Homeಮುಖಪುಟಗುಜರಾತ್ ಹತ್ಯಾಕಾಂಡದ 67 ಆರೋಪಿಗಳ ಖುಲಾಸೆ: ಭಾರತದ ಪ್ರಜಾಪ್ರಭುತ್ವದ ಬಗ್ಗೆ ವಿದೇಶಿ ಪತ್ರಿಕೆಗಳ ಕಳವಳ

ಗುಜರಾತ್ ಹತ್ಯಾಕಾಂಡದ 67 ಆರೋಪಿಗಳ ಖುಲಾಸೆ: ಭಾರತದ ಪ್ರಜಾಪ್ರಭುತ್ವದ ಬಗ್ಗೆ ವಿದೇಶಿ ಪತ್ರಿಕೆಗಳ ಕಳವಳ

- Advertisement -
- Advertisement -

ರಾಹುಲ್ ಗಾಂಧಿ ಅವರು ತಮ್ಮ ಮೇಲಿನ ಮಾನನಷ್ಟ ಮೊಕದ್ದಮೆಯ ಶಿಕ್ಷೆಗೆ ತಡೆ ನೀಡಬೇಕೆಂಬ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ ದಿನವೇ, ಪ್ರತ್ಯೇಕ ಪ್ರಕರಣದಲ್ಲಿ, 2002ರ ಗುಜರಾತ್ ದಂಗೆಯ ನರೋಡಾ ಗಾಮ್ ಹತ್ಯಾಕಾಂಡದ ಎಲ್ಲಾ 67 ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಈ ಬೆಳವಣಿಗೆಯ ಬಗ್ಗೆ ಎರಡು ವಿದೇಶಿ ಪತ್ರಿಕೆಗಳಲ್ಲಿ ಸಂಪಾದಕೀಯಗಳು -(ಫೈನಾನ್ಶಿಯಲ್ ಟೈಮ್ಸ್ ಮತ್ತು ವಾಷಿಂಗ್ಟನ್ ಟೈಮ್ಸ್ ) ಇದು ಭಾರತದಲ್ಲಿ ”ಪ್ರಜಾಪ್ರಭುತ್ವದ ಹಿನ್ನಡೆ” ಎಂದು ಕಳವಳ ವ್ಯಕ್ತಪಡಿಸಿವೆ.

ಚೀನಾವನ್ನು ವಿರೋಧಿಸುವ ಬರದಲ್ಲಿ ಮೋದಿ ಸರ್ಕಾರದ ಇಂತಹ ಕ್ರಮಗಳ ಬಗ್ಗೆ ಪಾಶ್ಚಿಮಾತ್ಯ ರಾಷ್ಟ್ರಗಳು ಕುರುಡಾಗಿವೆ ಎಂದು ಸಂಪಾದಕೀಯಗಳು ಟೀಕಿಸಿವೆ.

ಮಾರ್ಚ್‌ನಲ್ಲಿ ಅಮೆರಿಕಾ ವಾಣಿಜ್ಯ ಕಾರ್ಯದರ್ಶಿ ಗಿನಾ ರೈಮೊಂಡೋ ಅವರು ಭಾರತಕ್ಕೆ ಭೇಟಿ ನೀಡಿದಾಗ,  ಮೋದಿಯನ್ನು ”ಅದ್ಬುತವಾದ ದೂರದೃಷ್ಟಿ”ಯುಳ್ಳ ಮತ್ತು ”ಅತ್ಯಂತ ಜನಪ್ರಿಯ ವಿಶ್ವ ನಾಯಕ” ಎಂದು ಬಣ್ಣಿಸಿದ್ದಾರೆ ಎಂಬುವುದನ್ನು ಪತ್ರಿಕೆಗಳು ಗಮನಸೆಳೆದಿವೆ.

”ವ್ಯಾಪಾರಿಗಳು ಮತ್ತು ಹೂಡಿಕೆದಾರರು ಚೀನಾದಿಂದ ದೂರವಿದ್ದು, ವೈವಿಧ್ಯತೆ ಇರುವ ಭಾರತದಲ್ಲಿ ಹೂಡಿಕೆ ಮಾಡಲು ಬಯಸುತ್ತಾರೆ. ಆದರೆ ಭಾರತದಲ್ಲಿ ಈಗ ಕಾನೂನಿನ ನಿಯಮಗಳನ್ನು ದುರ್ಬಲಗೊಳ್ಳುತ್ತಿರುವುದರಿಂದ ಹೂಡಿಕಾದರರು ಎರಡು ಬಾರಿ ಯೋಚಿಸುವಂತೆ ಮಾಡುತ್ತದೆ” ಎಂದು ಫೈನಾನ್ಶಿಯಲ್ ಟೈಮ್ಸ್ ಬರೆದಿದೆ.

ಇದನ್ನೂ ಓದಿ: ಮೋದಿ ಜಂಗಲ್ ಸಫಾರಿ ಅಣಕಿಸುವ ವಿಡಿಯೋ ಮಾಡಿದ ಹಾಸ್ಯನಟನಿಗೆ ನೋಟಿಸ್; 11 ಸಾವಿರ ದಂಡ

ಭಾರತದಲ್ಲಿ ಪ್ರಜಾಪ್ರಭುತ್ವದ ಅವನತಿ-

”ಪತ್ರಿಕಾ ಸ್ವಾತಂತ್ರ್ಯ ಹರಣ, ಅಲ್ಪಸಂಖ್ಯಾತರ ಮೇಲೆ ದಾಳಿ ಮಾಡಲು ಪಠ್ಯಕ್ರಮದಲ್ಲಿ ಬದಲಾವಣೆ,
ಗಾಂಧಿಯವರ ಶಿಕ್ಷೆಯನ್ನು ತಡೆಯಲು ಸೂರತ್ ನ್ಯಾಯಾಲಯದ ನಿರಾಕರಣೆ ಜೊತೆಗೆ, ಮೋದಿ ಸರ್ಕಾರವು ವಿರೋಧ ಪಕ್ಷದವರನ್ನು ಮತ್ತು ವಿಮರ್ಶಕರನ್ನು ಗುರಿಯಾಗಿಸಿಕೊಂಡಿರುವುದನ್ನು ಕಾಣಬಹುದಾಗಿದೆ. ಇದು ಪ್ರಜಾಪ್ರಭುತ್ವ ಅವನತಿಗೆ ಕಾರಣವಾಗುತ್ತದೆ” ಎಂದು ಫೈನಾನ್ಷಿಯಲ್ ಟೈಮ್ಸ್ ಸಂಪಾದಕೀಯವು ಹೇಳಿದೆ.

”ಮೋದಿ ಬೆಂಬಲಿಗರು ದೇಶದಲ್ಲಿನ ಬಹುತೇಕ ಮಾಧ್ಯಮ, ನಾಗರಿಕ ಸಮಾಜ ಮತ್ತು ರಾಜಕೀಯ ನಾಯಕರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿಗ್ರಹಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಭಾರತದ ಮುಸ್ಲಿಂ ಅಲ್ಪಸಂಖ್ಯಾತರೊಂದಿಗೆ ಅಂತರ್-ಧರ್ಮೀಯ ಉದ್ವಿಗ್ನತೆಯನ್ನು ಉಂಟುಮಾಡುತ್ತಿದ್ದಾರೆ” ಎಂದು ಸಂಪಾದಕೀಯದಲ್ಲಿ ಸೇರಿಸಿದ್ದಾರೆ.

”ಭಾರತವು “ಸರ್ವಾಧಿಕಾರ” ಆಡಳಿತವನ್ನು ಹೊಂದುತ್ತಿದೆ” ಎಂದು ವೆರೈಟೀಸ್ ಆಫ್ ಡೆಮಾಕ್ರಸಿ ಇನ್‌ಸ್ಟಿಟ್ಯೂಟ್, ಸ್ವೀಡಿಷ್ ಥಿಂಕ್ ಟ್ಯಾಂಕ್‌ ಬಣ್ಣಿಸಿರುವ ಬಗ್ಗೆ ಬ್ರಿಟಿಷ್ ದಿನಪತ್ರಿಕೆ ಗಮನಿಸಿದೆ.

”2002ರ ಗುಜರಾತ್ ಗಲಭೆಯಲ್ಲಿ ಮೋದಿಯವರ ಪಾತ್ರದ ಕುರಿತಾದ ಸಾಕ್ಷ್ಯಚಿತ್ರವನ್ನು ಬ್ರಿಟಿಷ್ ಬ್ರಾಡ್‌ಕಾಸ್ಟರ್ (ಬಿಬಿಸಿ) ಬಿಡುಗಡೆ ಮಾಡಿತ್ತು. ಅದಕ್ಕೆ ಪ್ರತಿಯಾಗಿ ಕೆಲವೇ ವಾರಗಳ ನಂತರ, ಫೆಬ್ರವರಿಯಲ್ಲಿ BBCಯ ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಆದಾಯ ತೆರಿಗೆ (ಐಟಿ) ದಾಳಿ ನಡೆಸಿದ ಬಗ್ಗೆ ಉಲ್ಲೇಖಿಸಿ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಸಂಪಾದಕೀಯದಲ್ಲಿ ಪತ್ರಿಕೆ ಬರೆದಿದೆ.

”ಮೋದಿ ಸರ್ಕಾರ ಮಾಧ್ಯಮ ಸಂಸ್ಥೆಗಳ ಮಾಲೀಕರೊಂದಿಗೆ ಸಂಬಂಧ ಹೊಂದಿದೆ. ಆ ಮೂಲಕ ಸರ್ಕಾರವು ಮಾಧ್ಯಮದ ಮೇಲೆ ಅಗಾಧವಾದ ಪ್ರಭಾವವನ್ನು ಬೀರುತ್ತದೆ ಮತ್ತು ಮಾಧ್ಯಮಗಳ ಸಂಪಾದಕರು ಸರ್ಕಾರದ ರೇಖೆಯನ್ನು ಅನುಸರಿಸಲು ಪತ್ರಕರ್ತರಿಗೆ ಒತ್ತಡ ಹೇರುತ್ತಾರೆ” ಎಂದು ಫೈನಾನ್ಶಿಯಲ್ ಟೈಮ್ಸ್ ಆರೋಪ ಮಾಡಿದೆ.

ಇತ್ತಿಚೆಗೆ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಬದಲಾವಣೆ ಮಾಡಲಾಯಿತು ಅದು “ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ನಿರುತ್ಸಾಹಗೊಳಿಸುವ ಬೆಳವಣಿಗೆಯಾಗಿದೆ” ಎಂದು ವಾಷಿಂಗ್ಟನ್ ಪೋಸ್ಟ್ ಬರೆದಿದೆ.

ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಮಾಡಲಾದ ಹಲವಾರು ಬದಲಾವಣೆಗಳಲ್ಲಿ, 2002ರ ಗುಜರಾತ್ ಗಲಭೆಗಳು, ಭಾರತದಲ್ಲಿ ಮೊಘಲ್ ಆಳ್ವಿಕೆ, ಮೋಹನ್‌ದಾಸ್ ಕರಮಚಂದ್ ಗಾಂಧಿಯನ್ನು ಹತ್ಯೆ ಮಾಡಲು ಹಿಂದೂ ಉಗ್ರಗಾಮಿಗಳ ಪ್ರಯತ್ನಗಳು ಮತ್ತು ನಂತರದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲಿನ ನಿಷೇಧದ ಪ್ಯಾರಾಗಳನ್ನು ಕೈಬಿಡಲಾಗಿದೆ. ಈಗ ಯಾವುದೇ NCERT ಪಠ್ಯಪುಸ್ತಕದಲ್ಲಿ ಗುಜರಾತ್ ಗಲಭೆಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ.

”ಆರೋಗ್ಯಕರ ಪ್ರಜಾಪ್ರಭುತ್ವವು ಅಹಿತಕರ ಘಟನೆಗಳನ್ನು ಮರುಪರಿಶೀಲಣೆ ಮಾಡದೆಯೇ ಗಾಳಿಗೆ ತೂರಿದೆ” ಎಂದು ವಾಷಿಂಗ್ಟನ್ ಪೋಸ್ಟ್ ಸಂಪಾದಕೀಯ ಹೇಳಿದೆ.

ಅಮೆರಿಕ ಮೂಲದ ದಿನಪತ್ರಿಕೆಯ ಸಂಪಾದಕೀಯವು ಬಿಬಿಸಿ ಕಚೇರಿ ಮೇಲಿನ ದಾಳಿಯನ್ನು ಟೀಕಿಸಿದ್ದು, ”ಚೀನಾ, ರಷ್ಯಾ ಮತ್ತು ಇತರ ಸರ್ವಾಧಿಕಾರಗಳು ಸುದ್ದಿ ಮಾಧ್ಯಮವನ್ನು ಮೌನಗೊಳಿಸಲು ಸಾಮಾನ್ಯವಾಗಿ ಬಳಸುವ ಬೆದರಿಕೆ ತಂತ್ರವನ್ನು ಭಾರತ ಸರ್ಕಾರ ಅನುಸರಿಸುತ್ತಿದೆ” ಎಂದು ವಿವರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...