Homeಮುಖಪುಟಗುಜರಾತ್ ಹತ್ಯಾಕಾಂಡದ 67 ಆರೋಪಿಗಳ ಖುಲಾಸೆ: ಭಾರತದ ಪ್ರಜಾಪ್ರಭುತ್ವದ ಬಗ್ಗೆ ವಿದೇಶಿ ಪತ್ರಿಕೆಗಳ ಕಳವಳ

ಗುಜರಾತ್ ಹತ್ಯಾಕಾಂಡದ 67 ಆರೋಪಿಗಳ ಖುಲಾಸೆ: ಭಾರತದ ಪ್ರಜಾಪ್ರಭುತ್ವದ ಬಗ್ಗೆ ವಿದೇಶಿ ಪತ್ರಿಕೆಗಳ ಕಳವಳ

- Advertisement -
- Advertisement -

ರಾಹುಲ್ ಗಾಂಧಿ ಅವರು ತಮ್ಮ ಮೇಲಿನ ಮಾನನಷ್ಟ ಮೊಕದ್ದಮೆಯ ಶಿಕ್ಷೆಗೆ ತಡೆ ನೀಡಬೇಕೆಂಬ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ ದಿನವೇ, ಪ್ರತ್ಯೇಕ ಪ್ರಕರಣದಲ್ಲಿ, 2002ರ ಗುಜರಾತ್ ದಂಗೆಯ ನರೋಡಾ ಗಾಮ್ ಹತ್ಯಾಕಾಂಡದ ಎಲ್ಲಾ 67 ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಈ ಬೆಳವಣಿಗೆಯ ಬಗ್ಗೆ ಎರಡು ವಿದೇಶಿ ಪತ್ರಿಕೆಗಳಲ್ಲಿ ಸಂಪಾದಕೀಯಗಳು -(ಫೈನಾನ್ಶಿಯಲ್ ಟೈಮ್ಸ್ ಮತ್ತು ವಾಷಿಂಗ್ಟನ್ ಟೈಮ್ಸ್ ) ಇದು ಭಾರತದಲ್ಲಿ ”ಪ್ರಜಾಪ್ರಭುತ್ವದ ಹಿನ್ನಡೆ” ಎಂದು ಕಳವಳ ವ್ಯಕ್ತಪಡಿಸಿವೆ.

ಚೀನಾವನ್ನು ವಿರೋಧಿಸುವ ಬರದಲ್ಲಿ ಮೋದಿ ಸರ್ಕಾರದ ಇಂತಹ ಕ್ರಮಗಳ ಬಗ್ಗೆ ಪಾಶ್ಚಿಮಾತ್ಯ ರಾಷ್ಟ್ರಗಳು ಕುರುಡಾಗಿವೆ ಎಂದು ಸಂಪಾದಕೀಯಗಳು ಟೀಕಿಸಿವೆ.

ಮಾರ್ಚ್‌ನಲ್ಲಿ ಅಮೆರಿಕಾ ವಾಣಿಜ್ಯ ಕಾರ್ಯದರ್ಶಿ ಗಿನಾ ರೈಮೊಂಡೋ ಅವರು ಭಾರತಕ್ಕೆ ಭೇಟಿ ನೀಡಿದಾಗ,  ಮೋದಿಯನ್ನು ”ಅದ್ಬುತವಾದ ದೂರದೃಷ್ಟಿ”ಯುಳ್ಳ ಮತ್ತು ”ಅತ್ಯಂತ ಜನಪ್ರಿಯ ವಿಶ್ವ ನಾಯಕ” ಎಂದು ಬಣ್ಣಿಸಿದ್ದಾರೆ ಎಂಬುವುದನ್ನು ಪತ್ರಿಕೆಗಳು ಗಮನಸೆಳೆದಿವೆ.

”ವ್ಯಾಪಾರಿಗಳು ಮತ್ತು ಹೂಡಿಕೆದಾರರು ಚೀನಾದಿಂದ ದೂರವಿದ್ದು, ವೈವಿಧ್ಯತೆ ಇರುವ ಭಾರತದಲ್ಲಿ ಹೂಡಿಕೆ ಮಾಡಲು ಬಯಸುತ್ತಾರೆ. ಆದರೆ ಭಾರತದಲ್ಲಿ ಈಗ ಕಾನೂನಿನ ನಿಯಮಗಳನ್ನು ದುರ್ಬಲಗೊಳ್ಳುತ್ತಿರುವುದರಿಂದ ಹೂಡಿಕಾದರರು ಎರಡು ಬಾರಿ ಯೋಚಿಸುವಂತೆ ಮಾಡುತ್ತದೆ” ಎಂದು ಫೈನಾನ್ಶಿಯಲ್ ಟೈಮ್ಸ್ ಬರೆದಿದೆ.

ಇದನ್ನೂ ಓದಿ: ಮೋದಿ ಜಂಗಲ್ ಸಫಾರಿ ಅಣಕಿಸುವ ವಿಡಿಯೋ ಮಾಡಿದ ಹಾಸ್ಯನಟನಿಗೆ ನೋಟಿಸ್; 11 ಸಾವಿರ ದಂಡ

ಭಾರತದಲ್ಲಿ ಪ್ರಜಾಪ್ರಭುತ್ವದ ಅವನತಿ-

”ಪತ್ರಿಕಾ ಸ್ವಾತಂತ್ರ್ಯ ಹರಣ, ಅಲ್ಪಸಂಖ್ಯಾತರ ಮೇಲೆ ದಾಳಿ ಮಾಡಲು ಪಠ್ಯಕ್ರಮದಲ್ಲಿ ಬದಲಾವಣೆ,
ಗಾಂಧಿಯವರ ಶಿಕ್ಷೆಯನ್ನು ತಡೆಯಲು ಸೂರತ್ ನ್ಯಾಯಾಲಯದ ನಿರಾಕರಣೆ ಜೊತೆಗೆ, ಮೋದಿ ಸರ್ಕಾರವು ವಿರೋಧ ಪಕ್ಷದವರನ್ನು ಮತ್ತು ವಿಮರ್ಶಕರನ್ನು ಗುರಿಯಾಗಿಸಿಕೊಂಡಿರುವುದನ್ನು ಕಾಣಬಹುದಾಗಿದೆ. ಇದು ಪ್ರಜಾಪ್ರಭುತ್ವ ಅವನತಿಗೆ ಕಾರಣವಾಗುತ್ತದೆ” ಎಂದು ಫೈನಾನ್ಷಿಯಲ್ ಟೈಮ್ಸ್ ಸಂಪಾದಕೀಯವು ಹೇಳಿದೆ.

”ಮೋದಿ ಬೆಂಬಲಿಗರು ದೇಶದಲ್ಲಿನ ಬಹುತೇಕ ಮಾಧ್ಯಮ, ನಾಗರಿಕ ಸಮಾಜ ಮತ್ತು ರಾಜಕೀಯ ನಾಯಕರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿಗ್ರಹಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಭಾರತದ ಮುಸ್ಲಿಂ ಅಲ್ಪಸಂಖ್ಯಾತರೊಂದಿಗೆ ಅಂತರ್-ಧರ್ಮೀಯ ಉದ್ವಿಗ್ನತೆಯನ್ನು ಉಂಟುಮಾಡುತ್ತಿದ್ದಾರೆ” ಎಂದು ಸಂಪಾದಕೀಯದಲ್ಲಿ ಸೇರಿಸಿದ್ದಾರೆ.

”ಭಾರತವು “ಸರ್ವಾಧಿಕಾರ” ಆಡಳಿತವನ್ನು ಹೊಂದುತ್ತಿದೆ” ಎಂದು ವೆರೈಟೀಸ್ ಆಫ್ ಡೆಮಾಕ್ರಸಿ ಇನ್‌ಸ್ಟಿಟ್ಯೂಟ್, ಸ್ವೀಡಿಷ್ ಥಿಂಕ್ ಟ್ಯಾಂಕ್‌ ಬಣ್ಣಿಸಿರುವ ಬಗ್ಗೆ ಬ್ರಿಟಿಷ್ ದಿನಪತ್ರಿಕೆ ಗಮನಿಸಿದೆ.

”2002ರ ಗುಜರಾತ್ ಗಲಭೆಯಲ್ಲಿ ಮೋದಿಯವರ ಪಾತ್ರದ ಕುರಿತಾದ ಸಾಕ್ಷ್ಯಚಿತ್ರವನ್ನು ಬ್ರಿಟಿಷ್ ಬ್ರಾಡ್‌ಕಾಸ್ಟರ್ (ಬಿಬಿಸಿ) ಬಿಡುಗಡೆ ಮಾಡಿತ್ತು. ಅದಕ್ಕೆ ಪ್ರತಿಯಾಗಿ ಕೆಲವೇ ವಾರಗಳ ನಂತರ, ಫೆಬ್ರವರಿಯಲ್ಲಿ BBCಯ ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಆದಾಯ ತೆರಿಗೆ (ಐಟಿ) ದಾಳಿ ನಡೆಸಿದ ಬಗ್ಗೆ ಉಲ್ಲೇಖಿಸಿ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಸಂಪಾದಕೀಯದಲ್ಲಿ ಪತ್ರಿಕೆ ಬರೆದಿದೆ.

”ಮೋದಿ ಸರ್ಕಾರ ಮಾಧ್ಯಮ ಸಂಸ್ಥೆಗಳ ಮಾಲೀಕರೊಂದಿಗೆ ಸಂಬಂಧ ಹೊಂದಿದೆ. ಆ ಮೂಲಕ ಸರ್ಕಾರವು ಮಾಧ್ಯಮದ ಮೇಲೆ ಅಗಾಧವಾದ ಪ್ರಭಾವವನ್ನು ಬೀರುತ್ತದೆ ಮತ್ತು ಮಾಧ್ಯಮಗಳ ಸಂಪಾದಕರು ಸರ್ಕಾರದ ರೇಖೆಯನ್ನು ಅನುಸರಿಸಲು ಪತ್ರಕರ್ತರಿಗೆ ಒತ್ತಡ ಹೇರುತ್ತಾರೆ” ಎಂದು ಫೈನಾನ್ಶಿಯಲ್ ಟೈಮ್ಸ್ ಆರೋಪ ಮಾಡಿದೆ.

ಇತ್ತಿಚೆಗೆ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಬದಲಾವಣೆ ಮಾಡಲಾಯಿತು ಅದು “ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ನಿರುತ್ಸಾಹಗೊಳಿಸುವ ಬೆಳವಣಿಗೆಯಾಗಿದೆ” ಎಂದು ವಾಷಿಂಗ್ಟನ್ ಪೋಸ್ಟ್ ಬರೆದಿದೆ.

ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಮಾಡಲಾದ ಹಲವಾರು ಬದಲಾವಣೆಗಳಲ್ಲಿ, 2002ರ ಗುಜರಾತ್ ಗಲಭೆಗಳು, ಭಾರತದಲ್ಲಿ ಮೊಘಲ್ ಆಳ್ವಿಕೆ, ಮೋಹನ್‌ದಾಸ್ ಕರಮಚಂದ್ ಗಾಂಧಿಯನ್ನು ಹತ್ಯೆ ಮಾಡಲು ಹಿಂದೂ ಉಗ್ರಗಾಮಿಗಳ ಪ್ರಯತ್ನಗಳು ಮತ್ತು ನಂತರದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲಿನ ನಿಷೇಧದ ಪ್ಯಾರಾಗಳನ್ನು ಕೈಬಿಡಲಾಗಿದೆ. ಈಗ ಯಾವುದೇ NCERT ಪಠ್ಯಪುಸ್ತಕದಲ್ಲಿ ಗುಜರಾತ್ ಗಲಭೆಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ.

”ಆರೋಗ್ಯಕರ ಪ್ರಜಾಪ್ರಭುತ್ವವು ಅಹಿತಕರ ಘಟನೆಗಳನ್ನು ಮರುಪರಿಶೀಲಣೆ ಮಾಡದೆಯೇ ಗಾಳಿಗೆ ತೂರಿದೆ” ಎಂದು ವಾಷಿಂಗ್ಟನ್ ಪೋಸ್ಟ್ ಸಂಪಾದಕೀಯ ಹೇಳಿದೆ.

ಅಮೆರಿಕ ಮೂಲದ ದಿನಪತ್ರಿಕೆಯ ಸಂಪಾದಕೀಯವು ಬಿಬಿಸಿ ಕಚೇರಿ ಮೇಲಿನ ದಾಳಿಯನ್ನು ಟೀಕಿಸಿದ್ದು, ”ಚೀನಾ, ರಷ್ಯಾ ಮತ್ತು ಇತರ ಸರ್ವಾಧಿಕಾರಗಳು ಸುದ್ದಿ ಮಾಧ್ಯಮವನ್ನು ಮೌನಗೊಳಿಸಲು ಸಾಮಾನ್ಯವಾಗಿ ಬಳಸುವ ಬೆದರಿಕೆ ತಂತ್ರವನ್ನು ಭಾರತ ಸರ್ಕಾರ ಅನುಸರಿಸುತ್ತಿದೆ” ಎಂದು ವಿವರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...