Homeಕರ್ನಾಟಕನಕಲಿ ಮೈಸೂರು ಸ್ಯಾಂಡಲ್ ಸೋಪ್ ಪ್ರಕರಣ: ಬಂಧಿತರು ಬಿಜೆಪಿಯ ಸಕ್ರಿಯ ಕಾರ್ಯಕರ್ತರು; ಪ್ರಿಯಾಂಕ್ ಖರ್ಗೆ

ನಕಲಿ ಮೈಸೂರು ಸ್ಯಾಂಡಲ್ ಸೋಪ್ ಪ್ರಕರಣ: ಬಂಧಿತರು ಬಿಜೆಪಿಯ ಸಕ್ರಿಯ ಕಾರ್ಯಕರ್ತರು; ಪ್ರಿಯಾಂಕ್ ಖರ್ಗೆ

- Advertisement -
- Advertisement -

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕರಿಗೂ ಬಿಜೆಪಿ ನಾಯಕರಿಗೂ ಅತ್ಯುತ್ತಮ ಒಡನಾಟವಿದ್ದು, ಈ ಅಕ್ರಮದಲ್ಲಿ ಬಿಜೆಪಿ ನಾಯಕರ ಪಾಲೆಷ್ಟು?” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಈ ವಿಚಾರವಾಗಿ ಮಾಹಿತಿ ನೀಡಿದ ಪ್ರಿಯಾಂಕ್ ಖರ್ಗೆ, “ನಮ್ಮ ವಿಶ್ವ ವಿಖ್ಯಾತ ಮೈಸೂರು ಸ್ಯಾಂಡಲ್ ಸೋಪಿನ ನಕಲಿ ಉತ್ಪನ್ನಗಳ ಮಾರಾಟದ ಬಗ್ಗೆ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಗಿದೆ. ಜನವರಿ ಮೊದಲ ವಾರದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರಿಗೆ ಅನಾಮಿಕ ಕರೆ ಬಂದಿತ್ತು. ಅದರಲ್ಲಿ ಈ ವಿಚಾರ ಪ್ರಸ್ತಾಪಿಸಲಾಗಿತ್ತು. ಕೂಡಲೇ ಸಚಿವರು ಕೆಎಎಸ್‌ಡಿಎಲ್ ಎಂಡಿ ಪ್ರಶಾಂತ್ ಅವರಿಗೆ ಮಾಹಿತಿ ನೀಡಿದ್ದರು ಎಂದು ತಿಳಿಸಿದ್ದಾರೆ.

ಸಚಿವರ ಮಾಹಿತಿ ನಂತರ ನಕಲಿ ಜಾಲದ ಹುಡುಕಾಟ ನಡೆಸಲಾಗಿತ್ತು. ಈ ವೇಳೆ ನಕಲಿ ಸೋಪ್ ತಯಾರಿಕಾ ಘಟಕ ಹೈದರಾಬಾದ್‌ನಲ್ಲಿದೆ ಎಂದು ತಿಳಿದು ಬಂದಿತ್ತು. ಅದನ್ನು ತಡೆಗಟ್ಟಲು ಕೆಲವು ಅಧಿಕಾರಿಗಳು ಹೋಗಿ 25 ಲಕ್ಷದ ರೂಪಾಯಿಯ ಸೋಪ್ ಆರ್ಡರ್ ಕೊಟ್ಟಿದ್ದರು. ನಕಲಿ ತಯಾರಕರು ಅದನ್ನು ಪೂರೈಸುವುದಾಗಿ ಒಪ್ಪಿಕೊಂಡಿದ್ದರು. ಇದು ದೊಡ್ಡ ಮಟ್ಟದ ಆರ್ಡರ್ ಆಗಿರುವುದರಿಂದ ನಿಮ್ಮ ಕಾರ್ಖಾನೆಗೆ ಬಂದು ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದ್ದರು. ಅದಕ್ಕೆ ನಕಲಿ ತಯಾರಕರು ಒಪ್ಪಿದ್ದರು. ನಕಲಿ ಸೋಪ್ ಉತ್ಪಾದನಾ ಘಟಕದ ವಿಳಾಸ ತಿಳಿದ ತಕ್ಷಣ ಅಲ್ಲಿಗೆ ದಾಳಿ ಮಾಡಿ ನಕಲಿ ಸೋಪ್ ಮತ್ತು ಅದನ್ನು ತಯಾರಿಸಲು ಬಳಸುತ್ತಿದ್ದ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿತ್ತು. ಈ ಕುರಿತು ತೆಲಂಗಾಣ ಮತ್ತು ಆಂಧ್ರಪ್ರದೇಶದ ಮೈಸೂರು ಸ್ಯಾಂಡಲ್ ಸೋಪ್ ಸೇಲ್ಸ್ ಮ್ಯಾನೇಜರ್ ದೂರು ನೀಡಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಬಂಧಿತರು ಬಿಜೆಪಿ ಕಾರ್ಯಕರ್ತರು:

ನಕಲಿ ಸೋಪ್ ತಯಾರಿಸುತ್ತಿದ್ದ ಹೈದರಾಬಾದ್‌ನ ರಾಕೇಶ್ ಜೈನ್ ಹಾಗೂ ಮಹಾವೀರ್ ಜೈನ್ ಎಂಬ ಇಬ್ಬರು ವ್ಯಕ್ತಿಗಳ ವಿರುದ್ದ ಅಲ್ಲಿನ ಮಲಕ್‌ಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಪ್ರಸ್ತುತ ಇಬ್ಬರೂ ಪೊಲೀಸರ ವಶದಲ್ಲಿದ್ದಾರೆ. ವಿಚಾರಣೆ ವೇಳೆ ಹೊರಬಂದ ಅಚ್ಚರಿ ಹಾಗೂ ಮುಖ್ಯ ಸಂಗತಿ ಎಂದರೆ, ಬಂಧಿತ ಇಬ್ಬರು ವ್ಯಕ್ತಿಗಳೂ ಬಿಜೆಪಿಯ ಸಕ್ರಿಯ ಕಾರ್ಯಕರ್ತರು. ಇವರು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ತೆಲಂಗಾಣ ಶಾಸಕ ರಾಜಾ ಸಿಂಗ್ ಅವರ ಒಡನಾಡಿಗಳಿದ್ದಾರೆ ಎಂದು ಸಚಿವ ಪ್ರಯಾಂಕ್ ಖರ್ಗೆ ಆರೋಪಿಸಿದ್ದಾರೆ. ಇಷ್ಟೆಲ್ಲಾ ಒಡನಾಟ ಇಟ್ಟುಕೊಂಡಿರುವವರ ಜೊತೆ ರಾಜ್ಯ ಬಿಜೆಪಿ ನಾಯಕರು ಸಂಪರ್ಕ ಹೊಂದಿರುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಕಲಬುರಗಿ ಜಿಲ್ಲೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಥೋಡ್, ಮಾಜಿ ಶಾಸಕ ವಾಲ್ಮೀಕಿ ನಾಯಕ ಅವರ ಪುತ್ರ ವಿಠಲ್ ನಾಯಕ್ ಜೊತೆ ಆರೋಪಿಗಳು ಒಡನಾಟ ಇಟ್ಟುಕೊಂಡಿದ್ದಾರೆ  ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬಿಜೆಪಿ ನಾಯಕರ ಜೊತೆ ಆರೋಪಿ ನಿಂತಿರುವುದು ಎನ್ನಲಾದ ಫೋಟೋ

ರಾಜ್ಯದ ಆಸ್ತಿ ಉಳಿಸಿಕೊಳ್ಳಲು ನಾವು ಕಾರ್ಯಾಚರಣೆ ಮಾಡಿದ್ದೇವೆ. ಮೈಸೂರು ಸ್ಯಾಂಡಲ್ ಸೋಪ್‌ ಫ್ಯಾಕ್ಟರಿ ಕೃಷ್ಣರಾಜ ಒಡೆಯರ್ ಅವರು 1916ರಲ್ಲಿ ಸ್ಥಾಪಿಸಿದ ಸಂಸ್ಥೆಯಾಗಿದೆ. ಸ್ಯಾಂಡಲ್ ಸೋಪ್ ಕರ್ನಾಟಕದ ಹೆಮ್ಮೆಯ ಉತ್ಪನ್ನ. ಪ್ರಧಾನಮಂತ್ರಿಗಳ ಮೇಕ್ ಇನ್ ಇಡಿಯಾ, ವೋಕಲ್ ಫಾರ್ ಲೋಕಲ್ ಯೋಜನೆಗೂ ಮುನ್ನ ಇದು ಪ್ರಾರಂಭವಾಗಿತ್ತು ಎಂದಿದ್ದಾರೆ.

ನಾನು ಪ್ರವಾಸೋದ್ಯಮ ಸಚಿವನಾಗಿದ್ದಾಗ ಪ್ಯಾರೀಸ್ ಹೋಗುವ ಅವಕಾಶ ಸಿಕ್ಕಿತ್ತು. ಅಲ್ಲಿ ಪ್ರತಿ ದೇಶದ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲು ಅವಕಾಶವಿರುತ್ತದೆ. ಅಲ್ಲಿನ ಜನ ಮೈಸೂರು ಸ್ಯಾಂಡಲ್ ಸೋಪನ್ನು ಪ್ಯಾರೀಸ್‌ನಲ್ಲಿ ಮಾರಾಟ ಮಾಡುವುದಿಲ್ಲ ಯಾಕೆ? ಎಂದು ಕೇಳಿದ್ದರು. ನಮ್ಮ ರಾಜ್ಯದ ಉತ್ಪನ್ನ ವಿಶ್ವದಲ್ಲೇ ಹೆಸರುವಾಸಿಯಾಗಿದೆ. ಇಂತಹ ಉತ್ಪನ್ನಗಳನ್ನು ಬಿಜೆಪಿ ನಾಯಕರು ನಕಲಿ ಮಾಡಿ ಮಾರಾಟ ಮಾಡುವಲ್ಲಿ ಶಾಮೀಲಾಗಿದ್ದಾರೆ. ಕೋವಿಡ್ ಸಮಯದಲ್ಲಿ ಹೆಣದ ಮೇಲೆ ಹಣ ಮಾಡಿದ್ದರು. ಈಗ ಕರ್ನಾಟಕದ ಆಸ್ತಿ ಮಾರಲು ತಯಾರಾಗಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಸ್ಯಾಂಟ್ರೋ ರವಿ, ಸೈಲೆಂಟ್ ಸುನೀಲ್, ಫೈಟರ್ ರವಿ, ಪೃಥ್ವಿ ಸಿಂಗ್‌ರಂತವರು ಬಿಜೆಪಿಯಲ್ಲೇ ಕಾಣಿಸಿಕೊಳ್ಳುತ್ತಿರುವುದೇಕೆ? ರಾಜ್ಯದ ಆಸ್ತಿ ಮಾರಲು ಹೊರಟವರಿಗೆ ಪಕ್ಷದ ಟಿಕೆಟ್ ನೀಡಿ, ಪದಾಧಿಕಾರಿ ಮಾಡುತ್ತೀರಾ? ನಿಮಗೆ ನಾಚಿಕೆ ಇದ್ದರೆ ಅವರನ್ನು ವಜಾ ಮಾಡುತ್ತಿದ್ದಿರಿ. ಮೊನ್ನೆ ಗರೀಬ್ ಕಲ್ಯಾಣ್ ಯೋಜನೆಯ 700 ಕ್ವಿಂಟಾಲ್ ಅಕ್ಕಿ ಬಿಜೆಪಿ ನಾಯಕರ ಗೋದಾಮಿನಲ್ಲಿ ಸಿಕ್ಕಿದೆ. ಮೋದಿ ಅಕ್ಕಿ ಎಂದು ಬೀಗುವ ಬಿಜೆಪಿ ನಾಯಕರು ಅದನ್ನು ಕದ್ದು ಸಿಕ್ಕಿಬಿದ್ದನಂತರವೂ ಆತನನ್ನು ಪಕ್ಷದಿಂದ ಹೊರಹಾಕಿಲ್ಲ ಎಂದರೆ ನಿಮಗೂ ಇದರಲ್ಲಿ ಪಾಲಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕರಿಗೆ ಮಣಿಕಂಠ, ಪೃಥ್ವಿ ಸಿಂಗ್, ಸ್ಯಾಂಟ್ರೋ ರವಿ ಅವರ ಮೇಲೆ ಕ್ರಮ ಕೈಗೊಳ್ಳುವ ತಾಕತ್ತು ಇಲ್ಲ. ಕಾರಣ ಅವರ ಗುಟ್ಟುಗಳೆಲ್ಲಾ ಇವರ ಬಳಿಯೇ ಇದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಕಲಿ ಮೈಸೂರು ಸ್ಯಾಂಡಲ್ ಸೋಪ್ ಮಾರಿರುವ ಅಕ್ರಮದಲ್ಲಿ ನಿಮಗೆ ಎಷ್ಟು ಪಾಲು ಸಿಗುತ್ತಿದೆ? ಬಿಜೆಪಿ ಶಾಸಕರಾಗಿದ್ದ ಮಾಡಾಲ್ ವಿರುಪಾಕ್ಷಪ್ಪ ಅವರ ಮನೆಯಲ್ಲಿ 7 ಕೋಟಿ ಹಣ ಸಿಕ್ಕಿತ್ತು. ಅವರು ಇದೇ ಸಂಸ್ಥೆಯ ಜವಾಬ್ದಾರಿ ಹೊತ್ತಿದ್ದರು. ಆ ಪ್ರಕರಣದಲ್ಲಿ ಅವರ ಹೆಸರನ್ನು ಕೈಬಿಡಲಾಗಿದ್ದರೂ ಅವರ ಪುತ್ರನ ಹೆಸರು ಹಾಗೇ ಇದೆ. ಈ ಅಕ್ರಮದಲ್ಲೂ ಅವರ ಕೈವಾಡ ಇಲ್ಲವೇ? ಈ ಬಗ್ಗೆ ತನಿಖೆಯಾಗಬೇಕಲ್ಲವೇ?  ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರು ಈ ಬಗ್ಗೆ ಉತ್ತರ ನೀಡಬೇಕು. ಇವರನ್ನು ಕೂಡ ರಾಮಭಕ್ತರು ಎಂದು ಹೇಳಿ ಬೀದಿಗಿಳಿದು ಹೋರಾಟ ಮಾಡುತ್ತೀರಾ? ಅಥವಾ ಇವರನ್ನು ಪಕ್ಷದಿಂದ ವಜಾ ಮಾಡಿ ರಾಜ್ಯದ ಜನರಿಗೆ ತ್ತರ ನೀಡುತ್ತೀರಾ? ಎಂದು ಸಚಿವರು ಪ್ರಶ್ನಿಸಿದರು.

ರಾಜ್ಯ ಬಿಜೆಪಿ ನಾಯಕರಿಗೆ ಇದರಲ್ಲಿ ಪಾಲಿದೆ. ಇವರು ಕನ್ನಡ ವಿರೋಧಿ ಬಿಜೆಪಿ. ಇವರಿಗೆ ಹಣ ಬಂದರೆ ಸಾಕು ಯಾವುದಕ್ಕೂ ಹಿಂಜರಿಯುವುದಿಲ್ಲ. ರಾಜ್ಯದ ಗೌರವವನ್ನು ಈ ರೀತಿ ಮಾರಾಟ ಮಾಡುತ್ತಾರೆ ಎಂದು ಭಾವಿಸಿರಲಿಲ್ಲ. ನಮ್ಮ ಸರ್ಕಾರ ಈ ವಿಚಾರದಲ್ಲಿ ಎಚ್ಛೆತ್ತು ಎಫ್‌ಐಆರ್ ದಾಖಲಾಗುವಂತೆ ಮಾಡಿದೆ. ನಮ್ಮ ಅಧಿಕಾರಿಗಳು ಹೈದರಾಬಾದ್‌ನಲ್ಲಿದ್ದು, ತೆಲಂಗಾಣ ಉಪಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ತನಿಖೆಗೆ ಸಹಕಾರ ನೀಡುವಂತೆ ಕೋರಿದ್ದೇವೆ. ಈ ವಿಚಾರವಾಗಿ ಎಂ.ಬಿ ಪಾಟೀಲ್ ಅವರಿಗೂ ತಿಳಿಸಿದ್ದೇನೆ. ಅವರು ದಾವೋಸ್‌ನಲ್ಲಿರುವ ಕಾರಣ ಈ ವಿಚಾರವಾಗಿ ನಾನು ಮಾಧ್ಯಮಗೋಷ್ಠಿ ಮೂಲಕ ತಿಳಿಸುತ್ತಿದ್ದೇನೆ ಎಂದು ಪ್ರಿಯಾಂಕ್ ಖರ್ಗೆ ಎಂದು ಹೇಳಿದರು.

ಇದನ್ನೂ ಓದಿ : ಹೈದರಾಬಾದ್‌: ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ; ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...