Homeಮುಖಪುಟಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

- Advertisement -
- Advertisement -

ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ ಖುಲಾಸೆಗೊಂಡಿರುವ ವ್ಯಕ್ತಿಗಳಲ್ಲಿ ಒಬ್ಬರಾದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ಅವರ ಸಮಾಧಿ ಮುಂದೆ ಸಂಬಂಧಿಕರು ಬಾಂಬೆ ಹೈಕೋರ್ಟ್ ಆದೇಶವನ್ನು ಓದಿರುವ ಅಪರೂಪದ ಘಟನೆ ಭಾನುವಾರ (ಆ.31) ನಾಗ್ಪುರದ ಜರಿಪಟ್ಕಾ ಕಬ್ರಸ್ತಾನದಲ್ಲಿ ನಡೆದಿದೆ.

2006ರ ಮುಂಬೈ ರೈಲು ಸ್ಪೋಟ ಪ್ರಕರಣದ ಎಲ್ಲಾ ಆರೋಪಿಗಳನ್ನು 2025ರ ಜುಲೈ 21ರಂದು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಈ ಪ್ರಕರಣದಲ್ಲಿ ಬಂಧಿತರಾಗಿದ್ದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ನಾಲ್ಕು ವರ್ಷಗಳ ಮುಂಚೆ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

2006ರ ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ, ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ (ಮೋಕಾ) ಸ್ಥಾಪನೆಗೊಂಡಿದ್ದ ವಿಶೇಷ ನ್ಯಾಯಾಲಯವು 12 ಮುಸ್ಲಿಂ ಪುರುಷರನ್ನು ದೋಷಿಗಳೆಂದು 2015ರಲ್ಲಿ ಘೋಷಿಸಿತ್ತು. ಕಮಲ್ ಅಹ್ಮದ್ ಸೇರಿದಂತೆ ಐವರಿಗೆ ಮರಣದಂಡನೆ ಘೋಷಣೆ ಮಾಡಿತ್ತು.

ಆದರೆ, ಜುಲೈ 21, 2025ರಂದು ಪ್ರಕರಣದ ಎಲ್ಲಾ ಅಪರಾಧಿಗಳನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ‘ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಕೋರ್ಟ್ ಹೇಳಿದೆ. ಮೋಕಾ ನ್ಯಾಯಾಲಯದ ಮರಣದಂಡನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವಾಗಲೇ ಕಮಲ್ ಅಹ್ಮದ್ ಜೈಲಿನಲ್ಲಿ ಕೊನೆಯುಸಿರೆಳೆದಿದ್ದರು.

‘ಇನ್ನೋಸೆನ್ಸ್ ನೆಟ್‌ವರ್ಕ್‌’ನ ಪ್ರಧಾನ ಕಾರ್ಯದರ್ಶಿ ಡಾ. ಅಬ್ದುಲ್ ವಾಹಿದ್ ಶೇಖ್ ಮತ್ತು ಜಮಿಯತ್-ಎ-ಉಲಮಾ ನಾಗ್ಪುರದ ಅಧ್ಯಕ್ಷ ಖಾರಿ ಸಬೀರ್ ನೇತೃತ್ವದಲ್ಲಿ, ದೆಹಲಿಯ ಕಮಲ್ ಅಹ್ಮದ್ ಅವರ ಕಿರಿಯ ಸಹೋದರ ಜಮಾಲ್ ಅಹ್ಮದ್ ಅನ್ಸಾರಿ, ಕುಟುಂಬ ಸದಸ್ಯರು, ಹೋರಾಟಗಾರರು ಮತ್ತು ಸಮುದಾಯದ ಮುಖಂಡರ ನಿಯೋಗ ಭಾನುವಾರ ಕಮಲ್ ಅಹ್ಮದ್ ಅವರ ಸಮಾಧಿಗೆ ಭೇಟಿ ನೀಡಿದೆ.

ಸಮಾಧಿಯ ಪಕ್ಕದಲ್ಲಿ ನಿಂತು, ಜುಲೈ 21, 2025ರಂದು ಬಾಂಬೆ ಹೈಕೋರ್ಟ್ ಕಮಲ್ ಅಹ್ಮದ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ತೀರ್ಪನ್ನು ಗಟ್ಟಿಯಾಗಿ ಓದಿದ್ದಾರೆ. ಈ ಮೂಲಕ ‘ನಾನು ನಿರಪರಾಧಿ’ ಎಂದು ಕಮಲ್ ಅಹ್ಮದ್ ಯಾವಾಗಳೂ ಹೇಳುತ್ತಿದ್ದ ಮಾತನ್ನು ಸಾರ್ವಜನಿಕವಾಗಿ ದೃಢೀಕರಿಸಲಾಗಿದೆ ಎಂದು maktoobmedia.com ವರದಿ ಹೇಳಿದೆ.

ಬಿಹಾರದ ಮಧುಬನಿಯ ಬಡ ದಿನಗೂಲಿ ಕಾರ್ಮಿಕ ಕಮಲ್ ಅಹ್ಮದ್, ಒಂದು ಸಣ್ಣ ಕೋಳಿ ಅಂಗಡಿಯನ್ನು ನಡೆಸುತ್ತಿದ್ದರು, ತರಕಾರಿಗಳನ್ನು ಮಾರುತ್ತಿದ್ದರು ಮತ್ತು ತಮ್ಮ ಪತ್ನಿ ಮತ್ತು ಐವರು ಮಕ್ಕಳನ್ನು ಸಾಕಲು ಹೆಣಗಾಡುತ್ತಿದ್ದರು. ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ಅವರನ್ನು ಬಂಧಿಸಿ, ‘ಭಯೋತ್ಪಾದಕ’ ಎಂದು ಹಣೆಪಟ್ಟಿ ಕಟ್ಟಿ, ಸ್ಫೋಟ ಪ್ರಕರಣದಲ್ಲಿ ಅವರ ಮೇಲೆ ಆರೋಪ ಹೊರಿಸಿದಾಗ ಅವರ ಜೀವನ ಛಿದ್ರವಾಯಿತು. 16 ವರ್ಷಗಳ ಕಾಲ, ಅವರು ಜೈಲಿನಲ್ಲಿದ್ದರು. ಅವರ ಕುಟುಂಬ ಸುಖಾಸುಮ್ಮನೆ ಕಳಂಕ ಹೊತ್ತುಕೊಂಡಿತ್ತು. ಅವರ ನೋವನ್ನು ಕೇಳುವವರೇ ಇರಲಿಲ್ಲ ಎಂದು maktoobmedia.com ವಿವರಿಸಿದೆ.

2021ರಲ್ಲಿ, ಕೋವಿಡ್-19 ಉತ್ತುಂಗದಲ್ಲಿದ್ದಾಗ, ಕಮಲ್ ಅಹ್ಮದ್ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಕಸ್ಟಡಿಯಲ್ಲಿ ನಿಧನರಾದರು. ಅವರ ಮರಣದ ನಾಲ್ಕು ವರ್ಷಗಳ ನಂತರ ಅವರು ನಿರಪರಾಧಿ ಎಂದು ನ್ಯಾಯಾಲಯ ಘೋಷಿಸಿದೆ.

“ಕಮಲ್ ಅಹ್ಮದ್ ಅವರ ಸುಂದರ ಜೀವನವನ್ನು ಕಿತ್ತುಕೊಳ್ಳಲಾಯಿತು. ಅವರ ಮಕ್ಕಳು ತಂದೆ ಇಲ್ಲದೆ ಬೆಳೆದರು. ಅವರ ಪತ್ನಿ ಅಸಹನೀಯ ಕಳಂಕದ ಹೊರೆಯನ್ನು ಹೊತ್ತುಕೊಂಡರು. ಕುಟುಂಬ ಅವಮಾನ ಎದುರಿಸಿತು. ನ್ಯಾಯಾಲಯದ ತೀರ್ಪು ಕಾನೂನು ಕ್ರಮಗಳಿಂದ ಮುಕ್ತಗೊಳಿಸಬಹುದು. ಆದರೆ, ಅವರು ಕಳೆದುಕೊಂಡ ಜೀವನದ ಅಮೂಲ್ಯ ಸಮಯವನ್ನು ಹಿಂದಿರುಗಿಸಲು ಮತ್ತು ಅವರ ಕುಟುಂಬ ಅನುಭವಿಸಿದ ನೋವಿಗೆ ಪರಿಹಾರ ಕೊಡಲು ಸಾಧ್ಯವೇ?” ಎಂದು ಡಾ. ಅಬ್ದುಲ್ ವಾಹಿದ್ ಶೇಖ್ ಪ್ರಶ್ನಿಸಿದ್ದಾರೆ.

ಒಂಬತ್ತು ವರ್ಷಗಳ ಕಾಲ ಜೈಲಿನಲ್ಲಿ ಕಳೆದ ನಂತರ, ದಶಕದ ಹಿಂದೆ ವಿಚಾರಣಾ ನ್ಯಾಯಾಲಯವು ಶೇಖ್ ಅವರನ್ನು ಖುಲಾಸೆಗೊಳಿಸಿತ್ತು. ಅಂದಿನಿಂದ, ಜೈಲು ಹಕ್ಕುಗಳ ಕಾರ್ಯಕರ್ತರಾಗಿರುವ ಶೇಖ್, ತಮ್ಮ ಸಂಘಟನೆಯಾದ ‘ಇನ್ನೋಸೆನ್ಸ್ ನೆಟ್‌ವರ್ಕ್ ಆಫ್ ಇಂಡಿಯಾ’ ಮೂಲಕ ಸುಳ್ಳು ಪ್ರಕರಣದಲ್ಲಿ ಸಿಲುಕಿದ ವ್ಯಕ್ತಿಗಳ ಬಿಡುಗಡೆಗಾಗಿ ಕೆಲಸ ಮಾಡುತ್ತಿದೆ.

ಕಮಲ್ ಅಹ್ಮದ್ ಅವರ ಸಮಾಧಿ ಮುಂದೆ ಭಾನುವಾರ ಪ್ರಾರ್ಥನೆ, ಭಾಷಣ ನಡೆಯಿತು. ನಮ್ಮ ವ್ಯವಸ್ಥೆಯು ದುರ್ಬಲ ವರ್ಗದ ಜನರ ಮೇಲೆ ಪದೇ ಪದೇ ದಬ್ಬಾಳಿಕೆ ನಡೆಸುತ್ತಿದೆ. ಬಡವರನ್ನು ಅಪರಾಧಿಗಳೆಂದು ಪರಿಗಣಿಸುತ್ತಿದೆ. ಭಾರತದಲ್ಲಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ಕಾನೂನನ್ನು ಅಸ್ತ್ರವಾಗಿ ಬಳಸಲಾಗುತ್ತಿದೆ ಎಂದು ಭಾಗವಹಿಸಿದ್ದವರು ಹೇಳಿದರು ಎಂದು maktoobmedia.com ವರದಿ ಮಾಡಿದೆ.

‘ಶಿಕ್ಷಣ ನಿಧಿ’ ಬಿಡುಗಡೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ: ಸಂಸದ ಸಸಿಕಾಂತ್ ಸೆಂಥಿಲ್ ಆಸ್ಪತ್ರೆಗೆ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...