Homeಮುಖಪುಟವೇದಗಣಿತ ತರಬೇತಿಯ ಉಪಯೋಗಕ್ಕಿಂತ ಅಪಾಯವೇ ಹೆಚ್ಚು: ದಲಿತರ ಮೀಸಲು ಹಣ ದುರ್ಬಳಕೆಗೆ ಆಕ್ರೋಶ

ವೇದಗಣಿತ ತರಬೇತಿಯ ಉಪಯೋಗಕ್ಕಿಂತ ಅಪಾಯವೇ ಹೆಚ್ಚು: ದಲಿತರ ಮೀಸಲು ಹಣ ದುರ್ಬಳಕೆಗೆ ಆಕ್ರೋಶ

ಗ್ರಾಮ ಪಂಚಾಯ್ತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನದಲ್ಲಿ 5ರಿಂದ 8ನೇ ತರಗತಿ ಮಕ್ಕಳಿಗೆ ವೇದಗಣಿತ ಕಲಿಸಲು ಸರ್ಕಾರ ಮುಂದಾಗಿದೆ.

- Advertisement -
- Advertisement -

ಪಠ್ಯ ಪರಿಷ್ಕರಣೆ ಮೂಲಕ ಪಠ್ಯ ಪುಸ್ತಕಗಳನ್ನು ಬ್ರಾಹ್ಮಣೀಕರಣಗೊಳಿಸಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆದಿತ್ತು. ಅದರ ಬೆನ್ನಲ್ಲೆ ಸರ್ಕಾರ ದಲಿತರಿಗಾಗಿ ಮೀಸಲಿಟ್ಟ SCSP TSP ಹಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳಿಗೆ ವೇದಗಣಿತ ಪಾಠ ಮಾಡಲು ಹೊರಟಿದೆ. ಸರ್ಕಾರದ ಈ ನಡೆಯನ್ನು ಶಿಕ್ಷಣ ತಜ್ಞರು ಮತ್ತು ಹೋರಾಟಗಾರರು ಬಲವಾಗಿ ಖಂಡಿಸಿದ್ದಾರೆ.

ರಾಜ್ಯದ ಹಲವಾರು ಶಾಲೆಗಳಲ್ಲಿನ 5 ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವುದು ಮತ್ತ ಅದಕ್ಕಾಗಿ ಸಮವಸ್ತ್ರ ನೀಡುವುದಕ್ಕಾಗಿ ಗ್ರಾಮ ಪಂಚಾಯ್ತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು ಬಳಸಿಕೊಳ್ಳುವಂತೆ ಗ್ರಾಮೀಣಾಭಿವೃದ್ದಿ ಇಲಾಖೆ ಆದೇಶ ಹೊರಡಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆರಂಭಿಕವಾಗಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 5 ರಿಂದ 8ನೇ ತರಗತಿವರೆಗಿನ 25 ವಿದ್ಯಾರ್ಥಿಗಳಿಗೆ ಸಮವಸ್ತ್ರ ಸಹಿತ ವೇದಗಣಿತ ತರಬೇತಿ ನೀಡಲು ಹಿರಿಯೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಎ.ವಿ.ಎಂ ಅಕಾಡೆಮಿಯು ಆಗಸ್ಟ್‌ನಲ್ಲಿ ಶಿಕ್ಷಣ ಇಲಾಖೆಗೆ ಮನವಿ ಮಾಡಿತ್ತು. ಇದಕ್ಕೆ ಒಂದೇ ತಿಂಗಳಲ್ಲಿ ಸರ್ಕಾರ ಅನುಮತಿ ನೀಡಿದೆ. ಅಲ್ಲದೆ ಇಂದಿನಿಂದ ಶಿಕ್ಷಕರಿಗೆ ತರಬೇತಿ ನೀಡಲು ಮುಂದಾಗಿದ್ದು ತರಬೇತಿ ಹಾಜರಾಗುವಂತೆ ಸರ್ಕಾರಿ ಶಾಲಾ ಶಿಕ್ಷಕರಿಗೆ ಬಿಇಓಗಳು ನೋಟಿಸ್ ಕಳಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಎವಿಎಂ ಅಕಾಡೆಮಿಯ ಮುಖ್ಯಸ್ಥರಾದ ರಘು ಗೌಡ ಮಾತನಾಡಿ, “ನಮ್ಮ ಸಂಸ್ಥೆ ವೇದಗಣಿತ ಕಲಿಸಲು ಸರ್ಕಾರ ಅವಕಾಶ ನೀಡಿದೆ. ನಮ್ಮಿಂದ ತರಬೇತಿ ಪಡೆದ ಸರ್ಕಾರಿ ಶಿಕ್ಷಕರು ಪ್ರತಿ ಶನಿವಾರ ಮತ್ತು ಭಾನುವಾರ ಶಾಲೆ ಮುಗಿದ ನಂತರ ಎರಡು ಗಂಟೆಗಳ ಕಾಲ ಮಕ್ಕಳಿಗೆ ವೇದಗಣಿತ ಪಾಠ ಮಾಡುತ್ತಾರೆ. 16 ವಾರಗಳ ಕಾಲ ಮುಂದುವರೆಯುತ್ತದೆ. ಇದಕ್ಕಾಗಿ ವಿದ್ಯಾರ್ಥಿಗಳಿಗೆ ಕಲಿಕಾ ಕಿಟ್ ತಯಾರಿಸಿದ್ದೇವೆ ಮತ್ತು ಸಮವಸ್ತ್ರ ನೀಡುತ್ತಿದ್ದೇವೆ” ಎಂದರು.

ದಲಿತರಿಗಾಗಿ ಮೀಸಲಿಟ್ಟ ಹಣದ ದುರ್ಬಳಕೆ ಸಲ್ಲದು – ಬಿ.ಶ್ರೀಪಾದ್ ಭಟ್

ಮಕ್ಕಳಿಗೆ ವೇದ ಗಣಿತ ಕಲಿಸುವುದಕ್ಕಾಗಿ ದಲಿತರಿಗಾಗಿ ಮೀಸಲಿಟ್ಟ ಹಣ ಬಳಸುವುದಕ್ಕೆ ಶಿಕ್ಷಣ ತಜ್ಞ ಹೋರಾಟಗಾರ ಬಿ.ಶ್ರೀಪಾದ್ ಭಟ್ ವಿರೋಧ ವ್ಯಕ್ತಪಡಿಸಿದ್ದಾರೆ. “ಪ. ಜಾತಿ/ಪ.ಪಂಗಡ ಸಮುದಾಯಗಳ ಸಬಲೀಕರಣಕ್ಕಾಗಿ ಜಾರಿಗೊಂಡ Scsp, tsp ಯೋಜನೆಯ ಉದ್ದೇಶವನ್ನು ಈಗಾಗಲೇ ವಿಫಲಗೊಳಿಸಲಾಗಿದೆ. ಪ್ರತಿ ಇಲಾಖೆಗೂ ಅನುಮೋದನೆಗೊಂಡ ಮೊತ್ತವನ್ನು ಪೂರ್ಣವಾಗಿ ಹಂಚಿಕೆ ಮಾಡುತ್ತಿಲ್ಲ, ಹಂಚಿಕೆಯಾದ ಮೊತ್ತದ ಶೇ.30ರಷ್ಷು ಪ್ರಮಾಣವು ಬಳಕೆಯಾಗುವುದಿಲ್ಲ. ಬಳಕೆಯಾಗುವ ಮೊತ್ತವನ್ನು ದಲಿತ ಸಮುದಾಯದ ಶಿಕ್ಷಣ, ಸ್ಕಾಲರ್ಶಿಪ್, ಹಾಸ್ಟೆಲ್, ಆರೋಗ್ಯ, ಸ್ವ ಉದ್ಯೋಗ ಮುಂತಾದವುಗಳಿಗೆ ವಿನಿಯೋಗಿಸದೆ ಅನ್ಯ ಕಾರ್ಯಗಳಿಗೆ ಅಕ್ರಮವಾಗಿ ಬಳಸಿಕೊಳ್ಳುತ್ತಾರೆ. ಈ ಸಾಮಾಜಿಕ ಅನ್ಯಾಯದ ಇತ್ತೀಚಿನ ಉದಾಹರಣೆ ಈ ವೇದಗಣಿತ ಕಲಿಸುವುದಾಗಿದೆ. Scsp, tsp ಯೋಜನೆಗೆ ಮೀಸಲಾದ ಹಣವನ್ನು ಅರ್ಥಹೀನ ವೇದಗಣಿತ ತರಬೇತಿಗೆ ಬಳಸಿಕೊಳ್ಳುತ್ತಿದ್ದಾರೆ. ಇದು ನೇರವಾಗಿ ಕಾನೂನಿನ ಉಲ್ಲಂಘನೆ. ಯಾರಿಗಾಗಿ, ಯಾತಕ್ಕಾಗಿ ವಂಚಿತ ಸಮುದಾಯದ ಮೊತ್ತವನ್ನು ಈ ರೀತಿ ದುರ್ಬಳಕೆ ಮಾಡಿಕೊಳ್ಳುತ್ತೀರಿ ಎಂದು ಶಿಕ್ಷಣ ಸಚಿವ ನಾಗೇಶ್, ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಬೇಕಿದೆ” ಎಂದಿದ್ದಾರೆ.

ವೇದಗಣಿತದಿಂದ ಮಕ್ಕಳು ನಿಜವಾದ ಗಣಿತ ಕಲಿಯದಿರುವ ಅಪಾಯವಿದೆ – ಎಸ್.ಬಾಲಚಂದ್ರ ರಾವ್

ಬೆಂಗಳೂರಿನ ಭಾರತೀಯ ವಿದ್ಯಾಭವನದ ಗಾಂಧಿ ಸೆಂಟರ್ ಅಫ್ ಸೈನ್ಸ್ ಅಂಡ್ ಹ್ಯೂಮನ್ ವ್ಯಾಲ್ಯೂಸ್ ವಿಭಾಗದ ಗೌರವ ನಿರ್ದೇಶಕರೂ ಹಾಗೂ ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆಯಲ್ಲಿ ಗೌರವ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಎಸ್.ಬಾಲಚಂದ್ರ ರಾವ್ ರವರು ಈ ವೇದಗಣಿತ ಕಲಿಕೆಯಿಂದ ಮಕ್ಕಳಿ ನಿಜವಾದ ಗಣಿತ ಕಲಿಯದಿರಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ವೇದಗಣಿತ ಕಲಿಕೆಯಿಂದ ಏನೂ ಉಪಯೋಗವಿಲ್ಲ. ಅದರಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ ಹಂತದ ವಿದ್ಯಾರ್ಥಿಗಳಿಗೆ ಶಾರ್ಟ್‌ಕಟ್ ವಿಧಾನದಲ್ಲಿ ಗುಣಾಕಾರ ಮತ್ತು ಭಾಗಕಾರವನ್ನು ಹೇಳಿಕೊಡಲಾಗುತ್ತದೆ. ಆದರೆ ಅದರಿಂದ ಗಣಿತಕ್ಕೆ ಬೇಕಾದ ತಾರ್ಕಿಕ ಚಿಂತನೆಗಳು ಅಭಿವೃದ್ಧಿಯಾಗುವುದಿಲ್ಲ” ಎಂದು ಅಭಿಪ್ರಾಯಪಡುತ್ತಾರೆ.

ಮುಖ್ಯವಾಗಿ ಗಣಿತ ವಿಜ್ಞಾನಕ್ಕೆ ತಾರ್ಕಿಕವಾದ ಚಿಂತನೆ, ಮನಸ್ಥಿತಿ ಬೇಕು. ಆದರೆ ವೇದಿಕ್ ಮ್ಯಾಥಮೆಟಿಕ್ಸ್‌ನಿಂದ ಅದು ಬರುವುದಿಲ್ಲ. ಅದೊಂದು ಮ್ಯಾಜಿಕ್ ಇದ್ದಹಾಗೆ ಅಷ್ಟೆ. ಇದನ್ನು ಮಕ್ಕಳಿಗೆ ಹೇಳಿಕೊಡುವುದರಿಂದ ಅದೇ ಗಣಿತ ಎಂದು ಭಾವಿಸಿ ಮಕ್ಕಳು ನಿಜವಾದ ಗಣಿತವನ್ನು ಕಲಿಯದೆ ಇರುವ ಅಪಾಯವಿದೆ. ನಿಜವಾದ ಗಣಿತದಲ್ಲಿ ಅದರಲ್ಲಿಯೂ ರೇಖಾಗಣಿತದಲ್ಲಿ ತಾರ್ಕಿಕವಾದ ಚಿಂತನೆ ಅಭಿವೃದ್ದಿಯಾಗುತ್ತದೆ. ಈ ಕಲಿಕೆಯನ್ನು ಹೆಚ್ಚು ಮಾಡಬೇಕು. ಇದರಿಂದ ಮುಂದೆ ಮುಂದೆ ಹೋದಂತೆ ತಾರ್ಕಿಕ ಚಿಂತನೆ ಆಳವಾಗಿ ಅಭಿವೃದ್ದಿಯಾಗುತ್ತದೆ. ಇದು ಯಾವುದು ಸಹ ವೇದಗಣಿತದಲ್ಲಿ ಸಾಧ್ಯವಿಲ್ಲ ಎನ್ನುತ್ತಾರೆ ಎಸ್.ಬಾಲಚಂದ್ರ ರಾವ್.

ಈ ವೇದಗಣಿತ ಕಲಿಕೆಯಿಂದ ಗಣಿತದ ಬಗ್ಗೆ ತಪ್ಪು ಅಭಿಪ್ರಾಯ ಬರುತ್ತದೆ. ಗಣಿತ ಎಂದರೆ ಕೇವಲ ಮ್ಯಾಜಿಕ್ ಎಂದು ವಿದ್ಯಾರ್ಥಿಗಳು ಭಾವಿಸುವ ಅಪಾಯವಿದೆ. ಅಲ್ಲದೆ ವೇದಗಣಿತದ ಬಗ್ಗೆ ಯಾವ ವೇದಗಳಲ್ಲಿಯೂ ಹೇಳಿಲ್ಲ. ಹಿಂದಿನ ಶತಮಾನದ ಕೆಲ ಸ್ವಾಮಿಗಳು ಮಾಡಿರುವ ಸೂತ್ರಗಳು ಇವು. ಅವು ವೇದಿಕ್ ಅಲ್ಲ ಮತ್ತು ಮ್ಯಾಥಮ್ಯಾಟಿಕ್ಸ್ ಕೂಡ ಅಲ್ಲ. ಅವುಗಳಿಗೆ ವೇದಿಕ್ ಎಂದು ಹೆಸರು ಕೊಟ್ಟು ಮಕ್ಕಳಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ವೇದಗಣಿತದ ಬದಲು ಮಕ್ಕಳಿಗೆ ಉತ್ತಮ ಇಂಗ್ಲಿಷ್ ಕಲಿಸಲಿ – ಸರೋವರ್ ಬೆಂಕಿಕೆರೆ

ಸರ್ಕಾರವು ದಲಿತರಿಗಾಗಿ ಮೀಸಲಿಟ್ಟ ಹಣದಲ್ಲಿ ಅವೈಜ್ಞಾನಿಕ ಮತ್ತು ಸಂಸ್ಕೃತ ಪ್ರೇರಿತ ವೇದಗಣಿತ ಕಲಿಸುವುದು ಸರಿಯಲ್ಲ. ಅದರ ಬದಲಿಗೆ ಉತ್ತಮ ಇಂಗ್ಲಿಷ್ ಕಲಿಸಬೇಕೆಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ಒತ್ತಾಯಿಸಿದ್ದಾರೆ.

ದಲಿತ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಜೊತೆಗೆ ಬಹುತೇಕ ಶಾಲೆಗಳಲ್ಲಿ ಆಂಗ್ಲ ಶಿಕ್ಷಕರಿಲ್ಲ. ಸರ್ಕಾರವು ಈ ಬಗ್ಗೆ ಗಮನಹರಿಸಿ ಮಕ್ಕಳಿಗೆ ಉತ್ತಮ ಪೌಷ್ಠಿಕ ಆಹಾರ ಒದಗಿಸಬೇಕು ಮತ್ತು ಉತ್ತಮ ತರಬೇತಿ ಪಡೆದ ಶಿಕ್ಷಕರಿಂದ ಆಂಗ್ಲ ಭಾಷೆ ಕಲಿಸಬೇಕು, ಸ್ಕಾಲರ್‌ ಶಿಪ್ ನೀಡಬೇಕು ಮತ್ತು ಅತ್ಯುತ್ತಮ ಕಂಪ್ಯೂಟರ್ ತರಭೇತಿ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕುರಿತು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಮತ್ತು ಚಿಕ್ಕಬಳ್ಳಾಪುರ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜಯರಾಮರೆಡ್ಡಿಯವರ ಅಭಿಪ್ರಾಯ ಪಡೆಯಲು ಯತ್ನಿಸಿತಾದರೂ ಅವರು ಕರೆಗೆ ಲಭ್ಯವಾಗಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕ ನಂತರ ಅವರ ಅಭಿಪ್ರಾಯವನ್ನು ಅಪ್ಟೇಡ್ ಮಾಡಲಾಗುವುದು.

ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಲ್ಲಿ ಸರಿಯಾಗಿ ಶಾಲೆಗಳು ನಡೆಯದ ಕಾರಣ ಮಕ್ಕಳು ಸಮರ್ಪಕ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಬಹಳ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಿದ್ದ ಸರ್ಕಾರ ಯಾವುದೋ ಎನ್‌ಜಿಓಗಳಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಸರಿಯಲ್ಲ. ಅದರಲ್ಲಿಯೂ ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳಿಗೆ ವೈಜ್ಞಾನಿಕವಾದ, ಆಧುನಿಕವಾದ ಶಿಕ್ಷಣ ನೀಡುವುದು ಬಿಟ್ಟು ವೈದಿಕ ಶಿಕ್ಷಣ ಕೊಡುವುದು ಅವರನ್ನು ಶಿಕ್ಷಣದಿಂದ ಶಾಶ್ವತವಾಗಿ ದೂರವಾಗಿಸುವ ಹುನ್ನಾರ ಎಂಬ ಆರೋಪಗಳು ಕೇಳಿಬರುತ್ತಿವೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಸಿ ತಮ್ಮ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕಾಗಿದೆ.


ಇದನ್ನೂ ಓದಿ : ಪಠ್ಯಪರಿಷ್ಕರಣೆಯ ಬೇರಡಗಿರುವುದು ’ರಾಷ್ಟ್ರೀಯ ಶಿಕ್ಷಣ ನೀತಿ 2020’ರಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಎಸ್ಸಿ ಎಸ್ಟಿ ಮಕ್ಕಳಿಗೆ ಕಲಿಕಾ ಮೆಟೀರಿಯಲ್ ಗಳನ್ನು ಮೊದಲು ನೀಡಲಿ ಮತ್ತು ಲ್ಯಾಪ್ಟಾಪಿನ ಅಗತ್ಯವಿದೆ ಅದನ್ನು ಪೂರೈಸಲಿ ದೂರದ ಸ್ಕೂಲ್ಗಳಿಗೆ ಹೋಗಿ ಬರುವ ಮಕ್ಕಳಿಗೆ ಟ್ರಾನ್ಸ್ಪೋರ್ಟ್ ವ್ಯವಸ್ಥೆ ಕಲ್ಪಿಸಲಿ

  2. ಎಸ್ಸಿ ಎಸ್ಟಿ ಮಕ್ಕಳಿಗೆ ಕಲಿಕಾ ಮೆಟೀರಿಯಲ್ ಗಳನ್ನು ಮೊದಲು ನೀಡಲಿ ಮತ್ತು ಲ್ಯಾಪ್ಟಾಪಿನ ಅಗತ್ಯವಿದೆ ಅದನ್ನು ಪೂರೈಸಲಿ ದೂರದ ಸ್ಕೂಲ್ಗಳಿಗೆ ಹೋಗಿ ಬರುವ ಮಕ್ಕಳಿಗೆ ಉಚಿತವಾಗಿ ಟ್ರಾನ್ಸ್ಪೋರ್ಟ್ ವ್ಯವಸ್ಥೆ ಕಲ್ಪಿಸಲಿ

  3. ಸರ್ಕಾರದ ಈ ಕ್ರಮ ಕಂಡನಾರ್ಹ. ನಮ್ಮ ಮಕ್ಕಳನ್ನು ಮನುವಾದಿಗಳ ಗುಲಾಮರನ್ನಾಗಿ ಮಾಡಲು ನಡೆಯುತ್ತಿರುವ ಈ ಕುತಂತ್ರವನ್ನು ಪ್ರಜ್ಞಾವಂತರೆಲ್ಲರೂ ಒಕ್ಕೋರಲಿನಂದ ಕಂಡಿಸಬೇಕು.

  4. ಎಲ್ಲಕ್ಕಿಂತ ಮೊದಲು ಸರ್ಕಾರ SC, ST ಮಕ್ಕಳಿಗೆ ಮೂಲ ಸೌಕಾರ್ಯದ ವ್ಯವಸ್ಥೆ ಮಾಡಲಿ. ಶಿಕ್ಷಣವನ್ನು ಕೇಸರಿಕಾರಣಗೊಳಿಸುವ ಹುನ್ನಾರ ಇದು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...