Homeಮುಖಪುಟಆಸಿಡ್ ದಾಳಿ; 65% ಸಂತ್ರಸ್ತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ - ಮಹಿಳಾ ಆಯೋಗ ಕಳವಳ

ಆಸಿಡ್ ದಾಳಿ; 65% ಸಂತ್ರಸ್ತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ – ಮಹಿಳಾ ಆಯೋಗ ಕಳವಳ

ಅಕ್ಟೋಬರ್ 20 ರವರೆಗಿನ ಮಾಹಿತಿಯ ಪ್ರಕಾರ, ದೇಶಾದ್ಯಂತ 1,273 ಆಸಿಡ್ ದಾಳಿ ಪ್ರಕರಣಗಳಲ್ಲಿ ಕೇವಲ 474 ಪ್ರಕರಣಗಳಲ್ಲಿ ಆಸಿಡ್ ದಾಳಿಯ ಸಂತ್ರಸ್ತರಿಗೆ ಮಾತ್ರ ಪರಿಹಾರವನ್ನು ನೀಡಲಾಗಿದೆ

- Advertisement -
- Advertisement -

ಈ ವರ್ಷದಲ್ಲಿ ದೇಶಾದ್ಯಂತ ದಾಖಲಾಗಿರುವ 1,273 ಆಸಿಡ್‌ ದಾಳಿ ಪ್ರಕರಣಗಳಲ್ಲಿ 799 ಸಂತ್ರಸ್ತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಕಳವಳ ವ್ಯಕ್ತಪಡಿಸಿದ್ದು, ಇದರ ಬಗ್ಗೆ ರಾಜ್ಯಗಳು ತಕ್ಷಣ ಗಮನ ಹರಿಸಬೇಕೆಂದು ಒತ್ತಾಯಿಸಿದೆ.

ರಾಷ್ಟ್ರೀಯ ಮಹಿಳಾ ಆಯೋಗದ ನೋಡಲ್ ಅಧಿಕಾರಿಗಳು 24 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳೊಂದಿಗೆ ನಡೆದ ಇ-ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಿ, ಆಯೋಗದ ನಿರ್ವಹಣಾ ಮಾಹಿತಿ ವ್ಯವಸ್ಥೆಯ ವೆಬ್‌ಸೈಟ್‌ನಲ್ಲಿ ನೋಂದಾಯಿಸಲಾದ ಆಸಿಡ್‌ ದಾಳಿ ಪ್ರಕರಣಗಳನ್ನು ಪರಿಶೀಲಿಸಲಾಯಿತು.

ಆಸಿಡ್ ದಾಳಿಯ ಸಂತ್ರಸ್ತರಿಗೆ ಪರಿಹಾರವನ್ನು ಪಾವತಿಸದಿರುವ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: ಎ ಪ್ರಾಮಿಸ್ಡ್ ಲ್ಯಾಂಡ್: ಒಬಾಮಾ ಪುಸ್ತಕದಲ್ಲಿ ನಿಜಕ್ಕೂ ಏನಿದೆ?

ಅಕ್ಟೋಬರ್ 20 ರವರೆಗಿನ ಮಾಹಿತಿಯ ಪ್ರಕಾರ, ದೇಶಾದ್ಯಂತ 1,273 ಆಸಿಡ್ ದಾಳಿ ಪ್ರಕರಣಗಳಲ್ಲಿ ಕೇವಲ 474 ಪ್ರಕರಣಗಳ ಆಸಿಡ್ ದಾಳಿಯ ಸಂತ್ರಸ್ತರಿಗೆ ಮಾತ್ರ ಪರಿಹಾರವನ್ನು ನೀಡಲಾಗಿದೆ.

ಈ ಸಭೆಯಲ್ಲಿ, ದಾಳಿ ಪ್ರಕರಣಗಳಲ್ಲಿ ಬದುಕುಳಿದವರನ್ನು ಬೆಂಬಲಿಸುವ ಕಾನೂನುಗಳು ಮತ್ತು ಯೋಜನೆಗಳನ್ನು ಎತ್ತಿಹಿಡಿಯಲು ನೋಡಲ್ ಅಧಿಕಾರಿಗಳಿಗೆ ವಿನಂತಿಸಲಾಗಿದೆ.

ಇದನ್ನೂ ಓದಿ: ಅವರು ನನ್ನ ಸಿನಿಮಾದ ರೇಟಿಂಗ್‌ ಬದಲಿಸಬಹುದು, ಆದರೆ ನನ್ನ ಮನಸ್ಸು ಬದಲಿಸಲು ಸಾಧ್ಯವಿಲ್ಲ : ದೀಪಿಕಾ ಪಡುಕೋಣೆ

2020 ರಲ್ಲಿ ಯಾವುದೇ ಆಸಿಡ್ ದಾಳಿ ಪ್ರಕರಣಗಳು ವರದಿಯಾಗಿಲ್ಲ ಎಂದು ಸಿಕ್ಕಿಂ, ತಮಿಳುನಾಡು, ಗೋವಾ (ಉತ್ತರ ಜಿಲ್ಲೆ), ಜಮ್ಮು ಮತ್ತು ಕಾಶ್ಮೀರ, ದಾದರ್ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು ಪ್ರದೇಶಗಳ ಪ್ರತಿನಿಧಿಗಳು ಮಾಹಿತಿ ನೀಡಿದರು.

ಇತ್ತೀಚೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ ಎಂದು ಅಪರಾಧ ದಾಖಲೆಗಳ ವಿಭಾಗವು ಅಂಕಿಅಂಶಗಳು ಹೇಳಿವೆ. ಅದರಲ್ಲೂ ಉತ್ತರ ಪ್ರದೇಶದಲ್ಲಿ ದಲಿತರು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ದಿನೇ-ದಿನೇ ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದೆ.


ಇದನ್ನೂ ಓದಿ: ’ಬಾಯ್ಕಟ್‌ ಮತ್ತು ಟ್ರೋಲ್‌’ ಹೊರತಾಗಿಯೂ ಲಾಭ ಗಳಿಸಿದ ದೀಪಿಕಾರ ಚಪಾಕ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...