Homeಮುಖಪುಟಭಾರತದ ನಕ್ಷೆ ತಪ್ಪಾಗಿ ತೋರಿಸಿದ ಆರೋಪ: ಟ್ವಿಟರ್ ಇಂಡಿಯಾ ಮುಖ್ಯಸ್ಥರ ವಿರುದ್ಧ ಮತ್ತೊಂದು FIR

ಭಾರತದ ನಕ್ಷೆ ತಪ್ಪಾಗಿ ತೋರಿಸಿದ ಆರೋಪ: ಟ್ವಿಟರ್ ಇಂಡಿಯಾ ಮುಖ್ಯಸ್ಥರ ವಿರುದ್ಧ ಮತ್ತೊಂದು FIR

- Advertisement -
- Advertisement -

ಭಾರತದ ತಪ್ಪಾದ ನಕ್ಷೆಯನ್ನು ಪ್ರಕಟಿಸಿದ ಆರೋಪದ ಮೇಲೆ ಟ್ವಿಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿ ಅವರ ಮೇಲೆ ಉತ್ತರ ಪ್ರದೇಶದಲ್ಲಿ FIR ದಾಖಲಿಸಲಾಗಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ.

ಇತ್ತೀಚೆಗೆ ಟ್ವಿಟರ್ ಇಂಡಿಯಾ ಸರ್ಕಾರದ ಜೊತೆಗೆ ಸಂಘರ್ಷದಲ್ಲಿ ತೊಡಗಿದ್ದು, ಅದು ಹಲವು ತೊಂದರೆಗಳನ್ನು ಅನುಭವಿಸಬೇಕಾಗಿದೆ. ಉತ್ತರಪ್ರದೇಶದಲ್ಲಿ ಈ ತಿಂಗಳು ಟ್ವಿಟರ್ ವಿರುದ್ಧ ದಾಖಲಾದ ಎರಡನೇ FIR ಇದಾಗಿದೆ.

ಟ್ವಿಟರ್‌ನ ವೆಬ್‌ಸೈಟ್‌ನ “ಟ್ವೀಪ್ ಲೈಫ್” ವಿಭಾಗದಲ್ಲಿ ಭಾರತದ ತಪ್ಪಾದ ನಕ್ಷೆಯನ್ನು ಪ್ರಕಟಿಸಲಾಗಿತ್ತು. ಇದನ್ನು ಬಳಕೆದಾರರು ತಪ್ಪೆಂದು ತೋರಿಸಿದ ನಂತರ ಸೋಮವಾರ ತೆಗೆದು ಹಾಕಲಾಗಿದೆ. ಈ ನಕ್ಷೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅನ್ನು ಭಾರತದ ಹೊರಗಿರುವ ಪ್ರದೇಶ ಎಂದು ತೋರಿಸಲಾಗಿತ್ತು. ಇದು ಆಕ್ರೋಶಕ್ಕೆ ಗುರಿಯಾಗಿತ್ತು.

ಬಲಪಂಥೀಯ ಗುಂಪು ಭಜರಂಗದಳದ ಮುಖಂಡ ಪ್ರವೀಣ್ ಭಾಟಿ ಅವರು ಸಲ್ಲಿಸಿರುವ ದೂರಿನಲ್ಲಿ “ಈ ದೇಶದ್ರೋಹದ ಕೃತ್ಯವು ಉದ್ದೇಶಪೂರ್ವಕವಾಗಿ ನಡೆದಿದೆ. ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಉಲ್ಲೇಖಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505(2) (ವರ್ಗಗಳ ನಡುವೆ ದ್ವೇಷ ಸೃಷ್ಟಿಸುವುದು ಅಥವಾ ಉತ್ತೇಜಿಸುವುದು) ಮತ್ತು ಐಟಿ (ತಿದ್ದುಪಡಿ) ಕಾಯ್ದೆ 2008ರ ಸೆಕ್ಷನ್ 74ರ ಅಡಿಯಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ.

ದೆಹಲಿಯಿಂದ 100 ಕಿ.ಮೀ ದೂರದಲ್ಲಿರುವ ಯುಪಿಯ ಬುಲಂದ್‌ಶಹರ್‌ನಲ್ಲಿ ದಾಖಲಾದ ಈ ಎಫ್‌ಐಆರ್‌ನಲ್ಲಿ ಟ್ವಿಟರ್ ಇಂಡಿಯಾದ ನ್ಯೂಸ್ ಪಾರ್ಟನರ್‌ಶಿಪ್ ಮುಖ್ಯಸ್ಥ ಅಮೃತ್‍ ತ್ರಿಪಾಠಿ ಅವರನ್ನು ಕೂಡ ಹೆಸರಿಸಲಾಗಿದೆ.

ಕಳೆದ ವಾರವೂ FIR

ಕಳೆದ ವಾರ, ಉತ್ತರಪ್ರದೇಶದ ಗಾಜಿಯಾಬಾದ್‍ನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬನ ಹಲ್ಲೆಗೆ ಸಂಬಂಧಿಸಿರುವ ಪೋಸ್ಟ್‌ಗಳು ವಿವಾದಕ್ಕೆ ಕಾರಣವಾದ ನಂತರ ದಾಖಲಾದ ಎಫ್‍ಐಆರ್‌ನಲ್ಲೂ ಟ್ವಿಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿಯವರನ್ನು ಹೆಸರಿಸಲಾಗಿತ್ತು. ಉತ್ತರ ಪ್ರದೇಶ ಪೊಲೀಸರು ಅವರಿಗೆ ಸಮನ್ಸ್ ನೀಡಿದ್ದರು. ಟ್ವಿಟರ್ ಜೊತೆಗೆ, ಪತ್ರಕರ್ತರಾದ ರಾಣಾ ಅಯೂಬ್, ಸಬಾ ನಖ್ವಿ, ಮತ್ತು ಕೆಲವು ಕಾಂಗ್ರೆಸ್ ನಾಯಕರನ್ನು ಕೂಡ ಎಫ್‍ಐಆರ್‌ನಲ್ಲಿ ಹೆಸರಿಸಲಾಗಿದೆ.

ಬೆಂಗಳೂರು ನಿವಾಸಿ ಮನೀಶ್ ಮಹೇಶ್ವರಿ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್‍ನಿಂದ ತಾತ್ಕಾಲಿಕ ತಡೆಯಾಜ್ಞೆ ದೊರಕಿದೆ. ಇದನ್ನು ಯುಪಿ ಪೊಲೀಸರು ಆಕ್ಷೇಪಿಸಿದ್ದರು. ಅದಕ್ಕೆ ರಾಜ್ಯ ನ್ಯಾಯಾಲಯವು, ‘ತನಿಖೆಯನ್ನು ನಿಲ್ಲಿಸುತ್ತಿಲ್ಲ, ಮನೀಶ್ ಮಹೇಶ್ವರಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ’ ಎಂದು ಹೇಳಿದೆ. “ಪೊಲೀಸರು ತನಿಖೆ ಮಾಡಲು ಅಥವಾ ಪ್ರಶ್ನಿಸಲು ಬಯಸಿದರೆ, ಅವರು ಅದನ್ನು ವರ್ಚುವಲ್‍ ಮೋಡ್ ಮೂಲಕ ಮಾಡಬಹುದು” ಎಂದು ನ್ಯಾಯಮೂರ್ತಿ ನರೇಂದರ್ ಹೇಳಿದ್ದರು.


ಇದನ್ನೂ ಓದಿ; ಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...