Homeಮುಖಪುಟಗುಜರಾತ್ ಹತ್ಯಾಕಾಂಡದ 67 ಆರೋಪಿಗಳ ಖುಲಾಸೆ: ಭಾರತದ ಪ್ರಜಾಪ್ರಭುತ್ವದ ಬಗ್ಗೆ ವಿದೇಶಿ ಪತ್ರಿಕೆಗಳ ಕಳವಳ

ಗುಜರಾತ್ ಹತ್ಯಾಕಾಂಡದ 67 ಆರೋಪಿಗಳ ಖುಲಾಸೆ: ಭಾರತದ ಪ್ರಜಾಪ್ರಭುತ್ವದ ಬಗ್ಗೆ ವಿದೇಶಿ ಪತ್ರಿಕೆಗಳ ಕಳವಳ

- Advertisement -
- Advertisement -

ರಾಹುಲ್ ಗಾಂಧಿ ಅವರು ತಮ್ಮ ಮೇಲಿನ ಮಾನನಷ್ಟ ಮೊಕದ್ದಮೆಯ ಶಿಕ್ಷೆಗೆ ತಡೆ ನೀಡಬೇಕೆಂಬ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ ದಿನವೇ, ಪ್ರತ್ಯೇಕ ಪ್ರಕರಣದಲ್ಲಿ, 2002ರ ಗುಜರಾತ್ ದಂಗೆಯ ನರೋಡಾ ಗಾಮ್ ಹತ್ಯಾಕಾಂಡದ ಎಲ್ಲಾ 67 ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಈ ಬೆಳವಣಿಗೆಯ ಬಗ್ಗೆ ಎರಡು ವಿದೇಶಿ ಪತ್ರಿಕೆಗಳಲ್ಲಿ ಸಂಪಾದಕೀಯಗಳು -(ಫೈನಾನ್ಶಿಯಲ್ ಟೈಮ್ಸ್ ಮತ್ತು ವಾಷಿಂಗ್ಟನ್ ಟೈಮ್ಸ್ ) ಇದು ಭಾರತದಲ್ಲಿ ”ಪ್ರಜಾಪ್ರಭುತ್ವದ ಹಿನ್ನಡೆ” ಎಂದು ಕಳವಳ ವ್ಯಕ್ತಪಡಿಸಿವೆ.

ಚೀನಾವನ್ನು ವಿರೋಧಿಸುವ ಬರದಲ್ಲಿ ಮೋದಿ ಸರ್ಕಾರದ ಇಂತಹ ಕ್ರಮಗಳ ಬಗ್ಗೆ ಪಾಶ್ಚಿಮಾತ್ಯ ರಾಷ್ಟ್ರಗಳು ಕುರುಡಾಗಿವೆ ಎಂದು ಸಂಪಾದಕೀಯಗಳು ಟೀಕಿಸಿವೆ.

ಮಾರ್ಚ್‌ನಲ್ಲಿ ಅಮೆರಿಕಾ ವಾಣಿಜ್ಯ ಕಾರ್ಯದರ್ಶಿ ಗಿನಾ ರೈಮೊಂಡೋ ಅವರು ಭಾರತಕ್ಕೆ ಭೇಟಿ ನೀಡಿದಾಗ,  ಮೋದಿಯನ್ನು ”ಅದ್ಬುತವಾದ ದೂರದೃಷ್ಟಿ”ಯುಳ್ಳ ಮತ್ತು ”ಅತ್ಯಂತ ಜನಪ್ರಿಯ ವಿಶ್ವ ನಾಯಕ” ಎಂದು ಬಣ್ಣಿಸಿದ್ದಾರೆ ಎಂಬುವುದನ್ನು ಪತ್ರಿಕೆಗಳು ಗಮನಸೆಳೆದಿವೆ.

”ವ್ಯಾಪಾರಿಗಳು ಮತ್ತು ಹೂಡಿಕೆದಾರರು ಚೀನಾದಿಂದ ದೂರವಿದ್ದು, ವೈವಿಧ್ಯತೆ ಇರುವ ಭಾರತದಲ್ಲಿ ಹೂಡಿಕೆ ಮಾಡಲು ಬಯಸುತ್ತಾರೆ. ಆದರೆ ಭಾರತದಲ್ಲಿ ಈಗ ಕಾನೂನಿನ ನಿಯಮಗಳನ್ನು ದುರ್ಬಲಗೊಳ್ಳುತ್ತಿರುವುದರಿಂದ ಹೂಡಿಕಾದರರು ಎರಡು ಬಾರಿ ಯೋಚಿಸುವಂತೆ ಮಾಡುತ್ತದೆ” ಎಂದು ಫೈನಾನ್ಶಿಯಲ್ ಟೈಮ್ಸ್ ಬರೆದಿದೆ.

ಇದನ್ನೂ ಓದಿ: ಮೋದಿ ಜಂಗಲ್ ಸಫಾರಿ ಅಣಕಿಸುವ ವಿಡಿಯೋ ಮಾಡಿದ ಹಾಸ್ಯನಟನಿಗೆ ನೋಟಿಸ್; 11 ಸಾವಿರ ದಂಡ

ಭಾರತದಲ್ಲಿ ಪ್ರಜಾಪ್ರಭುತ್ವದ ಅವನತಿ-

”ಪತ್ರಿಕಾ ಸ್ವಾತಂತ್ರ್ಯ ಹರಣ, ಅಲ್ಪಸಂಖ್ಯಾತರ ಮೇಲೆ ದಾಳಿ ಮಾಡಲು ಪಠ್ಯಕ್ರಮದಲ್ಲಿ ಬದಲಾವಣೆ,
ಗಾಂಧಿಯವರ ಶಿಕ್ಷೆಯನ್ನು ತಡೆಯಲು ಸೂರತ್ ನ್ಯಾಯಾಲಯದ ನಿರಾಕರಣೆ ಜೊತೆಗೆ, ಮೋದಿ ಸರ್ಕಾರವು ವಿರೋಧ ಪಕ್ಷದವರನ್ನು ಮತ್ತು ವಿಮರ್ಶಕರನ್ನು ಗುರಿಯಾಗಿಸಿಕೊಂಡಿರುವುದನ್ನು ಕಾಣಬಹುದಾಗಿದೆ. ಇದು ಪ್ರಜಾಪ್ರಭುತ್ವ ಅವನತಿಗೆ ಕಾರಣವಾಗುತ್ತದೆ” ಎಂದು ಫೈನಾನ್ಷಿಯಲ್ ಟೈಮ್ಸ್ ಸಂಪಾದಕೀಯವು ಹೇಳಿದೆ.

”ಮೋದಿ ಬೆಂಬಲಿಗರು ದೇಶದಲ್ಲಿನ ಬಹುತೇಕ ಮಾಧ್ಯಮ, ನಾಗರಿಕ ಸಮಾಜ ಮತ್ತು ರಾಜಕೀಯ ನಾಯಕರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿಗ್ರಹಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಭಾರತದ ಮುಸ್ಲಿಂ ಅಲ್ಪಸಂಖ್ಯಾತರೊಂದಿಗೆ ಅಂತರ್-ಧರ್ಮೀಯ ಉದ್ವಿಗ್ನತೆಯನ್ನು ಉಂಟುಮಾಡುತ್ತಿದ್ದಾರೆ” ಎಂದು ಸಂಪಾದಕೀಯದಲ್ಲಿ ಸೇರಿಸಿದ್ದಾರೆ.

”ಭಾರತವು “ಸರ್ವಾಧಿಕಾರ” ಆಡಳಿತವನ್ನು ಹೊಂದುತ್ತಿದೆ” ಎಂದು ವೆರೈಟೀಸ್ ಆಫ್ ಡೆಮಾಕ್ರಸಿ ಇನ್‌ಸ್ಟಿಟ್ಯೂಟ್, ಸ್ವೀಡಿಷ್ ಥಿಂಕ್ ಟ್ಯಾಂಕ್‌ ಬಣ್ಣಿಸಿರುವ ಬಗ್ಗೆ ಬ್ರಿಟಿಷ್ ದಿನಪತ್ರಿಕೆ ಗಮನಿಸಿದೆ.

”2002ರ ಗುಜರಾತ್ ಗಲಭೆಯಲ್ಲಿ ಮೋದಿಯವರ ಪಾತ್ರದ ಕುರಿತಾದ ಸಾಕ್ಷ್ಯಚಿತ್ರವನ್ನು ಬ್ರಿಟಿಷ್ ಬ್ರಾಡ್‌ಕಾಸ್ಟರ್ (ಬಿಬಿಸಿ) ಬಿಡುಗಡೆ ಮಾಡಿತ್ತು. ಅದಕ್ಕೆ ಪ್ರತಿಯಾಗಿ ಕೆಲವೇ ವಾರಗಳ ನಂತರ, ಫೆಬ್ರವರಿಯಲ್ಲಿ BBCಯ ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಆದಾಯ ತೆರಿಗೆ (ಐಟಿ) ದಾಳಿ ನಡೆಸಿದ ಬಗ್ಗೆ ಉಲ್ಲೇಖಿಸಿ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಸಂಪಾದಕೀಯದಲ್ಲಿ ಪತ್ರಿಕೆ ಬರೆದಿದೆ.

”ಮೋದಿ ಸರ್ಕಾರ ಮಾಧ್ಯಮ ಸಂಸ್ಥೆಗಳ ಮಾಲೀಕರೊಂದಿಗೆ ಸಂಬಂಧ ಹೊಂದಿದೆ. ಆ ಮೂಲಕ ಸರ್ಕಾರವು ಮಾಧ್ಯಮದ ಮೇಲೆ ಅಗಾಧವಾದ ಪ್ರಭಾವವನ್ನು ಬೀರುತ್ತದೆ ಮತ್ತು ಮಾಧ್ಯಮಗಳ ಸಂಪಾದಕರು ಸರ್ಕಾರದ ರೇಖೆಯನ್ನು ಅನುಸರಿಸಲು ಪತ್ರಕರ್ತರಿಗೆ ಒತ್ತಡ ಹೇರುತ್ತಾರೆ” ಎಂದು ಫೈನಾನ್ಶಿಯಲ್ ಟೈಮ್ಸ್ ಆರೋಪ ಮಾಡಿದೆ.

ಇತ್ತಿಚೆಗೆ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಬದಲಾವಣೆ ಮಾಡಲಾಯಿತು ಅದು “ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ನಿರುತ್ಸಾಹಗೊಳಿಸುವ ಬೆಳವಣಿಗೆಯಾಗಿದೆ” ಎಂದು ವಾಷಿಂಗ್ಟನ್ ಪೋಸ್ಟ್ ಬರೆದಿದೆ.

ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಮಾಡಲಾದ ಹಲವಾರು ಬದಲಾವಣೆಗಳಲ್ಲಿ, 2002ರ ಗುಜರಾತ್ ಗಲಭೆಗಳು, ಭಾರತದಲ್ಲಿ ಮೊಘಲ್ ಆಳ್ವಿಕೆ, ಮೋಹನ್‌ದಾಸ್ ಕರಮಚಂದ್ ಗಾಂಧಿಯನ್ನು ಹತ್ಯೆ ಮಾಡಲು ಹಿಂದೂ ಉಗ್ರಗಾಮಿಗಳ ಪ್ರಯತ್ನಗಳು ಮತ್ತು ನಂತರದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲಿನ ನಿಷೇಧದ ಪ್ಯಾರಾಗಳನ್ನು ಕೈಬಿಡಲಾಗಿದೆ. ಈಗ ಯಾವುದೇ NCERT ಪಠ್ಯಪುಸ್ತಕದಲ್ಲಿ ಗುಜರಾತ್ ಗಲಭೆಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ.

”ಆರೋಗ್ಯಕರ ಪ್ರಜಾಪ್ರಭುತ್ವವು ಅಹಿತಕರ ಘಟನೆಗಳನ್ನು ಮರುಪರಿಶೀಲಣೆ ಮಾಡದೆಯೇ ಗಾಳಿಗೆ ತೂರಿದೆ” ಎಂದು ವಾಷಿಂಗ್ಟನ್ ಪೋಸ್ಟ್ ಸಂಪಾದಕೀಯ ಹೇಳಿದೆ.

ಅಮೆರಿಕ ಮೂಲದ ದಿನಪತ್ರಿಕೆಯ ಸಂಪಾದಕೀಯವು ಬಿಬಿಸಿ ಕಚೇರಿ ಮೇಲಿನ ದಾಳಿಯನ್ನು ಟೀಕಿಸಿದ್ದು, ”ಚೀನಾ, ರಷ್ಯಾ ಮತ್ತು ಇತರ ಸರ್ವಾಧಿಕಾರಗಳು ಸುದ್ದಿ ಮಾಧ್ಯಮವನ್ನು ಮೌನಗೊಳಿಸಲು ಸಾಮಾನ್ಯವಾಗಿ ಬಳಸುವ ಬೆದರಿಕೆ ತಂತ್ರವನ್ನು ಭಾರತ ಸರ್ಕಾರ ಅನುಸರಿಸುತ್ತಿದೆ” ಎಂದು ವಿವರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...