Homeಮುಖಪುಟಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

- Advertisement -
- Advertisement -

ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ ಖುಲಾಸೆಗೊಂಡಿರುವ ವ್ಯಕ್ತಿಗಳಲ್ಲಿ ಒಬ್ಬರಾದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ಅವರ ಸಮಾಧಿ ಮುಂದೆ ಸಂಬಂಧಿಕರು ಬಾಂಬೆ ಹೈಕೋರ್ಟ್ ಆದೇಶವನ್ನು ಓದಿರುವ ಅಪರೂಪದ ಘಟನೆ ಭಾನುವಾರ (ಆ.31) ನಾಗ್ಪುರದ ಜರಿಪಟ್ಕಾ ಕಬ್ರಸ್ತಾನದಲ್ಲಿ ನಡೆದಿದೆ.

2006ರ ಮುಂಬೈ ರೈಲು ಸ್ಪೋಟ ಪ್ರಕರಣದ ಎಲ್ಲಾ ಆರೋಪಿಗಳನ್ನು 2025ರ ಜುಲೈ 21ರಂದು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಈ ಪ್ರಕರಣದಲ್ಲಿ ಬಂಧಿತರಾಗಿದ್ದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ನಾಲ್ಕು ವರ್ಷಗಳ ಮುಂಚೆ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

2006ರ ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ, ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ (ಮೋಕಾ) ಸ್ಥಾಪನೆಗೊಂಡಿದ್ದ ವಿಶೇಷ ನ್ಯಾಯಾಲಯವು 12 ಮುಸ್ಲಿಂ ಪುರುಷರನ್ನು ದೋಷಿಗಳೆಂದು 2015ರಲ್ಲಿ ಘೋಷಿಸಿತ್ತು. ಕಮಲ್ ಅಹ್ಮದ್ ಸೇರಿದಂತೆ ಐವರಿಗೆ ಮರಣದಂಡನೆ ಘೋಷಣೆ ಮಾಡಿತ್ತು.

ಆದರೆ, ಜುಲೈ 21, 2025ರಂದು ಪ್ರಕರಣದ ಎಲ್ಲಾ ಅಪರಾಧಿಗಳನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ‘ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಕೋರ್ಟ್ ಹೇಳಿದೆ. ಮೋಕಾ ನ್ಯಾಯಾಲಯದ ಮರಣದಂಡನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವಾಗಲೇ ಕಮಲ್ ಅಹ್ಮದ್ ಜೈಲಿನಲ್ಲಿ ಕೊನೆಯುಸಿರೆಳೆದಿದ್ದರು.

‘ಇನ್ನೋಸೆನ್ಸ್ ನೆಟ್‌ವರ್ಕ್‌’ನ ಪ್ರಧಾನ ಕಾರ್ಯದರ್ಶಿ ಡಾ. ಅಬ್ದುಲ್ ವಾಹಿದ್ ಶೇಖ್ ಮತ್ತು ಜಮಿಯತ್-ಎ-ಉಲಮಾ ನಾಗ್ಪುರದ ಅಧ್ಯಕ್ಷ ಖಾರಿ ಸಬೀರ್ ನೇತೃತ್ವದಲ್ಲಿ, ದೆಹಲಿಯ ಕಮಲ್ ಅಹ್ಮದ್ ಅವರ ಕಿರಿಯ ಸಹೋದರ ಜಮಾಲ್ ಅಹ್ಮದ್ ಅನ್ಸಾರಿ, ಕುಟುಂಬ ಸದಸ್ಯರು, ಹೋರಾಟಗಾರರು ಮತ್ತು ಸಮುದಾಯದ ಮುಖಂಡರ ನಿಯೋಗ ಭಾನುವಾರ ಕಮಲ್ ಅಹ್ಮದ್ ಅವರ ಸಮಾಧಿಗೆ ಭೇಟಿ ನೀಡಿದೆ.

ಸಮಾಧಿಯ ಪಕ್ಕದಲ್ಲಿ ನಿಂತು, ಜುಲೈ 21, 2025ರಂದು ಬಾಂಬೆ ಹೈಕೋರ್ಟ್ ಕಮಲ್ ಅಹ್ಮದ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ತೀರ್ಪನ್ನು ಗಟ್ಟಿಯಾಗಿ ಓದಿದ್ದಾರೆ. ಈ ಮೂಲಕ ‘ನಾನು ನಿರಪರಾಧಿ’ ಎಂದು ಕಮಲ್ ಅಹ್ಮದ್ ಯಾವಾಗಳೂ ಹೇಳುತ್ತಿದ್ದ ಮಾತನ್ನು ಸಾರ್ವಜನಿಕವಾಗಿ ದೃಢೀಕರಿಸಲಾಗಿದೆ ಎಂದು maktoobmedia.com ವರದಿ ಹೇಳಿದೆ.

ಬಿಹಾರದ ಮಧುಬನಿಯ ಬಡ ದಿನಗೂಲಿ ಕಾರ್ಮಿಕ ಕಮಲ್ ಅಹ್ಮದ್, ಒಂದು ಸಣ್ಣ ಕೋಳಿ ಅಂಗಡಿಯನ್ನು ನಡೆಸುತ್ತಿದ್ದರು, ತರಕಾರಿಗಳನ್ನು ಮಾರುತ್ತಿದ್ದರು ಮತ್ತು ತಮ್ಮ ಪತ್ನಿ ಮತ್ತು ಐವರು ಮಕ್ಕಳನ್ನು ಸಾಕಲು ಹೆಣಗಾಡುತ್ತಿದ್ದರು. ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ಅವರನ್ನು ಬಂಧಿಸಿ, ‘ಭಯೋತ್ಪಾದಕ’ ಎಂದು ಹಣೆಪಟ್ಟಿ ಕಟ್ಟಿ, ಸ್ಫೋಟ ಪ್ರಕರಣದಲ್ಲಿ ಅವರ ಮೇಲೆ ಆರೋಪ ಹೊರಿಸಿದಾಗ ಅವರ ಜೀವನ ಛಿದ್ರವಾಯಿತು. 16 ವರ್ಷಗಳ ಕಾಲ, ಅವರು ಜೈಲಿನಲ್ಲಿದ್ದರು. ಅವರ ಕುಟುಂಬ ಸುಖಾಸುಮ್ಮನೆ ಕಳಂಕ ಹೊತ್ತುಕೊಂಡಿತ್ತು. ಅವರ ನೋವನ್ನು ಕೇಳುವವರೇ ಇರಲಿಲ್ಲ ಎಂದು maktoobmedia.com ವಿವರಿಸಿದೆ.

2021ರಲ್ಲಿ, ಕೋವಿಡ್-19 ಉತ್ತುಂಗದಲ್ಲಿದ್ದಾಗ, ಕಮಲ್ ಅಹ್ಮದ್ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಕಸ್ಟಡಿಯಲ್ಲಿ ನಿಧನರಾದರು. ಅವರ ಮರಣದ ನಾಲ್ಕು ವರ್ಷಗಳ ನಂತರ ಅವರು ನಿರಪರಾಧಿ ಎಂದು ನ್ಯಾಯಾಲಯ ಘೋಷಿಸಿದೆ.

“ಕಮಲ್ ಅಹ್ಮದ್ ಅವರ ಸುಂದರ ಜೀವನವನ್ನು ಕಿತ್ತುಕೊಳ್ಳಲಾಯಿತು. ಅವರ ಮಕ್ಕಳು ತಂದೆ ಇಲ್ಲದೆ ಬೆಳೆದರು. ಅವರ ಪತ್ನಿ ಅಸಹನೀಯ ಕಳಂಕದ ಹೊರೆಯನ್ನು ಹೊತ್ತುಕೊಂಡರು. ಕುಟುಂಬ ಅವಮಾನ ಎದುರಿಸಿತು. ನ್ಯಾಯಾಲಯದ ತೀರ್ಪು ಕಾನೂನು ಕ್ರಮಗಳಿಂದ ಮುಕ್ತಗೊಳಿಸಬಹುದು. ಆದರೆ, ಅವರು ಕಳೆದುಕೊಂಡ ಜೀವನದ ಅಮೂಲ್ಯ ಸಮಯವನ್ನು ಹಿಂದಿರುಗಿಸಲು ಮತ್ತು ಅವರ ಕುಟುಂಬ ಅನುಭವಿಸಿದ ನೋವಿಗೆ ಪರಿಹಾರ ಕೊಡಲು ಸಾಧ್ಯವೇ?” ಎಂದು ಡಾ. ಅಬ್ದುಲ್ ವಾಹಿದ್ ಶೇಖ್ ಪ್ರಶ್ನಿಸಿದ್ದಾರೆ.

ಒಂಬತ್ತು ವರ್ಷಗಳ ಕಾಲ ಜೈಲಿನಲ್ಲಿ ಕಳೆದ ನಂತರ, ದಶಕದ ಹಿಂದೆ ವಿಚಾರಣಾ ನ್ಯಾಯಾಲಯವು ಶೇಖ್ ಅವರನ್ನು ಖುಲಾಸೆಗೊಳಿಸಿತ್ತು. ಅಂದಿನಿಂದ, ಜೈಲು ಹಕ್ಕುಗಳ ಕಾರ್ಯಕರ್ತರಾಗಿರುವ ಶೇಖ್, ತಮ್ಮ ಸಂಘಟನೆಯಾದ ‘ಇನ್ನೋಸೆನ್ಸ್ ನೆಟ್‌ವರ್ಕ್ ಆಫ್ ಇಂಡಿಯಾ’ ಮೂಲಕ ಸುಳ್ಳು ಪ್ರಕರಣದಲ್ಲಿ ಸಿಲುಕಿದ ವ್ಯಕ್ತಿಗಳ ಬಿಡುಗಡೆಗಾಗಿ ಕೆಲಸ ಮಾಡುತ್ತಿದೆ.

ಕಮಲ್ ಅಹ್ಮದ್ ಅವರ ಸಮಾಧಿ ಮುಂದೆ ಭಾನುವಾರ ಪ್ರಾರ್ಥನೆ, ಭಾಷಣ ನಡೆಯಿತು. ನಮ್ಮ ವ್ಯವಸ್ಥೆಯು ದುರ್ಬಲ ವರ್ಗದ ಜನರ ಮೇಲೆ ಪದೇ ಪದೇ ದಬ್ಬಾಳಿಕೆ ನಡೆಸುತ್ತಿದೆ. ಬಡವರನ್ನು ಅಪರಾಧಿಗಳೆಂದು ಪರಿಗಣಿಸುತ್ತಿದೆ. ಭಾರತದಲ್ಲಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ಕಾನೂನನ್ನು ಅಸ್ತ್ರವಾಗಿ ಬಳಸಲಾಗುತ್ತಿದೆ ಎಂದು ಭಾಗವಹಿಸಿದ್ದವರು ಹೇಳಿದರು ಎಂದು maktoobmedia.com ವರದಿ ಮಾಡಿದೆ.

‘ಶಿಕ್ಷಣ ನಿಧಿ’ ಬಿಡುಗಡೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ: ಸಂಸದ ಸಸಿಕಾಂತ್ ಸೆಂಥಿಲ್ ಆಸ್ಪತ್ರೆಗೆ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...