Homeಮುಖಪುಟಭಾರತದ ನಕ್ಷೆ ತಪ್ಪಾಗಿ ತೋರಿಸಿದ ಆರೋಪ: ಟ್ವಿಟರ್ ಇಂಡಿಯಾ ಮುಖ್ಯಸ್ಥರ ವಿರುದ್ಧ ಮತ್ತೊಂದು FIR

ಭಾರತದ ನಕ್ಷೆ ತಪ್ಪಾಗಿ ತೋರಿಸಿದ ಆರೋಪ: ಟ್ವಿಟರ್ ಇಂಡಿಯಾ ಮುಖ್ಯಸ್ಥರ ವಿರುದ್ಧ ಮತ್ತೊಂದು FIR

- Advertisement -
- Advertisement -

ಭಾರತದ ತಪ್ಪಾದ ನಕ್ಷೆಯನ್ನು ಪ್ರಕಟಿಸಿದ ಆರೋಪದ ಮೇಲೆ ಟ್ವಿಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿ ಅವರ ಮೇಲೆ ಉತ್ತರ ಪ್ರದೇಶದಲ್ಲಿ FIR ದಾಖಲಿಸಲಾಗಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ.

ಇತ್ತೀಚೆಗೆ ಟ್ವಿಟರ್ ಇಂಡಿಯಾ ಸರ್ಕಾರದ ಜೊತೆಗೆ ಸಂಘರ್ಷದಲ್ಲಿ ತೊಡಗಿದ್ದು, ಅದು ಹಲವು ತೊಂದರೆಗಳನ್ನು ಅನುಭವಿಸಬೇಕಾಗಿದೆ. ಉತ್ತರಪ್ರದೇಶದಲ್ಲಿ ಈ ತಿಂಗಳು ಟ್ವಿಟರ್ ವಿರುದ್ಧ ದಾಖಲಾದ ಎರಡನೇ FIR ಇದಾಗಿದೆ.

ಟ್ವಿಟರ್‌ನ ವೆಬ್‌ಸೈಟ್‌ನ “ಟ್ವೀಪ್ ಲೈಫ್” ವಿಭಾಗದಲ್ಲಿ ಭಾರತದ ತಪ್ಪಾದ ನಕ್ಷೆಯನ್ನು ಪ್ರಕಟಿಸಲಾಗಿತ್ತು. ಇದನ್ನು ಬಳಕೆದಾರರು ತಪ್ಪೆಂದು ತೋರಿಸಿದ ನಂತರ ಸೋಮವಾರ ತೆಗೆದು ಹಾಕಲಾಗಿದೆ. ಈ ನಕ್ಷೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅನ್ನು ಭಾರತದ ಹೊರಗಿರುವ ಪ್ರದೇಶ ಎಂದು ತೋರಿಸಲಾಗಿತ್ತು. ಇದು ಆಕ್ರೋಶಕ್ಕೆ ಗುರಿಯಾಗಿತ್ತು.

ಬಲಪಂಥೀಯ ಗುಂಪು ಭಜರಂಗದಳದ ಮುಖಂಡ ಪ್ರವೀಣ್ ಭಾಟಿ ಅವರು ಸಲ್ಲಿಸಿರುವ ದೂರಿನಲ್ಲಿ “ಈ ದೇಶದ್ರೋಹದ ಕೃತ್ಯವು ಉದ್ದೇಶಪೂರ್ವಕವಾಗಿ ನಡೆದಿದೆ. ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಉಲ್ಲೇಖಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505(2) (ವರ್ಗಗಳ ನಡುವೆ ದ್ವೇಷ ಸೃಷ್ಟಿಸುವುದು ಅಥವಾ ಉತ್ತೇಜಿಸುವುದು) ಮತ್ತು ಐಟಿ (ತಿದ್ದುಪಡಿ) ಕಾಯ್ದೆ 2008ರ ಸೆಕ್ಷನ್ 74ರ ಅಡಿಯಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ.

ದೆಹಲಿಯಿಂದ 100 ಕಿ.ಮೀ ದೂರದಲ್ಲಿರುವ ಯುಪಿಯ ಬುಲಂದ್‌ಶಹರ್‌ನಲ್ಲಿ ದಾಖಲಾದ ಈ ಎಫ್‌ಐಆರ್‌ನಲ್ಲಿ ಟ್ವಿಟರ್ ಇಂಡಿಯಾದ ನ್ಯೂಸ್ ಪಾರ್ಟನರ್‌ಶಿಪ್ ಮುಖ್ಯಸ್ಥ ಅಮೃತ್‍ ತ್ರಿಪಾಠಿ ಅವರನ್ನು ಕೂಡ ಹೆಸರಿಸಲಾಗಿದೆ.

ಕಳೆದ ವಾರವೂ FIR

ಕಳೆದ ವಾರ, ಉತ್ತರಪ್ರದೇಶದ ಗಾಜಿಯಾಬಾದ್‍ನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬನ ಹಲ್ಲೆಗೆ ಸಂಬಂಧಿಸಿರುವ ಪೋಸ್ಟ್‌ಗಳು ವಿವಾದಕ್ಕೆ ಕಾರಣವಾದ ನಂತರ ದಾಖಲಾದ ಎಫ್‍ಐಆರ್‌ನಲ್ಲೂ ಟ್ವಿಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿಯವರನ್ನು ಹೆಸರಿಸಲಾಗಿತ್ತು. ಉತ್ತರ ಪ್ರದೇಶ ಪೊಲೀಸರು ಅವರಿಗೆ ಸಮನ್ಸ್ ನೀಡಿದ್ದರು. ಟ್ವಿಟರ್ ಜೊತೆಗೆ, ಪತ್ರಕರ್ತರಾದ ರಾಣಾ ಅಯೂಬ್, ಸಬಾ ನಖ್ವಿ, ಮತ್ತು ಕೆಲವು ಕಾಂಗ್ರೆಸ್ ನಾಯಕರನ್ನು ಕೂಡ ಎಫ್‍ಐಆರ್‌ನಲ್ಲಿ ಹೆಸರಿಸಲಾಗಿದೆ.

ಬೆಂಗಳೂರು ನಿವಾಸಿ ಮನೀಶ್ ಮಹೇಶ್ವರಿ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್‍ನಿಂದ ತಾತ್ಕಾಲಿಕ ತಡೆಯಾಜ್ಞೆ ದೊರಕಿದೆ. ಇದನ್ನು ಯುಪಿ ಪೊಲೀಸರು ಆಕ್ಷೇಪಿಸಿದ್ದರು. ಅದಕ್ಕೆ ರಾಜ್ಯ ನ್ಯಾಯಾಲಯವು, ‘ತನಿಖೆಯನ್ನು ನಿಲ್ಲಿಸುತ್ತಿಲ್ಲ, ಮನೀಶ್ ಮಹೇಶ್ವರಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ’ ಎಂದು ಹೇಳಿದೆ. “ಪೊಲೀಸರು ತನಿಖೆ ಮಾಡಲು ಅಥವಾ ಪ್ರಶ್ನಿಸಲು ಬಯಸಿದರೆ, ಅವರು ಅದನ್ನು ವರ್ಚುವಲ್‍ ಮೋಡ್ ಮೂಲಕ ಮಾಡಬಹುದು” ಎಂದು ನ್ಯಾಯಮೂರ್ತಿ ನರೇಂದರ್ ಹೇಳಿದ್ದರು.


ಇದನ್ನೂ ಓದಿ; ಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...