Homeಕರ್ನಾಟಕಪಾಪಿ-ಪೊಲೀಸ್ ನಂಟು ಎಸಿಪಿ ವೆಂಕಿಗೆ ಇಂಥಾ ಇತಿಹಾಸ ಉಂಟು!

ಪಾಪಿ-ಪೊಲೀಸ್ ನಂಟು ಎಸಿಪಿ ವೆಂಕಿಗೆ ಇಂಥಾ ಇತಿಹಾಸ ಉಂಟು!

- Advertisement -
- Advertisement -

ವೆಂಕಟೇಶ್ ಪ್ರಸನ್ನ ಎಂಬ ಪೊಲೀಸ್ ಅಧಿಕಾರಿಯು ತನ್ನ ಭೂಗತ ಜಗತ್ತಿನ ಸಂಪರ್ಕ ಮತ್ತು ಶಾಮೀಲುದಾರಿಕೆಯ ಕಾರಣದಿಂದ ಈಗ ರಾಜ್ಯಾದ್ಯಂತ ಸುದ್ದಿಯಲ್ಲಿದ್ದಾರೆ. ಆದರೆ ಆತನನ್ನು ಬಲ್ಲ ಮಂಗಳೂರಿನ ಜನಕ್ಕೆ ಇದ್ಯಾವ ಹೊಸ ಸುದ್ದಿ ಎನಿಸಿ ಎಂದು ಮೂಗು ಮುರಿಯುತ್ತಿದ್ದಾರೆ. ಏಕೆಂದರೆ ರವಿ ಪೂಜಾರಿಯಂತಹ ಭೂಗತ ಡಾನ್‍ಗಳೊಂದಿಗಿನ ವೆಂಕಟೇಶ್ ಪ್ರಸನ್ನರ ಸಂಬಂಧವು ಮಂಗಳೂರಿನಲ್ಲಿದ್ದಾಗಲೇ ಗಟ್ಟಿಗೊಂಡಿದ್ದು. ಪೊಲೀಸ್ ಇಲಾಖೆಯೊಳಗೂ ಇದು ಜಗಜ್ಜಾಹೀರಾದ ವಿಚಾರವೇ.

ಶೃಂಗೇರಿ ತಾಲೂಕಿನ ಬ್ರಾಹ್ಮಣ ಕುಟುಂಬವೊಂದರ ವೆಂಕಟೇಶ್ ಪ್ರಸನ್ನರ ಸಂಬಂಧ ಭೂಗತ ಡಾನ್‍ಗಳೊಂದಿಗೆ ಮಾತ್ರವಿಲ್ಲ; ಅಷ್ಟೇ ಗಾಢ ಸಂಬಂಧವಿರುವುದು ಸಂಘಪರಿವಾರದ ಜೊತೆಗೂ ಆಗಿದೆ. ಒಂದು ಇನ್ನೊಂದನ್ನು ಪೊರೆಯುತ್ತಾ ಇದೆಯೆಂಬುದು ಇನ್ನೊಂದು ವಾಸ್ತವ. ಈ ಮೂರೂ ಅಂಶಗಳು (ವೆಂಕಟೇಶ್ ಪ್ರಸನ್ನ, ಸಂಘಪರಿವಾರ ಮತ್ತು ರವಿಪೂಜಾರಿಯಂತಹ ಭೂಗತ ಲೋಕದ ಜನ) ಒಂದಕ್ಕೊಂದು ಬೆಸೆದುಕೊಂಡಿವೆಯೆಂದು ಮಂಗಳೂರಿನಲ್ಲಿ ಒಮ್ಮೆ ದೊಡ್ಡ ಸುದ್ದಿಯಾಗಿದ್ದು ನೌಷಾದ್ ಖಾಸಿಂಯವರ ಕೊಲೆಯ ಸಂದರ್ಭದಲ್ಲಿ.

ವಿಪರ್ಯಾಸವೆಂದರೆ ಅದೇ ನೌಷಾದ್ ಖಾಸಿಂಯವರ ಕೊಲೆಯ ಆರೋಪಿ ದಿನೇಶ್ ಮತ್ತಿತರರನ್ನು ಇದೇ ವೆಂಕಟೇಶ್ ಪ್ರಸನ್ನ ಬೆಂಗಳೂರಿನಿಂದ ಎತ್ತಾಕಿಕೊಂಡು ಬಂದು ವಿಚಾರಣೆಗೆ ಗುರಿಯಾಗಿಸಿದರು ಎಂಬುದು ಆತನನ್ನು ತಕ್ಷಣದ ಆರೋಪಿ ಸ್ಥಾನದಿಂದ ವಿಮುಕ್ತನನ್ನಾಗಿಸಿತ್ತು. ಆದರೆ ಒಳಗಿನ ಸಂಗತಿ ಬೇರೆಯೇ ಆಗಿತ್ತು.

ನೌಷಾದ್ ಖಾಸಿಂಜಿ ಮಂಗಳೂರಿನ ಜನಪ್ರಿಯ ವಕೀಲರು. ಅದರಲ್ಲೂ ಬಡವರ ಪಾಲಿಗೆ ಆಪತ್ಬಾಂಧವ. ಅಮಾಯಕ ಮುಸ್ಲಿಂ ಯುವಕರನ್ನು ಪೊಲೀಸರು ವಿವಿಧ ಕೇಸುಗಳಲ್ಲಿ ಬಂಧಿಸಿ ಭಯೋತ್ಪಾದಕ ಪಟ್ಟ ಕಟ್ಟುವುದು ಹೊಸದೇನಲ್ಲ. ಅಂತಹವರ ಪರವಾಗಿ ನ್ಯಾಯ ಕೊಡಿಸಲು ನೌಷಾದ್ ಎಂದೂ ಹಿಂಜರಿಯುತ್ತಿರಲಿಲ್ಲ. ಆ ಕಾರಣದಿಂದ ಮುಸ್ಲಿಂ ವಿರೋಧಿ ಮನಸ್ಥಿತಿಯ ಪೊಲೀಸರಿಗೂ ಅವರಿಗೂ ಶತ್ರುತ್ವವೂ ಬೆಳೆದಿತ್ತು. ಉಡುಪಿ ಎಂಎಲ್‍ಎ ರಘುಪತಿ ಭಟ್ಟರ ಪತ್ನಿ ಪದ್ಮಪ್ರಿಯರ ನಿಗೂಢ ಸಾವಿನ ಪ್ರಕರಣದಲ್ಲಿ ಬಿಜೆಪಿಯ ಸಿಲುಕಿಸಲೆತ್ನಿಸಿದ್ದ ಅತುಲ್‍ರಾವ್ ಪರವೂ ನೌಷಾದ್ ವಾದಿಸಿದ್ದರು.

ಈ ಮಧ್ಯೆ ಮಂಗಳೂರಿನ ಭೂಗತ ಲೋಕದಲ್ಲಿ ಹಿಂದೂ ಮುಸ್ಲಿಂ ಗುಂಪುಗಳು ಬೇರೆ ತಲೆಯೆತ್ತಿದ್ದವು. ಟಿಪಿಕಲ್ ಮಂಗಳೂರು ಸಂಸ್ಕೃತಿಯ ಭಾಗವಾಗಿ. ಇದೇ ಮಂಗಳೂರು ಮೂಲದ ಡಾನ್‍ಗಳು ಬೆಂಗಳೂರು, ಮುಂಬೈಗಳಲ್ಲೆಲ್ಲಾ ಡಾನ್‍ಗಿರಿ ನಡೆಸಿ ದುಬೈ ಮತ್ತಿತರ ಅರಬ್ ದೇಶಗಳಲ್ಲಿ ತಲೆಮರೆಸಿಕೊಳ್ಳುವುದೂ ಹೊಸತಾಗಿರಲಿಲ್ಲ. ಅಂಥದ್ದೆಲ್ಲಾ ನಡೆಸಿ ನಂತರ ‘ಹಿಂದೂ ರಕ್ಷಕ’ರ ಅವತಾರವೆತ್ತಿ ಮತ್ತೆ ಇಲ್ಲಿ ‘ಮುಖ್ಯವಾಹಿನಿ’ ಸೇರಿಕೊಳ್ಳುವುದೂ ಹೊಸದಲ್ಲ.

ಇದೀಗ ಬಂಧಿತವಾಗಿರುವ ರವಿ ಪೂಜಾರಿಯದ್ದೂ ಅದೇ ಜಾಡು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಹೇಳಿಕೇಳಿ ರವಿ ಪೂಜಾರಿ ನೌಷಾದ್ ಖಾಸಿಂಜಿಯ ಮರ್ಡರ್ (ಏಪ್ರಿಲ್ 9, 2009) ಸಂದರ್ಭದಲ್ಲೇ ಕಮ್ಯುನಲ್ ಮಾಫಿಯಾದ ಭಾಗವಾಗಿದ್ದುದು ಸಾಬೀತಾಗಿತ್ತು. ಹಾಗಾಗಿಯೂ ವೆಂಕಟೇಶ್ ಪ್ರಸನ್ನರ ಹಸ್ತವೂ ಆ ಮರ್ಡರ್‍ನಲ್ಲಿತ್ತು ಎಂಬುದು ಆ ಸಂದರ್ಭದಲ್ಲಿ ಪ್ರತಿಭಟಿಸಿದವರ ಆಕ್ರೋಶದಲ್ಲಿ ಎದ್ದು ಕಾಣುತ್ತಿತ್ತು.

ಆ ಪ್ರತಿಭಟನೆಯ ಸಂದರ್ಭದಲ್ಲಿ ಮಂಗಳೂರು ಎಸ್‍ಪಿ ಆಗಿದ್ದ (ಆಗಿನ್ನೂ ಕಮೀಷನರೇಟ್ ಬಂದಿರಲಿಲ್ಲ) ಸುಬ್ರಹ್ಮಣ್ಯೇಶ್ವರ ರಾವ್ ಮತ್ತು ಐಜಿ ಗೋಪಾಲ್ ಹೊಸೂರ್ ಅವರ ಮೇಲೆ ವಿಪರೀತ ಒತ್ತಡವಿತ್ತು. ಸ್ಫೋಟವಾಗಲು ಕಾದು ಕುಳಿತಂತಿದ್ದ ಮಂಗಳೂರು, ಕೋಮು ಬಣ್ಣ ಪಡೆದುಕೊಳ್ಳುತ್ತಿದ್ದ ಭೂಗತ ಲೋಕ, ಸರ್ಕಾರ ನಡೆಸುತ್ತಿದ್ದದ್ದು ಬಿಜೆಪಿ – ಹೀಗಿರುವಾಗ ಅಲ್ಲಿನ ಪರಿಸ್ಥಿತಿಯನ್ನು ನಿಭಾಯಿಸುವುದು ಸುಲಭವಿರಲಿಲ್ಲ. ಆದರೆ, ನೌಷಾದ್ ಖಾಸಿಂ ಕೊಲೆಗಾರರನ್ನು ಕೊಲೆಯಾದ 15 ದಿನಗಳಲ್ಲಿ ಬಂಧಿಸಲಾಯಿತು. ಬಂಧಿತರಾದ ದಿನೇಶ್ ಶೆಟ್ಟಿ, ರಿತೇಶ್ ಮತ್ತಿತರರೆಲ್ಲರೂ ರವಿ ಪೂಜಾರಿಯ ಸಹಚರರು ಎಂಬುದು ಖಚಿತವಾಗಿತ್ತು.

ಕೊಲೆಯ ವಿರುದ್ಧ ಸಿಡಿದೆದ್ದಿದ್ದ ಪ್ರತಿಭಟನಾಕಾರರು ಸುಮ್ಮನಾದರೂ ನೌಷಾದ್‍ರ ಸೀನಿಯರ್ ಪುರುಷೋತ್ತಮ್ ಪೂಜಾರಿಯವರು ಸುಮ್ಮನಾಗಲಿಲ್ಲ. ಈ ಕೊಲೆಯಲ್ಲಿ ವೆಂಕಟೇಶ್ ಪ್ರಸನ್ನ ಮತ್ತು ಇನ್ನಿಬ್ಬರು ಇನ್ಸ್‍ಪೆಕ್ಟರ್‍ಗಳ ಪಾತ್ರವಿದೆಯೆಂದು ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದಲ್ಲದೇ ಸಿಬಿಐ ತನಿಖೆ ನಡೆಯಬೇಕೆಂದು ಹೈಕೋರ್ಟ್‍ನವರೆಗೆ ಹೋಗಿದ್ದರು. ಅಷ್ಟರಲ್ಲಾಗಲೇ (2011) ತನಿಖೆ ಸಾಕಷ್ಟು ಮುಂದುವರೆದಿದ್ದರಿಂದ ಪೊಲೀಸ್ ಅಧಿಕಾರಿಗಳ ವಿರುದ್ಧದ ಕೇಸನ್ನು ಹೈಕೋರ್ಟು ಕೈಬಿಟ್ಟಿತ್ತು. ಆದರೆ, 2015ರ ನವೆಂಬರ್‍ನಲ್ಲಿ ಇತರ ಆರೋಪಿಗಳಿಗೆ ಶಿಕ್ಷೆಯೂ ಆಯಿತು. ಅವರೇ ಮರ್ಡರರ್ಸ್ ಎಂದು ಕೋರ್ಟು ಎತ್ತಿ ಹಿಡಿದಿತ್ತು.

ಸದರಿ ಕೇಸಿನಲ್ಲಿ ಮಂಗಳೂರು ಪೊಲೀಸರು ತೋರಿದ ಕಾರ್ಯಕ್ಷಮತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ನೌಷಾದ್ ಅವರು ರಷೀದ್ ಮಲಬಾರಿ ಎಂಬ ಛೋಟಾ ಶಕೀಲ್‍ನ ಸಹವರ್ತಿಯ ವಕೀಲರಾಗಿದ್ದುದರಿಂದ ಅವರ ಮರ್ಡರ್ ನಡೆದಿತ್ತು. ಇದೇ ನೌಷಾದ್ ಒಬ್ಬ ಪ್ರಸಿದ್ಧ ಮಾನವಹಕ್ಕು ವಕೀಲರಾಗಿಯೂ ಹೆಸರು ಮಾಡಿದ್ದರು. ಸಹಜವಾಗಿ ಪೊಲೀಸರು ಇಂಥವರ ವಿರುದ್ಧ ಇರುತ್ತಾರೆ. ಆದರೆ, ಮಂಗಳೂರಿನ ಅಧಿಕಾರಿಗಳ ತಂಡ ಬೆನ್ನುಬಿದ್ದು ಕೊಲೆಗಾರರನ್ನು ಹಿಡಿದರು. ದಿನೇಶ್ ಮತ್ತಿತರರೇ ಕೊಲೆಗಾರರು ಎಂಬುದು ಕಾಲ್ ರೆಕಾಡ್ರ್ಸ್ ಮತ್ತು ಲೊಕೇಶನ್ ವಿವರಗಳಿಂದ ಶೇ.99ರಷ್ಟು ಖಚಿತವಾದ ಮೇಲೆ ಬೆಂಗಳೂರಿಗೆ ಹೋಗಿ ಹಿಡಿದು ತಂದಿದ್ದಷ್ಟೇ ವೆಂಕಟೇಶ್ ಪ್ರಸನ್ನ. ಹಾಗೆ ನೋಡಿದರೆ ಭೂಗತ ಲೋಕದ ಜೊತೆಗೆ ನಂಟು ಹೊಂದಿರುವ ಇಂತಹ ಅಧಿಕಾರಿಗಳು ಬಹಳ ಚುರುಕಾಗಿಯೂ ಇರುತ್ತಾರೆ. ತಮ್ಮದೇ ಸಂಪರ್ಕ ಬಳಸಿ ಕೆಲವು ಕೇಸುಗಳನ್ನು ಸುಲಭದಲ್ಲಿ ಬಗೆಹರಿಸುತ್ತಾರೆ. ಇನ್ನೆಷ್ಟೋ ಕೇಸುಗಳಲ್ಲಿ ಬರೀ ಡೀಲ್‍ಗಳು ಆಗುತ್ತವೆ.

ಇಂತಹ ವೆಂಕಟೇಶ್ ಪ್ರಸನ್ನ ಇದೀಗ ಬೆಂಗಳೂರಿನಲ್ಲಿ ಎಸಿಪಿ ಮತ್ತು ಭೂಗತ ಪಾತಕಿ ರವಿ ಪೂಜಾರಿಯ ಮಾಹಿತಿದಾರ ಎಂಬ ಸುದ್ದಿ ಪತ್ರಿಕೆಗಳಲ್ಲಿ ರಾರಾಜಿಸುತ್ತಿದೆ. ಸ್ವತಃ ಪೊಲೀಸ್ ಕಮೀಷನರ್ ಭಾಸ್ಕರರಾವ್ ಈ ಕುರಿತು ಡಿಜಿ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದು ಇಲಾಖಾ ವಿಚಾರಣೆ ಆರಂಭವಾಗಿದೆ. ಪೊಲೀಸ್ ಇಲಾಖೆಯಲ್ಲಿ ನಡೆಯುತ್ತಿದ್ದ ಬೆಳವಣಿಗೆಗಳನ್ನು ವೆಂಕಟೇಶ್ ಪ್ರಸನ್ನ ರವಿ ಪೂಜಾರಿಗೆ ತಿಳಿಸುತ್ತಿದ್ದರು ಎಂಬುದು ಹೊಸ ಆರೋಪ. 2016ರಲ್ಲಿ ಬೆಂಗಳೂರಿಗೆ ಬಂದಿದ್ದ ವೆಂಕಟೇಶ್ ಕುರಿತು ಆಂಬಿಡೆಂಟ್ ಪ್ರಕರಣದಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು.

ಇದೇ ಕಾರಣಕ್ಕೆ ಸಿಸಿಬಿಯಿಂದ ವಿವಿಐಪಿ ಭದ್ರತಾ ವಿಭಾಗಕ್ಕೆ ವರ್ಗಾವಣೆಯಾಗಿದ್ದ ಅವರು ಮತ್ತೆ ಸಿಸಿಬಿಗೇ ಬಂದಿದ್ದರು. ಈಗ ಮತ್ತೊಮ್ಮೆ ಅದೇ ವಿಭಾಗಕ್ಕೆ ವರ್ಗಾವಣೆಯಾಗಿದ್ದಾರೆ. ಅಂದರೆ ರವಿ ಪೂಜಾರಿಯಂತಹ, ಕರ್ನಾಟಕವೊಂದರಲ್ಲೇ 97 ಪ್ರಕರಣದಲ್ಲಿ ಆರೋಪಿಯಾಗಿರುವ ಆರೋಪಿಯ ಜೊತೆಗೆ ಸಖ್ಯ ಇದೆ ಎನ್ನುವ ಅಧಿಕಾರಿಗೆ ವಿವಿಐಪಿ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಿದರೆ ಸಾಕೇ ಎನ್ನುವುದನ್ನು ಇಲಾಖೆಯೇ ಉತ್ತರಿಸಬೇಕಿದೆ.

ದುರಂತವೆಂದರೆ ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಯಲ್ಲಿ ‘ವಿಶೇಷ ಸ್ಥಾನ’ಗಳನ್ನು ಪಡೆದಿರುತ್ತಾರೆ. ಅವರ ‘ಕನೆಕ್ಷನ್’ಗಳು ಹಿರಿಯ ಅಧಿಕಾರಿಗಳಿಗೂ ಬೇಕಿರುತ್ತವೆ. ಎಲ್ಲವನ್ನೂ ಅಧಿಕೃತ ಮಾರ್ಗಗಳಿಂದಲೇ ಮಾಡಲಾಗದಾಗ ಅವರು ಇಂಥವರನ್ನೂ ಬಳಸುತ್ತಾರೆ. ನೋಡುನೋಡುತ್ತಲೇ ಇವರುಗಳು ಸೂಪರ್‍ಕಾಪ್‍ಗಳೆಂಬ ಬಿರುದುಗಳನ್ನೂ ಪಡೆದುಕೊಂಡಿರುತ್ತಾರೆ. ಪೊಲೀಸ್ ಇಲಾಖೆ, ಕಳ್ಳದಂಧೆಗಳು, ಕೊಲೆಗಡುಕ ಮಾಫಿಯಾಗಳು ಇವೆಲ್ಲವೂ ಎಂದೆಂದೂ ಇರುವಂಥವೇ ಮತ್ತು ಅವುಗಳ ಬಗ್ಗೆ ಕ್ರೈಮ್ ಸುದ್ದಿ ಮಾಡುವವರು ಬರೆಯುತ್ತಾ ಅವನ್ನು ರೋಚಕಗೊಳಿಸುತ್ತಾ ಹೋಗುವುದೂ ಇಂದಿನ ನಾರ್ಮೆಲ್ಸಿ ಎಂದಾಗಿಬಿಟ್ಟಿದೆ. ಇವುಗಳ ಹಿಂದೆ ಕರಾಳಲೋಕದ ಆಟಗಳು ಸಾಕಷ್ಟಿರುತ್ತದೆ; ಯಾರ್ಯಾರದ್ದೋ ಬದುಕುಗಳು ಮುರುಟಿ ಹೋಗುತ್ತವೆ ಎಂಬುದು ‘ಸಭ್ಯಲೋಕ’ವಾದ ಪೊಲೀಸ್ ಇಲಾಖೆ ಮತ್ತು ಪತ್ರಿಕೋದ್ಯಮಗಳಿಗೂ ಬೇಡವಾಗಿಬಿಟ್ಟರೆ ಅಲ್ಲಿಗೆ ಎಲ್ಲವೂ ಆಟ ಮಾತ್ರವೇ ಆಗಿಬಿಡುತ್ತದೆ. ಎನ್‍ಕೌಂಟರ್ ಸ್ಪೆಷಲಿಸ್ಟುಗಳು ಕೆಲವೊಮ್ಮೆ ದಂಧೆಗಳನ್ನೂ ನಡೆಸುತ್ತಿರುತ್ತಾರೆ. ಅವರನ್ನು ತೆಗಳುವ ಮತ್ತು ಹೊಗಳುವ ಎರಡೂ ಬಗೆಯ ಪತ್ರಕರ್ತರೂ ಇರುತ್ತಾರೆ. ಈ ದುರಂತವನ್ನು ಬಿಚ್ಚಿಡಲು ಹೋಗುವವರು ನೂರು ಸಾರಿ ಯೋಚಿಸುವ ವಾತಾವರಣವಿದೆ.

ಇವೆಲ್ಲಕ್ಕೂ ಮಿಗಿಲಾದ ಅಪಾಯವಿರುವುದು ಸದರಿ ಪೊಲೀಸ್ ಅಧಿಕಾರಿಗಳು ಕಮ್ಯುನಲ್ ಮಾಫಿಯಾದ ಭಾಗವಾಗುವುದು. ಸರ್ಕಾರವೂ ಅದಕ್ಕೆ ಪೂರಕವಾಗಿಬಿಟ್ಟರೆ ಕಥೆ ಮುಗಿದಂತೆಯೇ. ವೆಂಕಟೇಶ್ ಪ್ರಸನ್ನರ ಲಿಂಕುಗಳು ಈ ರೀತಿ ಹಲವು ಎಳೆಗಳನ್ನು ತೋರುತ್ತಿವೆ. ಒಂದೇ ಪತ್ರಿಕೆಯ ಬಾಕ್ಸ್ ಐಟಮ್ಮಿನಲ್ಲಿ ಅವರ ಪರವಾದ ಸುದ್ದಿಯೂ, ಮುಖ್ಯ ಭಾಗದಲ್ಲಿ ಅವರ ಕರಾಳ ಮುಖವನ್ನು ತೋರುವ ಸುದ್ದಿ ಬರಲು ಈ ಸಿಕ್ಕುಗಳೂ ಕಾರಣವಾಗಿದೆ. ಇಲಾಖೆಯಲ್ಲಿ ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳು ಇಂಥವು ಬೆಳೆಯಲು ಬಿಡದಿದ್ದರೆ ಮಾತ್ರ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...