Homeಮುಖಪುಟಇದ್ರೀಸ್ ಪಾಶ ಹತ್ಯೆ ಸಮರ್ಥಿಸಿಕೊಂಡ ಕೊಲೆ ಆರೋಪಿಗಳು: ಆಡಿಯೋ ವೈರಲ್

ಇದ್ರೀಸ್ ಪಾಶ ಹತ್ಯೆ ಸಮರ್ಥಿಸಿಕೊಂಡ ಕೊಲೆ ಆರೋಪಿಗಳು: ಆಡಿಯೋ ವೈರಲ್

ಒಂದಲ್ಲ, 10 ವರ್ಷ ಜೈಲಿಗೆ ಹಾಕಿದರೂ ಗೋವು ಕಡಿಯುವವರನ್ನು ಮತ್ತೆ ಕೊಲ್ತೀವಿ ಎಂದು ಇದ್ರೀಸ್ ಪಾಶ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ ಗೋಪಿಗೌಡ ಹೇಳಿದ್ದಾನೆ.

- Advertisement -
- Advertisement -

ದನ ಕುಯ್ಯೋದು ತಪ್ಪಲ್ವ? ಕರ್ನಾಟಕದಲ್ಲಿ ಯಾವುದೇ ಸರ್ಕಾರ ಬರಲಿ, ಕಣ್ಮುಂದೆ ದನ ಕಡಿಯುವುದು ಕಂಡರೆ ಅವನನ್ನು ಮೊದಲು ಕಡಿತ್ತೀವಿ. ಒಂದಲ್ಲ 10 ವರ್ಷ ಜೈಲಿಗೆ ಹಾಕಿದರೂ ಗೋವು ಕಡಿಯುವವರನ್ನು ಮತ್ತೆ ಕೊಲ್ತೀವಿ ಎಂದು ಇದ್ರೀಸ್ ಪಾಶ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ ಗೋಪಿಗೌಡ ಎಂಬುವವನು ಮಾತನಾಡಿರುವ ಆಡಿಯೋ ಒಂದು ವೈರಲ್ ಆಗಿದೆ.

ಹಿಂದುತ್ವ ಎನ್ನುವುದು ನಮ್ಮ ರಕ್ತದಲ್ಲಿ ಬಂದಿದೆ. ದನ ತಿನ್ನಬೇಡಿ, ಮುಸ್ಲಿಮರಿಗೆ ಸಪೋರ್ಟ್ ಮಾಡಬೇಡಿ. ನಮ್ಮಂತವರು ಸತ್ತರೆ ಸಾವಿರ ಜನ ಕೆಲಸ ಮಾಡುತ್ತಾರೆ ಎಂದು ಅಹೋರಾತ್ರ ಎಂಬುವವರಿಗೆ ಫೋನ್ ಮಾತನಾಡಿರುವ ಆಡಿಯೋವನ್ನು ಅವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಇದ್ರೀಸ್ ಪಾಶನನ್ನು ಏಕೆ ಕೊಂದಿರಿ? ನೀವು ಪೊಲೀಸರಿಗೆ ಹಿಡಿದುಕೊಟ್ಟಿದ್ದರೆ ಸಾಕಿರಲಿಲ್ವ? ಕಾನೂನು ಮೀರಿದ್ದು ಏಕೆ ಎಂದು ಅಹೋರಾತ್ರ ಪ್ರಶ್ನಿಸಿದ್ದಕ್ಕೆ, “ದನ ಕಡಿಯೋದು ತಪ್ಪಲ್ವ? ದನ ಕಡಿಯುವವರನ್ನು ನಾವು ಕಡಿಯುತ್ತೇವೆ” ಎಂದು ಹೇಳುವ ಮೂಲಕ ಇದ್ರೀಸ್ ಪಾಶ ಹತ್ಯೆಯನ್ನು ಸಮರ್ಥಿಸಿಕೊಂಡಿರುವುದು ಆಡಿಯೋದಲ್ಲಿ ದಾಖಲಾಗಿದೆ.

ಕಾಂಗ್ರೆಸ್‌ನವರು ಗೆದ್ದುಬಿಟ್ಟಿದ್ದಾರೆ, ಹಾಗಾಗಿ ನಾವು ಸುಮ್ಮನಾಗಿಬಿಟ್ಟಿದ್ದಾರೆ ಎಂದು ಕೆಲವರು ಅಂದುಕೊಂಡಿರಬಹುದು. ಆದರೆ ನಾವು ಗೋವುಗಳ ರಕ್ಷಣೆ ಮಾಡಿಯೇ ಮಾಡುತ್ತೇವೆ ಎಂದು ಇದ್ರೀಸ್ ಪಾಶ ಹತ್ಯೆಯ ಆರೋಪಿಗಳಾದ ಪವನ್ ಮತ್ತು ಅಂಬಿಗಾರ್ ಎಂಬುವವರು ಮಾತನಾಡಿದ್ದಾರೆ.

ಫೋನ್ ಕರೆಯಲ್ಲಿ ಅಹೋರಾತ್ರ ಮಾತನಾಡಿ, “ಸೂಲಿಬೆಲೆ ನಿಮ್ಮನ್ನು ಹೊರಗೆ ಕರೆಸಿಕೊಂಡು, ನಿಮಗೆ ಊಟ ಹಾಕಿದ್ದು ಏಕೆ? ನಾಗರಕಟ್ಟೆಯ ಅಶ್ವಥ ಮರ ಕಡಿದಿದ್ದಕ್ಕೆ ಅನುಭವಿಸಿದರಿ. ಯಾರನ್ನು ಕೊಂದರು ಅಧರ್ಮ. ಜಗತ್ತಿನ ಯಾವ ಧರ್ಮವೂ ಕೊಲ್ಲು ಎಂದು ಹೇಳಿಕೊಡುವುದಿಲ್ಲ. ನೀವು ಇದ್ರೀಸ್ ಪಾಶನಿಗೆ ಏಕೆ ಎಲೆಕ್ಟ್ರಿಕ್ ಶಾಕ್ ಕೊಟ್ಟಿದ್ದು” ಎಂದು ಪ್ರಶ್ನಿಸಿದ್ದಾರೆ. ಆದರೆ ಆರೋಪಿಗಳು ಕೊಲ್ಲಲು ನೀನೆ ಹೇಳಿದ್ದು, ನೀನೆ ಮಾಡಿದ್ದು ಎಂದಿದ್ದಾರೆ. ಯಾರಾದರೂ ಸಾಬರು ನಿನಗೆ ಹೊಡೆಯಲು ಬಂದರೆ ನಮ್ಮನ್ನು ಕರಿ ಬರುತ್ತೇವೆ, ನಿನ್ನನ್ನು ಉಳಿಸುತ್ತೇವೆ ಎಂದಿದ್ದಾರೆ.

ನೀನು ನನಗೆ ಜಾಮೀನು ಕೊಡಿಸುತ್ತೀಯಾ? ಸಪೋರ್ಟ್ ಮಾಡ್ತೀಯ ಎಂದು ನಂಬಿದ್ದೇವು. ಆದರೆ ನೀನು ಮುಂಬೈಗೆ ಕರೆದು ಕೊನೆಗೆ ಫೋನ್ ಸ್ವಿಚ್ ಆಫ್ ಮಾಡಿಕೊಂಡೆ ಎಂದು ಅಹೋರಾತ್ರ ವಿರುದ್ಧ ಆರೋಪಿಸಿದ್ದಾರೆ.

ಆನಂತರ ಆಹೋರಾತ್ರ ಸಾತನೂರು ಪೊಲೀಸ್ ಠಾಣೆಗೆ ಫೋನ್ ಮಾಡಿ ಪುನೀತ್ ಕೆರೆಹಳ್ಳಿ ಜೊತೆಗಿದ್ದ ಆರೋಪಿಗಳು ಫೋನ್ ಮಾಡಿ ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಆನಂತರ ಕನಕಪುರ ಇನ್ಸ್‌ಪೆಕ್ಟರ್‌ರವರಿಗೆ ಫೋನ್ ಮಾಡಿ, “ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳು ಫೋನ್ ಮಾಡಿ ಮಾತನಾಡಿದ್ದಾರೆ ಎಂದು ದೂರಿದ್ದಾರೆ. ಇನ್ಸ್‌ಪೆಕ್ಟರ್‌ ದೂರು ದಾಖಲಿಸಿ ಎಂದಾಗ ನಾನು ಬಾಂಬೆಯಲ್ಲಿದ್ದೇನೆ, ನಿಮಗೆ ವಾಟ್ಸಾಪ್‌ ಮೂಲಕ ಆಡಿಯೋ ಕಳಿಸುತ್ತೇವೆ” ಎಂದಿದ್ದಾರೆ. ಈ ವೇಳೆ ಪೊಲೀಸರು ನಾವು ಶೀಘ್ರದಲ್ಲಿಯೇ ಚಾರ್ಜ್‌ಶೀಟ್‌ ಸಲ್ಲಿಸುತ್ತೇವೆ ಎಂದು ಹೇಳಿರುವುದು ದಾಖಲಾಗಿದೆ.

ಇನ್ನೊಂದೆಡೆ ಇದ್ರೀಸ್ ಪಾಶ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾನೆ. ಅದರಲ್ಲಿ “ಇದ್ರೀಸ್ ಪಾಶ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಹೇಗೆ 25 ಲಕ್ಷ ಪರಿಹಾರ ನೀಡಿದ್ದೀರಿ” ಎಂದು ಮನಬಂದಂತೆ ಮಾತನಾಡಿದ್ದಾನೆ.

ಟ್ರಕ್ ಚಾಲಕ ಇದ್ರೀಸ್ ಪಾಶ ಹತ್ಯೆಯಲ್ಲಿ ಪೊಲೀಸರ ಕರ್ತವ್ಯ ಲೋಪ ಕಂಡುಬಂದಿದೆ. ವಿಷಯ ತಿಳಿದ ತಕ್ಷಣ ಪೊಲೀಸರು ನಕಲಿ ಗೋರಕ್ಷಕರಿಗೆ ಎಚ್ಚರಿಕೆ ನೀಡಿ, ವಶಕ್ಕೆ ಪಡೆದಿದ್ದಲ್ಲಿ ಹತ್ಯೆಯನ್ನು ತಡೆಗಟ್ಟಬಹುದಿತ್ತು ಎಂದು ಸತ್ಯ ಶೋಧನಾ ವರದಿ ತಿಳಿಸಿದೆ.

ವಕೀಲ ಶಿವಮಾನಿತನ್, ಸಿದ್ಧಾರ್ಥ್ ಕೆ.ಜಿ, ಡಾ. ಸಿಲ್ವಿಯಾ ಕರ್ಪಗಂ, ಖಾಸಿಂ ಶೋಯೆಬ್ ಖುರೇಷಿ ಮತ್ತು ಅಖಿಲ ಭಾರತ ಜಮೈತುಲ್ ಖುರೇಷ್ (ಕರ್ನಾಟಕ) ಸದಸ್ಯರ ಸತ್ಯಶೋಧನಾ ತಂಡವು ಇದ್ರೀಸ್ ಪಾಶ ಹತ್ಯೆ ಪ್ರಕರಣದ ಸತ್ಯಶೋಧನಾ ವರದಿಯನ್ನು ಪ್ರಕಟಿಸಿದ್ದು, ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಶಿಫಾರಸ್ಸುಗಳನ್ನು ಸಲ್ಲಿಸಿದ್ದಾರೆ.

ಹಣ ಸುಲಿಗೆ ಮಾಡುವ ಹಾಗೂ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ, ದಾಳಿ ನಡೆಸುವ ಉದ್ದೇಶದಿಂದ ಸಮಾಜ-ವಿರೋಧಿ ಗುಂಪುಗಳು ಬಹಿರಂಗವಾಗಿ ಕಾನೂನನ್ನು ಕೈಗೆತ್ತಿಕೊಂಡಿವೆ. ಪೊಲೀಸರ ಯಾವುದೇ ಭಯವಿಲ್ಲದೆ ಪೊಲೀಸ್ ಠಾಣೆಯ ಹತ್ತಿರವೇ ಮೂರು ಜನ ನಾಗರೀಕರ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ. ಆದರೆ ಪೊಲೀಸರು ತಕ್ಷಣವೇ ಈ ದಾಳಿಕೋರರನ್ನು ಬಂಧಿಸುವ ಬದಲು ಇನ್ನುಳಿದ ಸಂತ್ರಸ್ಥರನ್ನು ಹುಡುಕಲು ದಾಳಿಕೋರರನ್ನು ಬಿಟ್ಟಿದ್ದಾರೆ. ಪೊಲೀಸ್ ಠಾಣೆಯ ಸಿಬ್ಬಂಧಿಯೊಬ್ಬರು ಸಂತ್ರಸ್ಥರ ಮೇಲೆ ನಡೆಯುತ್ತಿದ್ದ ಹಲ್ಲೆಯನ್ನು ಕಣ್ಣಾರೆ ಕಂಡ ನಂತರ ಹಾಗೂ ಪೊಲೀಸ್ ಠಾಣೆ ಹೊರಗೆ ಸ್ವತಃ ದಾಳಿಕೋರರೇ ಫೇಸ್‌ಬುಕ್ ಲೈವ್ ಮಾಡಿದರೂ ಸಹ ದಾಳಿಕೋರರನ್ನು ಬಂಧಿಸಿರುವುದಿಲ್ಲ. ಇದರಿಂದಾಗಿಯೇ ಇದ್ರೀಸ್ ಪಾಶರವರ ಹತ್ಯೆಯಾಗಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ; ಇದ್ರೀಸ್ ಪಾಶ ಹತ್ಯೆಗೆ ಪೊಲೀಸರ ಕರ್ತವ್ಯ ಲೋಪವೂ ಕಾರಣ: ಸತ್ಯಶೋಧನಾ ವರದಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...