Homeಮುಖಪುಟಇದ್ರೀಸ್ ಪಾಶ ಹತ್ಯೆ ಸಮರ್ಥಿಸಿಕೊಂಡ ಕೊಲೆ ಆರೋಪಿಗಳು: ಆಡಿಯೋ ವೈರಲ್

ಇದ್ರೀಸ್ ಪಾಶ ಹತ್ಯೆ ಸಮರ್ಥಿಸಿಕೊಂಡ ಕೊಲೆ ಆರೋಪಿಗಳು: ಆಡಿಯೋ ವೈರಲ್

ಒಂದಲ್ಲ, 10 ವರ್ಷ ಜೈಲಿಗೆ ಹಾಕಿದರೂ ಗೋವು ಕಡಿಯುವವರನ್ನು ಮತ್ತೆ ಕೊಲ್ತೀವಿ ಎಂದು ಇದ್ರೀಸ್ ಪಾಶ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ ಗೋಪಿಗೌಡ ಹೇಳಿದ್ದಾನೆ.

- Advertisement -
- Advertisement -

ದನ ಕುಯ್ಯೋದು ತಪ್ಪಲ್ವ? ಕರ್ನಾಟಕದಲ್ಲಿ ಯಾವುದೇ ಸರ್ಕಾರ ಬರಲಿ, ಕಣ್ಮುಂದೆ ದನ ಕಡಿಯುವುದು ಕಂಡರೆ ಅವನನ್ನು ಮೊದಲು ಕಡಿತ್ತೀವಿ. ಒಂದಲ್ಲ 10 ವರ್ಷ ಜೈಲಿಗೆ ಹಾಕಿದರೂ ಗೋವು ಕಡಿಯುವವರನ್ನು ಮತ್ತೆ ಕೊಲ್ತೀವಿ ಎಂದು ಇದ್ರೀಸ್ ಪಾಶ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ ಗೋಪಿಗೌಡ ಎಂಬುವವನು ಮಾತನಾಡಿರುವ ಆಡಿಯೋ ಒಂದು ವೈರಲ್ ಆಗಿದೆ.

ಹಿಂದುತ್ವ ಎನ್ನುವುದು ನಮ್ಮ ರಕ್ತದಲ್ಲಿ ಬಂದಿದೆ. ದನ ತಿನ್ನಬೇಡಿ, ಮುಸ್ಲಿಮರಿಗೆ ಸಪೋರ್ಟ್ ಮಾಡಬೇಡಿ. ನಮ್ಮಂತವರು ಸತ್ತರೆ ಸಾವಿರ ಜನ ಕೆಲಸ ಮಾಡುತ್ತಾರೆ ಎಂದು ಅಹೋರಾತ್ರ ಎಂಬುವವರಿಗೆ ಫೋನ್ ಮಾತನಾಡಿರುವ ಆಡಿಯೋವನ್ನು ಅವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಇದ್ರೀಸ್ ಪಾಶನನ್ನು ಏಕೆ ಕೊಂದಿರಿ? ನೀವು ಪೊಲೀಸರಿಗೆ ಹಿಡಿದುಕೊಟ್ಟಿದ್ದರೆ ಸಾಕಿರಲಿಲ್ವ? ಕಾನೂನು ಮೀರಿದ್ದು ಏಕೆ ಎಂದು ಅಹೋರಾತ್ರ ಪ್ರಶ್ನಿಸಿದ್ದಕ್ಕೆ, “ದನ ಕಡಿಯೋದು ತಪ್ಪಲ್ವ? ದನ ಕಡಿಯುವವರನ್ನು ನಾವು ಕಡಿಯುತ್ತೇವೆ” ಎಂದು ಹೇಳುವ ಮೂಲಕ ಇದ್ರೀಸ್ ಪಾಶ ಹತ್ಯೆಯನ್ನು ಸಮರ್ಥಿಸಿಕೊಂಡಿರುವುದು ಆಡಿಯೋದಲ್ಲಿ ದಾಖಲಾಗಿದೆ.

ಕಾಂಗ್ರೆಸ್‌ನವರು ಗೆದ್ದುಬಿಟ್ಟಿದ್ದಾರೆ, ಹಾಗಾಗಿ ನಾವು ಸುಮ್ಮನಾಗಿಬಿಟ್ಟಿದ್ದಾರೆ ಎಂದು ಕೆಲವರು ಅಂದುಕೊಂಡಿರಬಹುದು. ಆದರೆ ನಾವು ಗೋವುಗಳ ರಕ್ಷಣೆ ಮಾಡಿಯೇ ಮಾಡುತ್ತೇವೆ ಎಂದು ಇದ್ರೀಸ್ ಪಾಶ ಹತ್ಯೆಯ ಆರೋಪಿಗಳಾದ ಪವನ್ ಮತ್ತು ಅಂಬಿಗಾರ್ ಎಂಬುವವರು ಮಾತನಾಡಿದ್ದಾರೆ.

ಫೋನ್ ಕರೆಯಲ್ಲಿ ಅಹೋರಾತ್ರ ಮಾತನಾಡಿ, “ಸೂಲಿಬೆಲೆ ನಿಮ್ಮನ್ನು ಹೊರಗೆ ಕರೆಸಿಕೊಂಡು, ನಿಮಗೆ ಊಟ ಹಾಕಿದ್ದು ಏಕೆ? ನಾಗರಕಟ್ಟೆಯ ಅಶ್ವಥ ಮರ ಕಡಿದಿದ್ದಕ್ಕೆ ಅನುಭವಿಸಿದರಿ. ಯಾರನ್ನು ಕೊಂದರು ಅಧರ್ಮ. ಜಗತ್ತಿನ ಯಾವ ಧರ್ಮವೂ ಕೊಲ್ಲು ಎಂದು ಹೇಳಿಕೊಡುವುದಿಲ್ಲ. ನೀವು ಇದ್ರೀಸ್ ಪಾಶನಿಗೆ ಏಕೆ ಎಲೆಕ್ಟ್ರಿಕ್ ಶಾಕ್ ಕೊಟ್ಟಿದ್ದು” ಎಂದು ಪ್ರಶ್ನಿಸಿದ್ದಾರೆ. ಆದರೆ ಆರೋಪಿಗಳು ಕೊಲ್ಲಲು ನೀನೆ ಹೇಳಿದ್ದು, ನೀನೆ ಮಾಡಿದ್ದು ಎಂದಿದ್ದಾರೆ. ಯಾರಾದರೂ ಸಾಬರು ನಿನಗೆ ಹೊಡೆಯಲು ಬಂದರೆ ನಮ್ಮನ್ನು ಕರಿ ಬರುತ್ತೇವೆ, ನಿನ್ನನ್ನು ಉಳಿಸುತ್ತೇವೆ ಎಂದಿದ್ದಾರೆ.

ನೀನು ನನಗೆ ಜಾಮೀನು ಕೊಡಿಸುತ್ತೀಯಾ? ಸಪೋರ್ಟ್ ಮಾಡ್ತೀಯ ಎಂದು ನಂಬಿದ್ದೇವು. ಆದರೆ ನೀನು ಮುಂಬೈಗೆ ಕರೆದು ಕೊನೆಗೆ ಫೋನ್ ಸ್ವಿಚ್ ಆಫ್ ಮಾಡಿಕೊಂಡೆ ಎಂದು ಅಹೋರಾತ್ರ ವಿರುದ್ಧ ಆರೋಪಿಸಿದ್ದಾರೆ.

ಆನಂತರ ಆಹೋರಾತ್ರ ಸಾತನೂರು ಪೊಲೀಸ್ ಠಾಣೆಗೆ ಫೋನ್ ಮಾಡಿ ಪುನೀತ್ ಕೆರೆಹಳ್ಳಿ ಜೊತೆಗಿದ್ದ ಆರೋಪಿಗಳು ಫೋನ್ ಮಾಡಿ ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಆನಂತರ ಕನಕಪುರ ಇನ್ಸ್‌ಪೆಕ್ಟರ್‌ರವರಿಗೆ ಫೋನ್ ಮಾಡಿ, “ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳು ಫೋನ್ ಮಾಡಿ ಮಾತನಾಡಿದ್ದಾರೆ ಎಂದು ದೂರಿದ್ದಾರೆ. ಇನ್ಸ್‌ಪೆಕ್ಟರ್‌ ದೂರು ದಾಖಲಿಸಿ ಎಂದಾಗ ನಾನು ಬಾಂಬೆಯಲ್ಲಿದ್ದೇನೆ, ನಿಮಗೆ ವಾಟ್ಸಾಪ್‌ ಮೂಲಕ ಆಡಿಯೋ ಕಳಿಸುತ್ತೇವೆ” ಎಂದಿದ್ದಾರೆ. ಈ ವೇಳೆ ಪೊಲೀಸರು ನಾವು ಶೀಘ್ರದಲ್ಲಿಯೇ ಚಾರ್ಜ್‌ಶೀಟ್‌ ಸಲ್ಲಿಸುತ್ತೇವೆ ಎಂದು ಹೇಳಿರುವುದು ದಾಖಲಾಗಿದೆ.

ಇನ್ನೊಂದೆಡೆ ಇದ್ರೀಸ್ ಪಾಶ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾನೆ. ಅದರಲ್ಲಿ “ಇದ್ರೀಸ್ ಪಾಶ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಹೇಗೆ 25 ಲಕ್ಷ ಪರಿಹಾರ ನೀಡಿದ್ದೀರಿ” ಎಂದು ಮನಬಂದಂತೆ ಮಾತನಾಡಿದ್ದಾನೆ.

ಟ್ರಕ್ ಚಾಲಕ ಇದ್ರೀಸ್ ಪಾಶ ಹತ್ಯೆಯಲ್ಲಿ ಪೊಲೀಸರ ಕರ್ತವ್ಯ ಲೋಪ ಕಂಡುಬಂದಿದೆ. ವಿಷಯ ತಿಳಿದ ತಕ್ಷಣ ಪೊಲೀಸರು ನಕಲಿ ಗೋರಕ್ಷಕರಿಗೆ ಎಚ್ಚರಿಕೆ ನೀಡಿ, ವಶಕ್ಕೆ ಪಡೆದಿದ್ದಲ್ಲಿ ಹತ್ಯೆಯನ್ನು ತಡೆಗಟ್ಟಬಹುದಿತ್ತು ಎಂದು ಸತ್ಯ ಶೋಧನಾ ವರದಿ ತಿಳಿಸಿದೆ.

ವಕೀಲ ಶಿವಮಾನಿತನ್, ಸಿದ್ಧಾರ್ಥ್ ಕೆ.ಜಿ, ಡಾ. ಸಿಲ್ವಿಯಾ ಕರ್ಪಗಂ, ಖಾಸಿಂ ಶೋಯೆಬ್ ಖುರೇಷಿ ಮತ್ತು ಅಖಿಲ ಭಾರತ ಜಮೈತುಲ್ ಖುರೇಷ್ (ಕರ್ನಾಟಕ) ಸದಸ್ಯರ ಸತ್ಯಶೋಧನಾ ತಂಡವು ಇದ್ರೀಸ್ ಪಾಶ ಹತ್ಯೆ ಪ್ರಕರಣದ ಸತ್ಯಶೋಧನಾ ವರದಿಯನ್ನು ಪ್ರಕಟಿಸಿದ್ದು, ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಶಿಫಾರಸ್ಸುಗಳನ್ನು ಸಲ್ಲಿಸಿದ್ದಾರೆ.

ಹಣ ಸುಲಿಗೆ ಮಾಡುವ ಹಾಗೂ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ, ದಾಳಿ ನಡೆಸುವ ಉದ್ದೇಶದಿಂದ ಸಮಾಜ-ವಿರೋಧಿ ಗುಂಪುಗಳು ಬಹಿರಂಗವಾಗಿ ಕಾನೂನನ್ನು ಕೈಗೆತ್ತಿಕೊಂಡಿವೆ. ಪೊಲೀಸರ ಯಾವುದೇ ಭಯವಿಲ್ಲದೆ ಪೊಲೀಸ್ ಠಾಣೆಯ ಹತ್ತಿರವೇ ಮೂರು ಜನ ನಾಗರೀಕರ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ. ಆದರೆ ಪೊಲೀಸರು ತಕ್ಷಣವೇ ಈ ದಾಳಿಕೋರರನ್ನು ಬಂಧಿಸುವ ಬದಲು ಇನ್ನುಳಿದ ಸಂತ್ರಸ್ಥರನ್ನು ಹುಡುಕಲು ದಾಳಿಕೋರರನ್ನು ಬಿಟ್ಟಿದ್ದಾರೆ. ಪೊಲೀಸ್ ಠಾಣೆಯ ಸಿಬ್ಬಂಧಿಯೊಬ್ಬರು ಸಂತ್ರಸ್ಥರ ಮೇಲೆ ನಡೆಯುತ್ತಿದ್ದ ಹಲ್ಲೆಯನ್ನು ಕಣ್ಣಾರೆ ಕಂಡ ನಂತರ ಹಾಗೂ ಪೊಲೀಸ್ ಠಾಣೆ ಹೊರಗೆ ಸ್ವತಃ ದಾಳಿಕೋರರೇ ಫೇಸ್‌ಬುಕ್ ಲೈವ್ ಮಾಡಿದರೂ ಸಹ ದಾಳಿಕೋರರನ್ನು ಬಂಧಿಸಿರುವುದಿಲ್ಲ. ಇದರಿಂದಾಗಿಯೇ ಇದ್ರೀಸ್ ಪಾಶರವರ ಹತ್ಯೆಯಾಗಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ; ಇದ್ರೀಸ್ ಪಾಶ ಹತ್ಯೆಗೆ ಪೊಲೀಸರ ಕರ್ತವ್ಯ ಲೋಪವೂ ಕಾರಣ: ಸತ್ಯಶೋಧನಾ ವರದಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...