Homeಮುಖಪುಟಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

- Advertisement -
- Advertisement -

ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ ಖುಲಾಸೆಗೊಂಡಿರುವ ವ್ಯಕ್ತಿಗಳಲ್ಲಿ ಒಬ್ಬರಾದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ಅವರ ಸಮಾಧಿ ಮುಂದೆ ಸಂಬಂಧಿಕರು ಬಾಂಬೆ ಹೈಕೋರ್ಟ್ ಆದೇಶವನ್ನು ಓದಿರುವ ಅಪರೂಪದ ಘಟನೆ ಭಾನುವಾರ (ಆ.31) ನಾಗ್ಪುರದ ಜರಿಪಟ್ಕಾ ಕಬ್ರಸ್ತಾನದಲ್ಲಿ ನಡೆದಿದೆ.

2006ರ ಮುಂಬೈ ರೈಲು ಸ್ಪೋಟ ಪ್ರಕರಣದ ಎಲ್ಲಾ ಆರೋಪಿಗಳನ್ನು 2025ರ ಜುಲೈ 21ರಂದು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಈ ಪ್ರಕರಣದಲ್ಲಿ ಬಂಧಿತರಾಗಿದ್ದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ನಾಲ್ಕು ವರ್ಷಗಳ ಮುಂಚೆ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

2006ರ ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ, ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ (ಮೋಕಾ) ಸ್ಥಾಪನೆಗೊಂಡಿದ್ದ ವಿಶೇಷ ನ್ಯಾಯಾಲಯವು 12 ಮುಸ್ಲಿಂ ಪುರುಷರನ್ನು ದೋಷಿಗಳೆಂದು 2015ರಲ್ಲಿ ಘೋಷಿಸಿತ್ತು. ಕಮಲ್ ಅಹ್ಮದ್ ಸೇರಿದಂತೆ ಐವರಿಗೆ ಮರಣದಂಡನೆ ಘೋಷಣೆ ಮಾಡಿತ್ತು.

ಆದರೆ, ಜುಲೈ 21, 2025ರಂದು ಪ್ರಕರಣದ ಎಲ್ಲಾ ಅಪರಾಧಿಗಳನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ‘ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಕೋರ್ಟ್ ಹೇಳಿದೆ. ಮೋಕಾ ನ್ಯಾಯಾಲಯದ ಮರಣದಂಡನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವಾಗಲೇ ಕಮಲ್ ಅಹ್ಮದ್ ಜೈಲಿನಲ್ಲಿ ಕೊನೆಯುಸಿರೆಳೆದಿದ್ದರು.

‘ಇನ್ನೋಸೆನ್ಸ್ ನೆಟ್‌ವರ್ಕ್‌’ನ ಪ್ರಧಾನ ಕಾರ್ಯದರ್ಶಿ ಡಾ. ಅಬ್ದುಲ್ ವಾಹಿದ್ ಶೇಖ್ ಮತ್ತು ಜಮಿಯತ್-ಎ-ಉಲಮಾ ನಾಗ್ಪುರದ ಅಧ್ಯಕ್ಷ ಖಾರಿ ಸಬೀರ್ ನೇತೃತ್ವದಲ್ಲಿ, ದೆಹಲಿಯ ಕಮಲ್ ಅಹ್ಮದ್ ಅವರ ಕಿರಿಯ ಸಹೋದರ ಜಮಾಲ್ ಅಹ್ಮದ್ ಅನ್ಸಾರಿ, ಕುಟುಂಬ ಸದಸ್ಯರು, ಹೋರಾಟಗಾರರು ಮತ್ತು ಸಮುದಾಯದ ಮುಖಂಡರ ನಿಯೋಗ ಭಾನುವಾರ ಕಮಲ್ ಅಹ್ಮದ್ ಅವರ ಸಮಾಧಿಗೆ ಭೇಟಿ ನೀಡಿದೆ.

ಸಮಾಧಿಯ ಪಕ್ಕದಲ್ಲಿ ನಿಂತು, ಜುಲೈ 21, 2025ರಂದು ಬಾಂಬೆ ಹೈಕೋರ್ಟ್ ಕಮಲ್ ಅಹ್ಮದ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ತೀರ್ಪನ್ನು ಗಟ್ಟಿಯಾಗಿ ಓದಿದ್ದಾರೆ. ಈ ಮೂಲಕ ‘ನಾನು ನಿರಪರಾಧಿ’ ಎಂದು ಕಮಲ್ ಅಹ್ಮದ್ ಯಾವಾಗಳೂ ಹೇಳುತ್ತಿದ್ದ ಮಾತನ್ನು ಸಾರ್ವಜನಿಕವಾಗಿ ದೃಢೀಕರಿಸಲಾಗಿದೆ ಎಂದು maktoobmedia.com ವರದಿ ಹೇಳಿದೆ.

ಬಿಹಾರದ ಮಧುಬನಿಯ ಬಡ ದಿನಗೂಲಿ ಕಾರ್ಮಿಕ ಕಮಲ್ ಅಹ್ಮದ್, ಒಂದು ಸಣ್ಣ ಕೋಳಿ ಅಂಗಡಿಯನ್ನು ನಡೆಸುತ್ತಿದ್ದರು, ತರಕಾರಿಗಳನ್ನು ಮಾರುತ್ತಿದ್ದರು ಮತ್ತು ತಮ್ಮ ಪತ್ನಿ ಮತ್ತು ಐವರು ಮಕ್ಕಳನ್ನು ಸಾಕಲು ಹೆಣಗಾಡುತ್ತಿದ್ದರು. ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ಅವರನ್ನು ಬಂಧಿಸಿ, ‘ಭಯೋತ್ಪಾದಕ’ ಎಂದು ಹಣೆಪಟ್ಟಿ ಕಟ್ಟಿ, ಸ್ಫೋಟ ಪ್ರಕರಣದಲ್ಲಿ ಅವರ ಮೇಲೆ ಆರೋಪ ಹೊರಿಸಿದಾಗ ಅವರ ಜೀವನ ಛಿದ್ರವಾಯಿತು. 16 ವರ್ಷಗಳ ಕಾಲ, ಅವರು ಜೈಲಿನಲ್ಲಿದ್ದರು. ಅವರ ಕುಟುಂಬ ಸುಖಾಸುಮ್ಮನೆ ಕಳಂಕ ಹೊತ್ತುಕೊಂಡಿತ್ತು. ಅವರ ನೋವನ್ನು ಕೇಳುವವರೇ ಇರಲಿಲ್ಲ ಎಂದು maktoobmedia.com ವಿವರಿಸಿದೆ.

2021ರಲ್ಲಿ, ಕೋವಿಡ್-19 ಉತ್ತುಂಗದಲ್ಲಿದ್ದಾಗ, ಕಮಲ್ ಅಹ್ಮದ್ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಕಸ್ಟಡಿಯಲ್ಲಿ ನಿಧನರಾದರು. ಅವರ ಮರಣದ ನಾಲ್ಕು ವರ್ಷಗಳ ನಂತರ ಅವರು ನಿರಪರಾಧಿ ಎಂದು ನ್ಯಾಯಾಲಯ ಘೋಷಿಸಿದೆ.

“ಕಮಲ್ ಅಹ್ಮದ್ ಅವರ ಸುಂದರ ಜೀವನವನ್ನು ಕಿತ್ತುಕೊಳ್ಳಲಾಯಿತು. ಅವರ ಮಕ್ಕಳು ತಂದೆ ಇಲ್ಲದೆ ಬೆಳೆದರು. ಅವರ ಪತ್ನಿ ಅಸಹನೀಯ ಕಳಂಕದ ಹೊರೆಯನ್ನು ಹೊತ್ತುಕೊಂಡರು. ಕುಟುಂಬ ಅವಮಾನ ಎದುರಿಸಿತು. ನ್ಯಾಯಾಲಯದ ತೀರ್ಪು ಕಾನೂನು ಕ್ರಮಗಳಿಂದ ಮುಕ್ತಗೊಳಿಸಬಹುದು. ಆದರೆ, ಅವರು ಕಳೆದುಕೊಂಡ ಜೀವನದ ಅಮೂಲ್ಯ ಸಮಯವನ್ನು ಹಿಂದಿರುಗಿಸಲು ಮತ್ತು ಅವರ ಕುಟುಂಬ ಅನುಭವಿಸಿದ ನೋವಿಗೆ ಪರಿಹಾರ ಕೊಡಲು ಸಾಧ್ಯವೇ?” ಎಂದು ಡಾ. ಅಬ್ದುಲ್ ವಾಹಿದ್ ಶೇಖ್ ಪ್ರಶ್ನಿಸಿದ್ದಾರೆ.

ಒಂಬತ್ತು ವರ್ಷಗಳ ಕಾಲ ಜೈಲಿನಲ್ಲಿ ಕಳೆದ ನಂತರ, ದಶಕದ ಹಿಂದೆ ವಿಚಾರಣಾ ನ್ಯಾಯಾಲಯವು ಶೇಖ್ ಅವರನ್ನು ಖುಲಾಸೆಗೊಳಿಸಿತ್ತು. ಅಂದಿನಿಂದ, ಜೈಲು ಹಕ್ಕುಗಳ ಕಾರ್ಯಕರ್ತರಾಗಿರುವ ಶೇಖ್, ತಮ್ಮ ಸಂಘಟನೆಯಾದ ‘ಇನ್ನೋಸೆನ್ಸ್ ನೆಟ್‌ವರ್ಕ್ ಆಫ್ ಇಂಡಿಯಾ’ ಮೂಲಕ ಸುಳ್ಳು ಪ್ರಕರಣದಲ್ಲಿ ಸಿಲುಕಿದ ವ್ಯಕ್ತಿಗಳ ಬಿಡುಗಡೆಗಾಗಿ ಕೆಲಸ ಮಾಡುತ್ತಿದೆ.

ಕಮಲ್ ಅಹ್ಮದ್ ಅವರ ಸಮಾಧಿ ಮುಂದೆ ಭಾನುವಾರ ಪ್ರಾರ್ಥನೆ, ಭಾಷಣ ನಡೆಯಿತು. ನಮ್ಮ ವ್ಯವಸ್ಥೆಯು ದುರ್ಬಲ ವರ್ಗದ ಜನರ ಮೇಲೆ ಪದೇ ಪದೇ ದಬ್ಬಾಳಿಕೆ ನಡೆಸುತ್ತಿದೆ. ಬಡವರನ್ನು ಅಪರಾಧಿಗಳೆಂದು ಪರಿಗಣಿಸುತ್ತಿದೆ. ಭಾರತದಲ್ಲಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ಕಾನೂನನ್ನು ಅಸ್ತ್ರವಾಗಿ ಬಳಸಲಾಗುತ್ತಿದೆ ಎಂದು ಭಾಗವಹಿಸಿದ್ದವರು ಹೇಳಿದರು ಎಂದು maktoobmedia.com ವರದಿ ಮಾಡಿದೆ.

‘ಶಿಕ್ಷಣ ನಿಧಿ’ ಬಿಡುಗಡೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ: ಸಂಸದ ಸಸಿಕಾಂತ್ ಸೆಂಥಿಲ್ ಆಸ್ಪತ್ರೆಗೆ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....