Homeಕರ್ನಾಟಕನಕಲಿ ಮೈಸೂರು ಸ್ಯಾಂಡಲ್ ಸೋಪ್ ಪ್ರಕರಣ: ಬಂಧಿತರು ಬಿಜೆಪಿಯ ಸಕ್ರಿಯ ಕಾರ್ಯಕರ್ತರು; ಪ್ರಿಯಾಂಕ್ ಖರ್ಗೆ

ನಕಲಿ ಮೈಸೂರು ಸ್ಯಾಂಡಲ್ ಸೋಪ್ ಪ್ರಕರಣ: ಬಂಧಿತರು ಬಿಜೆಪಿಯ ಸಕ್ರಿಯ ಕಾರ್ಯಕರ್ತರು; ಪ್ರಿಯಾಂಕ್ ಖರ್ಗೆ

- Advertisement -
- Advertisement -

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕರಿಗೂ ಬಿಜೆಪಿ ನಾಯಕರಿಗೂ ಅತ್ಯುತ್ತಮ ಒಡನಾಟವಿದ್ದು, ಈ ಅಕ್ರಮದಲ್ಲಿ ಬಿಜೆಪಿ ನಾಯಕರ ಪಾಲೆಷ್ಟು?” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಈ ವಿಚಾರವಾಗಿ ಮಾಹಿತಿ ನೀಡಿದ ಪ್ರಿಯಾಂಕ್ ಖರ್ಗೆ, “ನಮ್ಮ ವಿಶ್ವ ವಿಖ್ಯಾತ ಮೈಸೂರು ಸ್ಯಾಂಡಲ್ ಸೋಪಿನ ನಕಲಿ ಉತ್ಪನ್ನಗಳ ಮಾರಾಟದ ಬಗ್ಗೆ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಗಿದೆ. ಜನವರಿ ಮೊದಲ ವಾರದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರಿಗೆ ಅನಾಮಿಕ ಕರೆ ಬಂದಿತ್ತು. ಅದರಲ್ಲಿ ಈ ವಿಚಾರ ಪ್ರಸ್ತಾಪಿಸಲಾಗಿತ್ತು. ಕೂಡಲೇ ಸಚಿವರು ಕೆಎಎಸ್‌ಡಿಎಲ್ ಎಂಡಿ ಪ್ರಶಾಂತ್ ಅವರಿಗೆ ಮಾಹಿತಿ ನೀಡಿದ್ದರು ಎಂದು ತಿಳಿಸಿದ್ದಾರೆ.

ಸಚಿವರ ಮಾಹಿತಿ ನಂತರ ನಕಲಿ ಜಾಲದ ಹುಡುಕಾಟ ನಡೆಸಲಾಗಿತ್ತು. ಈ ವೇಳೆ ನಕಲಿ ಸೋಪ್ ತಯಾರಿಕಾ ಘಟಕ ಹೈದರಾಬಾದ್‌ನಲ್ಲಿದೆ ಎಂದು ತಿಳಿದು ಬಂದಿತ್ತು. ಅದನ್ನು ತಡೆಗಟ್ಟಲು ಕೆಲವು ಅಧಿಕಾರಿಗಳು ಹೋಗಿ 25 ಲಕ್ಷದ ರೂಪಾಯಿಯ ಸೋಪ್ ಆರ್ಡರ್ ಕೊಟ್ಟಿದ್ದರು. ನಕಲಿ ತಯಾರಕರು ಅದನ್ನು ಪೂರೈಸುವುದಾಗಿ ಒಪ್ಪಿಕೊಂಡಿದ್ದರು. ಇದು ದೊಡ್ಡ ಮಟ್ಟದ ಆರ್ಡರ್ ಆಗಿರುವುದರಿಂದ ನಿಮ್ಮ ಕಾರ್ಖಾನೆಗೆ ಬಂದು ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದ್ದರು. ಅದಕ್ಕೆ ನಕಲಿ ತಯಾರಕರು ಒಪ್ಪಿದ್ದರು. ನಕಲಿ ಸೋಪ್ ಉತ್ಪಾದನಾ ಘಟಕದ ವಿಳಾಸ ತಿಳಿದ ತಕ್ಷಣ ಅಲ್ಲಿಗೆ ದಾಳಿ ಮಾಡಿ ನಕಲಿ ಸೋಪ್ ಮತ್ತು ಅದನ್ನು ತಯಾರಿಸಲು ಬಳಸುತ್ತಿದ್ದ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿತ್ತು. ಈ ಕುರಿತು ತೆಲಂಗಾಣ ಮತ್ತು ಆಂಧ್ರಪ್ರದೇಶದ ಮೈಸೂರು ಸ್ಯಾಂಡಲ್ ಸೋಪ್ ಸೇಲ್ಸ್ ಮ್ಯಾನೇಜರ್ ದೂರು ನೀಡಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಬಂಧಿತರು ಬಿಜೆಪಿ ಕಾರ್ಯಕರ್ತರು:

ನಕಲಿ ಸೋಪ್ ತಯಾರಿಸುತ್ತಿದ್ದ ಹೈದರಾಬಾದ್‌ನ ರಾಕೇಶ್ ಜೈನ್ ಹಾಗೂ ಮಹಾವೀರ್ ಜೈನ್ ಎಂಬ ಇಬ್ಬರು ವ್ಯಕ್ತಿಗಳ ವಿರುದ್ದ ಅಲ್ಲಿನ ಮಲಕ್‌ಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಪ್ರಸ್ತುತ ಇಬ್ಬರೂ ಪೊಲೀಸರ ವಶದಲ್ಲಿದ್ದಾರೆ. ವಿಚಾರಣೆ ವೇಳೆ ಹೊರಬಂದ ಅಚ್ಚರಿ ಹಾಗೂ ಮುಖ್ಯ ಸಂಗತಿ ಎಂದರೆ, ಬಂಧಿತ ಇಬ್ಬರು ವ್ಯಕ್ತಿಗಳೂ ಬಿಜೆಪಿಯ ಸಕ್ರಿಯ ಕಾರ್ಯಕರ್ತರು. ಇವರು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ತೆಲಂಗಾಣ ಶಾಸಕ ರಾಜಾ ಸಿಂಗ್ ಅವರ ಒಡನಾಡಿಗಳಿದ್ದಾರೆ ಎಂದು ಸಚಿವ ಪ್ರಯಾಂಕ್ ಖರ್ಗೆ ಆರೋಪಿಸಿದ್ದಾರೆ. ಇಷ್ಟೆಲ್ಲಾ ಒಡನಾಟ ಇಟ್ಟುಕೊಂಡಿರುವವರ ಜೊತೆ ರಾಜ್ಯ ಬಿಜೆಪಿ ನಾಯಕರು ಸಂಪರ್ಕ ಹೊಂದಿರುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಕಲಬುರಗಿ ಜಿಲ್ಲೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಥೋಡ್, ಮಾಜಿ ಶಾಸಕ ವಾಲ್ಮೀಕಿ ನಾಯಕ ಅವರ ಪುತ್ರ ವಿಠಲ್ ನಾಯಕ್ ಜೊತೆ ಆರೋಪಿಗಳು ಒಡನಾಟ ಇಟ್ಟುಕೊಂಡಿದ್ದಾರೆ  ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬಿಜೆಪಿ ನಾಯಕರ ಜೊತೆ ಆರೋಪಿ ನಿಂತಿರುವುದು ಎನ್ನಲಾದ ಫೋಟೋ

ರಾಜ್ಯದ ಆಸ್ತಿ ಉಳಿಸಿಕೊಳ್ಳಲು ನಾವು ಕಾರ್ಯಾಚರಣೆ ಮಾಡಿದ್ದೇವೆ. ಮೈಸೂರು ಸ್ಯಾಂಡಲ್ ಸೋಪ್‌ ಫ್ಯಾಕ್ಟರಿ ಕೃಷ್ಣರಾಜ ಒಡೆಯರ್ ಅವರು 1916ರಲ್ಲಿ ಸ್ಥಾಪಿಸಿದ ಸಂಸ್ಥೆಯಾಗಿದೆ. ಸ್ಯಾಂಡಲ್ ಸೋಪ್ ಕರ್ನಾಟಕದ ಹೆಮ್ಮೆಯ ಉತ್ಪನ್ನ. ಪ್ರಧಾನಮಂತ್ರಿಗಳ ಮೇಕ್ ಇನ್ ಇಡಿಯಾ, ವೋಕಲ್ ಫಾರ್ ಲೋಕಲ್ ಯೋಜನೆಗೂ ಮುನ್ನ ಇದು ಪ್ರಾರಂಭವಾಗಿತ್ತು ಎಂದಿದ್ದಾರೆ.

ನಾನು ಪ್ರವಾಸೋದ್ಯಮ ಸಚಿವನಾಗಿದ್ದಾಗ ಪ್ಯಾರೀಸ್ ಹೋಗುವ ಅವಕಾಶ ಸಿಕ್ಕಿತ್ತು. ಅಲ್ಲಿ ಪ್ರತಿ ದೇಶದ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲು ಅವಕಾಶವಿರುತ್ತದೆ. ಅಲ್ಲಿನ ಜನ ಮೈಸೂರು ಸ್ಯಾಂಡಲ್ ಸೋಪನ್ನು ಪ್ಯಾರೀಸ್‌ನಲ್ಲಿ ಮಾರಾಟ ಮಾಡುವುದಿಲ್ಲ ಯಾಕೆ? ಎಂದು ಕೇಳಿದ್ದರು. ನಮ್ಮ ರಾಜ್ಯದ ಉತ್ಪನ್ನ ವಿಶ್ವದಲ್ಲೇ ಹೆಸರುವಾಸಿಯಾಗಿದೆ. ಇಂತಹ ಉತ್ಪನ್ನಗಳನ್ನು ಬಿಜೆಪಿ ನಾಯಕರು ನಕಲಿ ಮಾಡಿ ಮಾರಾಟ ಮಾಡುವಲ್ಲಿ ಶಾಮೀಲಾಗಿದ್ದಾರೆ. ಕೋವಿಡ್ ಸಮಯದಲ್ಲಿ ಹೆಣದ ಮೇಲೆ ಹಣ ಮಾಡಿದ್ದರು. ಈಗ ಕರ್ನಾಟಕದ ಆಸ್ತಿ ಮಾರಲು ತಯಾರಾಗಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಸ್ಯಾಂಟ್ರೋ ರವಿ, ಸೈಲೆಂಟ್ ಸುನೀಲ್, ಫೈಟರ್ ರವಿ, ಪೃಥ್ವಿ ಸಿಂಗ್‌ರಂತವರು ಬಿಜೆಪಿಯಲ್ಲೇ ಕಾಣಿಸಿಕೊಳ್ಳುತ್ತಿರುವುದೇಕೆ? ರಾಜ್ಯದ ಆಸ್ತಿ ಮಾರಲು ಹೊರಟವರಿಗೆ ಪಕ್ಷದ ಟಿಕೆಟ್ ನೀಡಿ, ಪದಾಧಿಕಾರಿ ಮಾಡುತ್ತೀರಾ? ನಿಮಗೆ ನಾಚಿಕೆ ಇದ್ದರೆ ಅವರನ್ನು ವಜಾ ಮಾಡುತ್ತಿದ್ದಿರಿ. ಮೊನ್ನೆ ಗರೀಬ್ ಕಲ್ಯಾಣ್ ಯೋಜನೆಯ 700 ಕ್ವಿಂಟಾಲ್ ಅಕ್ಕಿ ಬಿಜೆಪಿ ನಾಯಕರ ಗೋದಾಮಿನಲ್ಲಿ ಸಿಕ್ಕಿದೆ. ಮೋದಿ ಅಕ್ಕಿ ಎಂದು ಬೀಗುವ ಬಿಜೆಪಿ ನಾಯಕರು ಅದನ್ನು ಕದ್ದು ಸಿಕ್ಕಿಬಿದ್ದನಂತರವೂ ಆತನನ್ನು ಪಕ್ಷದಿಂದ ಹೊರಹಾಕಿಲ್ಲ ಎಂದರೆ ನಿಮಗೂ ಇದರಲ್ಲಿ ಪಾಲಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕರಿಗೆ ಮಣಿಕಂಠ, ಪೃಥ್ವಿ ಸಿಂಗ್, ಸ್ಯಾಂಟ್ರೋ ರವಿ ಅವರ ಮೇಲೆ ಕ್ರಮ ಕೈಗೊಳ್ಳುವ ತಾಕತ್ತು ಇಲ್ಲ. ಕಾರಣ ಅವರ ಗುಟ್ಟುಗಳೆಲ್ಲಾ ಇವರ ಬಳಿಯೇ ಇದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಕಲಿ ಮೈಸೂರು ಸ್ಯಾಂಡಲ್ ಸೋಪ್ ಮಾರಿರುವ ಅಕ್ರಮದಲ್ಲಿ ನಿಮಗೆ ಎಷ್ಟು ಪಾಲು ಸಿಗುತ್ತಿದೆ? ಬಿಜೆಪಿ ಶಾಸಕರಾಗಿದ್ದ ಮಾಡಾಲ್ ವಿರುಪಾಕ್ಷಪ್ಪ ಅವರ ಮನೆಯಲ್ಲಿ 7 ಕೋಟಿ ಹಣ ಸಿಕ್ಕಿತ್ತು. ಅವರು ಇದೇ ಸಂಸ್ಥೆಯ ಜವಾಬ್ದಾರಿ ಹೊತ್ತಿದ್ದರು. ಆ ಪ್ರಕರಣದಲ್ಲಿ ಅವರ ಹೆಸರನ್ನು ಕೈಬಿಡಲಾಗಿದ್ದರೂ ಅವರ ಪುತ್ರನ ಹೆಸರು ಹಾಗೇ ಇದೆ. ಈ ಅಕ್ರಮದಲ್ಲೂ ಅವರ ಕೈವಾಡ ಇಲ್ಲವೇ? ಈ ಬಗ್ಗೆ ತನಿಖೆಯಾಗಬೇಕಲ್ಲವೇ?  ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರು ಈ ಬಗ್ಗೆ ಉತ್ತರ ನೀಡಬೇಕು. ಇವರನ್ನು ಕೂಡ ರಾಮಭಕ್ತರು ಎಂದು ಹೇಳಿ ಬೀದಿಗಿಳಿದು ಹೋರಾಟ ಮಾಡುತ್ತೀರಾ? ಅಥವಾ ಇವರನ್ನು ಪಕ್ಷದಿಂದ ವಜಾ ಮಾಡಿ ರಾಜ್ಯದ ಜನರಿಗೆ ತ್ತರ ನೀಡುತ್ತೀರಾ? ಎಂದು ಸಚಿವರು ಪ್ರಶ್ನಿಸಿದರು.

ರಾಜ್ಯ ಬಿಜೆಪಿ ನಾಯಕರಿಗೆ ಇದರಲ್ಲಿ ಪಾಲಿದೆ. ಇವರು ಕನ್ನಡ ವಿರೋಧಿ ಬಿಜೆಪಿ. ಇವರಿಗೆ ಹಣ ಬಂದರೆ ಸಾಕು ಯಾವುದಕ್ಕೂ ಹಿಂಜರಿಯುವುದಿಲ್ಲ. ರಾಜ್ಯದ ಗೌರವವನ್ನು ಈ ರೀತಿ ಮಾರಾಟ ಮಾಡುತ್ತಾರೆ ಎಂದು ಭಾವಿಸಿರಲಿಲ್ಲ. ನಮ್ಮ ಸರ್ಕಾರ ಈ ವಿಚಾರದಲ್ಲಿ ಎಚ್ಛೆತ್ತು ಎಫ್‌ಐಆರ್ ದಾಖಲಾಗುವಂತೆ ಮಾಡಿದೆ. ನಮ್ಮ ಅಧಿಕಾರಿಗಳು ಹೈದರಾಬಾದ್‌ನಲ್ಲಿದ್ದು, ತೆಲಂಗಾಣ ಉಪಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ತನಿಖೆಗೆ ಸಹಕಾರ ನೀಡುವಂತೆ ಕೋರಿದ್ದೇವೆ. ಈ ವಿಚಾರವಾಗಿ ಎಂ.ಬಿ ಪಾಟೀಲ್ ಅವರಿಗೂ ತಿಳಿಸಿದ್ದೇನೆ. ಅವರು ದಾವೋಸ್‌ನಲ್ಲಿರುವ ಕಾರಣ ಈ ವಿಚಾರವಾಗಿ ನಾನು ಮಾಧ್ಯಮಗೋಷ್ಠಿ ಮೂಲಕ ತಿಳಿಸುತ್ತಿದ್ದೇನೆ ಎಂದು ಪ್ರಿಯಾಂಕ್ ಖರ್ಗೆ ಎಂದು ಹೇಳಿದರು.

ಇದನ್ನೂ ಓದಿ : ಹೈದರಾಬಾದ್‌: ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ; ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...