Homeಮುಖಪುಟಮುಸ್ಲಿಮೇತರ ವಿದ್ಯಾರ್ಥಿನಿಯರಿಗೆ ಹಿಜಾಬ್ ಹಾಕಿಸಿದ ಆರೋಪ; ಪ್ರಾಂಶುಪಾಲರ ಬಂಧನ

ಮುಸ್ಲಿಮೇತರ ವಿದ್ಯಾರ್ಥಿನಿಯರಿಗೆ ಹಿಜಾಬ್ ಹಾಕಿಸಿದ ಆರೋಪ; ಪ್ರಾಂಶುಪಾಲರ ಬಂಧನ

ಮಧ್ಯಪ್ರದೇಶದಲ್ಲಿ ಈ ಘಟನೆಯಾಗಿದ್ದು, ‘ಶಾಲೆಯಲ್ಲಿ ಧಾರ್ಮಿಕ ಮತಾಂತರ ನಡೆಯುತ್ತಿದೆ’ ಎಂದು ಹಿಂದುತ್ವ ಗುಂಪುಗಳು ಆರೋಪಿಸಿದ್ದವು

- Advertisement -
- Advertisement -

ಮುಸ್ಲಿಮೇತರ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಒತ್ತಾಯಿಸಲಾಗಿದೆ ಎಂಬ ಆರೋಪ ಬಂದಿದ್ದು, ವಿವಾದದ ಕೇಂದ್ರಬಿಂದುವಾಗಿರುವ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಶಾಲೆಯೊಂದರ ಪ್ರಾಂಶುಪಾಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಬೋರ್ಡ್ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಗಂಗಾ ಜಮುನಾ ಹೈಯರ್ ಸೆಕೆಂಡರಿ ಶಾಲೆಯ 18 ವಿದ್ಯಾರ್ಥಿಗಳನ್ನು ಅಭಿನಂದಿಸುವ ಪೋಸ್ಟರ್ ವೈರಲ್ ಆದ ನಂತರ ವಿವಾದ ಭುಗಿಲೆದ್ದಿತು. ಆ ಚಿತ್ರದಲ್ಲಿನ ಹೆಣ್ಣು ಮಕ್ಕಳು ಧರ್ಮಾತೀತವಾಗಿ ತಲೆಯ ಮೇಲೆ ದುಪ್ಪಟ್ಟವನ್ನು ಧರಿಸಿದ್ದರು. ಮೇ ತಿಂಗಳ ಅಂತ್ಯದಲ್ಲಿ ಈ ವಿವಾದ ಶುರುವಾಯಿತು.

ಇದು ಮತಾಂತರದ ಪ್ರಕ್ರಿಯೆಯಾಗಿದೆ ಎಂದು ಹಿಂದುತ್ವ ಗುಂಪುಗಳು ಆರೋಪಿಸಿದ್ದವು. ಶಾಲೆಯ ನೋಂದಣಿಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಗಳನ್ನು ನಡೆಸಿದ್ದವು. ಸ್ಪಷ್ಟನೆ ನೀಡಿದ್ದ ಶಾಲಾ ಆಡಳಿತ ಮಂಡಲಿ, “ತಲೆಯ ಮೇಲಿನ ದುಪ್ಪಟ್ಟವು ಸಮವಸ್ತ್ರದ ಭಾಗವಾಗಿದೆ. ವಿದ್ಯಾರ್ಥಿಗಳು ಅದನ್ನು ಧರಿಸಲೇಬೇಕೆಂದು ಒತ್ತಾಯಿಸಲಿಲ್ಲ” ಎಂದು ತಿಳಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಶಾಲೆಯ ಪ್ರಾಂಶುಪಾಲರಾದ ಅಫ್ಶಾ ಶೇಖ್ ಅವರಲ್ಲದೆ, ಗಣಿತ ಶಿಕ್ಷಕ ಅನಾಸ್ ಅತಾಹರ್ ಮತ್ತು ಭದ್ರತಾ ಸಿಬ್ಬಂದಿ ರುಸ್ತಮ್ ಅಲಿ ಅವರನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ.

“ಮುಖ್ಯವಾಗಿ ಶಾಲಾ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬ ಸದಸ್ಯರನ್ನು ಒಳಗೊಂಡ ಆರು-ಏಳು ಮಂದಿ ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ದಾಮೋಹ್ ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ಸಿಂಗ್ ತಿಳಿಸಿದ್ದಾರೆ.

ಮೂವರನ್ನು ಭಾನುವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿರಿ: ಇ.ಡಿ. ವಶಕ್ಕೆ ತಮಿಳುನಾಡು ಸಚಿವ ಬಾಲಾಜಿ; ದುರುದ್ದೇಶಪೂರಿತ ಎಂದ ಡಿಎಂಕೆ, ಕಾಂಗ್ರೆಸ್

ಜೂನ್ 7 ರಂದು ಪ್ರಕರಣ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295 (ಯಾವುದೇ ವರ್ಗದ ವ್ಯಕ್ತಿಗಳು ಪವಿತ್ರವೆಂದು ಪರಿಗಣಿಸುವ ಯಾವುದೇ ವಸ್ತುವನ್ನು ಹಾನಿಗೊಳಿಸುವುದು ಅಥವಾ ಅಪವಿತ್ರಗೊಳಿಸುವುದು), 506 (ಅಪರಾಧ ಬೆದರಿಕೆ), ಜುವೆನೈಲ್ ಜಸ್ಟೀಸ್ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆ, ಮಧ್ಯಪ್ರದೇಶದ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ 2021ರ ನಿಬಂಧನೆಗಳ ಅಡಿಯಲ್ಲಿ ಶಾಲಾ ಆಡಳಿತ ಸಮಿತಿಯ 11 ಸದಸ್ಯರ ವಿರುದ್ಧ ಆರೋಪಗಳನ್ನು ಹೊರಿಸಲಾಗಿದೆ.

ಜೂನ್ 2 ರಂದು ರಾಜ್ಯ ಶಿಕ್ಷಣ ಇಲಾಖೆಯು ಶಾಲೆಯ ಮಾನ್ಯತೆಯನ್ನು ರದ್ದುಗೊಳಿಸಿತು, ವಿದ್ಯಾರ್ಥಿಗಳಿಗೆ ಮೀಸಲಾದ ಹಲವಾರು ಸೌಲಭ್ಯಗಳು ಅಸಮರ್ಪಕವಾಗಿವೆ ಅಥವಾ ಲಭ್ಯವಿಲ್ಲ ಎಂದು ಆರೋಪಿಸಲಾಯಿತು. ಸ್ಥಳೀಯ ಪುರಸಭೆಯ ಪ್ರಾಧಿಕಾರವು ಪ್ರತಿಕ್ರಿಯಿಸಿ, “ಶಾಲೆಯಲ್ಲಿನ ಅನಧಿಕೃತ ಎಂದು ಪರಿಗಣಿಸುವ ಭಾಗಗಳನ್ನು ಉರುಳಿಸಲಾಗುವುದು” ಎಂದು ಬೆದರಿಕೆ ಹಾಕಿದೆ.

ರಾಜ್ಯ ರಾಜಧಾನಿ ಭೋಪಾಲ್‌ನಿಂದ ಸುಮಾರು 250 ಕಿಲೋಮೀಟರ್ ದೂರದಲ್ಲಿರುವ ಈ ಶಾಲೆಯನ್ನು 2010 ರಲ್ಲಿ ಗಂಗಾ ಜಮುನಾ ವೆಲ್ಫೇರ್ ಸೊಸೈಟಿ ಸ್ಥಾಪಿಸಿದೆ. ಸುಮಾರು 1,200 ವಿದ್ಯಾರ್ಥಿಗಳು ಓದುತ್ತಾರೆ. ಇವರಲ್ಲಿ ಹೆಚ್ಚಿನವರು ಕಾರ್ಮಿಕ ವರ್ಗದ ಕುಟುಂಬಗಳಿಂದ ಬಂದವರಾಗಿದ್ದಾರೆ. ಇಲ್ಲಿನ ಮಕ್ಕಳ ಪೋಷಕರು ಕಾರ್ಮಿಕರಾಗಿ, ರೈತರಾಗಿ ಮತ್ತು ಬೀಡಿ ತಯಾರಕರಾಗಿ ಕೆಲಸ ಮಾಡುತ್ತಾರೆ ಎಂದು ‘ಇಂಡಿಯನ್ ಎಕ್ಸ್ ಪ್ರೆಸ್ ವರದಿ’ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...