Homeಮುಖಪುಟಗುಜರಾತ್ ಹತ್ಯಾಕಾಂಡದ 67 ಆರೋಪಿಗಳ ಖುಲಾಸೆ: ಭಾರತದ ಪ್ರಜಾಪ್ರಭುತ್ವದ ಬಗ್ಗೆ ವಿದೇಶಿ ಪತ್ರಿಕೆಗಳ ಕಳವಳ

ಗುಜರಾತ್ ಹತ್ಯಾಕಾಂಡದ 67 ಆರೋಪಿಗಳ ಖುಲಾಸೆ: ಭಾರತದ ಪ್ರಜಾಪ್ರಭುತ್ವದ ಬಗ್ಗೆ ವಿದೇಶಿ ಪತ್ರಿಕೆಗಳ ಕಳವಳ

- Advertisement -
- Advertisement -

ರಾಹುಲ್ ಗಾಂಧಿ ಅವರು ತಮ್ಮ ಮೇಲಿನ ಮಾನನಷ್ಟ ಮೊಕದ್ದಮೆಯ ಶಿಕ್ಷೆಗೆ ತಡೆ ನೀಡಬೇಕೆಂಬ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ ದಿನವೇ, ಪ್ರತ್ಯೇಕ ಪ್ರಕರಣದಲ್ಲಿ, 2002ರ ಗುಜರಾತ್ ದಂಗೆಯ ನರೋಡಾ ಗಾಮ್ ಹತ್ಯಾಕಾಂಡದ ಎಲ್ಲಾ 67 ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಈ ಬೆಳವಣಿಗೆಯ ಬಗ್ಗೆ ಎರಡು ವಿದೇಶಿ ಪತ್ರಿಕೆಗಳಲ್ಲಿ ಸಂಪಾದಕೀಯಗಳು -(ಫೈನಾನ್ಶಿಯಲ್ ಟೈಮ್ಸ್ ಮತ್ತು ವಾಷಿಂಗ್ಟನ್ ಟೈಮ್ಸ್ ) ಇದು ಭಾರತದಲ್ಲಿ ”ಪ್ರಜಾಪ್ರಭುತ್ವದ ಹಿನ್ನಡೆ” ಎಂದು ಕಳವಳ ವ್ಯಕ್ತಪಡಿಸಿವೆ.

ಚೀನಾವನ್ನು ವಿರೋಧಿಸುವ ಬರದಲ್ಲಿ ಮೋದಿ ಸರ್ಕಾರದ ಇಂತಹ ಕ್ರಮಗಳ ಬಗ್ಗೆ ಪಾಶ್ಚಿಮಾತ್ಯ ರಾಷ್ಟ್ರಗಳು ಕುರುಡಾಗಿವೆ ಎಂದು ಸಂಪಾದಕೀಯಗಳು ಟೀಕಿಸಿವೆ.

ಮಾರ್ಚ್‌ನಲ್ಲಿ ಅಮೆರಿಕಾ ವಾಣಿಜ್ಯ ಕಾರ್ಯದರ್ಶಿ ಗಿನಾ ರೈಮೊಂಡೋ ಅವರು ಭಾರತಕ್ಕೆ ಭೇಟಿ ನೀಡಿದಾಗ,  ಮೋದಿಯನ್ನು ”ಅದ್ಬುತವಾದ ದೂರದೃಷ್ಟಿ”ಯುಳ್ಳ ಮತ್ತು ”ಅತ್ಯಂತ ಜನಪ್ರಿಯ ವಿಶ್ವ ನಾಯಕ” ಎಂದು ಬಣ್ಣಿಸಿದ್ದಾರೆ ಎಂಬುವುದನ್ನು ಪತ್ರಿಕೆಗಳು ಗಮನಸೆಳೆದಿವೆ.

”ವ್ಯಾಪಾರಿಗಳು ಮತ್ತು ಹೂಡಿಕೆದಾರರು ಚೀನಾದಿಂದ ದೂರವಿದ್ದು, ವೈವಿಧ್ಯತೆ ಇರುವ ಭಾರತದಲ್ಲಿ ಹೂಡಿಕೆ ಮಾಡಲು ಬಯಸುತ್ತಾರೆ. ಆದರೆ ಭಾರತದಲ್ಲಿ ಈಗ ಕಾನೂನಿನ ನಿಯಮಗಳನ್ನು ದುರ್ಬಲಗೊಳ್ಳುತ್ತಿರುವುದರಿಂದ ಹೂಡಿಕಾದರರು ಎರಡು ಬಾರಿ ಯೋಚಿಸುವಂತೆ ಮಾಡುತ್ತದೆ” ಎಂದು ಫೈನಾನ್ಶಿಯಲ್ ಟೈಮ್ಸ್ ಬರೆದಿದೆ.

ಇದನ್ನೂ ಓದಿ: ಮೋದಿ ಜಂಗಲ್ ಸಫಾರಿ ಅಣಕಿಸುವ ವಿಡಿಯೋ ಮಾಡಿದ ಹಾಸ್ಯನಟನಿಗೆ ನೋಟಿಸ್; 11 ಸಾವಿರ ದಂಡ

ಭಾರತದಲ್ಲಿ ಪ್ರಜಾಪ್ರಭುತ್ವದ ಅವನತಿ-

”ಪತ್ರಿಕಾ ಸ್ವಾತಂತ್ರ್ಯ ಹರಣ, ಅಲ್ಪಸಂಖ್ಯಾತರ ಮೇಲೆ ದಾಳಿ ಮಾಡಲು ಪಠ್ಯಕ್ರಮದಲ್ಲಿ ಬದಲಾವಣೆ,
ಗಾಂಧಿಯವರ ಶಿಕ್ಷೆಯನ್ನು ತಡೆಯಲು ಸೂರತ್ ನ್ಯಾಯಾಲಯದ ನಿರಾಕರಣೆ ಜೊತೆಗೆ, ಮೋದಿ ಸರ್ಕಾರವು ವಿರೋಧ ಪಕ್ಷದವರನ್ನು ಮತ್ತು ವಿಮರ್ಶಕರನ್ನು ಗುರಿಯಾಗಿಸಿಕೊಂಡಿರುವುದನ್ನು ಕಾಣಬಹುದಾಗಿದೆ. ಇದು ಪ್ರಜಾಪ್ರಭುತ್ವ ಅವನತಿಗೆ ಕಾರಣವಾಗುತ್ತದೆ” ಎಂದು ಫೈನಾನ್ಷಿಯಲ್ ಟೈಮ್ಸ್ ಸಂಪಾದಕೀಯವು ಹೇಳಿದೆ.

”ಮೋದಿ ಬೆಂಬಲಿಗರು ದೇಶದಲ್ಲಿನ ಬಹುತೇಕ ಮಾಧ್ಯಮ, ನಾಗರಿಕ ಸಮಾಜ ಮತ್ತು ರಾಜಕೀಯ ನಾಯಕರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿಗ್ರಹಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಭಾರತದ ಮುಸ್ಲಿಂ ಅಲ್ಪಸಂಖ್ಯಾತರೊಂದಿಗೆ ಅಂತರ್-ಧರ್ಮೀಯ ಉದ್ವಿಗ್ನತೆಯನ್ನು ಉಂಟುಮಾಡುತ್ತಿದ್ದಾರೆ” ಎಂದು ಸಂಪಾದಕೀಯದಲ್ಲಿ ಸೇರಿಸಿದ್ದಾರೆ.

”ಭಾರತವು “ಸರ್ವಾಧಿಕಾರ” ಆಡಳಿತವನ್ನು ಹೊಂದುತ್ತಿದೆ” ಎಂದು ವೆರೈಟೀಸ್ ಆಫ್ ಡೆಮಾಕ್ರಸಿ ಇನ್‌ಸ್ಟಿಟ್ಯೂಟ್, ಸ್ವೀಡಿಷ್ ಥಿಂಕ್ ಟ್ಯಾಂಕ್‌ ಬಣ್ಣಿಸಿರುವ ಬಗ್ಗೆ ಬ್ರಿಟಿಷ್ ದಿನಪತ್ರಿಕೆ ಗಮನಿಸಿದೆ.

”2002ರ ಗುಜರಾತ್ ಗಲಭೆಯಲ್ಲಿ ಮೋದಿಯವರ ಪಾತ್ರದ ಕುರಿತಾದ ಸಾಕ್ಷ್ಯಚಿತ್ರವನ್ನು ಬ್ರಿಟಿಷ್ ಬ್ರಾಡ್‌ಕಾಸ್ಟರ್ (ಬಿಬಿಸಿ) ಬಿಡುಗಡೆ ಮಾಡಿತ್ತು. ಅದಕ್ಕೆ ಪ್ರತಿಯಾಗಿ ಕೆಲವೇ ವಾರಗಳ ನಂತರ, ಫೆಬ್ರವರಿಯಲ್ಲಿ BBCಯ ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಆದಾಯ ತೆರಿಗೆ (ಐಟಿ) ದಾಳಿ ನಡೆಸಿದ ಬಗ್ಗೆ ಉಲ್ಲೇಖಿಸಿ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಸಂಪಾದಕೀಯದಲ್ಲಿ ಪತ್ರಿಕೆ ಬರೆದಿದೆ.

”ಮೋದಿ ಸರ್ಕಾರ ಮಾಧ್ಯಮ ಸಂಸ್ಥೆಗಳ ಮಾಲೀಕರೊಂದಿಗೆ ಸಂಬಂಧ ಹೊಂದಿದೆ. ಆ ಮೂಲಕ ಸರ್ಕಾರವು ಮಾಧ್ಯಮದ ಮೇಲೆ ಅಗಾಧವಾದ ಪ್ರಭಾವವನ್ನು ಬೀರುತ್ತದೆ ಮತ್ತು ಮಾಧ್ಯಮಗಳ ಸಂಪಾದಕರು ಸರ್ಕಾರದ ರೇಖೆಯನ್ನು ಅನುಸರಿಸಲು ಪತ್ರಕರ್ತರಿಗೆ ಒತ್ತಡ ಹೇರುತ್ತಾರೆ” ಎಂದು ಫೈನಾನ್ಶಿಯಲ್ ಟೈಮ್ಸ್ ಆರೋಪ ಮಾಡಿದೆ.

ಇತ್ತಿಚೆಗೆ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಬದಲಾವಣೆ ಮಾಡಲಾಯಿತು ಅದು “ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ನಿರುತ್ಸಾಹಗೊಳಿಸುವ ಬೆಳವಣಿಗೆಯಾಗಿದೆ” ಎಂದು ವಾಷಿಂಗ್ಟನ್ ಪೋಸ್ಟ್ ಬರೆದಿದೆ.

ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಮಾಡಲಾದ ಹಲವಾರು ಬದಲಾವಣೆಗಳಲ್ಲಿ, 2002ರ ಗುಜರಾತ್ ಗಲಭೆಗಳು, ಭಾರತದಲ್ಲಿ ಮೊಘಲ್ ಆಳ್ವಿಕೆ, ಮೋಹನ್‌ದಾಸ್ ಕರಮಚಂದ್ ಗಾಂಧಿಯನ್ನು ಹತ್ಯೆ ಮಾಡಲು ಹಿಂದೂ ಉಗ್ರಗಾಮಿಗಳ ಪ್ರಯತ್ನಗಳು ಮತ್ತು ನಂತರದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲಿನ ನಿಷೇಧದ ಪ್ಯಾರಾಗಳನ್ನು ಕೈಬಿಡಲಾಗಿದೆ. ಈಗ ಯಾವುದೇ NCERT ಪಠ್ಯಪುಸ್ತಕದಲ್ಲಿ ಗುಜರಾತ್ ಗಲಭೆಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ.

”ಆರೋಗ್ಯಕರ ಪ್ರಜಾಪ್ರಭುತ್ವವು ಅಹಿತಕರ ಘಟನೆಗಳನ್ನು ಮರುಪರಿಶೀಲಣೆ ಮಾಡದೆಯೇ ಗಾಳಿಗೆ ತೂರಿದೆ” ಎಂದು ವಾಷಿಂಗ್ಟನ್ ಪೋಸ್ಟ್ ಸಂಪಾದಕೀಯ ಹೇಳಿದೆ.

ಅಮೆರಿಕ ಮೂಲದ ದಿನಪತ್ರಿಕೆಯ ಸಂಪಾದಕೀಯವು ಬಿಬಿಸಿ ಕಚೇರಿ ಮೇಲಿನ ದಾಳಿಯನ್ನು ಟೀಕಿಸಿದ್ದು, ”ಚೀನಾ, ರಷ್ಯಾ ಮತ್ತು ಇತರ ಸರ್ವಾಧಿಕಾರಗಳು ಸುದ್ದಿ ಮಾಧ್ಯಮವನ್ನು ಮೌನಗೊಳಿಸಲು ಸಾಮಾನ್ಯವಾಗಿ ಬಳಸುವ ಬೆದರಿಕೆ ತಂತ್ರವನ್ನು ಭಾರತ ಸರ್ಕಾರ ಅನುಸರಿಸುತ್ತಿದೆ” ಎಂದು ವಿವರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...