Homeಕರ್ನಾಟಕನಾನು ತಪ್ಪು ಮಾಡಿದ್ದಿದ್ರೆ ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನು ತಪ್ಪು ಮಾಡಿದ್ದಿದ್ರೆ ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

“ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಇಲ್ಲಿಯವರೆಗೆ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ರೆ ಇಷ್ಟು ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ” ಎಂದು ಅವರು ತಿಳಿಸಿದರು.

“ಗ್ಯಾರಂಟಿ ಯೋಜನೆಗಳ ಮೂಲಕ ಸಂವಿಧಾನದ ಆಶಯದಂತೆ ದುರ್ಬಲ ವರ್ಗದವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ. ಪಂಚ ಗ್ಯಾರಂಟಿಗಳಿಂದ ಪ್ರತಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ 40ರಿಂದ 50 ಸಾವಿರ ರೂಪಾಯಿ ಆರ್ಥಿಕ ನೆರವು ದೊರೆಯುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ 1.21 ಕೋಟಿ ಕುಟುಂಬಗಳ ಯಜಮಾನಿಯರು ಪ್ರತಿ ತಿಂಗಳು ₹2 ಸಾವಿರ ಮೊತ್ತ ಪಡೆಯುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 1.40 ಕುಟುಂಬಗಳು ಉಚಿತ ವಿದ್ಯುತ್‌ ಸೌಲಭ್ಯ ಪಡೆಯುತ್ತಿವೆ. ಯುವ ನಿಧಿ ಯೋಜನೆಯಡಿ 1.82 ಲಕ್ಷ ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾದಾರರು ಆರ್ಥಿಕ ಪ್ರಯೋಜನ ಪಡೆಯುತ್ತಿದ್ದಾರೆ” ಎಂದು ಹೇಳಿದರು.

“ಈ ವರ್ಷ ಉತ್ತಮ ಮಳೆಯಾಗಿದ್ದು, ಇಡೀ ರಾಜ್ಯದ ರೈತರು ಸಂತೋಷದಿಂದ ಇದ್ದಾರೆ. ಮುಂಗಾರು ಬಿತ್ತನೆ ರಾಜ್ಯದಲ್ಲಿ ಶೇ. 99 ರಷ್ಟಾಗಿದೆ. ಇನ್ನೂ ಹೆಚ್ಚು ಮಳೆಯಾಗಲಿ, ಹೆಚ್ಚು ಬೆಳೆಯಾಗಲಿ ನಮ್ಮ ನಿರೀಕ್ಷೆಗಿಂತ ಮೀರಿ ಬೆಳೆ ಬೆಳೆಯಲಿ ಎಂದು ಚಾಮುಂಡೇಶ್ವರಿ ತಾಯಿಯನ್ನು ಪ್ರಾರ್ಥಿಸುತ್ತೇನೆ. ಮಳೆ ಬೆಳೆ ಆದರೆ ಮಾತ್ರ ಜನರು ಸುಖ ಶಾಂತಿಯಿಂದ ಬದುಕಲು ಸಾಧ್ಯ” ಎಂದರು.

“ಈ ಬಾರಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ದಸರಾ ಮಹೋತ್ಸವ ಅದ್ದೂರಿಯಾಗಿ ಮಾಡಲು ಸೂಚನೆ ನೀಡಿದ್ದೇನೆ. ದಸರಾ ನಾಡಹಬ್ಬವಾಗಬೇಕು, ಅಧಿಕಾರಿಗಳ ಹಬ್ಬವಾಗಬಾರದು. ಎಲ್ಲಾ ಕಾರ್ಯಕ್ರಮಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದರು.

“ದಸರಾ ಮಹೋತ್ಸವಕ್ಕೆ ಹಂ.ಪ. ನಾಗರಾಜಯ್ಯ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ಅವರಿಗೆ ಈ ಮೊದಲೇ ಈ ಅವಕಾಶ ದೊರೆಯಬೇಕಿತ್ತು. ನಾಗರಾಜಯ್ಯ ಅವರು ಕನ್ನಡ ಸಾಹಿತ್ಯ ಹಾಗೂ ಜೈನ ಸಾಹಿತ್ಯಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದಾರೆ. ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ಕೊಡುಗೆಯನ್ನು ಕನ್ನಡ ನಾಡಿನ ಜನ ಮರೆಯಲು ಸಾಧ್ಯವಿಲ್ಲ. ಅವರ ಆಯ್ಕೆ ಔಚಿತ್ಯಪೂರ್ಣ. ಕರ್ನಾಟಕ ಕಂಡ ಅಪರೂಪದ ಸಾಹಿತಿ ಅವರು” ಎಂದರು.

“ಹಂ.ಪ. ನಾಗರಾಜಯ್ಯ ಅವರು ಮೌಲ್ಯಯುತ ಭಾಷಣ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾಯಿತ ಸರ್ಕಾರಗಳನ್ನು ವಾಮ ಮಾರ್ಗಗಳಲ್ಲಿ ಕಿತ್ತು ಹಾಕುವುದು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮಗಳಾಗಿದ್ದು, ಪ್ರಜಾಪ್ರಭುತ್ವ ಇನ್ನಷ್ಟು ಬಲಪಡಿಸಬೇಕು ಎಂದಿರುವುದು ಔಚಿತ್ಯಪೂರ್ಣವಾಗಿದೆ” ಎಂದು ಹೇಳಿದರು.

ಜನರ ಆಶೀರ್ವಾದ ಇರುವರೆಗೆ ಆಡಳಿತ

“ಜನರ ಆಶೀರ್ವಾದದಿಂದ ನಾವು ಆಡಳಿತಕ್ಕೆ ಬಂದಿದ್ದೇವೆ. 5 ವರ್ಷಗಳ ಕಾಲ ರಾಜ್ಯದ ಜನತೆ ನಮಗೆ ಅವಕಾಶ ಕೊಟ್ಟಿದ್ದಾರೆ. ಈಗಲೂ ಎಷ್ಟೇ ತೊಡಕುಗಳು ಎದುರಾದರೂ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ. ಐದು ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ. ಸತ್ಯಕ್ಕೆ ಯಾವತ್ತೂ ಜಯ ದೊರೆಯುತ್ತದೆ. ನಿಮ್ಮೆಲ್ಲರ ಆಶೀರ್ವಾದ, ಈ ರಾಜ್ಯದ ಜನರ ಆಶೀರ್ವಾದ ಈ ಸರ್ಕಾರದ ಮೇಲೆ ಇರುವ ತನಕ ಯಾರಿಗೂ ಏನೂ ಮಾಡಲು ಸಾಧ್ಯವಿಲ್ಲ. ನಾನು ಈ ಕ್ಷೇತ್ರದಲ್ಲಿ ಐದು ಬಾರಿ ಗೆದ್ದಿದ್ದೇನೆ. ಮೂರು ಬಾರಿ ಸೋತಿದ್ದೇನೆ” ಎಂದು.

“ಚಾಮುಂಡೇಶ್ವರಿ ತಾಯಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಇಲ್ಲಿಯವರೆಗೆ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ರೆ ಇಷ್ಟು ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ. ನನಗೆ ನ್ಯಾಯಾಲಯಗಳಲ್ಲಿ ನಂಬಿಕೆಯಿದೆ. ಆತ್ಮಸಾಕ್ಷಿಗೆ ಅನುಗುಣವಾಗಿ ನಡೆಯುವ ಪ್ರಯತ್ನ ಮಾಡುತ್ತಿದ್ದೇವೆ. ಗಾಂಧೀಜಿ ಅವರು ಹೇಳಿದಂತೆ ಆತ್ಮಸಾಕ್ಷಿ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದುದು. ಆತ್ಮಸಾಕ್ಷಿಗೆ ತಕ್ಕಂತೆ ನಡೆದಿದ್ದೇನೆ ಎಂಬ ದೃಢ ನಂಬಿಕೆ” ಇದೆ ಎಂದು ಹೇಳಿದರು.

“ಪರಸ್ಪರರನ್ನು ಪ್ರೀತಿಸಬೇಕೆ ಹೊರತು ಯಾರನ್ನೂ ದ್ವೇಷಿಸಬಾರದು. ಎಲ್ಲ ಧರ್ಮಗಳು ಪರಸ್ಪರ ಪ್ರೀತಿಸಿ ಮಾನವರಾಗಿ ಬಾಳುವ ಸಂದೇಶವನ್ನು ನೀಡಿವೆ” ಎಂದರು.

ಇದನ್ನೂ ಓದಿ; ‘136 ಸ್ಥಾನ ಗೆದ್ದು ಸಿಎಂ ಆದವರು ರಾಜೀನಾಮೆ ಕೊಡಲು ಆಗುತ್ತಾ..’; ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಜೆಡಿಎಸ್ ಹಿರಿಯ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...