Homeಮುಖಪುಟಭಾರತದ ನಕ್ಷೆ ತಪ್ಪಾಗಿ ತೋರಿಸಿದ ಆರೋಪ: ಟ್ವಿಟರ್ ಇಂಡಿಯಾ ಮುಖ್ಯಸ್ಥರ ವಿರುದ್ಧ ಮತ್ತೊಂದು FIR

ಭಾರತದ ನಕ್ಷೆ ತಪ್ಪಾಗಿ ತೋರಿಸಿದ ಆರೋಪ: ಟ್ವಿಟರ್ ಇಂಡಿಯಾ ಮುಖ್ಯಸ್ಥರ ವಿರುದ್ಧ ಮತ್ತೊಂದು FIR

- Advertisement -
- Advertisement -

ಭಾರತದ ತಪ್ಪಾದ ನಕ್ಷೆಯನ್ನು ಪ್ರಕಟಿಸಿದ ಆರೋಪದ ಮೇಲೆ ಟ್ವಿಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿ ಅವರ ಮೇಲೆ ಉತ್ತರ ಪ್ರದೇಶದಲ್ಲಿ FIR ದಾಖಲಿಸಲಾಗಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ.

ಇತ್ತೀಚೆಗೆ ಟ್ವಿಟರ್ ಇಂಡಿಯಾ ಸರ್ಕಾರದ ಜೊತೆಗೆ ಸಂಘರ್ಷದಲ್ಲಿ ತೊಡಗಿದ್ದು, ಅದು ಹಲವು ತೊಂದರೆಗಳನ್ನು ಅನುಭವಿಸಬೇಕಾಗಿದೆ. ಉತ್ತರಪ್ರದೇಶದಲ್ಲಿ ಈ ತಿಂಗಳು ಟ್ವಿಟರ್ ವಿರುದ್ಧ ದಾಖಲಾದ ಎರಡನೇ FIR ಇದಾಗಿದೆ.

ಟ್ವಿಟರ್‌ನ ವೆಬ್‌ಸೈಟ್‌ನ “ಟ್ವೀಪ್ ಲೈಫ್” ವಿಭಾಗದಲ್ಲಿ ಭಾರತದ ತಪ್ಪಾದ ನಕ್ಷೆಯನ್ನು ಪ್ರಕಟಿಸಲಾಗಿತ್ತು. ಇದನ್ನು ಬಳಕೆದಾರರು ತಪ್ಪೆಂದು ತೋರಿಸಿದ ನಂತರ ಸೋಮವಾರ ತೆಗೆದು ಹಾಕಲಾಗಿದೆ. ಈ ನಕ್ಷೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅನ್ನು ಭಾರತದ ಹೊರಗಿರುವ ಪ್ರದೇಶ ಎಂದು ತೋರಿಸಲಾಗಿತ್ತು. ಇದು ಆಕ್ರೋಶಕ್ಕೆ ಗುರಿಯಾಗಿತ್ತು.

ಬಲಪಂಥೀಯ ಗುಂಪು ಭಜರಂಗದಳದ ಮುಖಂಡ ಪ್ರವೀಣ್ ಭಾಟಿ ಅವರು ಸಲ್ಲಿಸಿರುವ ದೂರಿನಲ್ಲಿ “ಈ ದೇಶದ್ರೋಹದ ಕೃತ್ಯವು ಉದ್ದೇಶಪೂರ್ವಕವಾಗಿ ನಡೆದಿದೆ. ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಉಲ್ಲೇಖಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505(2) (ವರ್ಗಗಳ ನಡುವೆ ದ್ವೇಷ ಸೃಷ್ಟಿಸುವುದು ಅಥವಾ ಉತ್ತೇಜಿಸುವುದು) ಮತ್ತು ಐಟಿ (ತಿದ್ದುಪಡಿ) ಕಾಯ್ದೆ 2008ರ ಸೆಕ್ಷನ್ 74ರ ಅಡಿಯಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ.

ದೆಹಲಿಯಿಂದ 100 ಕಿ.ಮೀ ದೂರದಲ್ಲಿರುವ ಯುಪಿಯ ಬುಲಂದ್‌ಶಹರ್‌ನಲ್ಲಿ ದಾಖಲಾದ ಈ ಎಫ್‌ಐಆರ್‌ನಲ್ಲಿ ಟ್ವಿಟರ್ ಇಂಡಿಯಾದ ನ್ಯೂಸ್ ಪಾರ್ಟನರ್‌ಶಿಪ್ ಮುಖ್ಯಸ್ಥ ಅಮೃತ್‍ ತ್ರಿಪಾಠಿ ಅವರನ್ನು ಕೂಡ ಹೆಸರಿಸಲಾಗಿದೆ.

ಕಳೆದ ವಾರವೂ FIR

ಕಳೆದ ವಾರ, ಉತ್ತರಪ್ರದೇಶದ ಗಾಜಿಯಾಬಾದ್‍ನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬನ ಹಲ್ಲೆಗೆ ಸಂಬಂಧಿಸಿರುವ ಪೋಸ್ಟ್‌ಗಳು ವಿವಾದಕ್ಕೆ ಕಾರಣವಾದ ನಂತರ ದಾಖಲಾದ ಎಫ್‍ಐಆರ್‌ನಲ್ಲೂ ಟ್ವಿಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿಯವರನ್ನು ಹೆಸರಿಸಲಾಗಿತ್ತು. ಉತ್ತರ ಪ್ರದೇಶ ಪೊಲೀಸರು ಅವರಿಗೆ ಸಮನ್ಸ್ ನೀಡಿದ್ದರು. ಟ್ವಿಟರ್ ಜೊತೆಗೆ, ಪತ್ರಕರ್ತರಾದ ರಾಣಾ ಅಯೂಬ್, ಸಬಾ ನಖ್ವಿ, ಮತ್ತು ಕೆಲವು ಕಾಂಗ್ರೆಸ್ ನಾಯಕರನ್ನು ಕೂಡ ಎಫ್‍ಐಆರ್‌ನಲ್ಲಿ ಹೆಸರಿಸಲಾಗಿದೆ.

ಬೆಂಗಳೂರು ನಿವಾಸಿ ಮನೀಶ್ ಮಹೇಶ್ವರಿ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್‍ನಿಂದ ತಾತ್ಕಾಲಿಕ ತಡೆಯಾಜ್ಞೆ ದೊರಕಿದೆ. ಇದನ್ನು ಯುಪಿ ಪೊಲೀಸರು ಆಕ್ಷೇಪಿಸಿದ್ದರು. ಅದಕ್ಕೆ ರಾಜ್ಯ ನ್ಯಾಯಾಲಯವು, ‘ತನಿಖೆಯನ್ನು ನಿಲ್ಲಿಸುತ್ತಿಲ್ಲ, ಮನೀಶ್ ಮಹೇಶ್ವರಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ’ ಎಂದು ಹೇಳಿದೆ. “ಪೊಲೀಸರು ತನಿಖೆ ಮಾಡಲು ಅಥವಾ ಪ್ರಶ್ನಿಸಲು ಬಯಸಿದರೆ, ಅವರು ಅದನ್ನು ವರ್ಚುವಲ್‍ ಮೋಡ್ ಮೂಲಕ ಮಾಡಬಹುದು” ಎಂದು ನ್ಯಾಯಮೂರ್ತಿ ನರೇಂದರ್ ಹೇಳಿದ್ದರು.


ಇದನ್ನೂ ಓದಿ; ಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...