Homeಮುಖಪುಟಮುಸ್ಲಿಮೇತರ ವಿದ್ಯಾರ್ಥಿನಿಯರಿಗೆ ಹಿಜಾಬ್ ಹಾಕಿಸಿದ ಆರೋಪ; ಪ್ರಾಂಶುಪಾಲರ ಬಂಧನ

ಮುಸ್ಲಿಮೇತರ ವಿದ್ಯಾರ್ಥಿನಿಯರಿಗೆ ಹಿಜಾಬ್ ಹಾಕಿಸಿದ ಆರೋಪ; ಪ್ರಾಂಶುಪಾಲರ ಬಂಧನ

ಮಧ್ಯಪ್ರದೇಶದಲ್ಲಿ ಈ ಘಟನೆಯಾಗಿದ್ದು, ‘ಶಾಲೆಯಲ್ಲಿ ಧಾರ್ಮಿಕ ಮತಾಂತರ ನಡೆಯುತ್ತಿದೆ’ ಎಂದು ಹಿಂದುತ್ವ ಗುಂಪುಗಳು ಆರೋಪಿಸಿದ್ದವು

- Advertisement -
- Advertisement -

ಮುಸ್ಲಿಮೇತರ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಒತ್ತಾಯಿಸಲಾಗಿದೆ ಎಂಬ ಆರೋಪ ಬಂದಿದ್ದು, ವಿವಾದದ ಕೇಂದ್ರಬಿಂದುವಾಗಿರುವ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಶಾಲೆಯೊಂದರ ಪ್ರಾಂಶುಪಾಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಬೋರ್ಡ್ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಗಂಗಾ ಜಮುನಾ ಹೈಯರ್ ಸೆಕೆಂಡರಿ ಶಾಲೆಯ 18 ವಿದ್ಯಾರ್ಥಿಗಳನ್ನು ಅಭಿನಂದಿಸುವ ಪೋಸ್ಟರ್ ವೈರಲ್ ಆದ ನಂತರ ವಿವಾದ ಭುಗಿಲೆದ್ದಿತು. ಆ ಚಿತ್ರದಲ್ಲಿನ ಹೆಣ್ಣು ಮಕ್ಕಳು ಧರ್ಮಾತೀತವಾಗಿ ತಲೆಯ ಮೇಲೆ ದುಪ್ಪಟ್ಟವನ್ನು ಧರಿಸಿದ್ದರು. ಮೇ ತಿಂಗಳ ಅಂತ್ಯದಲ್ಲಿ ಈ ವಿವಾದ ಶುರುವಾಯಿತು.

ಇದು ಮತಾಂತರದ ಪ್ರಕ್ರಿಯೆಯಾಗಿದೆ ಎಂದು ಹಿಂದುತ್ವ ಗುಂಪುಗಳು ಆರೋಪಿಸಿದ್ದವು. ಶಾಲೆಯ ನೋಂದಣಿಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಗಳನ್ನು ನಡೆಸಿದ್ದವು. ಸ್ಪಷ್ಟನೆ ನೀಡಿದ್ದ ಶಾಲಾ ಆಡಳಿತ ಮಂಡಲಿ, “ತಲೆಯ ಮೇಲಿನ ದುಪ್ಪಟ್ಟವು ಸಮವಸ್ತ್ರದ ಭಾಗವಾಗಿದೆ. ವಿದ್ಯಾರ್ಥಿಗಳು ಅದನ್ನು ಧರಿಸಲೇಬೇಕೆಂದು ಒತ್ತಾಯಿಸಲಿಲ್ಲ” ಎಂದು ತಿಳಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಶಾಲೆಯ ಪ್ರಾಂಶುಪಾಲರಾದ ಅಫ್ಶಾ ಶೇಖ್ ಅವರಲ್ಲದೆ, ಗಣಿತ ಶಿಕ್ಷಕ ಅನಾಸ್ ಅತಾಹರ್ ಮತ್ತು ಭದ್ರತಾ ಸಿಬ್ಬಂದಿ ರುಸ್ತಮ್ ಅಲಿ ಅವರನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ.

“ಮುಖ್ಯವಾಗಿ ಶಾಲಾ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬ ಸದಸ್ಯರನ್ನು ಒಳಗೊಂಡ ಆರು-ಏಳು ಮಂದಿ ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ದಾಮೋಹ್ ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ಸಿಂಗ್ ತಿಳಿಸಿದ್ದಾರೆ.

ಮೂವರನ್ನು ಭಾನುವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿರಿ: ಇ.ಡಿ. ವಶಕ್ಕೆ ತಮಿಳುನಾಡು ಸಚಿವ ಬಾಲಾಜಿ; ದುರುದ್ದೇಶಪೂರಿತ ಎಂದ ಡಿಎಂಕೆ, ಕಾಂಗ್ರೆಸ್

ಜೂನ್ 7 ರಂದು ಪ್ರಕರಣ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295 (ಯಾವುದೇ ವರ್ಗದ ವ್ಯಕ್ತಿಗಳು ಪವಿತ್ರವೆಂದು ಪರಿಗಣಿಸುವ ಯಾವುದೇ ವಸ್ತುವನ್ನು ಹಾನಿಗೊಳಿಸುವುದು ಅಥವಾ ಅಪವಿತ್ರಗೊಳಿಸುವುದು), 506 (ಅಪರಾಧ ಬೆದರಿಕೆ), ಜುವೆನೈಲ್ ಜಸ್ಟೀಸ್ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆ, ಮಧ್ಯಪ್ರದೇಶದ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ 2021ರ ನಿಬಂಧನೆಗಳ ಅಡಿಯಲ್ಲಿ ಶಾಲಾ ಆಡಳಿತ ಸಮಿತಿಯ 11 ಸದಸ್ಯರ ವಿರುದ್ಧ ಆರೋಪಗಳನ್ನು ಹೊರಿಸಲಾಗಿದೆ.

ಜೂನ್ 2 ರಂದು ರಾಜ್ಯ ಶಿಕ್ಷಣ ಇಲಾಖೆಯು ಶಾಲೆಯ ಮಾನ್ಯತೆಯನ್ನು ರದ್ದುಗೊಳಿಸಿತು, ವಿದ್ಯಾರ್ಥಿಗಳಿಗೆ ಮೀಸಲಾದ ಹಲವಾರು ಸೌಲಭ್ಯಗಳು ಅಸಮರ್ಪಕವಾಗಿವೆ ಅಥವಾ ಲಭ್ಯವಿಲ್ಲ ಎಂದು ಆರೋಪಿಸಲಾಯಿತು. ಸ್ಥಳೀಯ ಪುರಸಭೆಯ ಪ್ರಾಧಿಕಾರವು ಪ್ರತಿಕ್ರಿಯಿಸಿ, “ಶಾಲೆಯಲ್ಲಿನ ಅನಧಿಕೃತ ಎಂದು ಪರಿಗಣಿಸುವ ಭಾಗಗಳನ್ನು ಉರುಳಿಸಲಾಗುವುದು” ಎಂದು ಬೆದರಿಕೆ ಹಾಕಿದೆ.

ರಾಜ್ಯ ರಾಜಧಾನಿ ಭೋಪಾಲ್‌ನಿಂದ ಸುಮಾರು 250 ಕಿಲೋಮೀಟರ್ ದೂರದಲ್ಲಿರುವ ಈ ಶಾಲೆಯನ್ನು 2010 ರಲ್ಲಿ ಗಂಗಾ ಜಮುನಾ ವೆಲ್ಫೇರ್ ಸೊಸೈಟಿ ಸ್ಥಾಪಿಸಿದೆ. ಸುಮಾರು 1,200 ವಿದ್ಯಾರ್ಥಿಗಳು ಓದುತ್ತಾರೆ. ಇವರಲ್ಲಿ ಹೆಚ್ಚಿನವರು ಕಾರ್ಮಿಕ ವರ್ಗದ ಕುಟುಂಬಗಳಿಂದ ಬಂದವರಾಗಿದ್ದಾರೆ. ಇಲ್ಲಿನ ಮಕ್ಕಳ ಪೋಷಕರು ಕಾರ್ಮಿಕರಾಗಿ, ರೈತರಾಗಿ ಮತ್ತು ಬೀಡಿ ತಯಾರಕರಾಗಿ ಕೆಲಸ ಮಾಡುತ್ತಾರೆ ಎಂದು ‘ಇಂಡಿಯನ್ ಎಕ್ಸ್ ಪ್ರೆಸ್ ವರದಿ’ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...