Homeಕರ್ನಾಟಕನಕಲಿ ಮೈಸೂರು ಸ್ಯಾಂಡಲ್ ಸೋಪ್ ಪ್ರಕರಣ: ಬಂಧಿತರು ಬಿಜೆಪಿಯ ಸಕ್ರಿಯ ಕಾರ್ಯಕರ್ತರು; ಪ್ರಿಯಾಂಕ್ ಖರ್ಗೆ

ನಕಲಿ ಮೈಸೂರು ಸ್ಯಾಂಡಲ್ ಸೋಪ್ ಪ್ರಕರಣ: ಬಂಧಿತರು ಬಿಜೆಪಿಯ ಸಕ್ರಿಯ ಕಾರ್ಯಕರ್ತರು; ಪ್ರಿಯಾಂಕ್ ಖರ್ಗೆ

- Advertisement -
- Advertisement -

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕರಿಗೂ ಬಿಜೆಪಿ ನಾಯಕರಿಗೂ ಅತ್ಯುತ್ತಮ ಒಡನಾಟವಿದ್ದು, ಈ ಅಕ್ರಮದಲ್ಲಿ ಬಿಜೆಪಿ ನಾಯಕರ ಪಾಲೆಷ್ಟು?” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಈ ವಿಚಾರವಾಗಿ ಮಾಹಿತಿ ನೀಡಿದ ಪ್ರಿಯಾಂಕ್ ಖರ್ಗೆ, “ನಮ್ಮ ವಿಶ್ವ ವಿಖ್ಯಾತ ಮೈಸೂರು ಸ್ಯಾಂಡಲ್ ಸೋಪಿನ ನಕಲಿ ಉತ್ಪನ್ನಗಳ ಮಾರಾಟದ ಬಗ್ಗೆ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಗಿದೆ. ಜನವರಿ ಮೊದಲ ವಾರದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರಿಗೆ ಅನಾಮಿಕ ಕರೆ ಬಂದಿತ್ತು. ಅದರಲ್ಲಿ ಈ ವಿಚಾರ ಪ್ರಸ್ತಾಪಿಸಲಾಗಿತ್ತು. ಕೂಡಲೇ ಸಚಿವರು ಕೆಎಎಸ್‌ಡಿಎಲ್ ಎಂಡಿ ಪ್ರಶಾಂತ್ ಅವರಿಗೆ ಮಾಹಿತಿ ನೀಡಿದ್ದರು ಎಂದು ತಿಳಿಸಿದ್ದಾರೆ.

ಸಚಿವರ ಮಾಹಿತಿ ನಂತರ ನಕಲಿ ಜಾಲದ ಹುಡುಕಾಟ ನಡೆಸಲಾಗಿತ್ತು. ಈ ವೇಳೆ ನಕಲಿ ಸೋಪ್ ತಯಾರಿಕಾ ಘಟಕ ಹೈದರಾಬಾದ್‌ನಲ್ಲಿದೆ ಎಂದು ತಿಳಿದು ಬಂದಿತ್ತು. ಅದನ್ನು ತಡೆಗಟ್ಟಲು ಕೆಲವು ಅಧಿಕಾರಿಗಳು ಹೋಗಿ 25 ಲಕ್ಷದ ರೂಪಾಯಿಯ ಸೋಪ್ ಆರ್ಡರ್ ಕೊಟ್ಟಿದ್ದರು. ನಕಲಿ ತಯಾರಕರು ಅದನ್ನು ಪೂರೈಸುವುದಾಗಿ ಒಪ್ಪಿಕೊಂಡಿದ್ದರು. ಇದು ದೊಡ್ಡ ಮಟ್ಟದ ಆರ್ಡರ್ ಆಗಿರುವುದರಿಂದ ನಿಮ್ಮ ಕಾರ್ಖಾನೆಗೆ ಬಂದು ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದ್ದರು. ಅದಕ್ಕೆ ನಕಲಿ ತಯಾರಕರು ಒಪ್ಪಿದ್ದರು. ನಕಲಿ ಸೋಪ್ ಉತ್ಪಾದನಾ ಘಟಕದ ವಿಳಾಸ ತಿಳಿದ ತಕ್ಷಣ ಅಲ್ಲಿಗೆ ದಾಳಿ ಮಾಡಿ ನಕಲಿ ಸೋಪ್ ಮತ್ತು ಅದನ್ನು ತಯಾರಿಸಲು ಬಳಸುತ್ತಿದ್ದ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿತ್ತು. ಈ ಕುರಿತು ತೆಲಂಗಾಣ ಮತ್ತು ಆಂಧ್ರಪ್ರದೇಶದ ಮೈಸೂರು ಸ್ಯಾಂಡಲ್ ಸೋಪ್ ಸೇಲ್ಸ್ ಮ್ಯಾನೇಜರ್ ದೂರು ನೀಡಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಬಂಧಿತರು ಬಿಜೆಪಿ ಕಾರ್ಯಕರ್ತರು:

ನಕಲಿ ಸೋಪ್ ತಯಾರಿಸುತ್ತಿದ್ದ ಹೈದರಾಬಾದ್‌ನ ರಾಕೇಶ್ ಜೈನ್ ಹಾಗೂ ಮಹಾವೀರ್ ಜೈನ್ ಎಂಬ ಇಬ್ಬರು ವ್ಯಕ್ತಿಗಳ ವಿರುದ್ದ ಅಲ್ಲಿನ ಮಲಕ್‌ಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಪ್ರಸ್ತುತ ಇಬ್ಬರೂ ಪೊಲೀಸರ ವಶದಲ್ಲಿದ್ದಾರೆ. ವಿಚಾರಣೆ ವೇಳೆ ಹೊರಬಂದ ಅಚ್ಚರಿ ಹಾಗೂ ಮುಖ್ಯ ಸಂಗತಿ ಎಂದರೆ, ಬಂಧಿತ ಇಬ್ಬರು ವ್ಯಕ್ತಿಗಳೂ ಬಿಜೆಪಿಯ ಸಕ್ರಿಯ ಕಾರ್ಯಕರ್ತರು. ಇವರು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ತೆಲಂಗಾಣ ಶಾಸಕ ರಾಜಾ ಸಿಂಗ್ ಅವರ ಒಡನಾಡಿಗಳಿದ್ದಾರೆ ಎಂದು ಸಚಿವ ಪ್ರಯಾಂಕ್ ಖರ್ಗೆ ಆರೋಪಿಸಿದ್ದಾರೆ. ಇಷ್ಟೆಲ್ಲಾ ಒಡನಾಟ ಇಟ್ಟುಕೊಂಡಿರುವವರ ಜೊತೆ ರಾಜ್ಯ ಬಿಜೆಪಿ ನಾಯಕರು ಸಂಪರ್ಕ ಹೊಂದಿರುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಕಲಬುರಗಿ ಜಿಲ್ಲೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಥೋಡ್, ಮಾಜಿ ಶಾಸಕ ವಾಲ್ಮೀಕಿ ನಾಯಕ ಅವರ ಪುತ್ರ ವಿಠಲ್ ನಾಯಕ್ ಜೊತೆ ಆರೋಪಿಗಳು ಒಡನಾಟ ಇಟ್ಟುಕೊಂಡಿದ್ದಾರೆ  ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬಿಜೆಪಿ ನಾಯಕರ ಜೊತೆ ಆರೋಪಿ ನಿಂತಿರುವುದು ಎನ್ನಲಾದ ಫೋಟೋ

ರಾಜ್ಯದ ಆಸ್ತಿ ಉಳಿಸಿಕೊಳ್ಳಲು ನಾವು ಕಾರ್ಯಾಚರಣೆ ಮಾಡಿದ್ದೇವೆ. ಮೈಸೂರು ಸ್ಯಾಂಡಲ್ ಸೋಪ್‌ ಫ್ಯಾಕ್ಟರಿ ಕೃಷ್ಣರಾಜ ಒಡೆಯರ್ ಅವರು 1916ರಲ್ಲಿ ಸ್ಥಾಪಿಸಿದ ಸಂಸ್ಥೆಯಾಗಿದೆ. ಸ್ಯಾಂಡಲ್ ಸೋಪ್ ಕರ್ನಾಟಕದ ಹೆಮ್ಮೆಯ ಉತ್ಪನ್ನ. ಪ್ರಧಾನಮಂತ್ರಿಗಳ ಮೇಕ್ ಇನ್ ಇಡಿಯಾ, ವೋಕಲ್ ಫಾರ್ ಲೋಕಲ್ ಯೋಜನೆಗೂ ಮುನ್ನ ಇದು ಪ್ರಾರಂಭವಾಗಿತ್ತು ಎಂದಿದ್ದಾರೆ.

ನಾನು ಪ್ರವಾಸೋದ್ಯಮ ಸಚಿವನಾಗಿದ್ದಾಗ ಪ್ಯಾರೀಸ್ ಹೋಗುವ ಅವಕಾಶ ಸಿಕ್ಕಿತ್ತು. ಅಲ್ಲಿ ಪ್ರತಿ ದೇಶದ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲು ಅವಕಾಶವಿರುತ್ತದೆ. ಅಲ್ಲಿನ ಜನ ಮೈಸೂರು ಸ್ಯಾಂಡಲ್ ಸೋಪನ್ನು ಪ್ಯಾರೀಸ್‌ನಲ್ಲಿ ಮಾರಾಟ ಮಾಡುವುದಿಲ್ಲ ಯಾಕೆ? ಎಂದು ಕೇಳಿದ್ದರು. ನಮ್ಮ ರಾಜ್ಯದ ಉತ್ಪನ್ನ ವಿಶ್ವದಲ್ಲೇ ಹೆಸರುವಾಸಿಯಾಗಿದೆ. ಇಂತಹ ಉತ್ಪನ್ನಗಳನ್ನು ಬಿಜೆಪಿ ನಾಯಕರು ನಕಲಿ ಮಾಡಿ ಮಾರಾಟ ಮಾಡುವಲ್ಲಿ ಶಾಮೀಲಾಗಿದ್ದಾರೆ. ಕೋವಿಡ್ ಸಮಯದಲ್ಲಿ ಹೆಣದ ಮೇಲೆ ಹಣ ಮಾಡಿದ್ದರು. ಈಗ ಕರ್ನಾಟಕದ ಆಸ್ತಿ ಮಾರಲು ತಯಾರಾಗಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಸ್ಯಾಂಟ್ರೋ ರವಿ, ಸೈಲೆಂಟ್ ಸುನೀಲ್, ಫೈಟರ್ ರವಿ, ಪೃಥ್ವಿ ಸಿಂಗ್‌ರಂತವರು ಬಿಜೆಪಿಯಲ್ಲೇ ಕಾಣಿಸಿಕೊಳ್ಳುತ್ತಿರುವುದೇಕೆ? ರಾಜ್ಯದ ಆಸ್ತಿ ಮಾರಲು ಹೊರಟವರಿಗೆ ಪಕ್ಷದ ಟಿಕೆಟ್ ನೀಡಿ, ಪದಾಧಿಕಾರಿ ಮಾಡುತ್ತೀರಾ? ನಿಮಗೆ ನಾಚಿಕೆ ಇದ್ದರೆ ಅವರನ್ನು ವಜಾ ಮಾಡುತ್ತಿದ್ದಿರಿ. ಮೊನ್ನೆ ಗರೀಬ್ ಕಲ್ಯಾಣ್ ಯೋಜನೆಯ 700 ಕ್ವಿಂಟಾಲ್ ಅಕ್ಕಿ ಬಿಜೆಪಿ ನಾಯಕರ ಗೋದಾಮಿನಲ್ಲಿ ಸಿಕ್ಕಿದೆ. ಮೋದಿ ಅಕ್ಕಿ ಎಂದು ಬೀಗುವ ಬಿಜೆಪಿ ನಾಯಕರು ಅದನ್ನು ಕದ್ದು ಸಿಕ್ಕಿಬಿದ್ದನಂತರವೂ ಆತನನ್ನು ಪಕ್ಷದಿಂದ ಹೊರಹಾಕಿಲ್ಲ ಎಂದರೆ ನಿಮಗೂ ಇದರಲ್ಲಿ ಪಾಲಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕರಿಗೆ ಮಣಿಕಂಠ, ಪೃಥ್ವಿ ಸಿಂಗ್, ಸ್ಯಾಂಟ್ರೋ ರವಿ ಅವರ ಮೇಲೆ ಕ್ರಮ ಕೈಗೊಳ್ಳುವ ತಾಕತ್ತು ಇಲ್ಲ. ಕಾರಣ ಅವರ ಗುಟ್ಟುಗಳೆಲ್ಲಾ ಇವರ ಬಳಿಯೇ ಇದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಕಲಿ ಮೈಸೂರು ಸ್ಯಾಂಡಲ್ ಸೋಪ್ ಮಾರಿರುವ ಅಕ್ರಮದಲ್ಲಿ ನಿಮಗೆ ಎಷ್ಟು ಪಾಲು ಸಿಗುತ್ತಿದೆ? ಬಿಜೆಪಿ ಶಾಸಕರಾಗಿದ್ದ ಮಾಡಾಲ್ ವಿರುಪಾಕ್ಷಪ್ಪ ಅವರ ಮನೆಯಲ್ಲಿ 7 ಕೋಟಿ ಹಣ ಸಿಕ್ಕಿತ್ತು. ಅವರು ಇದೇ ಸಂಸ್ಥೆಯ ಜವಾಬ್ದಾರಿ ಹೊತ್ತಿದ್ದರು. ಆ ಪ್ರಕರಣದಲ್ಲಿ ಅವರ ಹೆಸರನ್ನು ಕೈಬಿಡಲಾಗಿದ್ದರೂ ಅವರ ಪುತ್ರನ ಹೆಸರು ಹಾಗೇ ಇದೆ. ಈ ಅಕ್ರಮದಲ್ಲೂ ಅವರ ಕೈವಾಡ ಇಲ್ಲವೇ? ಈ ಬಗ್ಗೆ ತನಿಖೆಯಾಗಬೇಕಲ್ಲವೇ?  ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರು ಈ ಬಗ್ಗೆ ಉತ್ತರ ನೀಡಬೇಕು. ಇವರನ್ನು ಕೂಡ ರಾಮಭಕ್ತರು ಎಂದು ಹೇಳಿ ಬೀದಿಗಿಳಿದು ಹೋರಾಟ ಮಾಡುತ್ತೀರಾ? ಅಥವಾ ಇವರನ್ನು ಪಕ್ಷದಿಂದ ವಜಾ ಮಾಡಿ ರಾಜ್ಯದ ಜನರಿಗೆ ತ್ತರ ನೀಡುತ್ತೀರಾ? ಎಂದು ಸಚಿವರು ಪ್ರಶ್ನಿಸಿದರು.

ರಾಜ್ಯ ಬಿಜೆಪಿ ನಾಯಕರಿಗೆ ಇದರಲ್ಲಿ ಪಾಲಿದೆ. ಇವರು ಕನ್ನಡ ವಿರೋಧಿ ಬಿಜೆಪಿ. ಇವರಿಗೆ ಹಣ ಬಂದರೆ ಸಾಕು ಯಾವುದಕ್ಕೂ ಹಿಂಜರಿಯುವುದಿಲ್ಲ. ರಾಜ್ಯದ ಗೌರವವನ್ನು ಈ ರೀತಿ ಮಾರಾಟ ಮಾಡುತ್ತಾರೆ ಎಂದು ಭಾವಿಸಿರಲಿಲ್ಲ. ನಮ್ಮ ಸರ್ಕಾರ ಈ ವಿಚಾರದಲ್ಲಿ ಎಚ್ಛೆತ್ತು ಎಫ್‌ಐಆರ್ ದಾಖಲಾಗುವಂತೆ ಮಾಡಿದೆ. ನಮ್ಮ ಅಧಿಕಾರಿಗಳು ಹೈದರಾಬಾದ್‌ನಲ್ಲಿದ್ದು, ತೆಲಂಗಾಣ ಉಪಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ತನಿಖೆಗೆ ಸಹಕಾರ ನೀಡುವಂತೆ ಕೋರಿದ್ದೇವೆ. ಈ ವಿಚಾರವಾಗಿ ಎಂ.ಬಿ ಪಾಟೀಲ್ ಅವರಿಗೂ ತಿಳಿಸಿದ್ದೇನೆ. ಅವರು ದಾವೋಸ್‌ನಲ್ಲಿರುವ ಕಾರಣ ಈ ವಿಚಾರವಾಗಿ ನಾನು ಮಾಧ್ಯಮಗೋಷ್ಠಿ ಮೂಲಕ ತಿಳಿಸುತ್ತಿದ್ದೇನೆ ಎಂದು ಪ್ರಿಯಾಂಕ್ ಖರ್ಗೆ ಎಂದು ಹೇಳಿದರು.

ಇದನ್ನೂ ಓದಿ : ಹೈದರಾಬಾದ್‌: ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ; ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...