Homeಮುಖಪುಟಇದ್ರೀಸ್ ಪಾಶ ಹತ್ಯೆ ಸಮರ್ಥಿಸಿಕೊಂಡ ಕೊಲೆ ಆರೋಪಿಗಳು: ಆಡಿಯೋ ವೈರಲ್

ಇದ್ರೀಸ್ ಪಾಶ ಹತ್ಯೆ ಸಮರ್ಥಿಸಿಕೊಂಡ ಕೊಲೆ ಆರೋಪಿಗಳು: ಆಡಿಯೋ ವೈರಲ್

ಒಂದಲ್ಲ, 10 ವರ್ಷ ಜೈಲಿಗೆ ಹಾಕಿದರೂ ಗೋವು ಕಡಿಯುವವರನ್ನು ಮತ್ತೆ ಕೊಲ್ತೀವಿ ಎಂದು ಇದ್ರೀಸ್ ಪಾಶ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ ಗೋಪಿಗೌಡ ಹೇಳಿದ್ದಾನೆ.

- Advertisement -
- Advertisement -

ದನ ಕುಯ್ಯೋದು ತಪ್ಪಲ್ವ? ಕರ್ನಾಟಕದಲ್ಲಿ ಯಾವುದೇ ಸರ್ಕಾರ ಬರಲಿ, ಕಣ್ಮುಂದೆ ದನ ಕಡಿಯುವುದು ಕಂಡರೆ ಅವನನ್ನು ಮೊದಲು ಕಡಿತ್ತೀವಿ. ಒಂದಲ್ಲ 10 ವರ್ಷ ಜೈಲಿಗೆ ಹಾಕಿದರೂ ಗೋವು ಕಡಿಯುವವರನ್ನು ಮತ್ತೆ ಕೊಲ್ತೀವಿ ಎಂದು ಇದ್ರೀಸ್ ಪಾಶ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ ಗೋಪಿಗೌಡ ಎಂಬುವವನು ಮಾತನಾಡಿರುವ ಆಡಿಯೋ ಒಂದು ವೈರಲ್ ಆಗಿದೆ.

ಹಿಂದುತ್ವ ಎನ್ನುವುದು ನಮ್ಮ ರಕ್ತದಲ್ಲಿ ಬಂದಿದೆ. ದನ ತಿನ್ನಬೇಡಿ, ಮುಸ್ಲಿಮರಿಗೆ ಸಪೋರ್ಟ್ ಮಾಡಬೇಡಿ. ನಮ್ಮಂತವರು ಸತ್ತರೆ ಸಾವಿರ ಜನ ಕೆಲಸ ಮಾಡುತ್ತಾರೆ ಎಂದು ಅಹೋರಾತ್ರ ಎಂಬುವವರಿಗೆ ಫೋನ್ ಮಾತನಾಡಿರುವ ಆಡಿಯೋವನ್ನು ಅವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಇದ್ರೀಸ್ ಪಾಶನನ್ನು ಏಕೆ ಕೊಂದಿರಿ? ನೀವು ಪೊಲೀಸರಿಗೆ ಹಿಡಿದುಕೊಟ್ಟಿದ್ದರೆ ಸಾಕಿರಲಿಲ್ವ? ಕಾನೂನು ಮೀರಿದ್ದು ಏಕೆ ಎಂದು ಅಹೋರಾತ್ರ ಪ್ರಶ್ನಿಸಿದ್ದಕ್ಕೆ, “ದನ ಕಡಿಯೋದು ತಪ್ಪಲ್ವ? ದನ ಕಡಿಯುವವರನ್ನು ನಾವು ಕಡಿಯುತ್ತೇವೆ” ಎಂದು ಹೇಳುವ ಮೂಲಕ ಇದ್ರೀಸ್ ಪಾಶ ಹತ್ಯೆಯನ್ನು ಸಮರ್ಥಿಸಿಕೊಂಡಿರುವುದು ಆಡಿಯೋದಲ್ಲಿ ದಾಖಲಾಗಿದೆ.

ಕಾಂಗ್ರೆಸ್‌ನವರು ಗೆದ್ದುಬಿಟ್ಟಿದ್ದಾರೆ, ಹಾಗಾಗಿ ನಾವು ಸುಮ್ಮನಾಗಿಬಿಟ್ಟಿದ್ದಾರೆ ಎಂದು ಕೆಲವರು ಅಂದುಕೊಂಡಿರಬಹುದು. ಆದರೆ ನಾವು ಗೋವುಗಳ ರಕ್ಷಣೆ ಮಾಡಿಯೇ ಮಾಡುತ್ತೇವೆ ಎಂದು ಇದ್ರೀಸ್ ಪಾಶ ಹತ್ಯೆಯ ಆರೋಪಿಗಳಾದ ಪವನ್ ಮತ್ತು ಅಂಬಿಗಾರ್ ಎಂಬುವವರು ಮಾತನಾಡಿದ್ದಾರೆ.

ಫೋನ್ ಕರೆಯಲ್ಲಿ ಅಹೋರಾತ್ರ ಮಾತನಾಡಿ, “ಸೂಲಿಬೆಲೆ ನಿಮ್ಮನ್ನು ಹೊರಗೆ ಕರೆಸಿಕೊಂಡು, ನಿಮಗೆ ಊಟ ಹಾಕಿದ್ದು ಏಕೆ? ನಾಗರಕಟ್ಟೆಯ ಅಶ್ವಥ ಮರ ಕಡಿದಿದ್ದಕ್ಕೆ ಅನುಭವಿಸಿದರಿ. ಯಾರನ್ನು ಕೊಂದರು ಅಧರ್ಮ. ಜಗತ್ತಿನ ಯಾವ ಧರ್ಮವೂ ಕೊಲ್ಲು ಎಂದು ಹೇಳಿಕೊಡುವುದಿಲ್ಲ. ನೀವು ಇದ್ರೀಸ್ ಪಾಶನಿಗೆ ಏಕೆ ಎಲೆಕ್ಟ್ರಿಕ್ ಶಾಕ್ ಕೊಟ್ಟಿದ್ದು” ಎಂದು ಪ್ರಶ್ನಿಸಿದ್ದಾರೆ. ಆದರೆ ಆರೋಪಿಗಳು ಕೊಲ್ಲಲು ನೀನೆ ಹೇಳಿದ್ದು, ನೀನೆ ಮಾಡಿದ್ದು ಎಂದಿದ್ದಾರೆ. ಯಾರಾದರೂ ಸಾಬರು ನಿನಗೆ ಹೊಡೆಯಲು ಬಂದರೆ ನಮ್ಮನ್ನು ಕರಿ ಬರುತ್ತೇವೆ, ನಿನ್ನನ್ನು ಉಳಿಸುತ್ತೇವೆ ಎಂದಿದ್ದಾರೆ.

ನೀನು ನನಗೆ ಜಾಮೀನು ಕೊಡಿಸುತ್ತೀಯಾ? ಸಪೋರ್ಟ್ ಮಾಡ್ತೀಯ ಎಂದು ನಂಬಿದ್ದೇವು. ಆದರೆ ನೀನು ಮುಂಬೈಗೆ ಕರೆದು ಕೊನೆಗೆ ಫೋನ್ ಸ್ವಿಚ್ ಆಫ್ ಮಾಡಿಕೊಂಡೆ ಎಂದು ಅಹೋರಾತ್ರ ವಿರುದ್ಧ ಆರೋಪಿಸಿದ್ದಾರೆ.

ಆನಂತರ ಆಹೋರಾತ್ರ ಸಾತನೂರು ಪೊಲೀಸ್ ಠಾಣೆಗೆ ಫೋನ್ ಮಾಡಿ ಪುನೀತ್ ಕೆರೆಹಳ್ಳಿ ಜೊತೆಗಿದ್ದ ಆರೋಪಿಗಳು ಫೋನ್ ಮಾಡಿ ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಆನಂತರ ಕನಕಪುರ ಇನ್ಸ್‌ಪೆಕ್ಟರ್‌ರವರಿಗೆ ಫೋನ್ ಮಾಡಿ, “ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳು ಫೋನ್ ಮಾಡಿ ಮಾತನಾಡಿದ್ದಾರೆ ಎಂದು ದೂರಿದ್ದಾರೆ. ಇನ್ಸ್‌ಪೆಕ್ಟರ್‌ ದೂರು ದಾಖಲಿಸಿ ಎಂದಾಗ ನಾನು ಬಾಂಬೆಯಲ್ಲಿದ್ದೇನೆ, ನಿಮಗೆ ವಾಟ್ಸಾಪ್‌ ಮೂಲಕ ಆಡಿಯೋ ಕಳಿಸುತ್ತೇವೆ” ಎಂದಿದ್ದಾರೆ. ಈ ವೇಳೆ ಪೊಲೀಸರು ನಾವು ಶೀಘ್ರದಲ್ಲಿಯೇ ಚಾರ್ಜ್‌ಶೀಟ್‌ ಸಲ್ಲಿಸುತ್ತೇವೆ ಎಂದು ಹೇಳಿರುವುದು ದಾಖಲಾಗಿದೆ.

ಇನ್ನೊಂದೆಡೆ ಇದ್ರೀಸ್ ಪಾಶ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾನೆ. ಅದರಲ್ಲಿ “ಇದ್ರೀಸ್ ಪಾಶ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಹೇಗೆ 25 ಲಕ್ಷ ಪರಿಹಾರ ನೀಡಿದ್ದೀರಿ” ಎಂದು ಮನಬಂದಂತೆ ಮಾತನಾಡಿದ್ದಾನೆ.

ಟ್ರಕ್ ಚಾಲಕ ಇದ್ರೀಸ್ ಪಾಶ ಹತ್ಯೆಯಲ್ಲಿ ಪೊಲೀಸರ ಕರ್ತವ್ಯ ಲೋಪ ಕಂಡುಬಂದಿದೆ. ವಿಷಯ ತಿಳಿದ ತಕ್ಷಣ ಪೊಲೀಸರು ನಕಲಿ ಗೋರಕ್ಷಕರಿಗೆ ಎಚ್ಚರಿಕೆ ನೀಡಿ, ವಶಕ್ಕೆ ಪಡೆದಿದ್ದಲ್ಲಿ ಹತ್ಯೆಯನ್ನು ತಡೆಗಟ್ಟಬಹುದಿತ್ತು ಎಂದು ಸತ್ಯ ಶೋಧನಾ ವರದಿ ತಿಳಿಸಿದೆ.

ವಕೀಲ ಶಿವಮಾನಿತನ್, ಸಿದ್ಧಾರ್ಥ್ ಕೆ.ಜಿ, ಡಾ. ಸಿಲ್ವಿಯಾ ಕರ್ಪಗಂ, ಖಾಸಿಂ ಶೋಯೆಬ್ ಖುರೇಷಿ ಮತ್ತು ಅಖಿಲ ಭಾರತ ಜಮೈತುಲ್ ಖುರೇಷ್ (ಕರ್ನಾಟಕ) ಸದಸ್ಯರ ಸತ್ಯಶೋಧನಾ ತಂಡವು ಇದ್ರೀಸ್ ಪಾಶ ಹತ್ಯೆ ಪ್ರಕರಣದ ಸತ್ಯಶೋಧನಾ ವರದಿಯನ್ನು ಪ್ರಕಟಿಸಿದ್ದು, ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಶಿಫಾರಸ್ಸುಗಳನ್ನು ಸಲ್ಲಿಸಿದ್ದಾರೆ.

ಹಣ ಸುಲಿಗೆ ಮಾಡುವ ಹಾಗೂ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ, ದಾಳಿ ನಡೆಸುವ ಉದ್ದೇಶದಿಂದ ಸಮಾಜ-ವಿರೋಧಿ ಗುಂಪುಗಳು ಬಹಿರಂಗವಾಗಿ ಕಾನೂನನ್ನು ಕೈಗೆತ್ತಿಕೊಂಡಿವೆ. ಪೊಲೀಸರ ಯಾವುದೇ ಭಯವಿಲ್ಲದೆ ಪೊಲೀಸ್ ಠಾಣೆಯ ಹತ್ತಿರವೇ ಮೂರು ಜನ ನಾಗರೀಕರ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ. ಆದರೆ ಪೊಲೀಸರು ತಕ್ಷಣವೇ ಈ ದಾಳಿಕೋರರನ್ನು ಬಂಧಿಸುವ ಬದಲು ಇನ್ನುಳಿದ ಸಂತ್ರಸ್ಥರನ್ನು ಹುಡುಕಲು ದಾಳಿಕೋರರನ್ನು ಬಿಟ್ಟಿದ್ದಾರೆ. ಪೊಲೀಸ್ ಠಾಣೆಯ ಸಿಬ್ಬಂಧಿಯೊಬ್ಬರು ಸಂತ್ರಸ್ಥರ ಮೇಲೆ ನಡೆಯುತ್ತಿದ್ದ ಹಲ್ಲೆಯನ್ನು ಕಣ್ಣಾರೆ ಕಂಡ ನಂತರ ಹಾಗೂ ಪೊಲೀಸ್ ಠಾಣೆ ಹೊರಗೆ ಸ್ವತಃ ದಾಳಿಕೋರರೇ ಫೇಸ್‌ಬುಕ್ ಲೈವ್ ಮಾಡಿದರೂ ಸಹ ದಾಳಿಕೋರರನ್ನು ಬಂಧಿಸಿರುವುದಿಲ್ಲ. ಇದರಿಂದಾಗಿಯೇ ಇದ್ರೀಸ್ ಪಾಶರವರ ಹತ್ಯೆಯಾಗಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ; ಇದ್ರೀಸ್ ಪಾಶ ಹತ್ಯೆಗೆ ಪೊಲೀಸರ ಕರ್ತವ್ಯ ಲೋಪವೂ ಕಾರಣ: ಸತ್ಯಶೋಧನಾ ವರದಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...