Homeಕರ್ನಾಟಕನಾನು ತಪ್ಪು ಮಾಡಿದ್ದಿದ್ರೆ ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನು ತಪ್ಪು ಮಾಡಿದ್ದಿದ್ರೆ ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

“ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಇಲ್ಲಿಯವರೆಗೆ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ರೆ ಇಷ್ಟು ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ” ಎಂದು ಅವರು ತಿಳಿಸಿದರು.

“ಗ್ಯಾರಂಟಿ ಯೋಜನೆಗಳ ಮೂಲಕ ಸಂವಿಧಾನದ ಆಶಯದಂತೆ ದುರ್ಬಲ ವರ್ಗದವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ. ಪಂಚ ಗ್ಯಾರಂಟಿಗಳಿಂದ ಪ್ರತಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ 40ರಿಂದ 50 ಸಾವಿರ ರೂಪಾಯಿ ಆರ್ಥಿಕ ನೆರವು ದೊರೆಯುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ 1.21 ಕೋಟಿ ಕುಟುಂಬಗಳ ಯಜಮಾನಿಯರು ಪ್ರತಿ ತಿಂಗಳು ₹2 ಸಾವಿರ ಮೊತ್ತ ಪಡೆಯುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 1.40 ಕುಟುಂಬಗಳು ಉಚಿತ ವಿದ್ಯುತ್‌ ಸೌಲಭ್ಯ ಪಡೆಯುತ್ತಿವೆ. ಯುವ ನಿಧಿ ಯೋಜನೆಯಡಿ 1.82 ಲಕ್ಷ ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾದಾರರು ಆರ್ಥಿಕ ಪ್ರಯೋಜನ ಪಡೆಯುತ್ತಿದ್ದಾರೆ” ಎಂದು ಹೇಳಿದರು.

“ಈ ವರ್ಷ ಉತ್ತಮ ಮಳೆಯಾಗಿದ್ದು, ಇಡೀ ರಾಜ್ಯದ ರೈತರು ಸಂತೋಷದಿಂದ ಇದ್ದಾರೆ. ಮುಂಗಾರು ಬಿತ್ತನೆ ರಾಜ್ಯದಲ್ಲಿ ಶೇ. 99 ರಷ್ಟಾಗಿದೆ. ಇನ್ನೂ ಹೆಚ್ಚು ಮಳೆಯಾಗಲಿ, ಹೆಚ್ಚು ಬೆಳೆಯಾಗಲಿ ನಮ್ಮ ನಿರೀಕ್ಷೆಗಿಂತ ಮೀರಿ ಬೆಳೆ ಬೆಳೆಯಲಿ ಎಂದು ಚಾಮುಂಡೇಶ್ವರಿ ತಾಯಿಯನ್ನು ಪ್ರಾರ್ಥಿಸುತ್ತೇನೆ. ಮಳೆ ಬೆಳೆ ಆದರೆ ಮಾತ್ರ ಜನರು ಸುಖ ಶಾಂತಿಯಿಂದ ಬದುಕಲು ಸಾಧ್ಯ” ಎಂದರು.

“ಈ ಬಾರಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ದಸರಾ ಮಹೋತ್ಸವ ಅದ್ದೂರಿಯಾಗಿ ಮಾಡಲು ಸೂಚನೆ ನೀಡಿದ್ದೇನೆ. ದಸರಾ ನಾಡಹಬ್ಬವಾಗಬೇಕು, ಅಧಿಕಾರಿಗಳ ಹಬ್ಬವಾಗಬಾರದು. ಎಲ್ಲಾ ಕಾರ್ಯಕ್ರಮಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದರು.

“ದಸರಾ ಮಹೋತ್ಸವಕ್ಕೆ ಹಂ.ಪ. ನಾಗರಾಜಯ್ಯ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ಅವರಿಗೆ ಈ ಮೊದಲೇ ಈ ಅವಕಾಶ ದೊರೆಯಬೇಕಿತ್ತು. ನಾಗರಾಜಯ್ಯ ಅವರು ಕನ್ನಡ ಸಾಹಿತ್ಯ ಹಾಗೂ ಜೈನ ಸಾಹಿತ್ಯಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದಾರೆ. ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ಕೊಡುಗೆಯನ್ನು ಕನ್ನಡ ನಾಡಿನ ಜನ ಮರೆಯಲು ಸಾಧ್ಯವಿಲ್ಲ. ಅವರ ಆಯ್ಕೆ ಔಚಿತ್ಯಪೂರ್ಣ. ಕರ್ನಾಟಕ ಕಂಡ ಅಪರೂಪದ ಸಾಹಿತಿ ಅವರು” ಎಂದರು.

“ಹಂ.ಪ. ನಾಗರಾಜಯ್ಯ ಅವರು ಮೌಲ್ಯಯುತ ಭಾಷಣ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾಯಿತ ಸರ್ಕಾರಗಳನ್ನು ವಾಮ ಮಾರ್ಗಗಳಲ್ಲಿ ಕಿತ್ತು ಹಾಕುವುದು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮಗಳಾಗಿದ್ದು, ಪ್ರಜಾಪ್ರಭುತ್ವ ಇನ್ನಷ್ಟು ಬಲಪಡಿಸಬೇಕು ಎಂದಿರುವುದು ಔಚಿತ್ಯಪೂರ್ಣವಾಗಿದೆ” ಎಂದು ಹೇಳಿದರು.

ಜನರ ಆಶೀರ್ವಾದ ಇರುವರೆಗೆ ಆಡಳಿತ

“ಜನರ ಆಶೀರ್ವಾದದಿಂದ ನಾವು ಆಡಳಿತಕ್ಕೆ ಬಂದಿದ್ದೇವೆ. 5 ವರ್ಷಗಳ ಕಾಲ ರಾಜ್ಯದ ಜನತೆ ನಮಗೆ ಅವಕಾಶ ಕೊಟ್ಟಿದ್ದಾರೆ. ಈಗಲೂ ಎಷ್ಟೇ ತೊಡಕುಗಳು ಎದುರಾದರೂ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ. ಐದು ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ. ಸತ್ಯಕ್ಕೆ ಯಾವತ್ತೂ ಜಯ ದೊರೆಯುತ್ತದೆ. ನಿಮ್ಮೆಲ್ಲರ ಆಶೀರ್ವಾದ, ಈ ರಾಜ್ಯದ ಜನರ ಆಶೀರ್ವಾದ ಈ ಸರ್ಕಾರದ ಮೇಲೆ ಇರುವ ತನಕ ಯಾರಿಗೂ ಏನೂ ಮಾಡಲು ಸಾಧ್ಯವಿಲ್ಲ. ನಾನು ಈ ಕ್ಷೇತ್ರದಲ್ಲಿ ಐದು ಬಾರಿ ಗೆದ್ದಿದ್ದೇನೆ. ಮೂರು ಬಾರಿ ಸೋತಿದ್ದೇನೆ” ಎಂದು.

“ಚಾಮುಂಡೇಶ್ವರಿ ತಾಯಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಇಲ್ಲಿಯವರೆಗೆ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ರೆ ಇಷ್ಟು ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ. ನನಗೆ ನ್ಯಾಯಾಲಯಗಳಲ್ಲಿ ನಂಬಿಕೆಯಿದೆ. ಆತ್ಮಸಾಕ್ಷಿಗೆ ಅನುಗುಣವಾಗಿ ನಡೆಯುವ ಪ್ರಯತ್ನ ಮಾಡುತ್ತಿದ್ದೇವೆ. ಗಾಂಧೀಜಿ ಅವರು ಹೇಳಿದಂತೆ ಆತ್ಮಸಾಕ್ಷಿ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದುದು. ಆತ್ಮಸಾಕ್ಷಿಗೆ ತಕ್ಕಂತೆ ನಡೆದಿದ್ದೇನೆ ಎಂಬ ದೃಢ ನಂಬಿಕೆ” ಇದೆ ಎಂದು ಹೇಳಿದರು.

“ಪರಸ್ಪರರನ್ನು ಪ್ರೀತಿಸಬೇಕೆ ಹೊರತು ಯಾರನ್ನೂ ದ್ವೇಷಿಸಬಾರದು. ಎಲ್ಲ ಧರ್ಮಗಳು ಪರಸ್ಪರ ಪ್ರೀತಿಸಿ ಮಾನವರಾಗಿ ಬಾಳುವ ಸಂದೇಶವನ್ನು ನೀಡಿವೆ” ಎಂದರು.

ಇದನ್ನೂ ಓದಿ; ‘136 ಸ್ಥಾನ ಗೆದ್ದು ಸಿಎಂ ಆದವರು ರಾಜೀನಾಮೆ ಕೊಡಲು ಆಗುತ್ತಾ..’; ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಜೆಡಿಎಸ್ ಹಿರಿಯ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...