Homeಮುಖಪುಟಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

- Advertisement -
- Advertisement -

ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ ಖುಲಾಸೆಗೊಂಡಿರುವ ವ್ಯಕ್ತಿಗಳಲ್ಲಿ ಒಬ್ಬರಾದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ಅವರ ಸಮಾಧಿ ಮುಂದೆ ಸಂಬಂಧಿಕರು ಬಾಂಬೆ ಹೈಕೋರ್ಟ್ ಆದೇಶವನ್ನು ಓದಿರುವ ಅಪರೂಪದ ಘಟನೆ ಭಾನುವಾರ (ಆ.31) ನಾಗ್ಪುರದ ಜರಿಪಟ್ಕಾ ಕಬ್ರಸ್ತಾನದಲ್ಲಿ ನಡೆದಿದೆ.

2006ರ ಮುಂಬೈ ರೈಲು ಸ್ಪೋಟ ಪ್ರಕರಣದ ಎಲ್ಲಾ ಆರೋಪಿಗಳನ್ನು 2025ರ ಜುಲೈ 21ರಂದು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಈ ಪ್ರಕರಣದಲ್ಲಿ ಬಂಧಿತರಾಗಿದ್ದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ನಾಲ್ಕು ವರ್ಷಗಳ ಮುಂಚೆ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

2006ರ ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ, ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ (ಮೋಕಾ) ಸ್ಥಾಪನೆಗೊಂಡಿದ್ದ ವಿಶೇಷ ನ್ಯಾಯಾಲಯವು 12 ಮುಸ್ಲಿಂ ಪುರುಷರನ್ನು ದೋಷಿಗಳೆಂದು 2015ರಲ್ಲಿ ಘೋಷಿಸಿತ್ತು. ಕಮಲ್ ಅಹ್ಮದ್ ಸೇರಿದಂತೆ ಐವರಿಗೆ ಮರಣದಂಡನೆ ಘೋಷಣೆ ಮಾಡಿತ್ತು.

ಆದರೆ, ಜುಲೈ 21, 2025ರಂದು ಪ್ರಕರಣದ ಎಲ್ಲಾ ಅಪರಾಧಿಗಳನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ‘ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಕೋರ್ಟ್ ಹೇಳಿದೆ. ಮೋಕಾ ನ್ಯಾಯಾಲಯದ ಮರಣದಂಡನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವಾಗಲೇ ಕಮಲ್ ಅಹ್ಮದ್ ಜೈಲಿನಲ್ಲಿ ಕೊನೆಯುಸಿರೆಳೆದಿದ್ದರು.

‘ಇನ್ನೋಸೆನ್ಸ್ ನೆಟ್‌ವರ್ಕ್‌’ನ ಪ್ರಧಾನ ಕಾರ್ಯದರ್ಶಿ ಡಾ. ಅಬ್ದುಲ್ ವಾಹಿದ್ ಶೇಖ್ ಮತ್ತು ಜಮಿಯತ್-ಎ-ಉಲಮಾ ನಾಗ್ಪುರದ ಅಧ್ಯಕ್ಷ ಖಾರಿ ಸಬೀರ್ ನೇತೃತ್ವದಲ್ಲಿ, ದೆಹಲಿಯ ಕಮಲ್ ಅಹ್ಮದ್ ಅವರ ಕಿರಿಯ ಸಹೋದರ ಜಮಾಲ್ ಅಹ್ಮದ್ ಅನ್ಸಾರಿ, ಕುಟುಂಬ ಸದಸ್ಯರು, ಹೋರಾಟಗಾರರು ಮತ್ತು ಸಮುದಾಯದ ಮುಖಂಡರ ನಿಯೋಗ ಭಾನುವಾರ ಕಮಲ್ ಅಹ್ಮದ್ ಅವರ ಸಮಾಧಿಗೆ ಭೇಟಿ ನೀಡಿದೆ.

ಸಮಾಧಿಯ ಪಕ್ಕದಲ್ಲಿ ನಿಂತು, ಜುಲೈ 21, 2025ರಂದು ಬಾಂಬೆ ಹೈಕೋರ್ಟ್ ಕಮಲ್ ಅಹ್ಮದ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ತೀರ್ಪನ್ನು ಗಟ್ಟಿಯಾಗಿ ಓದಿದ್ದಾರೆ. ಈ ಮೂಲಕ ‘ನಾನು ನಿರಪರಾಧಿ’ ಎಂದು ಕಮಲ್ ಅಹ್ಮದ್ ಯಾವಾಗಳೂ ಹೇಳುತ್ತಿದ್ದ ಮಾತನ್ನು ಸಾರ್ವಜನಿಕವಾಗಿ ದೃಢೀಕರಿಸಲಾಗಿದೆ ಎಂದು maktoobmedia.com ವರದಿ ಹೇಳಿದೆ.

ಬಿಹಾರದ ಮಧುಬನಿಯ ಬಡ ದಿನಗೂಲಿ ಕಾರ್ಮಿಕ ಕಮಲ್ ಅಹ್ಮದ್, ಒಂದು ಸಣ್ಣ ಕೋಳಿ ಅಂಗಡಿಯನ್ನು ನಡೆಸುತ್ತಿದ್ದರು, ತರಕಾರಿಗಳನ್ನು ಮಾರುತ್ತಿದ್ದರು ಮತ್ತು ತಮ್ಮ ಪತ್ನಿ ಮತ್ತು ಐವರು ಮಕ್ಕಳನ್ನು ಸಾಕಲು ಹೆಣಗಾಡುತ್ತಿದ್ದರು. ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ಅವರನ್ನು ಬಂಧಿಸಿ, ‘ಭಯೋತ್ಪಾದಕ’ ಎಂದು ಹಣೆಪಟ್ಟಿ ಕಟ್ಟಿ, ಸ್ಫೋಟ ಪ್ರಕರಣದಲ್ಲಿ ಅವರ ಮೇಲೆ ಆರೋಪ ಹೊರಿಸಿದಾಗ ಅವರ ಜೀವನ ಛಿದ್ರವಾಯಿತು. 16 ವರ್ಷಗಳ ಕಾಲ, ಅವರು ಜೈಲಿನಲ್ಲಿದ್ದರು. ಅವರ ಕುಟುಂಬ ಸುಖಾಸುಮ್ಮನೆ ಕಳಂಕ ಹೊತ್ತುಕೊಂಡಿತ್ತು. ಅವರ ನೋವನ್ನು ಕೇಳುವವರೇ ಇರಲಿಲ್ಲ ಎಂದು maktoobmedia.com ವಿವರಿಸಿದೆ.

2021ರಲ್ಲಿ, ಕೋವಿಡ್-19 ಉತ್ತುಂಗದಲ್ಲಿದ್ದಾಗ, ಕಮಲ್ ಅಹ್ಮದ್ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಕಸ್ಟಡಿಯಲ್ಲಿ ನಿಧನರಾದರು. ಅವರ ಮರಣದ ನಾಲ್ಕು ವರ್ಷಗಳ ನಂತರ ಅವರು ನಿರಪರಾಧಿ ಎಂದು ನ್ಯಾಯಾಲಯ ಘೋಷಿಸಿದೆ.

“ಕಮಲ್ ಅಹ್ಮದ್ ಅವರ ಸುಂದರ ಜೀವನವನ್ನು ಕಿತ್ತುಕೊಳ್ಳಲಾಯಿತು. ಅವರ ಮಕ್ಕಳು ತಂದೆ ಇಲ್ಲದೆ ಬೆಳೆದರು. ಅವರ ಪತ್ನಿ ಅಸಹನೀಯ ಕಳಂಕದ ಹೊರೆಯನ್ನು ಹೊತ್ತುಕೊಂಡರು. ಕುಟುಂಬ ಅವಮಾನ ಎದುರಿಸಿತು. ನ್ಯಾಯಾಲಯದ ತೀರ್ಪು ಕಾನೂನು ಕ್ರಮಗಳಿಂದ ಮುಕ್ತಗೊಳಿಸಬಹುದು. ಆದರೆ, ಅವರು ಕಳೆದುಕೊಂಡ ಜೀವನದ ಅಮೂಲ್ಯ ಸಮಯವನ್ನು ಹಿಂದಿರುಗಿಸಲು ಮತ್ತು ಅವರ ಕುಟುಂಬ ಅನುಭವಿಸಿದ ನೋವಿಗೆ ಪರಿಹಾರ ಕೊಡಲು ಸಾಧ್ಯವೇ?” ಎಂದು ಡಾ. ಅಬ್ದುಲ್ ವಾಹಿದ್ ಶೇಖ್ ಪ್ರಶ್ನಿಸಿದ್ದಾರೆ.

ಒಂಬತ್ತು ವರ್ಷಗಳ ಕಾಲ ಜೈಲಿನಲ್ಲಿ ಕಳೆದ ನಂತರ, ದಶಕದ ಹಿಂದೆ ವಿಚಾರಣಾ ನ್ಯಾಯಾಲಯವು ಶೇಖ್ ಅವರನ್ನು ಖುಲಾಸೆಗೊಳಿಸಿತ್ತು. ಅಂದಿನಿಂದ, ಜೈಲು ಹಕ್ಕುಗಳ ಕಾರ್ಯಕರ್ತರಾಗಿರುವ ಶೇಖ್, ತಮ್ಮ ಸಂಘಟನೆಯಾದ ‘ಇನ್ನೋಸೆನ್ಸ್ ನೆಟ್‌ವರ್ಕ್ ಆಫ್ ಇಂಡಿಯಾ’ ಮೂಲಕ ಸುಳ್ಳು ಪ್ರಕರಣದಲ್ಲಿ ಸಿಲುಕಿದ ವ್ಯಕ್ತಿಗಳ ಬಿಡುಗಡೆಗಾಗಿ ಕೆಲಸ ಮಾಡುತ್ತಿದೆ.

ಕಮಲ್ ಅಹ್ಮದ್ ಅವರ ಸಮಾಧಿ ಮುಂದೆ ಭಾನುವಾರ ಪ್ರಾರ್ಥನೆ, ಭಾಷಣ ನಡೆಯಿತು. ನಮ್ಮ ವ್ಯವಸ್ಥೆಯು ದುರ್ಬಲ ವರ್ಗದ ಜನರ ಮೇಲೆ ಪದೇ ಪದೇ ದಬ್ಬಾಳಿಕೆ ನಡೆಸುತ್ತಿದೆ. ಬಡವರನ್ನು ಅಪರಾಧಿಗಳೆಂದು ಪರಿಗಣಿಸುತ್ತಿದೆ. ಭಾರತದಲ್ಲಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ಕಾನೂನನ್ನು ಅಸ್ತ್ರವಾಗಿ ಬಳಸಲಾಗುತ್ತಿದೆ ಎಂದು ಭಾಗವಹಿಸಿದ್ದವರು ಹೇಳಿದರು ಎಂದು maktoobmedia.com ವರದಿ ಮಾಡಿದೆ.

‘ಶಿಕ್ಷಣ ನಿಧಿ’ ಬಿಡುಗಡೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ: ಸಂಸದ ಸಸಿಕಾಂತ್ ಸೆಂಥಿಲ್ ಆಸ್ಪತ್ರೆಗೆ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...