Homeಮುಖಪುಟಮುಸ್ಲಿಮೇತರ ವಿದ್ಯಾರ್ಥಿನಿಯರಿಗೆ ಹಿಜಾಬ್ ಹಾಕಿಸಿದ ಆರೋಪ; ಪ್ರಾಂಶುಪಾಲರ ಬಂಧನ

ಮುಸ್ಲಿಮೇತರ ವಿದ್ಯಾರ್ಥಿನಿಯರಿಗೆ ಹಿಜಾಬ್ ಹಾಕಿಸಿದ ಆರೋಪ; ಪ್ರಾಂಶುಪಾಲರ ಬಂಧನ

ಮಧ್ಯಪ್ರದೇಶದಲ್ಲಿ ಈ ಘಟನೆಯಾಗಿದ್ದು, ‘ಶಾಲೆಯಲ್ಲಿ ಧಾರ್ಮಿಕ ಮತಾಂತರ ನಡೆಯುತ್ತಿದೆ’ ಎಂದು ಹಿಂದುತ್ವ ಗುಂಪುಗಳು ಆರೋಪಿಸಿದ್ದವು

- Advertisement -
- Advertisement -

ಮುಸ್ಲಿಮೇತರ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಒತ್ತಾಯಿಸಲಾಗಿದೆ ಎಂಬ ಆರೋಪ ಬಂದಿದ್ದು, ವಿವಾದದ ಕೇಂದ್ರಬಿಂದುವಾಗಿರುವ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಶಾಲೆಯೊಂದರ ಪ್ರಾಂಶುಪಾಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಬೋರ್ಡ್ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಗಂಗಾ ಜಮುನಾ ಹೈಯರ್ ಸೆಕೆಂಡರಿ ಶಾಲೆಯ 18 ವಿದ್ಯಾರ್ಥಿಗಳನ್ನು ಅಭಿನಂದಿಸುವ ಪೋಸ್ಟರ್ ವೈರಲ್ ಆದ ನಂತರ ವಿವಾದ ಭುಗಿಲೆದ್ದಿತು. ಆ ಚಿತ್ರದಲ್ಲಿನ ಹೆಣ್ಣು ಮಕ್ಕಳು ಧರ್ಮಾತೀತವಾಗಿ ತಲೆಯ ಮೇಲೆ ದುಪ್ಪಟ್ಟವನ್ನು ಧರಿಸಿದ್ದರು. ಮೇ ತಿಂಗಳ ಅಂತ್ಯದಲ್ಲಿ ಈ ವಿವಾದ ಶುರುವಾಯಿತು.

ಇದು ಮತಾಂತರದ ಪ್ರಕ್ರಿಯೆಯಾಗಿದೆ ಎಂದು ಹಿಂದುತ್ವ ಗುಂಪುಗಳು ಆರೋಪಿಸಿದ್ದವು. ಶಾಲೆಯ ನೋಂದಣಿಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಗಳನ್ನು ನಡೆಸಿದ್ದವು. ಸ್ಪಷ್ಟನೆ ನೀಡಿದ್ದ ಶಾಲಾ ಆಡಳಿತ ಮಂಡಲಿ, “ತಲೆಯ ಮೇಲಿನ ದುಪ್ಪಟ್ಟವು ಸಮವಸ್ತ್ರದ ಭಾಗವಾಗಿದೆ. ವಿದ್ಯಾರ್ಥಿಗಳು ಅದನ್ನು ಧರಿಸಲೇಬೇಕೆಂದು ಒತ್ತಾಯಿಸಲಿಲ್ಲ” ಎಂದು ತಿಳಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಶಾಲೆಯ ಪ್ರಾಂಶುಪಾಲರಾದ ಅಫ್ಶಾ ಶೇಖ್ ಅವರಲ್ಲದೆ, ಗಣಿತ ಶಿಕ್ಷಕ ಅನಾಸ್ ಅತಾಹರ್ ಮತ್ತು ಭದ್ರತಾ ಸಿಬ್ಬಂದಿ ರುಸ್ತಮ್ ಅಲಿ ಅವರನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ.

“ಮುಖ್ಯವಾಗಿ ಶಾಲಾ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬ ಸದಸ್ಯರನ್ನು ಒಳಗೊಂಡ ಆರು-ಏಳು ಮಂದಿ ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ದಾಮೋಹ್ ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ಸಿಂಗ್ ತಿಳಿಸಿದ್ದಾರೆ.

ಮೂವರನ್ನು ಭಾನುವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿರಿ: ಇ.ಡಿ. ವಶಕ್ಕೆ ತಮಿಳುನಾಡು ಸಚಿವ ಬಾಲಾಜಿ; ದುರುದ್ದೇಶಪೂರಿತ ಎಂದ ಡಿಎಂಕೆ, ಕಾಂಗ್ರೆಸ್

ಜೂನ್ 7 ರಂದು ಪ್ರಕರಣ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295 (ಯಾವುದೇ ವರ್ಗದ ವ್ಯಕ್ತಿಗಳು ಪವಿತ್ರವೆಂದು ಪರಿಗಣಿಸುವ ಯಾವುದೇ ವಸ್ತುವನ್ನು ಹಾನಿಗೊಳಿಸುವುದು ಅಥವಾ ಅಪವಿತ್ರಗೊಳಿಸುವುದು), 506 (ಅಪರಾಧ ಬೆದರಿಕೆ), ಜುವೆನೈಲ್ ಜಸ್ಟೀಸ್ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆ, ಮಧ್ಯಪ್ರದೇಶದ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ 2021ರ ನಿಬಂಧನೆಗಳ ಅಡಿಯಲ್ಲಿ ಶಾಲಾ ಆಡಳಿತ ಸಮಿತಿಯ 11 ಸದಸ್ಯರ ವಿರುದ್ಧ ಆರೋಪಗಳನ್ನು ಹೊರಿಸಲಾಗಿದೆ.

ಜೂನ್ 2 ರಂದು ರಾಜ್ಯ ಶಿಕ್ಷಣ ಇಲಾಖೆಯು ಶಾಲೆಯ ಮಾನ್ಯತೆಯನ್ನು ರದ್ದುಗೊಳಿಸಿತು, ವಿದ್ಯಾರ್ಥಿಗಳಿಗೆ ಮೀಸಲಾದ ಹಲವಾರು ಸೌಲಭ್ಯಗಳು ಅಸಮರ್ಪಕವಾಗಿವೆ ಅಥವಾ ಲಭ್ಯವಿಲ್ಲ ಎಂದು ಆರೋಪಿಸಲಾಯಿತು. ಸ್ಥಳೀಯ ಪುರಸಭೆಯ ಪ್ರಾಧಿಕಾರವು ಪ್ರತಿಕ್ರಿಯಿಸಿ, “ಶಾಲೆಯಲ್ಲಿನ ಅನಧಿಕೃತ ಎಂದು ಪರಿಗಣಿಸುವ ಭಾಗಗಳನ್ನು ಉರುಳಿಸಲಾಗುವುದು” ಎಂದು ಬೆದರಿಕೆ ಹಾಕಿದೆ.

ರಾಜ್ಯ ರಾಜಧಾನಿ ಭೋಪಾಲ್‌ನಿಂದ ಸುಮಾರು 250 ಕಿಲೋಮೀಟರ್ ದೂರದಲ್ಲಿರುವ ಈ ಶಾಲೆಯನ್ನು 2010 ರಲ್ಲಿ ಗಂಗಾ ಜಮುನಾ ವೆಲ್ಫೇರ್ ಸೊಸೈಟಿ ಸ್ಥಾಪಿಸಿದೆ. ಸುಮಾರು 1,200 ವಿದ್ಯಾರ್ಥಿಗಳು ಓದುತ್ತಾರೆ. ಇವರಲ್ಲಿ ಹೆಚ್ಚಿನವರು ಕಾರ್ಮಿಕ ವರ್ಗದ ಕುಟುಂಬಗಳಿಂದ ಬಂದವರಾಗಿದ್ದಾರೆ. ಇಲ್ಲಿನ ಮಕ್ಕಳ ಪೋಷಕರು ಕಾರ್ಮಿಕರಾಗಿ, ರೈತರಾಗಿ ಮತ್ತು ಬೀಡಿ ತಯಾರಕರಾಗಿ ಕೆಲಸ ಮಾಡುತ್ತಾರೆ ಎಂದು ‘ಇಂಡಿಯನ್ ಎಕ್ಸ್ ಪ್ರೆಸ್ ವರದಿ’ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...