Homeಮುಖಪುಟಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

- Advertisement -
- Advertisement -

ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ ಖುಲಾಸೆಗೊಂಡಿರುವ ವ್ಯಕ್ತಿಗಳಲ್ಲಿ ಒಬ್ಬರಾದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ಅವರ ಸಮಾಧಿ ಮುಂದೆ ಸಂಬಂಧಿಕರು ಬಾಂಬೆ ಹೈಕೋರ್ಟ್ ಆದೇಶವನ್ನು ಓದಿರುವ ಅಪರೂಪದ ಘಟನೆ ಭಾನುವಾರ (ಆ.31) ನಾಗ್ಪುರದ ಜರಿಪಟ್ಕಾ ಕಬ್ರಸ್ತಾನದಲ್ಲಿ ನಡೆದಿದೆ.

2006ರ ಮುಂಬೈ ರೈಲು ಸ್ಪೋಟ ಪ್ರಕರಣದ ಎಲ್ಲಾ ಆರೋಪಿಗಳನ್ನು 2025ರ ಜುಲೈ 21ರಂದು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಈ ಪ್ರಕರಣದಲ್ಲಿ ಬಂಧಿತರಾಗಿದ್ದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ನಾಲ್ಕು ವರ್ಷಗಳ ಮುಂಚೆ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

2006ರ ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ, ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ (ಮೋಕಾ) ಸ್ಥಾಪನೆಗೊಂಡಿದ್ದ ವಿಶೇಷ ನ್ಯಾಯಾಲಯವು 12 ಮುಸ್ಲಿಂ ಪುರುಷರನ್ನು ದೋಷಿಗಳೆಂದು 2015ರಲ್ಲಿ ಘೋಷಿಸಿತ್ತು. ಕಮಲ್ ಅಹ್ಮದ್ ಸೇರಿದಂತೆ ಐವರಿಗೆ ಮರಣದಂಡನೆ ಘೋಷಣೆ ಮಾಡಿತ್ತು.

ಆದರೆ, ಜುಲೈ 21, 2025ರಂದು ಪ್ರಕರಣದ ಎಲ್ಲಾ ಅಪರಾಧಿಗಳನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ‘ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಕೋರ್ಟ್ ಹೇಳಿದೆ. ಮೋಕಾ ನ್ಯಾಯಾಲಯದ ಮರಣದಂಡನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವಾಗಲೇ ಕಮಲ್ ಅಹ್ಮದ್ ಜೈಲಿನಲ್ಲಿ ಕೊನೆಯುಸಿರೆಳೆದಿದ್ದರು.

‘ಇನ್ನೋಸೆನ್ಸ್ ನೆಟ್‌ವರ್ಕ್‌’ನ ಪ್ರಧಾನ ಕಾರ್ಯದರ್ಶಿ ಡಾ. ಅಬ್ದುಲ್ ವಾಹಿದ್ ಶೇಖ್ ಮತ್ತು ಜಮಿಯತ್-ಎ-ಉಲಮಾ ನಾಗ್ಪುರದ ಅಧ್ಯಕ್ಷ ಖಾರಿ ಸಬೀರ್ ನೇತೃತ್ವದಲ್ಲಿ, ದೆಹಲಿಯ ಕಮಲ್ ಅಹ್ಮದ್ ಅವರ ಕಿರಿಯ ಸಹೋದರ ಜಮಾಲ್ ಅಹ್ಮದ್ ಅನ್ಸಾರಿ, ಕುಟುಂಬ ಸದಸ್ಯರು, ಹೋರಾಟಗಾರರು ಮತ್ತು ಸಮುದಾಯದ ಮುಖಂಡರ ನಿಯೋಗ ಭಾನುವಾರ ಕಮಲ್ ಅಹ್ಮದ್ ಅವರ ಸಮಾಧಿಗೆ ಭೇಟಿ ನೀಡಿದೆ.

ಸಮಾಧಿಯ ಪಕ್ಕದಲ್ಲಿ ನಿಂತು, ಜುಲೈ 21, 2025ರಂದು ಬಾಂಬೆ ಹೈಕೋರ್ಟ್ ಕಮಲ್ ಅಹ್ಮದ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ತೀರ್ಪನ್ನು ಗಟ್ಟಿಯಾಗಿ ಓದಿದ್ದಾರೆ. ಈ ಮೂಲಕ ‘ನಾನು ನಿರಪರಾಧಿ’ ಎಂದು ಕಮಲ್ ಅಹ್ಮದ್ ಯಾವಾಗಳೂ ಹೇಳುತ್ತಿದ್ದ ಮಾತನ್ನು ಸಾರ್ವಜನಿಕವಾಗಿ ದೃಢೀಕರಿಸಲಾಗಿದೆ ಎಂದು maktoobmedia.com ವರದಿ ಹೇಳಿದೆ.

ಬಿಹಾರದ ಮಧುಬನಿಯ ಬಡ ದಿನಗೂಲಿ ಕಾರ್ಮಿಕ ಕಮಲ್ ಅಹ್ಮದ್, ಒಂದು ಸಣ್ಣ ಕೋಳಿ ಅಂಗಡಿಯನ್ನು ನಡೆಸುತ್ತಿದ್ದರು, ತರಕಾರಿಗಳನ್ನು ಮಾರುತ್ತಿದ್ದರು ಮತ್ತು ತಮ್ಮ ಪತ್ನಿ ಮತ್ತು ಐವರು ಮಕ್ಕಳನ್ನು ಸಾಕಲು ಹೆಣಗಾಡುತ್ತಿದ್ದರು. ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ಅವರನ್ನು ಬಂಧಿಸಿ, ‘ಭಯೋತ್ಪಾದಕ’ ಎಂದು ಹಣೆಪಟ್ಟಿ ಕಟ್ಟಿ, ಸ್ಫೋಟ ಪ್ರಕರಣದಲ್ಲಿ ಅವರ ಮೇಲೆ ಆರೋಪ ಹೊರಿಸಿದಾಗ ಅವರ ಜೀವನ ಛಿದ್ರವಾಯಿತು. 16 ವರ್ಷಗಳ ಕಾಲ, ಅವರು ಜೈಲಿನಲ್ಲಿದ್ದರು. ಅವರ ಕುಟುಂಬ ಸುಖಾಸುಮ್ಮನೆ ಕಳಂಕ ಹೊತ್ತುಕೊಂಡಿತ್ತು. ಅವರ ನೋವನ್ನು ಕೇಳುವವರೇ ಇರಲಿಲ್ಲ ಎಂದು maktoobmedia.com ವಿವರಿಸಿದೆ.

2021ರಲ್ಲಿ, ಕೋವಿಡ್-19 ಉತ್ತುಂಗದಲ್ಲಿದ್ದಾಗ, ಕಮಲ್ ಅಹ್ಮದ್ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಕಸ್ಟಡಿಯಲ್ಲಿ ನಿಧನರಾದರು. ಅವರ ಮರಣದ ನಾಲ್ಕು ವರ್ಷಗಳ ನಂತರ ಅವರು ನಿರಪರಾಧಿ ಎಂದು ನ್ಯಾಯಾಲಯ ಘೋಷಿಸಿದೆ.

“ಕಮಲ್ ಅಹ್ಮದ್ ಅವರ ಸುಂದರ ಜೀವನವನ್ನು ಕಿತ್ತುಕೊಳ್ಳಲಾಯಿತು. ಅವರ ಮಕ್ಕಳು ತಂದೆ ಇಲ್ಲದೆ ಬೆಳೆದರು. ಅವರ ಪತ್ನಿ ಅಸಹನೀಯ ಕಳಂಕದ ಹೊರೆಯನ್ನು ಹೊತ್ತುಕೊಂಡರು. ಕುಟುಂಬ ಅವಮಾನ ಎದುರಿಸಿತು. ನ್ಯಾಯಾಲಯದ ತೀರ್ಪು ಕಾನೂನು ಕ್ರಮಗಳಿಂದ ಮುಕ್ತಗೊಳಿಸಬಹುದು. ಆದರೆ, ಅವರು ಕಳೆದುಕೊಂಡ ಜೀವನದ ಅಮೂಲ್ಯ ಸಮಯವನ್ನು ಹಿಂದಿರುಗಿಸಲು ಮತ್ತು ಅವರ ಕುಟುಂಬ ಅನುಭವಿಸಿದ ನೋವಿಗೆ ಪರಿಹಾರ ಕೊಡಲು ಸಾಧ್ಯವೇ?” ಎಂದು ಡಾ. ಅಬ್ದುಲ್ ವಾಹಿದ್ ಶೇಖ್ ಪ್ರಶ್ನಿಸಿದ್ದಾರೆ.

ಒಂಬತ್ತು ವರ್ಷಗಳ ಕಾಲ ಜೈಲಿನಲ್ಲಿ ಕಳೆದ ನಂತರ, ದಶಕದ ಹಿಂದೆ ವಿಚಾರಣಾ ನ್ಯಾಯಾಲಯವು ಶೇಖ್ ಅವರನ್ನು ಖುಲಾಸೆಗೊಳಿಸಿತ್ತು. ಅಂದಿನಿಂದ, ಜೈಲು ಹಕ್ಕುಗಳ ಕಾರ್ಯಕರ್ತರಾಗಿರುವ ಶೇಖ್, ತಮ್ಮ ಸಂಘಟನೆಯಾದ ‘ಇನ್ನೋಸೆನ್ಸ್ ನೆಟ್‌ವರ್ಕ್ ಆಫ್ ಇಂಡಿಯಾ’ ಮೂಲಕ ಸುಳ್ಳು ಪ್ರಕರಣದಲ್ಲಿ ಸಿಲುಕಿದ ವ್ಯಕ್ತಿಗಳ ಬಿಡುಗಡೆಗಾಗಿ ಕೆಲಸ ಮಾಡುತ್ತಿದೆ.

ಕಮಲ್ ಅಹ್ಮದ್ ಅವರ ಸಮಾಧಿ ಮುಂದೆ ಭಾನುವಾರ ಪ್ರಾರ್ಥನೆ, ಭಾಷಣ ನಡೆಯಿತು. ನಮ್ಮ ವ್ಯವಸ್ಥೆಯು ದುರ್ಬಲ ವರ್ಗದ ಜನರ ಮೇಲೆ ಪದೇ ಪದೇ ದಬ್ಬಾಳಿಕೆ ನಡೆಸುತ್ತಿದೆ. ಬಡವರನ್ನು ಅಪರಾಧಿಗಳೆಂದು ಪರಿಗಣಿಸುತ್ತಿದೆ. ಭಾರತದಲ್ಲಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ಕಾನೂನನ್ನು ಅಸ್ತ್ರವಾಗಿ ಬಳಸಲಾಗುತ್ತಿದೆ ಎಂದು ಭಾಗವಹಿಸಿದ್ದವರು ಹೇಳಿದರು ಎಂದು maktoobmedia.com ವರದಿ ಮಾಡಿದೆ.

‘ಶಿಕ್ಷಣ ನಿಧಿ’ ಬಿಡುಗಡೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ: ಸಂಸದ ಸಸಿಕಾಂತ್ ಸೆಂಥಿಲ್ ಆಸ್ಪತ್ರೆಗೆ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ....

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅನೈತಿಕ ಪೊಲೀಸ್‌ಗಿರಿ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅವರ ಗೌಪ್ಯ ದಾಖಲೆಗಳನ್ನು ಪಡೆದು ಪೌರತ್ವ ಪರಿಶೀಲಿಸುವ ಮೂಲಕ ಅನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಶುಕ್ರವಾರ (ಜ.16) ತಡರಾತ್ರಿ ಬಂಧಿಸಿದ್ದಾರೆ...

ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಮುಖಂಡರು ಆಗ್ರಹಿಸಿದರು....

ರೋಹಿತ್ ವೇಮುಲಾ 10ನೇ ಶಹಾದತ್ ದಿನ: ಜ.17ರಂದು ಹೈದರಾಬಾದ್ ವಿವಿಯಲ್ಲಿ ರೋಹಿತ್ ಕಾಯ್ದೆಯ ‘ಜನತಾ ಕರಡು’ ಅನಾವರಣ

ಹೈದರಾಬಾದ್ ಕೇಂದ್ರ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ವಾಂಸ ಮತ್ತು ಅಂಬೇಡ್ಕರ್ ವಿದ್ಯಾರ್ಥಿ ಸಂಘದ (ASA) ನಾಯಕ ರೋಹಿತ್ ವೇಮುಲ ಅವರ ಮರಣದ ಹತ್ತು ವರ್ಷಗಳ ನಂತರ, ವಿದ್ಯಾರ್ಥಿ ಗುಂಪುಗಳು ಮತ್ತು ಸಾಮಾಜಿಕ ನ್ಯಾಯ...

ಮಹಾರಾಷ್ಟ್ರವು ಪ್ರಧಾನಿ ಮೋದಿಯನ್ನು ಹೆಚ್ಚು ಅವಲಂಬಿಸಿದೆ: ಸಿಎಂ ಫಡ್ನವೀಸ್

ನಗರ ಪಾಲಿಕೆ ಚುನಾವಣೆಯಲ್ಲಿ ಮಹಾಯುತಿ ಭರ್ಜರಿ ಜಯ ಸಾಧಿಸಿದ ನಂತರ ಮಹಾರಾಷ್ಟ್ರದ ಜನರಿಗೆ ಧನ್ಯವಾದ ಅರ್ಪಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ವಿಜಯವನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರಿಗೆ ಅರ್ಪಿಸಿದರು. ರಾಜ್ಯವು ಪ್ರಧಾನಿ...

ಮೆಹುಲ್ ಚೋಕ್ಸಿ ಪುತ್ರ ಕೂಡ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ: ಜಾರಿ ನಿರ್ದೇಶನಾಲಯ

ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧದ ಹಣ ವರ್ಗಾವಣೆ ಪ್ರಕರಣದಲ್ಲಿ, ಅವರ ಮಗ ರೋಹನ್ ಚೋಕ್ಸಿ ಕೂಡ ಈ ಅಪರಾಧದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಮೊದಲ ಬಾರಿಗೆ ಹೇಳಿಕೊಂಡಿದೆ....

‘ವೋಟ್ ಚೋರಿ ಒಂದು ರಾಷ್ಟ್ರವಿರೋಧಿ ಕೃತ್ಯ..’; ಬಿಎಂಸಿ ಫಲಿತಾಂಶದ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಹಾರಾಷ್ಟ್ರ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಎಣಿಕೆ ವೇಗ ಪಡೆಯುತ್ತಿದ್ದಂತೆ, ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗವನ್ನು ಗುರಿಯಾಗಿಸಿಕೊಂಡು ತಮ್ಮ ಮೊದಲ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ....

ಪುನರಾಭಿವೃದ್ಧಿ ಹೆಸರಿನಲ್ಲಿ ಮಣಿಕರ್ಣಿಕಾ ಘಾಟ್ ಬಳಿ ದೇಗುಲಗಳ ಧ್ವಂಸ: ಮೋದಿ ವಿರುದ್ಧ ಖರ್ಗೆ ಆಕ್ರೋಶ!

ನವದೆಹಲಿ: ವಾರಣಾಸಿಯ ಮಣಿಕರ್ಣಿಕಾ ಘಾಟ್‌ನಲ್ಲಿ ಪುನರಾಭಿವೃದ್ಧಿ ಕಾರ್ಯದ ಭಾಗವಾಗಿ ಬುಲ್ಡೋಜರ್‌ಗಳನ್ನು ಏಕೆ ಓಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ. ಮತ್ತು ಐತಿಹಾಸಿಕ ಪರಂಪರೆಯ ಅನೇಕ ಸ್ಥಳಗಳನ್ನು ಈ...

ಒಡಿಶಾ| ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ನಕಲಿ ಗೋರಕ್ಷಕರು; ಐವರ ಬಂಧನ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಬುಧವಾರ (ಜ.14) ನಕಲಿ ಗೋರಕ್ಷಕರು 35 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಜಾನುವಾರುಗಳನ್ನು ಹೊತ್ತ ವ್ಯಾನ್ ನಿಲ್ಲಿಸಿ ಪ್ರಾಣಿಗಳ ಸಾಗಣೆ ಆರೋಪದ ಮೇಲೆ ಹಲ್ಲೆ ನಡೆಸಿ ಕೊಂದಿದ್ದಾರೆ. ಜಿಲ್ಲಾ ಆಸ್ಪತ್ರೆಗೆ...

ರಾಜಸ್ಥಾನ: ಬಿಜೆಪಿ ಅತಿ ಕಡಿಮೆ ಅಂತರದಿಂದ ಗೆದ್ದ ಸ್ಥಾನದಲ್ಲಿ ಮುಸ್ಲಿಂ ಮತಗಳನ್ನು ಅಳಿಸುವಂತೆ ಒತ್ತಡ: ಆತ್ಮಹತ್ಯೆ ಬೆದರಿಕೆ ಹಾಕಿದ ಬಿಎಲ್ಒ

ಜೈಪುರದ ಹವಾ ಮಹಲ್ ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಅಧಿಕಾರಿಯೊಬ್ಬರು ( ಬಿಎಲ್‌ಒ ) ನೂರಾರು ಮತದಾರರನ್ನು, ಅವರಲ್ಲಿ ಹೆಚ್ಚಿನವರು ಮುಸ್ಲಿಮರನ್ನು ಮತದಾರರ ಪಟ್ಟಿಯಿಂದ ಅಳಿಸಲು ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈ...