Homeಮುಖಪುಟಕಳ್ಳತನದ ಆರೋಪ: ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿ ಹಲ್ಲೆ, ತಲೆ ಬೋಳಿಸಿ ಅವಮಾನಿಸಿದ ಗುಂಪು

ಕಳ್ಳತನದ ಆರೋಪ: ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿ ಹಲ್ಲೆ, ತಲೆ ಬೋಳಿಸಿ ಅವಮಾನಿಸಿದ ಗುಂಪು

- Advertisement -
- Advertisement -

ನವದೆಹಲಿಯ ವಾಜಿರಬಾದ್ ಪ್ರದೇಶದಲ್ಲಿ ಕಳ್ಳನೆಂದು ಶಂಕಿಸಿ ಗುಂಪೊಂದು ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿರುವ ಹೃದಯ ವಿದ್ರಾವಕ ಘಟನೆ ಜರುಗಿದೆ.

ವ್ಯಕ್ತಿಯ ತಲೆ ಬೋಳಿಸಿ, ಕಾಲಿನಿಂದ ಒದ್ದು ಹಲ್ಲೆ ನಡೆಸಲಾಗಿದೆ. ಮುಖದ ಮೇಲೆಲ್ಲ ಅಮಾನವೀಯ ಥಳಿಸುವ ವಿಡಿಯೋ ಮಾಡಿ ಹಂಚಿಕೊಳ್ಳಲಾಗಿದೆ, ಆನಂತರ ಆತನನ್ನು ಬಿಟ್ಟು ಕಳಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಇಂದು ಬೆಳಿಗ್ಗೆ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಕಿಲ್ ಎಂಬ ವ್ಯಕ್ತಿಗೆ ವಾಜಿರಬಾದ್‌ನ ನಿವಾಸಿಗಳು ಹಲ್ಲೆ ನಡೆಸಿದ್ದಾರೆ. ಆತನು ಫೈಜನ್ ಎಂಬುವವರ ಮನೆಯ ವಾಟರ್ ಮೋಟಾರ್ ಕದಿಯುವಾಗ ಸಿಕ್ಕಿಬಿದ್ದಿದ್ದಾನೆ ಎಂದು ಸ್ಥಳೀಯ ನಿವಾಸಿಗಳು ಹೇಳಿಕೊಂಡಿದ್ದಾರೆ. ಆದ ಕಾರಣ ಹಲ್ಲೆ ನಡೆಸಿ, ತಲೆ ಬೋಳಿಸಿದ್ದಾರೆ. ಈ ವಿಷಯದ ಕುರಿತು ತನಿಖೆ ನಡೆಸುತ್ತಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಅಪಹರಿಸಿ ಒಬ್ಬರ ಕೊಲೆ; ಅತ್ಯಾಚಾರ ಶಂಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಮ ಮಂದಿರ, ಸಿಖ್ಖರ ಉಲ್ಲೇಖ ನೀತಿ ಸಂಹಿತೆ ಉಲ್ಲಂಘನೆಯಾಗದು: ಪ್ರಧಾನಿ ಮೋದಿಗೆ ಕ್ಲೀನ್ ಚಿಟ್...

0
ರಾಮ ಮಂದಿರ ನಿರ್ಮಾಣ, ಸಿಖ್‌ ತೀರ್ಥಯಾತ್ರೆಯ ಹಾದಿಯಾದ ಕರ್ತಾರ್‌ಪುರ್‌ ಸಾಹಿಬ್‌ ಕಾರಿಡಾರ್‌ ಅಭಿವೃದ್ಧಿ, ಸಿಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್‌ ಪ್ರತಿಗಳನ್ನು ಅಫ್ಗಾನಿಸ್ತಾನದಿಂದ ವಾಪಸ್‌ ತರಲು ಸರ್ಕಾರದ ಕ್ರಮ ಕೈಗೊಂಡಿರುವುದನ್ನು ಉಲ್ಲೇಖಿಸಿ...