Homeಕರ್ನಾಟಕನಕಲಿ ಮೈಸೂರು ಸ್ಯಾಂಡಲ್ ಸೋಪ್ ಪ್ರಕರಣ: ಬಂಧಿತರು ಬಿಜೆಪಿಯ ಸಕ್ರಿಯ ಕಾರ್ಯಕರ್ತರು; ಪ್ರಿಯಾಂಕ್ ಖರ್ಗೆ

ನಕಲಿ ಮೈಸೂರು ಸ್ಯಾಂಡಲ್ ಸೋಪ್ ಪ್ರಕರಣ: ಬಂಧಿತರು ಬಿಜೆಪಿಯ ಸಕ್ರಿಯ ಕಾರ್ಯಕರ್ತರು; ಪ್ರಿಯಾಂಕ್ ಖರ್ಗೆ

- Advertisement -
- Advertisement -

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕರಿಗೂ ಬಿಜೆಪಿ ನಾಯಕರಿಗೂ ಅತ್ಯುತ್ತಮ ಒಡನಾಟವಿದ್ದು, ಈ ಅಕ್ರಮದಲ್ಲಿ ಬಿಜೆಪಿ ನಾಯಕರ ಪಾಲೆಷ್ಟು?” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಈ ವಿಚಾರವಾಗಿ ಮಾಹಿತಿ ನೀಡಿದ ಪ್ರಿಯಾಂಕ್ ಖರ್ಗೆ, “ನಮ್ಮ ವಿಶ್ವ ವಿಖ್ಯಾತ ಮೈಸೂರು ಸ್ಯಾಂಡಲ್ ಸೋಪಿನ ನಕಲಿ ಉತ್ಪನ್ನಗಳ ಮಾರಾಟದ ಬಗ್ಗೆ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಗಿದೆ. ಜನವರಿ ಮೊದಲ ವಾರದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರಿಗೆ ಅನಾಮಿಕ ಕರೆ ಬಂದಿತ್ತು. ಅದರಲ್ಲಿ ಈ ವಿಚಾರ ಪ್ರಸ್ತಾಪಿಸಲಾಗಿತ್ತು. ಕೂಡಲೇ ಸಚಿವರು ಕೆಎಎಸ್‌ಡಿಎಲ್ ಎಂಡಿ ಪ್ರಶಾಂತ್ ಅವರಿಗೆ ಮಾಹಿತಿ ನೀಡಿದ್ದರು ಎಂದು ತಿಳಿಸಿದ್ದಾರೆ.

ಸಚಿವರ ಮಾಹಿತಿ ನಂತರ ನಕಲಿ ಜಾಲದ ಹುಡುಕಾಟ ನಡೆಸಲಾಗಿತ್ತು. ಈ ವೇಳೆ ನಕಲಿ ಸೋಪ್ ತಯಾರಿಕಾ ಘಟಕ ಹೈದರಾಬಾದ್‌ನಲ್ಲಿದೆ ಎಂದು ತಿಳಿದು ಬಂದಿತ್ತು. ಅದನ್ನು ತಡೆಗಟ್ಟಲು ಕೆಲವು ಅಧಿಕಾರಿಗಳು ಹೋಗಿ 25 ಲಕ್ಷದ ರೂಪಾಯಿಯ ಸೋಪ್ ಆರ್ಡರ್ ಕೊಟ್ಟಿದ್ದರು. ನಕಲಿ ತಯಾರಕರು ಅದನ್ನು ಪೂರೈಸುವುದಾಗಿ ಒಪ್ಪಿಕೊಂಡಿದ್ದರು. ಇದು ದೊಡ್ಡ ಮಟ್ಟದ ಆರ್ಡರ್ ಆಗಿರುವುದರಿಂದ ನಿಮ್ಮ ಕಾರ್ಖಾನೆಗೆ ಬಂದು ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದ್ದರು. ಅದಕ್ಕೆ ನಕಲಿ ತಯಾರಕರು ಒಪ್ಪಿದ್ದರು. ನಕಲಿ ಸೋಪ್ ಉತ್ಪಾದನಾ ಘಟಕದ ವಿಳಾಸ ತಿಳಿದ ತಕ್ಷಣ ಅಲ್ಲಿಗೆ ದಾಳಿ ಮಾಡಿ ನಕಲಿ ಸೋಪ್ ಮತ್ತು ಅದನ್ನು ತಯಾರಿಸಲು ಬಳಸುತ್ತಿದ್ದ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿತ್ತು. ಈ ಕುರಿತು ತೆಲಂಗಾಣ ಮತ್ತು ಆಂಧ್ರಪ್ರದೇಶದ ಮೈಸೂರು ಸ್ಯಾಂಡಲ್ ಸೋಪ್ ಸೇಲ್ಸ್ ಮ್ಯಾನೇಜರ್ ದೂರು ನೀಡಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಬಂಧಿತರು ಬಿಜೆಪಿ ಕಾರ್ಯಕರ್ತರು:

ನಕಲಿ ಸೋಪ್ ತಯಾರಿಸುತ್ತಿದ್ದ ಹೈದರಾಬಾದ್‌ನ ರಾಕೇಶ್ ಜೈನ್ ಹಾಗೂ ಮಹಾವೀರ್ ಜೈನ್ ಎಂಬ ಇಬ್ಬರು ವ್ಯಕ್ತಿಗಳ ವಿರುದ್ದ ಅಲ್ಲಿನ ಮಲಕ್‌ಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಪ್ರಸ್ತುತ ಇಬ್ಬರೂ ಪೊಲೀಸರ ವಶದಲ್ಲಿದ್ದಾರೆ. ವಿಚಾರಣೆ ವೇಳೆ ಹೊರಬಂದ ಅಚ್ಚರಿ ಹಾಗೂ ಮುಖ್ಯ ಸಂಗತಿ ಎಂದರೆ, ಬಂಧಿತ ಇಬ್ಬರು ವ್ಯಕ್ತಿಗಳೂ ಬಿಜೆಪಿಯ ಸಕ್ರಿಯ ಕಾರ್ಯಕರ್ತರು. ಇವರು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ತೆಲಂಗಾಣ ಶಾಸಕ ರಾಜಾ ಸಿಂಗ್ ಅವರ ಒಡನಾಡಿಗಳಿದ್ದಾರೆ ಎಂದು ಸಚಿವ ಪ್ರಯಾಂಕ್ ಖರ್ಗೆ ಆರೋಪಿಸಿದ್ದಾರೆ. ಇಷ್ಟೆಲ್ಲಾ ಒಡನಾಟ ಇಟ್ಟುಕೊಂಡಿರುವವರ ಜೊತೆ ರಾಜ್ಯ ಬಿಜೆಪಿ ನಾಯಕರು ಸಂಪರ್ಕ ಹೊಂದಿರುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಕಲಬುರಗಿ ಜಿಲ್ಲೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಥೋಡ್, ಮಾಜಿ ಶಾಸಕ ವಾಲ್ಮೀಕಿ ನಾಯಕ ಅವರ ಪುತ್ರ ವಿಠಲ್ ನಾಯಕ್ ಜೊತೆ ಆರೋಪಿಗಳು ಒಡನಾಟ ಇಟ್ಟುಕೊಂಡಿದ್ದಾರೆ  ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬಿಜೆಪಿ ನಾಯಕರ ಜೊತೆ ಆರೋಪಿ ನಿಂತಿರುವುದು ಎನ್ನಲಾದ ಫೋಟೋ

ರಾಜ್ಯದ ಆಸ್ತಿ ಉಳಿಸಿಕೊಳ್ಳಲು ನಾವು ಕಾರ್ಯಾಚರಣೆ ಮಾಡಿದ್ದೇವೆ. ಮೈಸೂರು ಸ್ಯಾಂಡಲ್ ಸೋಪ್‌ ಫ್ಯಾಕ್ಟರಿ ಕೃಷ್ಣರಾಜ ಒಡೆಯರ್ ಅವರು 1916ರಲ್ಲಿ ಸ್ಥಾಪಿಸಿದ ಸಂಸ್ಥೆಯಾಗಿದೆ. ಸ್ಯಾಂಡಲ್ ಸೋಪ್ ಕರ್ನಾಟಕದ ಹೆಮ್ಮೆಯ ಉತ್ಪನ್ನ. ಪ್ರಧಾನಮಂತ್ರಿಗಳ ಮೇಕ್ ಇನ್ ಇಡಿಯಾ, ವೋಕಲ್ ಫಾರ್ ಲೋಕಲ್ ಯೋಜನೆಗೂ ಮುನ್ನ ಇದು ಪ್ರಾರಂಭವಾಗಿತ್ತು ಎಂದಿದ್ದಾರೆ.

ನಾನು ಪ್ರವಾಸೋದ್ಯಮ ಸಚಿವನಾಗಿದ್ದಾಗ ಪ್ಯಾರೀಸ್ ಹೋಗುವ ಅವಕಾಶ ಸಿಕ್ಕಿತ್ತು. ಅಲ್ಲಿ ಪ್ರತಿ ದೇಶದ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲು ಅವಕಾಶವಿರುತ್ತದೆ. ಅಲ್ಲಿನ ಜನ ಮೈಸೂರು ಸ್ಯಾಂಡಲ್ ಸೋಪನ್ನು ಪ್ಯಾರೀಸ್‌ನಲ್ಲಿ ಮಾರಾಟ ಮಾಡುವುದಿಲ್ಲ ಯಾಕೆ? ಎಂದು ಕೇಳಿದ್ದರು. ನಮ್ಮ ರಾಜ್ಯದ ಉತ್ಪನ್ನ ವಿಶ್ವದಲ್ಲೇ ಹೆಸರುವಾಸಿಯಾಗಿದೆ. ಇಂತಹ ಉತ್ಪನ್ನಗಳನ್ನು ಬಿಜೆಪಿ ನಾಯಕರು ನಕಲಿ ಮಾಡಿ ಮಾರಾಟ ಮಾಡುವಲ್ಲಿ ಶಾಮೀಲಾಗಿದ್ದಾರೆ. ಕೋವಿಡ್ ಸಮಯದಲ್ಲಿ ಹೆಣದ ಮೇಲೆ ಹಣ ಮಾಡಿದ್ದರು. ಈಗ ಕರ್ನಾಟಕದ ಆಸ್ತಿ ಮಾರಲು ತಯಾರಾಗಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಸ್ಯಾಂಟ್ರೋ ರವಿ, ಸೈಲೆಂಟ್ ಸುನೀಲ್, ಫೈಟರ್ ರವಿ, ಪೃಥ್ವಿ ಸಿಂಗ್‌ರಂತವರು ಬಿಜೆಪಿಯಲ್ಲೇ ಕಾಣಿಸಿಕೊಳ್ಳುತ್ತಿರುವುದೇಕೆ? ರಾಜ್ಯದ ಆಸ್ತಿ ಮಾರಲು ಹೊರಟವರಿಗೆ ಪಕ್ಷದ ಟಿಕೆಟ್ ನೀಡಿ, ಪದಾಧಿಕಾರಿ ಮಾಡುತ್ತೀರಾ? ನಿಮಗೆ ನಾಚಿಕೆ ಇದ್ದರೆ ಅವರನ್ನು ವಜಾ ಮಾಡುತ್ತಿದ್ದಿರಿ. ಮೊನ್ನೆ ಗರೀಬ್ ಕಲ್ಯಾಣ್ ಯೋಜನೆಯ 700 ಕ್ವಿಂಟಾಲ್ ಅಕ್ಕಿ ಬಿಜೆಪಿ ನಾಯಕರ ಗೋದಾಮಿನಲ್ಲಿ ಸಿಕ್ಕಿದೆ. ಮೋದಿ ಅಕ್ಕಿ ಎಂದು ಬೀಗುವ ಬಿಜೆಪಿ ನಾಯಕರು ಅದನ್ನು ಕದ್ದು ಸಿಕ್ಕಿಬಿದ್ದನಂತರವೂ ಆತನನ್ನು ಪಕ್ಷದಿಂದ ಹೊರಹಾಕಿಲ್ಲ ಎಂದರೆ ನಿಮಗೂ ಇದರಲ್ಲಿ ಪಾಲಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕರಿಗೆ ಮಣಿಕಂಠ, ಪೃಥ್ವಿ ಸಿಂಗ್, ಸ್ಯಾಂಟ್ರೋ ರವಿ ಅವರ ಮೇಲೆ ಕ್ರಮ ಕೈಗೊಳ್ಳುವ ತಾಕತ್ತು ಇಲ್ಲ. ಕಾರಣ ಅವರ ಗುಟ್ಟುಗಳೆಲ್ಲಾ ಇವರ ಬಳಿಯೇ ಇದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಕಲಿ ಮೈಸೂರು ಸ್ಯಾಂಡಲ್ ಸೋಪ್ ಮಾರಿರುವ ಅಕ್ರಮದಲ್ಲಿ ನಿಮಗೆ ಎಷ್ಟು ಪಾಲು ಸಿಗುತ್ತಿದೆ? ಬಿಜೆಪಿ ಶಾಸಕರಾಗಿದ್ದ ಮಾಡಾಲ್ ವಿರುಪಾಕ್ಷಪ್ಪ ಅವರ ಮನೆಯಲ್ಲಿ 7 ಕೋಟಿ ಹಣ ಸಿಕ್ಕಿತ್ತು. ಅವರು ಇದೇ ಸಂಸ್ಥೆಯ ಜವಾಬ್ದಾರಿ ಹೊತ್ತಿದ್ದರು. ಆ ಪ್ರಕರಣದಲ್ಲಿ ಅವರ ಹೆಸರನ್ನು ಕೈಬಿಡಲಾಗಿದ್ದರೂ ಅವರ ಪುತ್ರನ ಹೆಸರು ಹಾಗೇ ಇದೆ. ಈ ಅಕ್ರಮದಲ್ಲೂ ಅವರ ಕೈವಾಡ ಇಲ್ಲವೇ? ಈ ಬಗ್ಗೆ ತನಿಖೆಯಾಗಬೇಕಲ್ಲವೇ?  ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರು ಈ ಬಗ್ಗೆ ಉತ್ತರ ನೀಡಬೇಕು. ಇವರನ್ನು ಕೂಡ ರಾಮಭಕ್ತರು ಎಂದು ಹೇಳಿ ಬೀದಿಗಿಳಿದು ಹೋರಾಟ ಮಾಡುತ್ತೀರಾ? ಅಥವಾ ಇವರನ್ನು ಪಕ್ಷದಿಂದ ವಜಾ ಮಾಡಿ ರಾಜ್ಯದ ಜನರಿಗೆ ತ್ತರ ನೀಡುತ್ತೀರಾ? ಎಂದು ಸಚಿವರು ಪ್ರಶ್ನಿಸಿದರು.

ರಾಜ್ಯ ಬಿಜೆಪಿ ನಾಯಕರಿಗೆ ಇದರಲ್ಲಿ ಪಾಲಿದೆ. ಇವರು ಕನ್ನಡ ವಿರೋಧಿ ಬಿಜೆಪಿ. ಇವರಿಗೆ ಹಣ ಬಂದರೆ ಸಾಕು ಯಾವುದಕ್ಕೂ ಹಿಂಜರಿಯುವುದಿಲ್ಲ. ರಾಜ್ಯದ ಗೌರವವನ್ನು ಈ ರೀತಿ ಮಾರಾಟ ಮಾಡುತ್ತಾರೆ ಎಂದು ಭಾವಿಸಿರಲಿಲ್ಲ. ನಮ್ಮ ಸರ್ಕಾರ ಈ ವಿಚಾರದಲ್ಲಿ ಎಚ್ಛೆತ್ತು ಎಫ್‌ಐಆರ್ ದಾಖಲಾಗುವಂತೆ ಮಾಡಿದೆ. ನಮ್ಮ ಅಧಿಕಾರಿಗಳು ಹೈದರಾಬಾದ್‌ನಲ್ಲಿದ್ದು, ತೆಲಂಗಾಣ ಉಪಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ತನಿಖೆಗೆ ಸಹಕಾರ ನೀಡುವಂತೆ ಕೋರಿದ್ದೇವೆ. ಈ ವಿಚಾರವಾಗಿ ಎಂ.ಬಿ ಪಾಟೀಲ್ ಅವರಿಗೂ ತಿಳಿಸಿದ್ದೇನೆ. ಅವರು ದಾವೋಸ್‌ನಲ್ಲಿರುವ ಕಾರಣ ಈ ವಿಚಾರವಾಗಿ ನಾನು ಮಾಧ್ಯಮಗೋಷ್ಠಿ ಮೂಲಕ ತಿಳಿಸುತ್ತಿದ್ದೇನೆ ಎಂದು ಪ್ರಿಯಾಂಕ್ ಖರ್ಗೆ ಎಂದು ಹೇಳಿದರು.

ಇದನ್ನೂ ಓದಿ : ಹೈದರಾಬಾದ್‌: ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ; ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...