರು ಸಂಪರ್ಕ ಹೊಂದಿರುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಕಲಬುರಗಿ ಜಿಲ್ಲೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಥೋಡ್, ಮಾಜಿ ಶಾಸಕ ವಾಲ್ಮೀಕಿ ನಾಯಕ ಅವರ ಪುತ್ರ ವಿಠಲ್ ನಾಯಕ್ ಜೊತೆ ಆರೋಪಿಗಳು ಒಡನಾಟ ಇಟ್ಟುಕೊಂಡಿದ್ದಾರೆ  ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬಿಜೆಪಿ ನಾಯಕರ ಜೊತೆ ಆರೋಪಿ ನಿಂತಿರುವುದು ಎನ್ನಲಾದ ಫೋಟೋ

ರಾಜ್ಯದ ಆಸ್ತಿ ಉಳಿಸಿಕೊಳ್ಳಲು ನಾವು ಕಾರ್ಯಾಚರಣೆ ಮಾಡಿದ್ದೇವೆ. ಮೈಸೂರು ಸ್ಯಾಂಡಲ್ ಸೋಪ್‌ ಫ್ಯಾಕ್ಟರಿ ಕೃಷ್ಣರಾಜ ಒಡೆಯರ್ ಅವರು 1916ರಲ್ಲಿ ಸ್ಥಾಪಿಸಿದ ಸಂಸ್ಥೆಯಾಗಿದೆ. ಸ್ಯಾಂಡಲ್ ಸೋಪ್ ಕರ್ನಾಟಕದ ಹೆಮ್ಮೆಯ ಉತ್ಪನ್ನ. ಪ್ರಧಾನಮಂತ್ರಿಗಳ ಮೇಕ್ ಇನ್ ಇಡಿಯಾ, ವೋಕಲ್ ಫಾರ್ ಲೋಕಲ್ ಯೋಜನೆಗೂ ಮುನ್ನ ಇದು ಪ್ರಾರಂಭವಾಗಿತ್ತು ಎಂದಿದ್ದಾರೆ.

ನಾನು ಪ್ರವಾಸೋದ್ಯಮ ಸಚಿವನಾಗಿದ್ದಾಗ ಪ್ಯಾರೀಸ್ ಹೋಗುವ ಅವಕಾಶ ಸಿಕ್ಕಿತ್ತು. ಅಲ್ಲಿ ಪ್ರತಿ ದೇಶದ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲು ಅವಕಾಶವಿರುತ್ತದೆ. ಅಲ್ಲಿನ ಜನ ಮೈಸೂರು ಸ್ಯಾಂಡಲ್ ಸೋಪನ್ನು ಪ್ಯಾರೀಸ್‌ನಲ್ಲಿ ಮಾರಾಟ ಮಾಡುವುದಿಲ್ಲ ಯಾಕೆ? ಎಂದು ಕೇಳಿದ್ದರು. ನಮ್ಮ ರಾಜ್ಯದ ಉತ್ಪನ್ನ ವಿಶ್ವದಲ್ಲೇ ಹೆಸರುವಾಸಿಯಾಗಿದೆ. ಇಂತಹ ಉತ್ಪನ್ನಗಳನ್ನು ಬಿಜೆಪಿ ನಾಯಕರು ನಕಲಿ ಮಾಡಿ ಮಾರಾಟ ಮಾಡುವಲ್ಲಿ ಶಾಮೀಲಾಗಿದ್ದಾರೆ. ಕೋವಿಡ್ ಸಮಯದಲ್ಲಿ ಹೆಣದ ಮೇಲೆ ಹಣ ಮಾಡಿದ್ದರು. ಈಗ ಕರ್ನಾಟಕದ ಆಸ್ತಿ ಮಾರಲು ತಯಾರಾಗಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಸ್ಯಾಂಟ್ರೋ ರವಿ, ಸೈಲೆಂಟ್ ಸುನೀಲ್, ಫೈಟರ್ ರವಿ, ಪೃಥ್ವಿ ಸಿಂಗ್‌ರಂತವರು ಬಿಜೆಪಿಯಲ್ಲೇ ಕಾಣಿಸಿಕೊಳ್ಳುತ್ತಿರುವುದೇಕೆ? ರಾಜ್ಯದ ಆಸ್ತಿ ಮಾರಲು ಹೊರಟವರಿಗೆ ಪಕ್ಷದ ಟಿಕೆಟ್ ನೀಡಿ, ಪದಾಧಿಕಾರಿ ಮಾಡುತ್ತೀರಾ? ನಿಮಗೆ ನಾಚಿಕೆ ಇದ್ದರೆ ಅವರನ್ನು ವಜಾ ಮಾಡುತ್ತಿದ್ದಿರಿ. ಮೊನ್ನೆ ಗರೀಬ್ ಕಲ್ಯಾಣ್ ಯೋಜನೆಯ 700 ಕ್ವಿಂಟಾಲ್ ಅಕ್ಕಿ ಬಿಜೆಪಿ ನಾಯಕರ ಗೋದಾಮಿನಲ್ಲಿ ಸಿಕ್ಕಿದೆ. ಮೋದಿ ಅಕ್ಕಿ ಎಂದು ಬೀಗುವ ಬಿಜೆಪಿ ನಾಯಕರು ಅದನ್ನು ಕದ್ದು ಸಿಕ್ಕಿಬಿದ್ದನಂತರವೂ ಆತನನ್ನು ಪಕ್ಷದಿಂದ ಹೊರಹಾಕಿಲ್ಲ ಎಂದರೆ ನಿಮಗೂ ಇದರಲ್ಲಿ ಪಾಲಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕರಿಗೆ ಮಣಿಕಂಠ, ಪೃಥ್ವಿ ಸಿಂಗ್, ಸ್ಯಾಂಟ್ರೋ ರವಿ ಅವರ ಮೇಲೆ ಕ್ರಮ ಕೈಗೊಳ್ಳುವ ತಾಕತ್ತು ಇಲ್ಲ. ಕಾರಣ ಅವರ ಗುಟ್ಟುಗಳೆಲ್ಲಾ ಇವರ ಬಳಿಯೇ ಇದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಕಲಿ ಮೈಸೂರು ಸ್ಯಾಂಡಲ್ ಸೋಪ್ ಮಾರಿರುವ ಅಕ್ರಮದಲ್ಲಿ ನಿಮಗೆ ಎಷ್ಟು ಪಾಲು ಸಿಗುತ್ತಿದೆ? ಬಿಜೆಪಿ ಶಾಸಕರಾಗಿದ್ದ ಮಾಡಾಲ್ ವಿರುಪಾಕ್ಷಪ್ಪ ಅವರ ಮನೆಯಲ್ಲಿ 7 ಕೋಟಿ ಹಣ ಸಿಕ್ಕಿತ್ತು. ಅವರು ಇದೇ ಸಂಸ್ಥೆಯ ಜವಾಬ್ದಾರಿ ಹೊತ್ತಿದ್ದರು. ಆ ಪ್ರಕರಣದಲ್ಲಿ ಅವರ ಹೆಸರನ್ನು ಕೈಬಿಡಲಾಗಿದ್ದರೂ ಅವರ ಪುತ್ರನ ಹೆಸರು ಹಾಗೇ ಇದೆ. ಈ ಅಕ್ರಮದಲ್ಲೂ ಅವರ ಕೈವಾಡ ಇಲ್ಲವೇ? ಈ ಬಗ್ಗೆ ತನಿಖೆಯಾಗಬೇಕಲ್ಲವೇ?  ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರು ಈ ಬಗ್ಗೆ ಉತ್ತರ ನೀಡಬೇಕು. ಇವರನ್ನು ಕೂಡ ರಾಮಭಕ್ತರು ಎಂದು ಹೇಳಿ ಬೀದಿಗಿಳಿದು ಹೋರಾಟ ಮಾಡುತ್ತೀರಾ? ಅಥವಾ ಇವರನ್ನು ಪಕ್ಷದಿಂದ ವಜಾ ಮಾಡಿ ರಾಜ್ಯದ ಜನರಿಗೆ ತ್ತರ ನೀಡುತ್ತೀರಾ? ಎಂದು ಸಚಿವರು ಪ್ರಶ್ನಿಸಿದರು.

ರಾಜ್ಯ ಬಿಜೆಪಿ ನಾಯಕರಿಗೆ ಇದರಲ್ಲಿ ಪಾಲಿದೆ. ಇವರು ಕನ್ನಡ ವಿರೋಧಿ ಬಿಜೆಪಿ. ಇವರಿಗೆ ಹಣ ಬಂದರೆ ಸಾಕು ಯಾವುದಕ್ಕೂ ಹಿಂಜರಿಯುವುದಿಲ್ಲ. ರಾಜ್ಯದ ಗೌರವವನ್ನು ಈ ರೀತಿ ಮಾರಾಟ ಮಾಡುತ್ತಾರೆ ಎಂದು ಭಾವಿಸಿರಲಿಲ್ಲ. ನಮ್ಮ ಸರ್ಕಾರ ಈ ವಿಚಾರದಲ್ಲಿ ಎಚ್ಛೆತ್ತು ಎಫ್‌ಐಆರ್ ದಾಖಲಾಗುವಂತೆ ಮಾಡಿದೆ. ನಮ್ಮ ಅಧಿಕಾರಿಗಳು ಹೈದರಾಬಾದ್‌ನಲ್ಲಿದ್ದು, ತೆಲಂಗಾಣ ಉಪಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ತನಿಖೆಗೆ ಸಹಕಾರ ನೀಡುವಂತೆ ಕೋರಿದ್ದೇವೆ. ಈ ವಿಚಾರವಾಗಿ ಎಂ.ಬಿ ಪಾಟೀಲ್ ಅವರಿಗೂ ತಿಳಿಸಿದ್ದೇನೆ. ಅವರು ದಾವೋಸ್‌ನಲ್ಲಿರುವ ಕಾರಣ ಈ ವಿಚಾರವಾಗಿ ನಾನು ಮಾಧ್ಯಮಗೋಷ್ಠಿ ಮೂಲಕ ತಿಳಿಸುತ್ತಿದ್ದೇನೆ ಎಂದು ಪ್ರಿಯಾಂಕ್ ಖರ್ಗೆ ಎಂದು ಹೇಳಿದರು.

ಇದನ್ನೂ ಓದಿ : ಹೈದರಾಬಾದ್‌: ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ; ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...