Homeಮುಖಪುಟಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

- Advertisement -
- Advertisement -

ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ ಖುಲಾಸೆಗೊಂಡಿರುವ ವ್ಯಕ್ತಿಗಳಲ್ಲಿ ಒಬ್ಬರಾದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ಅವರ ಸಮಾಧಿ ಮುಂದೆ ಸಂಬಂಧಿಕರು ಬಾಂಬೆ ಹೈಕೋರ್ಟ್ ಆದೇಶವನ್ನು ಓದಿರುವ ಅಪರೂಪದ ಘಟನೆ ಭಾನುವಾರ (ಆ.31) ನಾಗ್ಪುರದ ಜರಿಪಟ್ಕಾ ಕಬ್ರಸ್ತಾನದಲ್ಲಿ ನಡೆದಿದೆ.

2006ರ ಮುಂಬೈ ರೈಲು ಸ್ಪೋಟ ಪ್ರಕರಣದ ಎಲ್ಲಾ ಆರೋಪಿಗಳನ್ನು 2025ರ ಜುಲೈ 21ರಂದು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಈ ಪ್ರಕರಣದಲ್ಲಿ ಬಂಧಿತರಾಗಿದ್ದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ನಾಲ್ಕು ವರ್ಷಗಳ ಮುಂಚೆ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

2006ರ ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ, ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ (ಮೋಕಾ) ಸ್ಥಾಪನೆಗೊಂಡಿದ್ದ ವಿಶೇಷ ನ್ಯಾಯಾಲಯವು 12 ಮುಸ್ಲಿಂ ಪುರುಷರನ್ನು ದೋಷಿಗಳೆಂದು 2015ರಲ್ಲಿ ಘೋಷಿಸಿತ್ತು. ಕಮಲ್ ಅಹ್ಮದ್ ಸೇರಿದಂತೆ ಐವರಿಗೆ ಮರಣದಂಡನೆ ಘೋಷಣೆ ಮಾಡಿತ್ತು.

ಆದರೆ, ಜುಲೈ 21, 2025ರಂದು ಪ್ರಕರಣದ ಎಲ್ಲಾ ಅಪರಾಧಿಗಳನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ‘ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಕೋರ್ಟ್ ಹೇಳಿದೆ. ಮೋಕಾ ನ್ಯಾಯಾಲಯದ ಮರಣದಂಡನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವಾಗಲೇ ಕಮಲ್ ಅಹ್ಮದ್ ಜೈಲಿನಲ್ಲಿ ಕೊನೆಯುಸಿರೆಳೆದಿದ್ದರು.

‘ಇನ್ನೋಸೆನ್ಸ್ ನೆಟ್‌ವರ್ಕ್‌’ನ ಪ್ರಧಾನ ಕಾರ್ಯದರ್ಶಿ ಡಾ. ಅಬ್ದುಲ್ ವಾಹಿದ್ ಶೇಖ್ ಮತ್ತು ಜಮಿಯತ್-ಎ-ಉಲಮಾ ನಾಗ್ಪುರದ ಅಧ್ಯಕ್ಷ ಖಾರಿ ಸಬೀರ್ ನೇತೃತ್ವದಲ್ಲಿ, ದೆಹಲಿಯ ಕಮಲ್ ಅಹ್ಮದ್ ಅವರ ಕಿರಿಯ ಸಹೋದರ ಜಮಾಲ್ ಅಹ್ಮದ್ ಅನ್ಸಾರಿ, ಕುಟುಂಬ ಸದಸ್ಯರು, ಹೋರಾಟಗಾರರು ಮತ್ತು ಸಮುದಾಯದ ಮುಖಂಡರ ನಿಯೋಗ ಭಾನುವಾರ ಕಮಲ್ ಅಹ್ಮದ್ ಅವರ ಸಮಾಧಿಗೆ ಭೇಟಿ ನೀಡಿದೆ.

ಸಮಾಧಿಯ ಪಕ್ಕದಲ್ಲಿ ನಿಂತು, ಜುಲೈ 21, 2025ರಂದು ಬಾಂಬೆ ಹೈಕೋರ್ಟ್ ಕಮಲ್ ಅಹ್ಮದ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ತೀರ್ಪನ್ನು ಗಟ್ಟಿಯಾಗಿ ಓದಿದ್ದಾರೆ. ಈ ಮೂಲಕ ‘ನಾನು ನಿರಪರಾಧಿ’ ಎಂದು ಕಮಲ್ ಅಹ್ಮದ್ ಯಾವಾಗಳೂ ಹೇಳುತ್ತಿದ್ದ ಮಾತನ್ನು ಸಾರ್ವಜನಿಕವಾಗಿ ದೃಢೀಕರಿಸಲಾಗಿದೆ ಎಂದು maktoobmedia.com ವರದಿ ಹೇಳಿದೆ.

ಬಿಹಾರದ ಮಧುಬನಿಯ ಬಡ ದಿನಗೂಲಿ ಕಾರ್ಮಿಕ ಕಮಲ್ ಅಹ್ಮದ್, ಒಂದು ಸಣ್ಣ ಕೋಳಿ ಅಂಗಡಿಯನ್ನು ನಡೆಸುತ್ತಿದ್ದರು, ತರಕಾರಿಗಳನ್ನು ಮಾರುತ್ತಿದ್ದರು ಮತ್ತು ತಮ್ಮ ಪತ್ನಿ ಮತ್ತು ಐವರು ಮಕ್ಕಳನ್ನು ಸಾಕಲು ಹೆಣಗಾಡುತ್ತಿದ್ದರು. ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ಅವರನ್ನು ಬಂಧಿಸಿ, ‘ಭಯೋತ್ಪಾದಕ’ ಎಂದು ಹಣೆಪಟ್ಟಿ ಕಟ್ಟಿ, ಸ್ಫೋಟ ಪ್ರಕರಣದಲ್ಲಿ ಅವರ ಮೇಲೆ ಆರೋಪ ಹೊರಿಸಿದಾಗ ಅವರ ಜೀವನ ಛಿದ್ರವಾಯಿತು. 16 ವರ್ಷಗಳ ಕಾಲ, ಅವರು ಜೈಲಿನಲ್ಲಿದ್ದರು. ಅವರ ಕುಟುಂಬ ಸುಖಾಸುಮ್ಮನೆ ಕಳಂಕ ಹೊತ್ತುಕೊಂಡಿತ್ತು. ಅವರ ನೋವನ್ನು ಕೇಳುವವರೇ ಇರಲಿಲ್ಲ ಎಂದು maktoobmedia.com ವಿವರಿಸಿದೆ.

2021ರಲ್ಲಿ, ಕೋವಿಡ್-19 ಉತ್ತುಂಗದಲ್ಲಿದ್ದಾಗ, ಕಮಲ್ ಅಹ್ಮದ್ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಕಸ್ಟಡಿಯಲ್ಲಿ ನಿಧನರಾದರು. ಅವರ ಮರಣದ ನಾಲ್ಕು ವರ್ಷಗಳ ನಂತರ ಅವರು ನಿರಪರಾಧಿ ಎಂದು ನ್ಯಾಯಾಲಯ ಘೋಷಿಸಿದೆ.

“ಕಮಲ್ ಅಹ್ಮದ್ ಅವರ ಸುಂದರ ಜೀವನವನ್ನು ಕಿತ್ತುಕೊಳ್ಳಲಾಯಿತು. ಅವರ ಮಕ್ಕಳು ತಂದೆ ಇಲ್ಲದೆ ಬೆಳೆದರು. ಅವರ ಪತ್ನಿ ಅಸಹನೀಯ ಕಳಂಕದ ಹೊರೆಯನ್ನು ಹೊತ್ತುಕೊಂಡರು. ಕುಟುಂಬ ಅವಮಾನ ಎದುರಿಸಿತು. ನ್ಯಾಯಾಲಯದ ತೀರ್ಪು ಕಾನೂನು ಕ್ರಮಗಳಿಂದ ಮುಕ್ತಗೊಳಿಸಬಹುದು. ಆದರೆ, ಅವರು ಕಳೆದುಕೊಂಡ ಜೀವನದ ಅಮೂಲ್ಯ ಸಮಯವನ್ನು ಹಿಂದಿರುಗಿಸಲು ಮತ್ತು ಅವರ ಕುಟುಂಬ ಅನುಭವಿಸಿದ ನೋವಿಗೆ ಪರಿಹಾರ ಕೊಡಲು ಸಾಧ್ಯವೇ?” ಎಂದು ಡಾ. ಅಬ್ದುಲ್ ವಾಹಿದ್ ಶೇಖ್ ಪ್ರಶ್ನಿಸಿದ್ದಾರೆ.

ಒಂಬತ್ತು ವರ್ಷಗಳ ಕಾಲ ಜೈಲಿನಲ್ಲಿ ಕಳೆದ ನಂತರ, ದಶಕದ ಹಿಂದೆ ವಿಚಾರಣಾ ನ್ಯಾಯಾಲಯವು ಶೇಖ್ ಅವರನ್ನು ಖುಲಾಸೆಗೊಳಿಸಿತ್ತು. ಅಂದಿನಿಂದ, ಜೈಲು ಹಕ್ಕುಗಳ ಕಾರ್ಯಕರ್ತರಾಗಿರುವ ಶೇಖ್, ತಮ್ಮ ಸಂಘಟನೆಯಾದ ‘ಇನ್ನೋಸೆನ್ಸ್ ನೆಟ್‌ವರ್ಕ್ ಆಫ್ ಇಂಡಿಯಾ’ ಮೂಲಕ ಸುಳ್ಳು ಪ್ರಕರಣದಲ್ಲಿ ಸಿಲುಕಿದ ವ್ಯಕ್ತಿಗಳ ಬಿಡುಗಡೆಗಾಗಿ ಕೆಲಸ ಮಾಡುತ್ತಿದೆ.

ಕಮಲ್ ಅಹ್ಮದ್ ಅವರ ಸಮಾಧಿ ಮುಂದೆ ಭಾನುವಾರ ಪ್ರಾರ್ಥನೆ, ಭಾಷಣ ನಡೆಯಿತು. ನಮ್ಮ ವ್ಯವಸ್ಥೆಯು ದುರ್ಬಲ ವರ್ಗದ ಜನರ ಮೇಲೆ ಪದೇ ಪದೇ ದಬ್ಬಾಳಿಕೆ ನಡೆಸುತ್ತಿದೆ. ಬಡವರನ್ನು ಅಪರಾಧಿಗಳೆಂದು ಪರಿಗಣಿಸುತ್ತಿದೆ. ಭಾರತದಲ್ಲಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ಕಾನೂನನ್ನು ಅಸ್ತ್ರವಾಗಿ ಬಳಸಲಾಗುತ್ತಿದೆ ಎಂದು ಭಾಗವಹಿಸಿದ್ದವರು ಹೇಳಿದರು ಎಂದು maktoobmedia.com ವರದಿ ಮಾಡಿದೆ.

‘ಶಿಕ್ಷಣ ನಿಧಿ’ ಬಿಡುಗಡೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ: ಸಂಸದ ಸಸಿಕಾಂತ್ ಸೆಂಥಿಲ್ ಆಸ್ಪತ್ರೆಗೆ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....