Homeಮುಖಪುಟಪ್ರಧಾನಿ, ಕೇಂದ್ರದ ಯೋಜನೆ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ: 8 ಯುಟ್ಯೂಬ್ ಚಾನೆಲ್‌ ಬ್ಯಾನ್

ಪ್ರಧಾನಿ, ಕೇಂದ್ರದ ಯೋಜನೆ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ: 8 ಯುಟ್ಯೂಬ್ ಚಾನೆಲ್‌ ಬ್ಯಾನ್

- Advertisement -
- Advertisement -

ಸುಳ್ಳು ಸುದ್ದಿಗಳನ್ನು ಹರಡುತ್ತಿವೆ ಎನ್ನುವ ಆರೋಪದ ಮೇಲೆ ಕೇಂದ್ರ ಸರ್ಕಾರವು 8 ಯುಟ್ಯೂಬ್ ಚಾನೆಲ್‌ಗಳನ್ನು ನಿಷೇಧ ಮಾಡಿದೆ.

ಕೇಂದ್ರ ನಿಷೇಧಿಸಿದ ಎಂಟು ಚಾನೆಲ್‌ಗಳು

1. Yahan Sach Dekho

2. Capital TV

3. KPS News

4. Sarkari Vlog

5. Earn Tech India

6. SPN9 News

7 Educational Dost

8 World Best News

ಯೂಟ್ಯೂಬ್ ಚಾನೆಲ್‌ಗಳಲ್ಲಿ ಸುಳ್ಳು ಸುದ್ದಿಗಳ ವಿಡಿಯೋಗಳನ್ನು ಹರಡಿದ್ದಕ್ಕಾಗಿ ಪತ್ರಿಕಾ ಮಾಹಿತಿ ಬ್ಯೂರೋ ಸತ್ಯಾಸತ್ಯತೆಯನ್ನು ಪರಿಶೀಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಅದರ ಆಧಾರದ ಮೇಲೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಅವುಗಳ ಮೇಲೆ ನಿಷೇಧ ಹೇರಿದೆ ಎಂದು ಹೇಳಲಾಗಿದೆ.

ಇದರಲ್ಲಿ SPN9 News 4.8 ಮಿಲಿಯನ್ ಫಾಲೊವರ್‌ಗಳನ್ನು ಹೊಂದಿತ್ತು ಹಾಗೂ 148 ಕೋಟಿ ವೀಕ್ಷಣೆ ಕಂಡಿತ್ತು. World Best News 1.7 ಮಿಲಿಯನ್ ಫಾಲೊವರ್‌ಗಳನ್ನು 18 ಕೋಟಿ ವೀಕ್ಷಣೆ ಕಂಡಿತ್ತು.

ಎಜುಕೇಷನಲ್ ದೋಸ್ತ್ ಚಾನೆಲ್ 3.43 ಮಿಲಿಯನ್ ಚಂದಾದಾರರು ಮತ್ತು 23 ಕೋಟಿ ವೀಕ್ಷಣೆ ಹೊಂದಿದ್ದು ಇದು ಸರ್ಕಾರಿ ಯೋಜನೆಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

SPN9 ಯುಟ್ಯೂಬ್ ಚಾನೆಲ್ 4.8 ಮಿಲಿಯನ್ ಚಂದಾದಾರರು ಮತ್ತು 189 ಕೋಟಿ ವೀಕ್ಷಣೆಗಳನ್ನು ಹೊಂದಿದೆ. ಇದು ರಾಷ್ಟ್ರಪತಿ, ಪ್ರಧಾನಿ ಮತ್ತು ಹಲವರಿಗೆ ಸಂಬಂಧಿಸಿದ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುತ್ತಿದೆ ಎಂದು ಕೇಂದ್ರ ಮಂತ್ರಿಗಳು ಆರೋಪ ಮಾಡಿದ್ದಾರೆ.

Sarkari Vlog ಯುಟ್ಯೂಬ್ ಚಾನೆಲ್ 4.5 ಮಿಲಿಯನ್ ಚಂದಾದಾರರು ಮತ್ತು 9.4 ಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಹೊಂದಿದ್ದು, ಇದು ಸರ್ಕಾರದ ಯೋಜನೆಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಕೆಪಿಎಸ್ ನ್ಯೂಸ್’ ಚಾನೆಲ್ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಚಂದಾದಾರರು ಮತ್ತು 13 ಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಹೊಂದಿದ್ದು, ಇದು ಸರ್ಕಾರಕ್ಕೆ ಸಂಬಂಧಿಸಿದ ಯೋಜನೆಗಳು, ಆದೇಶಗಳು ಮತ್ತು ನಿರ್ಧಾರಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ. ಉದಾಹರಣೆಗೆ ಅಡುಗೆ ಅನಿಲ ಸಿಲಿಂಡರ್‌ಗಳು 20 ರೂ.ಗೆ ಲಭ್ಯತೆ ಮತ್ತು ಪೆಟ್ರೋಲ್ ಲೀಟರ್‌ಗೆ 15 ರೂ. ಎಂದು ಹೇಳಲಾಗಿದೆ.

‘ಕ್ಯಾಪಿಟಲ್ ಟಿವಿ’ ಚಾನೆಲ್ 3.5 ಮಿಲಿಯನ್ ಚಂದಾದಾರರು ಮತ್ತು 160 ಕೋಟಿಗೂ ಹೆಚ್ಚು ವೀಕ್ಷಣೆ ಹೊಂದಿದ್ದು, ಇದು ಕೂಡ ಪ್ರಧಾನಿ, ಸರ್ಕಾರ ಮತ್ತು ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಸಂಬಂಧಿಸಿದ ಆದೇಶಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಲಾಗಿದೆ.

ಈ ಎಂಟೂ ಚಾನೆಲ್‌ಗಳು ಲೋಕಸಭೆ ಚುನಾವಣೆ ಹಾಗೂ ಇವಿಎಂ ಮಷಿನ್ ಸೇರಿದಂತೆ ರಾಷ್ಟ್ರಪತಿ, ಪ್ರಧಾನಿ, ಸಚಿವರು ಹಾಗೂ ಕೇಂದ್ರದ ಯೋಜನೆಗಳು, ಆಧಾರ್, ಬ್ಯಾನ್ ಕಾರ್ಡ್ ಬಗ್ಗೆ ಜನರಿಗೆ ತಪ್ಪು ಸಂದೇಶ ಹಾಗೂ ಸುಳ್ಳು ಮಾಹಿತಿಯನ್ನು ಪಸರಿಸುತ್ತಿದ್ದವು ಎಂದು ಆರೋಪಿಸಲಾಗಿದೆ.

‘ಯಹಾನ್ ಸಚ್ ದೇಖೋ’ ಯೂಟ್ಯೂಬ್ ಚಾನೆಲ್ 3 ಮಿಲಿಯನ್ ಚಂದಾದಾರರು ಮತ್ತು 100 ಮಿಲಿಯನ್ ವೀಕ್ಷಣೆಗಳನ್ನು ಹೊಂದಿದ್ದು, ಇದು ಚುನಾವಣಾ ಆಯೋಗ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳ ಬಗ್ಗೆ ನಕಲಿ ಸುದ್ದಿಗಳನ್ನು ಹರಡುತ್ತಿದೆ ಎನ್ನಲಾಗಿದೆ.

‘ಅರ್ನ್ ಇಂಡಿಯಾ ಟೆಕ್’ ಚಾನೆಲ್ 31,000 ಚಂದಾದಾರರು ಮತ್ತು 3.6 ಮಿಲಿಯನ್ ವೀಕ್ಷಣೆಗಳನ್ನು ಹೊಂದಿದ್ದು, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಇತರರಿಗೆ ಸಂಬಂಧಿಸಿದ ನಕಲಿ ಸುದ್ದಿಗಳನ್ನು ಪ್ರಚಾರ ಮಾಡುತ್ತಿರುವುದು ಕಂಡುಬಂದಿದೆ ಎಂದು ಹೇಳಿದೆ.

ಕೇಂದ್ರ ಸರ್ಕಾರ ಈ ಹಿಂದೆಯೂ ಇಂತಹದೇ ಆರೋಪದ ಮೇಲೆ ಅನೇಕ ಯುಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿತ್ತು. ಸಂಬಂಧಿಸಿದ ಇಲಾಖೆಯ ಆದೇಶದ ಮೇಲೆ ಯುಟ್ಯೂಬ್ ತಾಂತ್ರಿಕ ಸಿಬ್ಬಂದಿ ಚಾನೆಲ್‌ಗಳನ್ನು ನಿಷೇಧಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...