Homeಮುಖಪುಟಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

- Advertisement -
- Advertisement -

ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ ಖುಲಾಸೆಗೊಂಡಿರುವ ವ್ಯಕ್ತಿಗಳಲ್ಲಿ ಒಬ್ಬರಾದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ಅವರ ಸಮಾಧಿ ಮುಂದೆ ಸಂಬಂಧಿಕರು ಬಾಂಬೆ ಹೈಕೋರ್ಟ್ ಆದೇಶವನ್ನು ಓದಿರುವ ಅಪರೂಪದ ಘಟನೆ ಭಾನುವಾರ (ಆ.31) ನಾಗ್ಪುರದ ಜರಿಪಟ್ಕಾ ಕಬ್ರಸ್ತಾನದಲ್ಲಿ ನಡೆದಿದೆ.

2006ರ ಮುಂಬೈ ರೈಲು ಸ್ಪೋಟ ಪ್ರಕರಣದ ಎಲ್ಲಾ ಆರೋಪಿಗಳನ್ನು 2025ರ ಜುಲೈ 21ರಂದು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಈ ಪ್ರಕರಣದಲ್ಲಿ ಬಂಧಿತರಾಗಿದ್ದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ನಾಲ್ಕು ವರ್ಷಗಳ ಮುಂಚೆ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

2006ರ ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ, ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ (ಮೋಕಾ) ಸ್ಥಾಪನೆಗೊಂಡಿದ್ದ ವಿಶೇಷ ನ್ಯಾಯಾಲಯವು 12 ಮುಸ್ಲಿಂ ಪುರುಷರನ್ನು ದೋಷಿಗಳೆಂದು 2015ರಲ್ಲಿ ಘೋಷಿಸಿತ್ತು. ಕಮಲ್ ಅಹ್ಮದ್ ಸೇರಿದಂತೆ ಐವರಿಗೆ ಮರಣದಂಡನೆ ಘೋಷಣೆ ಮಾಡಿತ್ತು.

ಆದರೆ, ಜುಲೈ 21, 2025ರಂದು ಪ್ರಕರಣದ ಎಲ್ಲಾ ಅಪರಾಧಿಗಳನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ‘ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಕೋರ್ಟ್ ಹೇಳಿದೆ. ಮೋಕಾ ನ್ಯಾಯಾಲಯದ ಮರಣದಂಡನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವಾಗಲೇ ಕಮಲ್ ಅಹ್ಮದ್ ಜೈಲಿನಲ್ಲಿ ಕೊನೆಯುಸಿರೆಳೆದಿದ್ದರು.

‘ಇನ್ನೋಸೆನ್ಸ್ ನೆಟ್‌ವರ್ಕ್‌’ನ ಪ್ರಧಾನ ಕಾರ್ಯದರ್ಶಿ ಡಾ. ಅಬ್ದುಲ್ ವಾಹಿದ್ ಶೇಖ್ ಮತ್ತು ಜಮಿಯತ್-ಎ-ಉಲಮಾ ನಾಗ್ಪುರದ ಅಧ್ಯಕ್ಷ ಖಾರಿ ಸಬೀರ್ ನೇತೃತ್ವದಲ್ಲಿ, ದೆಹಲಿಯ ಕಮಲ್ ಅಹ್ಮದ್ ಅವರ ಕಿರಿಯ ಸಹೋದರ ಜಮಾಲ್ ಅಹ್ಮದ್ ಅನ್ಸಾರಿ, ಕುಟುಂಬ ಸದಸ್ಯರು, ಹೋರಾಟಗಾರರು ಮತ್ತು ಸಮುದಾಯದ ಮುಖಂಡರ ನಿಯೋಗ ಭಾನುವಾರ ಕಮಲ್ ಅಹ್ಮದ್ ಅವರ ಸಮಾಧಿಗೆ ಭೇಟಿ ನೀಡಿದೆ.

ಸಮಾಧಿಯ ಪಕ್ಕದಲ್ಲಿ ನಿಂತು, ಜುಲೈ 21, 2025ರಂದು ಬಾಂಬೆ ಹೈಕೋರ್ಟ್ ಕಮಲ್ ಅಹ್ಮದ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ತೀರ್ಪನ್ನು ಗಟ್ಟಿಯಾಗಿ ಓದಿದ್ದಾರೆ. ಈ ಮೂಲಕ ‘ನಾನು ನಿರಪರಾಧಿ’ ಎಂದು ಕಮಲ್ ಅಹ್ಮದ್ ಯಾವಾಗಳೂ ಹೇಳುತ್ತಿದ್ದ ಮಾತನ್ನು ಸಾರ್ವಜನಿಕವಾಗಿ ದೃಢೀಕರಿಸಲಾಗಿದೆ ಎಂದು maktoobmedia.com ವರದಿ ಹೇಳಿದೆ.

ಬಿಹಾರದ ಮಧುಬನಿಯ ಬಡ ದಿನಗೂಲಿ ಕಾರ್ಮಿಕ ಕಮಲ್ ಅಹ್ಮದ್, ಒಂದು ಸಣ್ಣ ಕೋಳಿ ಅಂಗಡಿಯನ್ನು ನಡೆಸುತ್ತಿದ್ದರು, ತರಕಾರಿಗಳನ್ನು ಮಾರುತ್ತಿದ್ದರು ಮತ್ತು ತಮ್ಮ ಪತ್ನಿ ಮತ್ತು ಐವರು ಮಕ್ಕಳನ್ನು ಸಾಕಲು ಹೆಣಗಾಡುತ್ತಿದ್ದರು. ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ಅವರನ್ನು ಬಂಧಿಸಿ, ‘ಭಯೋತ್ಪಾದಕ’ ಎಂದು ಹಣೆಪಟ್ಟಿ ಕಟ್ಟಿ, ಸ್ಫೋಟ ಪ್ರಕರಣದಲ್ಲಿ ಅವರ ಮೇಲೆ ಆರೋಪ ಹೊರಿಸಿದಾಗ ಅವರ ಜೀವನ ಛಿದ್ರವಾಯಿತು. 16 ವರ್ಷಗಳ ಕಾಲ, ಅವರು ಜೈಲಿನಲ್ಲಿದ್ದರು. ಅವರ ಕುಟುಂಬ ಸುಖಾಸುಮ್ಮನೆ ಕಳಂಕ ಹೊತ್ತುಕೊಂಡಿತ್ತು. ಅವರ ನೋವನ್ನು ಕೇಳುವವರೇ ಇರಲಿಲ್ಲ ಎಂದು maktoobmedia.com ವಿವರಿಸಿದೆ.

2021ರಲ್ಲಿ, ಕೋವಿಡ್-19 ಉತ್ತುಂಗದಲ್ಲಿದ್ದಾಗ, ಕಮಲ್ ಅಹ್ಮದ್ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಕಸ್ಟಡಿಯಲ್ಲಿ ನಿಧನರಾದರು. ಅವರ ಮರಣದ ನಾಲ್ಕು ವರ್ಷಗಳ ನಂತರ ಅವರು ನಿರಪರಾಧಿ ಎಂದು ನ್ಯಾಯಾಲಯ ಘೋಷಿಸಿದೆ.

“ಕಮಲ್ ಅಹ್ಮದ್ ಅವರ ಸುಂದರ ಜೀವನವನ್ನು ಕಿತ್ತುಕೊಳ್ಳಲಾಯಿತು. ಅವರ ಮಕ್ಕಳು ತಂದೆ ಇಲ್ಲದೆ ಬೆಳೆದರು. ಅವರ ಪತ್ನಿ ಅಸಹನೀಯ ಕಳಂಕದ ಹೊರೆಯನ್ನು ಹೊತ್ತುಕೊಂಡರು. ಕುಟುಂಬ ಅವಮಾನ ಎದುರಿಸಿತು. ನ್ಯಾಯಾಲಯದ ತೀರ್ಪು ಕಾನೂನು ಕ್ರಮಗಳಿಂದ ಮುಕ್ತಗೊಳಿಸಬಹುದು. ಆದರೆ, ಅವರು ಕಳೆದುಕೊಂಡ ಜೀವನದ ಅಮೂಲ್ಯ ಸಮಯವನ್ನು ಹಿಂದಿರುಗಿಸಲು ಮತ್ತು ಅವರ ಕುಟುಂಬ ಅನುಭವಿಸಿದ ನೋವಿಗೆ ಪರಿಹಾರ ಕೊಡಲು ಸಾಧ್ಯವೇ?” ಎಂದು ಡಾ. ಅಬ್ದುಲ್ ವಾಹಿದ್ ಶೇಖ್ ಪ್ರಶ್ನಿಸಿದ್ದಾರೆ.

ಒಂಬತ್ತು ವರ್ಷಗಳ ಕಾಲ ಜೈಲಿನಲ್ಲಿ ಕಳೆದ ನಂತರ, ದಶಕದ ಹಿಂದೆ ವಿಚಾರಣಾ ನ್ಯಾಯಾಲಯವು ಶೇಖ್ ಅವರನ್ನು ಖುಲಾಸೆಗೊಳಿಸಿತ್ತು. ಅಂದಿನಿಂದ, ಜೈಲು ಹಕ್ಕುಗಳ ಕಾರ್ಯಕರ್ತರಾಗಿರುವ ಶೇಖ್, ತಮ್ಮ ಸಂಘಟನೆಯಾದ ‘ಇನ್ನೋಸೆನ್ಸ್ ನೆಟ್‌ವರ್ಕ್ ಆಫ್ ಇಂಡಿಯಾ’ ಮೂಲಕ ಸುಳ್ಳು ಪ್ರಕರಣದಲ್ಲಿ ಸಿಲುಕಿದ ವ್ಯಕ್ತಿಗಳ ಬಿಡುಗಡೆಗಾಗಿ ಕೆಲಸ ಮಾಡುತ್ತಿದೆ.

ಕಮಲ್ ಅಹ್ಮದ್ ಅವರ ಸಮಾಧಿ ಮುಂದೆ ಭಾನುವಾರ ಪ್ರಾರ್ಥನೆ, ಭಾಷಣ ನಡೆಯಿತು. ನಮ್ಮ ವ್ಯವಸ್ಥೆಯು ದುರ್ಬಲ ವರ್ಗದ ಜನರ ಮೇಲೆ ಪದೇ ಪದೇ ದಬ್ಬಾಳಿಕೆ ನಡೆಸುತ್ತಿದೆ. ಬಡವರನ್ನು ಅಪರಾಧಿಗಳೆಂದು ಪರಿಗಣಿಸುತ್ತಿದೆ. ಭಾರತದಲ್ಲಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ಕಾನೂನನ್ನು ಅಸ್ತ್ರವಾಗಿ ಬಳಸಲಾಗುತ್ತಿದೆ ಎಂದು ಭಾಗವಹಿಸಿದ್ದವರು ಹೇಳಿದರು ಎಂದು maktoobmedia.com ವರದಿ ಮಾಡಿದೆ.

‘ಶಿಕ್ಷಣ ನಿಧಿ’ ಬಿಡುಗಡೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ: ಸಂಸದ ಸಸಿಕಾಂತ್ ಸೆಂಥಿಲ್ ಆಸ್ಪತ್ರೆಗೆ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...