Homeಕರ್ನಾಟಕನಾನು ತಪ್ಪು ಮಾಡಿದ್ದಿದ್ರೆ ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನು ತಪ್ಪು ಮಾಡಿದ್ದಿದ್ರೆ ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

“ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಇಲ್ಲಿಯವರೆಗೆ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ರೆ ಇಷ್ಟು ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ” ಎಂದು ಅವರು ತಿಳಿಸಿದರು.

“ಗ್ಯಾರಂಟಿ ಯೋಜನೆಗಳ ಮೂಲಕ ಸಂವಿಧಾನದ ಆಶಯದಂತೆ ದುರ್ಬಲ ವರ್ಗದವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ. ಪಂಚ ಗ್ಯಾರಂಟಿಗಳಿಂದ ಪ್ರತಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ 40ರಿಂದ 50 ಸಾವಿರ ರೂಪಾಯಿ ಆರ್ಥಿಕ ನೆರವು ದೊರೆಯುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ 1.21 ಕೋಟಿ ಕುಟುಂಬಗಳ ಯಜಮಾನಿಯರು ಪ್ರತಿ ತಿಂಗಳು ₹2 ಸಾವಿರ ಮೊತ್ತ ಪಡೆಯುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 1.40 ಕುಟುಂಬಗಳು ಉಚಿತ ವಿದ್ಯುತ್‌ ಸೌಲಭ್ಯ ಪಡೆಯುತ್ತಿವೆ. ಯುವ ನಿಧಿ ಯೋಜನೆಯಡಿ 1.82 ಲಕ್ಷ ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾದಾರರು ಆರ್ಥಿಕ ಪ್ರಯೋಜನ ಪಡೆಯುತ್ತಿದ್ದಾರೆ” ಎಂದು ಹೇಳಿದರು.

“ಈ ವರ್ಷ ಉತ್ತಮ ಮಳೆಯಾಗಿದ್ದು, ಇಡೀ ರಾಜ್ಯದ ರೈತರು ಸಂತೋಷದಿಂದ ಇದ್ದಾರೆ. ಮುಂಗಾರು ಬಿತ್ತನೆ ರಾಜ್ಯದಲ್ಲಿ ಶೇ. 99 ರಷ್ಟಾಗಿದೆ. ಇನ್ನೂ ಹೆಚ್ಚು ಮಳೆಯಾಗಲಿ, ಹೆಚ್ಚು ಬೆಳೆಯಾಗಲಿ ನಮ್ಮ ನಿರೀಕ್ಷೆಗಿಂತ ಮೀರಿ ಬೆಳೆ ಬೆಳೆಯಲಿ ಎಂದು ಚಾಮುಂಡೇಶ್ವರಿ ತಾಯಿಯನ್ನು ಪ್ರಾರ್ಥಿಸುತ್ತೇನೆ. ಮಳೆ ಬೆಳೆ ಆದರೆ ಮಾತ್ರ ಜನರು ಸುಖ ಶಾಂತಿಯಿಂದ ಬದುಕಲು ಸಾಧ್ಯ” ಎಂದರು.

“ಈ ಬಾರಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ದಸರಾ ಮಹೋತ್ಸವ ಅದ್ದೂರಿಯಾಗಿ ಮಾಡಲು ಸೂಚನೆ ನೀಡಿದ್ದೇನೆ. ದಸರಾ ನಾಡಹಬ್ಬವಾಗಬೇಕು, ಅಧಿಕಾರಿಗಳ ಹಬ್ಬವಾಗಬಾರದು. ಎಲ್ಲಾ ಕಾರ್ಯಕ್ರಮಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದರು.

“ದಸರಾ ಮಹೋತ್ಸವಕ್ಕೆ ಹಂ.ಪ. ನಾಗರಾಜಯ್ಯ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ಅವರಿಗೆ ಈ ಮೊದಲೇ ಈ ಅವಕಾಶ ದೊರೆಯಬೇಕಿತ್ತು. ನಾಗರಾಜಯ್ಯ ಅವರು ಕನ್ನಡ ಸಾಹಿತ್ಯ ಹಾಗೂ ಜೈನ ಸಾಹಿತ್ಯಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದಾರೆ. ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ಕೊಡುಗೆಯನ್ನು ಕನ್ನಡ ನಾಡಿನ ಜನ ಮರೆಯಲು ಸಾಧ್ಯವಿಲ್ಲ. ಅವರ ಆಯ್ಕೆ ಔಚಿತ್ಯಪೂರ್ಣ. ಕರ್ನಾಟಕ ಕಂಡ ಅಪರೂಪದ ಸಾಹಿತಿ ಅವರು” ಎಂದರು.

“ಹಂ.ಪ. ನಾಗರಾಜಯ್ಯ ಅವರು ಮೌಲ್ಯಯುತ ಭಾಷಣ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾಯಿತ ಸರ್ಕಾರಗಳನ್ನು ವಾಮ ಮಾರ್ಗಗಳಲ್ಲಿ ಕಿತ್ತು ಹಾಕುವುದು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮಗಳಾಗಿದ್ದು, ಪ್ರಜಾಪ್ರಭುತ್ವ ಇನ್ನಷ್ಟು ಬಲಪಡಿಸಬೇಕು ಎಂದಿರುವುದು ಔಚಿತ್ಯಪೂರ್ಣವಾಗಿದೆ” ಎಂದು ಹೇಳಿದರು.

ಜನರ ಆಶೀರ್ವಾದ ಇರುವರೆಗೆ ಆಡಳಿತ

“ಜನರ ಆಶೀರ್ವಾದದಿಂದ ನಾವು ಆಡಳಿತಕ್ಕೆ ಬಂದಿದ್ದೇವೆ. 5 ವರ್ಷಗಳ ಕಾಲ ರಾಜ್ಯದ ಜನತೆ ನಮಗೆ ಅವಕಾಶ ಕೊಟ್ಟಿದ್ದಾರೆ. ಈಗಲೂ ಎಷ್ಟೇ ತೊಡಕುಗಳು ಎದುರಾದರೂ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ. ಐದು ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ. ಸತ್ಯಕ್ಕೆ ಯಾವತ್ತೂ ಜಯ ದೊರೆಯುತ್ತದೆ. ನಿಮ್ಮೆಲ್ಲರ ಆಶೀರ್ವಾದ, ಈ ರಾಜ್ಯದ ಜನರ ಆಶೀರ್ವಾದ ಈ ಸರ್ಕಾರದ ಮೇಲೆ ಇರುವ ತನಕ ಯಾರಿಗೂ ಏನೂ ಮಾಡಲು ಸಾಧ್ಯವಿಲ್ಲ. ನಾನು ಈ ಕ್ಷೇತ್ರದಲ್ಲಿ ಐದು ಬಾರಿ ಗೆದ್ದಿದ್ದೇನೆ. ಮೂರು ಬಾರಿ ಸೋತಿದ್ದೇನೆ” ಎಂದು.

“ಚಾಮುಂಡೇಶ್ವರಿ ತಾಯಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಇಲ್ಲಿಯವರೆಗೆ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ರೆ ಇಷ್ಟು ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ. ನನಗೆ ನ್ಯಾಯಾಲಯಗಳಲ್ಲಿ ನಂಬಿಕೆಯಿದೆ. ಆತ್ಮಸಾಕ್ಷಿಗೆ ಅನುಗುಣವಾಗಿ ನಡೆಯುವ ಪ್ರಯತ್ನ ಮಾಡುತ್ತಿದ್ದೇವೆ. ಗಾಂಧೀಜಿ ಅವರು ಹೇಳಿದಂತೆ ಆತ್ಮಸಾಕ್ಷಿ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದುದು. ಆತ್ಮಸಾಕ್ಷಿಗೆ ತಕ್ಕಂತೆ ನಡೆದಿದ್ದೇನೆ ಎಂಬ ದೃಢ ನಂಬಿಕೆ” ಇದೆ ಎಂದು ಹೇಳಿದರು.

“ಪರಸ್ಪರರನ್ನು ಪ್ರೀತಿಸಬೇಕೆ ಹೊರತು ಯಾರನ್ನೂ ದ್ವೇಷಿಸಬಾರದು. ಎಲ್ಲ ಧರ್ಮಗಳು ಪರಸ್ಪರ ಪ್ರೀತಿಸಿ ಮಾನವರಾಗಿ ಬಾಳುವ ಸಂದೇಶವನ್ನು ನೀಡಿವೆ” ಎಂದರು.

ಇದನ್ನೂ ಓದಿ; ‘136 ಸ್ಥಾನ ಗೆದ್ದು ಸಿಎಂ ಆದವರು ರಾಜೀನಾಮೆ ಕೊಡಲು ಆಗುತ್ತಾ..’; ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಜೆಡಿಎಸ್ ಹಿರಿಯ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...