Homeಮುಖಪುಟಭಾರತದ ನಕ್ಷೆ ತಪ್ಪಾಗಿ ತೋರಿಸಿದ ಆರೋಪ: ಟ್ವಿಟರ್ ಇಂಡಿಯಾ ಮುಖ್ಯಸ್ಥರ ವಿರುದ್ಧ ಮತ್ತೊಂದು FIR

ಭಾರತದ ನಕ್ಷೆ ತಪ್ಪಾಗಿ ತೋರಿಸಿದ ಆರೋಪ: ಟ್ವಿಟರ್ ಇಂಡಿಯಾ ಮುಖ್ಯಸ್ಥರ ವಿರುದ್ಧ ಮತ್ತೊಂದು FIR

- Advertisement -
- Advertisement -

ಭಾರತದ ತಪ್ಪಾದ ನಕ್ಷೆಯನ್ನು ಪ್ರಕಟಿಸಿದ ಆರೋಪದ ಮೇಲೆ ಟ್ವಿಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿ ಅವರ ಮೇಲೆ ಉತ್ತರ ಪ್ರದೇಶದಲ್ಲಿ FIR ದಾಖಲಿಸಲಾಗಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ.

ಇತ್ತೀಚೆಗೆ ಟ್ವಿಟರ್ ಇಂಡಿಯಾ ಸರ್ಕಾರದ ಜೊತೆಗೆ ಸಂಘರ್ಷದಲ್ಲಿ ತೊಡಗಿದ್ದು, ಅದು ಹಲವು ತೊಂದರೆಗಳನ್ನು ಅನುಭವಿಸಬೇಕಾಗಿದೆ. ಉತ್ತರಪ್ರದೇಶದಲ್ಲಿ ಈ ತಿಂಗಳು ಟ್ವಿಟರ್ ವಿರುದ್ಧ ದಾಖಲಾದ ಎರಡನೇ FIR ಇದಾಗಿದೆ.

ಟ್ವಿಟರ್‌ನ ವೆಬ್‌ಸೈಟ್‌ನ “ಟ್ವೀಪ್ ಲೈಫ್” ವಿಭಾಗದಲ್ಲಿ ಭಾರತದ ತಪ್ಪಾದ ನಕ್ಷೆಯನ್ನು ಪ್ರಕಟಿಸಲಾಗಿತ್ತು. ಇದನ್ನು ಬಳಕೆದಾರರು ತಪ್ಪೆಂದು ತೋರಿಸಿದ ನಂತರ ಸೋಮವಾರ ತೆಗೆದು ಹಾಕಲಾಗಿದೆ. ಈ ನಕ್ಷೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅನ್ನು ಭಾರತದ ಹೊರಗಿರುವ ಪ್ರದೇಶ ಎಂದು ತೋರಿಸಲಾಗಿತ್ತು. ಇದು ಆಕ್ರೋಶಕ್ಕೆ ಗುರಿಯಾಗಿತ್ತು.

ಬಲಪಂಥೀಯ ಗುಂಪು ಭಜರಂಗದಳದ ಮುಖಂಡ ಪ್ರವೀಣ್ ಭಾಟಿ ಅವರು ಸಲ್ಲಿಸಿರುವ ದೂರಿನಲ್ಲಿ “ಈ ದೇಶದ್ರೋಹದ ಕೃತ್ಯವು ಉದ್ದೇಶಪೂರ್ವಕವಾಗಿ ನಡೆದಿದೆ. ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಉಲ್ಲೇಖಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505(2) (ವರ್ಗಗಳ ನಡುವೆ ದ್ವೇಷ ಸೃಷ್ಟಿಸುವುದು ಅಥವಾ ಉತ್ತೇಜಿಸುವುದು) ಮತ್ತು ಐಟಿ (ತಿದ್ದುಪಡಿ) ಕಾಯ್ದೆ 2008ರ ಸೆಕ್ಷನ್ 74ರ ಅಡಿಯಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ.

ದೆಹಲಿಯಿಂದ 100 ಕಿ.ಮೀ ದೂರದಲ್ಲಿರುವ ಯುಪಿಯ ಬುಲಂದ್‌ಶಹರ್‌ನಲ್ಲಿ ದಾಖಲಾದ ಈ ಎಫ್‌ಐಆರ್‌ನಲ್ಲಿ ಟ್ವಿಟರ್ ಇಂಡಿಯಾದ ನ್ಯೂಸ್ ಪಾರ್ಟನರ್‌ಶಿಪ್ ಮುಖ್ಯಸ್ಥ ಅಮೃತ್‍ ತ್ರಿಪಾಠಿ ಅವರನ್ನು ಕೂಡ ಹೆಸರಿಸಲಾಗಿದೆ.

ಕಳೆದ ವಾರವೂ FIR

ಕಳೆದ ವಾರ, ಉತ್ತರಪ್ರದೇಶದ ಗಾಜಿಯಾಬಾದ್‍ನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬನ ಹಲ್ಲೆಗೆ ಸಂಬಂಧಿಸಿರುವ ಪೋಸ್ಟ್‌ಗಳು ವಿವಾದಕ್ಕೆ ಕಾರಣವಾದ ನಂತರ ದಾಖಲಾದ ಎಫ್‍ಐಆರ್‌ನಲ್ಲೂ ಟ್ವಿಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿಯವರನ್ನು ಹೆಸರಿಸಲಾಗಿತ್ತು. ಉತ್ತರ ಪ್ರದೇಶ ಪೊಲೀಸರು ಅವರಿಗೆ ಸಮನ್ಸ್ ನೀಡಿದ್ದರು. ಟ್ವಿಟರ್ ಜೊತೆಗೆ, ಪತ್ರಕರ್ತರಾದ ರಾಣಾ ಅಯೂಬ್, ಸಬಾ ನಖ್ವಿ, ಮತ್ತು ಕೆಲವು ಕಾಂಗ್ರೆಸ್ ನಾಯಕರನ್ನು ಕೂಡ ಎಫ್‍ಐಆರ್‌ನಲ್ಲಿ ಹೆಸರಿಸಲಾಗಿದೆ.

ಬೆಂಗಳೂರು ನಿವಾಸಿ ಮನೀಶ್ ಮಹೇಶ್ವರಿ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್‍ನಿಂದ ತಾತ್ಕಾಲಿಕ ತಡೆಯಾಜ್ಞೆ ದೊರಕಿದೆ. ಇದನ್ನು ಯುಪಿ ಪೊಲೀಸರು ಆಕ್ಷೇಪಿಸಿದ್ದರು. ಅದಕ್ಕೆ ರಾಜ್ಯ ನ್ಯಾಯಾಲಯವು, ‘ತನಿಖೆಯನ್ನು ನಿಲ್ಲಿಸುತ್ತಿಲ್ಲ, ಮನೀಶ್ ಮಹೇಶ್ವರಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ’ ಎಂದು ಹೇಳಿದೆ. “ಪೊಲೀಸರು ತನಿಖೆ ಮಾಡಲು ಅಥವಾ ಪ್ರಶ್ನಿಸಲು ಬಯಸಿದರೆ, ಅವರು ಅದನ್ನು ವರ್ಚುವಲ್‍ ಮೋಡ್ ಮೂಲಕ ಮಾಡಬಹುದು” ಎಂದು ನ್ಯಾಯಮೂರ್ತಿ ನರೇಂದರ್ ಹೇಳಿದ್ದರು.


ಇದನ್ನೂ ಓದಿ; ಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...