Homeಕರ್ನಾಟಕಆ್ಯಸಿಡ್ ದಾಳಿ: ಆರೋಪಿ ಬಂಧನಕ್ಕೆ ಆಗ್ರಹಿಸಿ ಎಎಪಿ ಪ್ರತಿಭಟನೆ

ಆ್ಯಸಿಡ್ ದಾಳಿ: ಆರೋಪಿ ಬಂಧನಕ್ಕೆ ಆಗ್ರಹಿಸಿ ಎಎಪಿ ಪ್ರತಿಭಟನೆ

- Advertisement -
- Advertisement -

ಆ್ಯಸಿಡ್ ದಾಳಿಕೋರ ಹಾಗೂ ಆರೋಪಿ ನಾಗೇಶ್‌ನನ್ನು ಬಂಧಿಸಿ, ಗಲ್ಲುಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಎಪಿಯ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ ಮಾತನಾಡಿ, “ರಾಜ್ಯಾದ್ಯಂತ ಗಂಭೀರ ಅಪರಾಧಗಳ ಪ್ರಮಾಣ ಏರಿಕೆಯಾಗುತ್ತಿರುವುದು ಆತಂಕಕಾರಿ. ಅಸಮರ್ಥರು ಗೃಹಸಚಿವ ಹುದ್ದೆ ಅಲಂಕರಿಸಿರುವುದರಿಂದ ಜನರಿಗೆ ಕಾನೂನಿನ ಭಯವೇ ಇಲ್ಲವಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಆ್ಯಸಿಡ್ ದಾಳಿಕೋರ ನಾಗೇಶ್‌ನನ್ನು ಶೀಘ್ರವೇ ಬಂಧಿಸಬೇಕು ಹಾಗೂ ಗಲ್ಲುಶಿಕ್ಷೆಗೆ ಒಳಪಡಿಸಬೇಕು. ಉದ್ಯೋಗಿಗೆ ರಕ್ಷಣೆ ನೀಡುವುದರಲ್ಲಿ ವಿಫಲರಾದ ಮುತ್ತೂಟ್‌ ಫೈನಾನ್ಸ್‌ ಕಂಪನಿಯ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸರ್ಕಾರವು ತಡಮಾಡದೇ ಸಂತ್ರಸ್ತ ಯುವತಿಗೆ ಒಂದು ಕೋಟಿ ರೂಪಾಯಿ ಪರಿಹಾರ ವಿತರಿಸಬೇಕು” ಎಂದು ಆಗ್ರಹಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪೊಲೀಸ್‌ ಇಲಾಖೆಯ ಮೇಲೆ ಹಿಡಿತ ಸಾಧಿಸುವಲ್ಲಿ ಗೃಹ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ. ಘಟನೆ ನಡೆದು ಮೂರು ದಿನಗಳಾದರೂ ಆರೋಪಿಯನ್ನು ಬಂಧಿಸಲು ಪೊಲೀಸರಿಗೆ ಸಾಧ್ಯವಾಗದಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ಗೃಹ ಸಚಿವರ ನಿರ್ಲಕ್ಷ್ಯವೇ ಕಾರಣ” ಎಂದು ಆರೋಪಿಸಿದರು.

“ಉದ್ಯೋಗಸ್ಥ ಮಹಿಳೆಯರ ರಕ್ಷಣೆಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು. ಮಹಿಳೆಯರು ಹಾಗೂ ಮಕ್ಕಳ ರಕ್ಷಣೆಗಾಗಿ ಹೆಚ್ಚಿನ ನಿಗಾ ವಹಿಸಬೇಕು” ಎಂದು ಒತ್ತಾಯಿಸಿದರು.

ಎಎಪಿ ಮುಖಂಡರಾದ ಸುಹಾಸಿನಿ ಫಣಿರಾಜ್‌, ಪಲ್ಲವಿ ಚಿದಂಬರ್‌, ಮರಿಯಾ ಹುಸೈನ್‌, ಶಿಲ್ಪ, ಸುಮನ್‌, ಗಾಯತ್ರಿ, ಸುರೇಶ್‌ ರಾಥೋಡ್‌, ಚನ್ನಪ್ಪ, ಸೀತಾರಾಮ್‌, ಶಶಿಧರ್‌ ಆರಾಧ್ಯ, ಶಾಮ್‌ ಪ್ರಕಾಶ್‌ ಹಾಗೂ ಇನ್ನಿತರ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿರಿ: ವಿಶೇಷ ವರದಿ: ಬಿಜೆಪಿ ಅವಧಿಯಲ್ಲಿ ಪರೀಕ್ಷಾ ಅಕ್ರಮ, ಎಡವಟ್ಟುಗಳು & ಶೈಕ್ಷಣಿಕ ಅವ್ಯವಸ್ಥೆ

ನಗರದ ಸುಂಕದಕಟ್ಟೆ ಬಳಿ ಬೆಳಗಿನ ಹೊತ್ತು ಕೆಲಸಕ್ಕೆ ಹೊರಟಿದ್ದ 24 ವರ್ಷದ ಯುವತಿ ಮೇಲೆ ನಾಗೇಶ್ ಎಂಬ ಯುವಕ ಆ್ಯಸಿಡ್ ದಾಳಿ ನಡೆಸಿದ್ದಾನೆ. ಈ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ.

“ತನ್ನ ಪ್ರೀತಿಯ ನಿವೇದನೆಯನ್ನು ನಿರಾಕರಿಸಿದಳು ಎಂದು ಆಕ್ರೋಶದಿಂದ ಯುವಕ ಆಸಿಡ್ ಎರಚಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ 24 ವರ್ಷದ ಯುವತಿಯ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ” ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಭರವಸೆ ನೀಡಿದ್ದಾರೆ.

ಎರಡು ದಿನಗಳ ಹಿಂದೆ ಸುಂಕದಕಟ್ಟೆ ಬಳಿ ಕೆಲಸಕ್ಕೆ ಹೊರಟಿದ್ದ ಯುವತಿ ಬಸ್ ನಿಲ್ದಾಣ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ ಬಂದ ಆರೋಪಿ ಯುವಕ ನಾಗೇಶ್ ಯುವತಿ ಮೇಲೆ ಏಕಾಏಕಿ ಆಸಿಡ್ ಎರಚಿ ಪರಾರಿಯಾಗಿದ್ದು ಆತನಿಗಾಗಿ ಬೆಂಗಳೂರು ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...