Homeಮುಖಪುಟಪ್ರಧಾನಿ, ಕೇಂದ್ರದ ಯೋಜನೆ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ: 8 ಯುಟ್ಯೂಬ್ ಚಾನೆಲ್‌ ಬ್ಯಾನ್

ಪ್ರಧಾನಿ, ಕೇಂದ್ರದ ಯೋಜನೆ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ: 8 ಯುಟ್ಯೂಬ್ ಚಾನೆಲ್‌ ಬ್ಯಾನ್

- Advertisement -
- Advertisement -

ಸುಳ್ಳು ಸುದ್ದಿಗಳನ್ನು ಹರಡುತ್ತಿವೆ ಎನ್ನುವ ಆರೋಪದ ಮೇಲೆ ಕೇಂದ್ರ ಸರ್ಕಾರವು 8 ಯುಟ್ಯೂಬ್ ಚಾನೆಲ್‌ಗಳನ್ನು ನಿಷೇಧ ಮಾಡಿದೆ.

ಕೇಂದ್ರ ನಿಷೇಧಿಸಿದ ಎಂಟು ಚಾನೆಲ್‌ಗಳು

1. Yahan Sach Dekho

2. Capital TV

3. KPS News

4. Sarkari Vlog

5. Earn Tech India

6. SPN9 News

7 Educational Dost

8 World Best News

ಯೂಟ್ಯೂಬ್ ಚಾನೆಲ್‌ಗಳಲ್ಲಿ ಸುಳ್ಳು ಸುದ್ದಿಗಳ ವಿಡಿಯೋಗಳನ್ನು ಹರಡಿದ್ದಕ್ಕಾಗಿ ಪತ್ರಿಕಾ ಮಾಹಿತಿ ಬ್ಯೂರೋ ಸತ್ಯಾಸತ್ಯತೆಯನ್ನು ಪರಿಶೀಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಅದರ ಆಧಾರದ ಮೇಲೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಅವುಗಳ ಮೇಲೆ ನಿಷೇಧ ಹೇರಿದೆ ಎಂದು ಹೇಳಲಾಗಿದೆ.

ಇದರಲ್ಲಿ SPN9 News 4.8 ಮಿಲಿಯನ್ ಫಾಲೊವರ್‌ಗಳನ್ನು ಹೊಂದಿತ್ತು ಹಾಗೂ 148 ಕೋಟಿ ವೀಕ್ಷಣೆ ಕಂಡಿತ್ತು. World Best News 1.7 ಮಿಲಿಯನ್ ಫಾಲೊವರ್‌ಗಳನ್ನು 18 ಕೋಟಿ ವೀಕ್ಷಣೆ ಕಂಡಿತ್ತು.

ಎಜುಕೇಷನಲ್ ದೋಸ್ತ್ ಚಾನೆಲ್ 3.43 ಮಿಲಿಯನ್ ಚಂದಾದಾರರು ಮತ್ತು 23 ಕೋಟಿ ವೀಕ್ಷಣೆ ಹೊಂದಿದ್ದು ಇದು ಸರ್ಕಾರಿ ಯೋಜನೆಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

SPN9 ಯುಟ್ಯೂಬ್ ಚಾನೆಲ್ 4.8 ಮಿಲಿಯನ್ ಚಂದಾದಾರರು ಮತ್ತು 189 ಕೋಟಿ ವೀಕ್ಷಣೆಗಳನ್ನು ಹೊಂದಿದೆ. ಇದು ರಾಷ್ಟ್ರಪತಿ, ಪ್ರಧಾನಿ ಮತ್ತು ಹಲವರಿಗೆ ಸಂಬಂಧಿಸಿದ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುತ್ತಿದೆ ಎಂದು ಕೇಂದ್ರ ಮಂತ್ರಿಗಳು ಆರೋಪ ಮಾಡಿದ್ದಾರೆ.

Sarkari Vlog ಯುಟ್ಯೂಬ್ ಚಾನೆಲ್ 4.5 ಮಿಲಿಯನ್ ಚಂದಾದಾರರು ಮತ್ತು 9.4 ಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಹೊಂದಿದ್ದು, ಇದು ಸರ್ಕಾರದ ಯೋಜನೆಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಕೆಪಿಎಸ್ ನ್ಯೂಸ್’ ಚಾನೆಲ್ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಚಂದಾದಾರರು ಮತ್ತು 13 ಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಹೊಂದಿದ್ದು, ಇದು ಸರ್ಕಾರಕ್ಕೆ ಸಂಬಂಧಿಸಿದ ಯೋಜನೆಗಳು, ಆದೇಶಗಳು ಮತ್ತು ನಿರ್ಧಾರಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ. ಉದಾಹರಣೆಗೆ ಅಡುಗೆ ಅನಿಲ ಸಿಲಿಂಡರ್‌ಗಳು 20 ರೂ.ಗೆ ಲಭ್ಯತೆ ಮತ್ತು ಪೆಟ್ರೋಲ್ ಲೀಟರ್‌ಗೆ 15 ರೂ. ಎಂದು ಹೇಳಲಾಗಿದೆ.

‘ಕ್ಯಾಪಿಟಲ್ ಟಿವಿ’ ಚಾನೆಲ್ 3.5 ಮಿಲಿಯನ್ ಚಂದಾದಾರರು ಮತ್ತು 160 ಕೋಟಿಗೂ ಹೆಚ್ಚು ವೀಕ್ಷಣೆ ಹೊಂದಿದ್ದು, ಇದು ಕೂಡ ಪ್ರಧಾನಿ, ಸರ್ಕಾರ ಮತ್ತು ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಸಂಬಂಧಿಸಿದ ಆದೇಶಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಲಾಗಿದೆ.

ಈ ಎಂಟೂ ಚಾನೆಲ್‌ಗಳು ಲೋಕಸಭೆ ಚುನಾವಣೆ ಹಾಗೂ ಇವಿಎಂ ಮಷಿನ್ ಸೇರಿದಂತೆ ರಾಷ್ಟ್ರಪತಿ, ಪ್ರಧಾನಿ, ಸಚಿವರು ಹಾಗೂ ಕೇಂದ್ರದ ಯೋಜನೆಗಳು, ಆಧಾರ್, ಬ್ಯಾನ್ ಕಾರ್ಡ್ ಬಗ್ಗೆ ಜನರಿಗೆ ತಪ್ಪು ಸಂದೇಶ ಹಾಗೂ ಸುಳ್ಳು ಮಾಹಿತಿಯನ್ನು ಪಸರಿಸುತ್ತಿದ್ದವು ಎಂದು ಆರೋಪಿಸಲಾಗಿದೆ.

‘ಯಹಾನ್ ಸಚ್ ದೇಖೋ’ ಯೂಟ್ಯೂಬ್ ಚಾನೆಲ್ 3 ಮಿಲಿಯನ್ ಚಂದಾದಾರರು ಮತ್ತು 100 ಮಿಲಿಯನ್ ವೀಕ್ಷಣೆಗಳನ್ನು ಹೊಂದಿದ್ದು, ಇದು ಚುನಾವಣಾ ಆಯೋಗ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳ ಬಗ್ಗೆ ನಕಲಿ ಸುದ್ದಿಗಳನ್ನು ಹರಡುತ್ತಿದೆ ಎನ್ನಲಾಗಿದೆ.

‘ಅರ್ನ್ ಇಂಡಿಯಾ ಟೆಕ್’ ಚಾನೆಲ್ 31,000 ಚಂದಾದಾರರು ಮತ್ತು 3.6 ಮಿಲಿಯನ್ ವೀಕ್ಷಣೆಗಳನ್ನು ಹೊಂದಿದ್ದು, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಇತರರಿಗೆ ಸಂಬಂಧಿಸಿದ ನಕಲಿ ಸುದ್ದಿಗಳನ್ನು ಪ್ರಚಾರ ಮಾಡುತ್ತಿರುವುದು ಕಂಡುಬಂದಿದೆ ಎಂದು ಹೇಳಿದೆ.

ಕೇಂದ್ರ ಸರ್ಕಾರ ಈ ಹಿಂದೆಯೂ ಇಂತಹದೇ ಆರೋಪದ ಮೇಲೆ ಅನೇಕ ಯುಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿತ್ತು. ಸಂಬಂಧಿಸಿದ ಇಲಾಖೆಯ ಆದೇಶದ ಮೇಲೆ ಯುಟ್ಯೂಬ್ ತಾಂತ್ರಿಕ ಸಿಬ್ಬಂದಿ ಚಾನೆಲ್‌ಗಳನ್ನು ನಿಷೇಧಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...