Homeಕರ್ನಾಟಕಆ್ಯಸಿಡ್ ದಾಳಿ: ಆರೋಪಿ ಬಂಧನಕ್ಕೆ ಆಗ್ರಹಿಸಿ ಎಎಪಿ ಪ್ರತಿಭಟನೆ

ಆ್ಯಸಿಡ್ ದಾಳಿ: ಆರೋಪಿ ಬಂಧನಕ್ಕೆ ಆಗ್ರಹಿಸಿ ಎಎಪಿ ಪ್ರತಿಭಟನೆ

- Advertisement -
- Advertisement -

ಆ್ಯಸಿಡ್ ದಾಳಿಕೋರ ಹಾಗೂ ಆರೋಪಿ ನಾಗೇಶ್‌ನನ್ನು ಬಂಧಿಸಿ, ಗಲ್ಲುಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಎಪಿಯ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ ಮಾತನಾಡಿ, “ರಾಜ್ಯಾದ್ಯಂತ ಗಂಭೀರ ಅಪರಾಧಗಳ ಪ್ರಮಾಣ ಏರಿಕೆಯಾಗುತ್ತಿರುವುದು ಆತಂಕಕಾರಿ. ಅಸಮರ್ಥರು ಗೃಹಸಚಿವ ಹುದ್ದೆ ಅಲಂಕರಿಸಿರುವುದರಿಂದ ಜನರಿಗೆ ಕಾನೂನಿನ ಭಯವೇ ಇಲ್ಲವಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಆ್ಯಸಿಡ್ ದಾಳಿಕೋರ ನಾಗೇಶ್‌ನನ್ನು ಶೀಘ್ರವೇ ಬಂಧಿಸಬೇಕು ಹಾಗೂ ಗಲ್ಲುಶಿಕ್ಷೆಗೆ ಒಳಪಡಿಸಬೇಕು. ಉದ್ಯೋಗಿಗೆ ರಕ್ಷಣೆ ನೀಡುವುದರಲ್ಲಿ ವಿಫಲರಾದ ಮುತ್ತೂಟ್‌ ಫೈನಾನ್ಸ್‌ ಕಂಪನಿಯ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸರ್ಕಾರವು ತಡಮಾಡದೇ ಸಂತ್ರಸ್ತ ಯುವತಿಗೆ ಒಂದು ಕೋಟಿ ರೂಪಾಯಿ ಪರಿಹಾರ ವಿತರಿಸಬೇಕು” ಎಂದು ಆಗ್ರಹಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪೊಲೀಸ್‌ ಇಲಾಖೆಯ ಮೇಲೆ ಹಿಡಿತ ಸಾಧಿಸುವಲ್ಲಿ ಗೃಹ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ. ಘಟನೆ ನಡೆದು ಮೂರು ದಿನಗಳಾದರೂ ಆರೋಪಿಯನ್ನು ಬಂಧಿಸಲು ಪೊಲೀಸರಿಗೆ ಸಾಧ್ಯವಾಗದಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ಗೃಹ ಸಚಿವರ ನಿರ್ಲಕ್ಷ್ಯವೇ ಕಾರಣ” ಎಂದು ಆರೋಪಿಸಿದರು.

“ಉದ್ಯೋಗಸ್ಥ ಮಹಿಳೆಯರ ರಕ್ಷಣೆಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು. ಮಹಿಳೆಯರು ಹಾಗೂ ಮಕ್ಕಳ ರಕ್ಷಣೆಗಾಗಿ ಹೆಚ್ಚಿನ ನಿಗಾ ವಹಿಸಬೇಕು” ಎಂದು ಒತ್ತಾಯಿಸಿದರು.

ಎಎಪಿ ಮುಖಂಡರಾದ ಸುಹಾಸಿನಿ ಫಣಿರಾಜ್‌, ಪಲ್ಲವಿ ಚಿದಂಬರ್‌, ಮರಿಯಾ ಹುಸೈನ್‌, ಶಿಲ್ಪ, ಸುಮನ್‌, ಗಾಯತ್ರಿ, ಸುರೇಶ್‌ ರಾಥೋಡ್‌, ಚನ್ನಪ್ಪ, ಸೀತಾರಾಮ್‌, ಶಶಿಧರ್‌ ಆರಾಧ್ಯ, ಶಾಮ್‌ ಪ್ರಕಾಶ್‌ ಹಾಗೂ ಇನ್ನಿತರ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿರಿ: ವಿಶೇಷ ವರದಿ: ಬಿಜೆಪಿ ಅವಧಿಯಲ್ಲಿ ಪರೀಕ್ಷಾ ಅಕ್ರಮ, ಎಡವಟ್ಟುಗಳು & ಶೈಕ್ಷಣಿಕ ಅವ್ಯವಸ್ಥೆ

ನಗರದ ಸುಂಕದಕಟ್ಟೆ ಬಳಿ ಬೆಳಗಿನ ಹೊತ್ತು ಕೆಲಸಕ್ಕೆ ಹೊರಟಿದ್ದ 24 ವರ್ಷದ ಯುವತಿ ಮೇಲೆ ನಾಗೇಶ್ ಎಂಬ ಯುವಕ ಆ್ಯಸಿಡ್ ದಾಳಿ ನಡೆಸಿದ್ದಾನೆ. ಈ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ.

“ತನ್ನ ಪ್ರೀತಿಯ ನಿವೇದನೆಯನ್ನು ನಿರಾಕರಿಸಿದಳು ಎಂದು ಆಕ್ರೋಶದಿಂದ ಯುವಕ ಆಸಿಡ್ ಎರಚಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ 24 ವರ್ಷದ ಯುವತಿಯ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ” ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಭರವಸೆ ನೀಡಿದ್ದಾರೆ.

ಎರಡು ದಿನಗಳ ಹಿಂದೆ ಸುಂಕದಕಟ್ಟೆ ಬಳಿ ಕೆಲಸಕ್ಕೆ ಹೊರಟಿದ್ದ ಯುವತಿ ಬಸ್ ನಿಲ್ದಾಣ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ ಬಂದ ಆರೋಪಿ ಯುವಕ ನಾಗೇಶ್ ಯುವತಿ ಮೇಲೆ ಏಕಾಏಕಿ ಆಸಿಡ್ ಎರಚಿ ಪರಾರಿಯಾಗಿದ್ದು ಆತನಿಗಾಗಿ ಬೆಂಗಳೂರು ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...