Homeಮುಖಪುಟಆರೋಪಿಗಳ ಆಸ್ತಿ ಧ್ವಂಸ ಪ್ರಕರಣ | ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್‌

ಆರೋಪಿಗಳ ಆಸ್ತಿ ಧ್ವಂಸ ಪ್ರಕರಣ | ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್‌

- Advertisement -
- Advertisement -

ದೇಶದ ಹಲವು ರಾಜ್ಯಗಳಲ್ಲಿ ಆರೋಪಿಗಳ ಆಸ್ತಿ ಧ್ವಂಸ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಿದ ಅರ್ಜಿಗಳ ತೀರ್ಪನ್ನು ಮಂಗಳವಾರ ಸುಪ್ರೀಂಕೋರ್ಟ್ ಕಾಯ್ದಿರಿಸಿದೆ. ಇದೇ ವೇಳೆ ಆಸ್ತಿಗಳನ್ನು ಧ್ವಂಸಗೊಳಿಸುವ ವಿಷಯದ ಕುರಿತು ಎಲ್ಲಾ ನಾಗರಿಕರಿಗೆ ಮಾರ್ಗಸೂಚಿಗಳನ್ನು ರೂಪಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತನ್ನ ನಿರ್ದೇಶನಗಳು ಭಾರತದಾದ್ಯಂತ ಅನ್ವಯಿಸುತ್ತವೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಅಗಿರುವ ಕಾರಣಕ್ಕೆ, ಅದು ಅವರ ಆಸ್ತಿ ಧ್ವಂಸ ಮಾಡುವುದಕ್ಕೆ ಆಧಾರವಾಗುವುದಿಲ್ಲ ಎಂದು ಸ್ಪಷ್ಟಪಡಿಸುತ್ತದೆ ಎಂದು ಹೇಳಿದೆ. ಆರೋಪಿಗಳ ಆಸ್ತಿ ಧ್ವಂಸ

“ನಾವು ಏನನ್ನು ತ್ಯಜಿಸುತ್ತಿದ್ದೇವೆ, ನಮ್ಮದು ಜಾತ್ಯತೀತ ದೇಶ. ನಾವು ಈ ನಿರ್ದೇಶನಗಳನ್ನು ಎಲ್ಲಾ ನಾಗರಿಕರಿಗಾಗಿ ಮಾಡುತ್ತಿದ್ದು, ಯಾವುದೇ ನಿರ್ದಿಷ್ಟ ಸಮುದಾಯಕ್ಕಾಗಿ ಮಾಡುತ್ತಿಲ್ಲ” ಎಂದು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರ ಪೀಠ ಹೇಳಿದೆ.

ಇದನ್ನೂ ಓದಿ: ‘ಪ್ರತಿಭೆ ವ್ಯರ್ಥವಾಗಲು ಬಿಡುವುದಿಲ್ಲ..’; ದಲಿತ ವಿದ್ಯಾರ್ಥಿ ಪರವಾಗಿ ಐಐಟಿಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಒಂದು ನಿರ್ದಿಷ್ಟ ಧರ್ಮಕ್ಕೆ ವಿಭಿನ್ನ ಕಾನೂನು ಇರಬಾರದು ಎಂದು ಹೇಳಿರುವ ಪೀಠ, ಸಾರ್ವಜನಿಕ ರಸ್ತೆಗಳು, ಸರ್ಕಾರಿ ಭೂಮಿ ಅಥವಾ ಅರಣ್ಯಗಳಲ್ಲಿ ಯಾವುದೇ ಅನಧಿಕೃತ ನಿರ್ಮಾಣಗಳನ್ನು ರಕ್ಷಿಸುವುದಿಲ್ಲ ಎಂದು ಹೇಳಿದೆ. “ನಮ್ಮ ಆದೇಶವು ಯಾವುದೇ ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಣದಾರರಿಗೆ ಸಹಾಯ ಮಾಡದಂತೆ ನಾವು ನೋಡಿಕೊಳ್ಳುತ್ತೇವೆ” ಎಂದು ಪೀಠ ಹೇಳಿದೆ.

ಈ ವಿಷಯದಲ್ಲಿ ತನ್ನ ತೀರ್ಪನ್ನು ಕಾಯ್ದಿರಿಸುತ್ತಿರುವುದಾಗಿ ಪೀಠವು ಹೇಳಿದ್ದು, ಈ ವೇಳೆ ಅರ್ಜಿದಾರರ ಪರ ಹಾಜರಾದ ವಕೀಲರೊಬ್ಬರು ಸೆಪ್ಟೆಂಬರ್ 17 ರ ಸುಪ್ರೀಂಕೋರ್ಟ್‌ ನೀಡಿದ್ದ ಆದೇಶವನ್ನು ಉಲ್ಲೇಖಿಸಿ, ಈ ಮಧ್ಯಂತರ ಆದೇಶವನ್ನು ವಿಸ್ತರಿಸುವಂತೆ ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, ಈ ಪ್ರಕರಣವನ್ನು ನಿರ್ಧರಿಸುವವರೆಗೂ ಆ ಆದೇಶವನ್ನು ಪಾಲಿಸುವಂತೆ ಹೇಳಿದೆ . ಮಧ್ಯಂತರ ಆದೇಶದಲ್ಲಿ ಅಕ್ಟೋಬರ್ 1ರ ವರೆಗೆ ಸುಪ್ರೀಂಕೋರ್ಟ್‌ನ ಅನುಮತಿಯಿಲ್ಲದೆ ದೇಶದಾದ್ಯಂತ ನೆಲಸಮ ಕಾರ್ಯವನ್ನು ತಡೆಹಿಡಿಯುವಂತೆ ಹೇಳಿತ್ತು. ಈ ಹಿಂದೆ ನ್ಯಾಯಾಲಯವು ಅಕ್ರಮ ಧ್ವಂಸವು ಸಂವಿಧಾನದ “ತತ್ವ” ಕ್ಕೆ ವಿರುದ್ಧವಾಗಿದೆ ಎಂದು ಹೇಳಿತ್ತು.

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...