Homeಕರ್ನಾಟಕ2007ರ ಆಂಧ್ರದ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ಆರೋಪಿ ಪೊಲೀಸರ ಖುಲಾಸೆ; ಪೊಲೀಸರ ತನಿಖೆಯಲ್ಲೂ ಅನ್ಯಾಯ ಎಂದ ಸಂತ್ರಸ್ತೆ

2007ರ ಆಂಧ್ರದ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ಆರೋಪಿ ಪೊಲೀಸರ ಖುಲಾಸೆ; ಪೊಲೀಸರ ತನಿಖೆಯಲ್ಲೂ ಅನ್ಯಾಯ ಎಂದ ಸಂತ್ರಸ್ತೆ

- Advertisement -
- Advertisement -

2007ರಲ್ಲಿ ಆಂಧ್ರಪ್ರದೇಶದ ಪೊಲೀಸ್ ಸಿಬ್ಬಂದಿಗಳ ಗುಂಪು ಸಾಮೂಹಿಕ ಅತ್ಯಾಚಾರವೆಸಗಿದ್ದರು ಎಂದು ಹೇಳಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಡಕಟ್ಟು ಮಹಿಳೆಯೊಬ್ಬರು, ಪೊಲೀಸರು ಇನ್ನೊಬ್ಬ ಪೋಲೀಸರ ಅಪರಾಧವನ್ನು ಎಂದಿಗೂ ತನಿಖೆ ಮಾಡುವುದಿಲ್ಲ ಎಂದು ಭಾನುವಾರ ಆರೋಪಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ವರದಿ ಮಾಡಿದೆ.

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ 2007ರ ಆಗಸ್ಟ್ 20ರಂದು 11 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ಹೊತ್ತಿದ್ದ ಎಲ್ಲ 13 ಪೊಲೀಸರನ್ನು ವಿಶಾಖಪಟ್ಟಣಂನ ಜಿಲ್ಲಾ ನ್ಯಾಯಾಲಯವು ಏಪ್ರಿಲ್ 6ರಂದು ಖುಲಾಸೆಗೊಳಿಸಿದೆ. ಈ ಪ್ರಕರಣದ ತನಿಖಾಧಿಕಾರಿ ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಲು ವಿಫಲರಾಗಿದ್ದರು ಎಂದು ದಿ ನ್ಯೂಸ್ ಮಿನಿಟ್ ಹೇಳಿದೆ.

ವಿಶೇಷ ನ್ಯಾಯಾಧೀಶ ಎಲ್.ಶ್ರೀಧರ್ ಅವರು, ತನಿಖಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಿ ಮತ್ತು ಮಹಿಳೆಯರಿಗೆ ಪರಿಹಾರ ನೀಡುವಂತೆ ಸೂಚಿಸಿದರು.

”ನಮಗೆ ಪರಿಹಾರವನ್ನು ಒದಗಿಸಲು ನ್ಯಾಯಾಲಯದ ಆದೇಶ ನೀಡಿರುವುದು ಬೆಳ್ಳಿ ರೇಖೆ ಎಳೆದಂತಾಗಿದೆ ಅಂದರೆ ನಾವು ಬಲಿಪಶುಗಳು ಎಂದು ನ್ಯಾಯಾಲಯ ನಂಬುತ್ತದೆ” ಎಂದು ಬುಡಕಟ್ಟು ಮಹಿಳೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಇದನ್ನೂ ಓದಿ: ಜಾರ್ಖಂಡ್: 4 ದಿನದ ಹಸುಗೂಸನ್ನು ತುಳಿದ ಕೊಂದ ಆರೋಪ: ಆರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಸಾಮೂಹಿಕ ಅತ್ಯಾಚಾರ ಪ್ರಕರಣ

ಆಗಸ್ಟ್ 2007ರಲ್ಲಿ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ವಾಕಪಲ್ಲಿ ಗ್ರಾಮದಲ್ಲಿ ವಿಶೇಷ ಮಾವೋವಾದಿ ವಿರೋಧಿ ತಂಡವು ನಡೆಸಿದ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ಪೊಲೀಸರು ತಮ್ಮ ಮೇಲೆ ಬಂದೂಕು ತೋರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಕೊಂಡ್ ಬುಡಕಟ್ಟು ಜನಾಂಗದ ಹನ್ನೊಂದು ಮಹಿಳೆಯರು ಆರೋಪಿಸಿದ್ದಾರೆ.

ಎಫ್‌ಐಆರ್‌ ತಡವಾಗಿ ದಾಖಲಿಸಿಕೊಳ್ಳಲಾಗಿದೆ ಹಾಗೂ ವೈದ್ಯಕೀಯ ಪರೀಕ್ಷೆಯಲ್ಲೂ ವಿಳಂಬ ಮಾಡಲಾಗಿದೆ. ಈ ಪ್ರಕರಣದ ತನಿಖೆ ಕೂಡ ನಿಧಾನಗತಿಯಲ್ಲಿ ನಡೆಸಿ ಲೋಪ ಎಸಗಲಾಗಿದೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2) (ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ) ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ಬಳಿಕ ಸರಿಸುಮಾರು 11 ವರ್ಷಗಳ ನಂತರ ಆಪಾದಿತ ಸಾಮೂಹಿಕ ಅತ್ಯಾಚಾರದ ಪ್ರಕರಣದ ವಿಚಾರಣೆಯು ಆಗಸ್ಟ್ 2018ರಲ್ಲಿ ಪ್ರಾರಂಭವಾಯಿತು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ವಿಚಾರಣೆ ಪ್ರಾರಂಭವಾಗುವ ವೇಳೆಗೆ 11 ಮಹಿಳೆಯರಲ್ಲಿ ಇಬ್ಬರು ಸಾವನ್ನಪ್ಪಿದ್ದರು.

ತನಿಖೆಯಲ್ಲಿ ಲೋಪ

ಮಹಿಳೆಯರು ತಮ್ಮ ಮೇಲೆ ಅತ್ಯಾಚಾರವೆಸಗಿದ್ದಾರೆಂದು ದೂರು ನೀಡಿದ ಆರು ದಿನಗಳ ನಂತರ 2007ರ ಆಗಸ್ಟ್ 26ರಂದು ಪೊಲೀಸರು ಈ ಪ್ರಕರಣದ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವಿಶಾಕಪಟ್ಟಣಂ ಜಿಲ್ಲಾ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಹೇಳಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸುಂಕರ ರಾಜೇಂದ್ರ ಪ್ರಸಾದ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಈ ಆರೋಪಗ ತನಿಖೆಗಾಗಿ ಆಗಸ್ಟ್ 27, 2007ರಂದು ವಿಶಾಖಪಟ್ಟಣಂ ಗ್ರಾಮಾಂತರದ ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ ಆನಂದ ರಾವ್ ಅವರನ್ನು ನೇಮಿಸಿತು. ಆದರೆ, ಸೆಪ್ಟೆಂಬರ್ 8ರವರೆಗೆ ರಾವ್ ಗ್ರಾಮಕ್ಕೆ ಭೇಟಿ ನೀಡಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಅಪರಾಧದ ಸ್ಥಳವನ್ನು ಸುರಕ್ಷಿತವಾಗಿರಿಸಲಾಗಿಲ್ಲ, ಪುರಾವೆಗಳನ್ನು ಸಂಗ್ರಹಿಸಲಾಗಿಲ್ಲ ಮತ್ತು ಆರೋಪಿಗಳ ಸಾಮೂಹಿಕ ಅತ್ಯಾಚಾರದ ನಂತರ 17 ದಿನಗಳವರೆಗೆ ದೂರುದಾರರ ಹೇಳಿಕೆಗಳನ್ನು ದಾಖಲಿಸಲಾಗಿಲ್ಲ.

ಎಫ್‌ಐಆರ್ ದಾಖಲಿಸಲು ಆರು ದಿನಗಳ ವಿಳಂಬದ ನಂತರ, ಪೊಲೀಸರು ಮಹಿಳೆಯರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲು ಮತ್ತೆರೆಡು ದಿನ ವಿಳಂಬ ಮಾಡಿದ್ದರು. ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲು ಅಸಮರ್ಪಕ ಸೌಲಭ್ಯಗಳನ್ನು ಹೊಂದಿರುವ ಆಸ್ಪತ್ರೆಗೆ ಆ ಮಹಿಳೆಯರನ್ನು ಕಳುಹಿಸಲು ಪೊಲೀಸರು ಪ್ರಯತ್ನಿಸಿದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2018ರಲ್ಲಿ ವಿಚಾರಣೆ ಪ್ರಾರಂಭವಾಗುವವರೆಗೂ ಆರೋಪಿಗಳನ್ನು ಪರೀಕ್ಷೆಯನ್ನು ಮಾಡಲಾಗಿಲ್ಲ. ಈ ಘಟನೆಯ ನಂತರ ಅವರನ್ನು ತಮ್ಮ ಗ್ರಾಮದಲ್ಲಿ ಬಹಿಷ್ಕರಿಸಲಾಗಿದೆ ಎಂದು ದೂರುದಾರರಲ್ಲಿ ಒಬ್ಬ ಮಹಿಳೆ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

”ನಮ್ಮ ಗಂಡಂದಿರು ಮತ್ತು ಗ್ರಾಮದ ಹಿರಿಯರಿಂದ ನಾವು ಕ್ರೂರ ಮತ್ತು ಅಮಾನವೀಯ ಚಿಕಿತ್ಸೆಗೆ ಒಳಗಾಗಿದ್ದೇವೆ” ಎಂದು ಅವರು ಹೇಳಿದರು. ”..ನಮ್ಮ ಮಕ್ಕಳೊಂದಿಗೆ ಸಂವಹನ ನಡೆಸಲು ನಮಗೆ ಅವಕಾಶವಿರಲಿಲ್ಲ. ಹಲವಾರು ದಿನಗಳ ನಂತರ ನಮ್ಮನ್ನು ನಮ್ಮ ಮನೆಗಳಿಗೆ ಮರಳಿ ಅನುಮತಿಸಲಾಯಿತು ಮತ್ತು ಶುದ್ಧೀಕರಣ ಸ್ನಾನವನ್ನು ತೆಗೆದುಕೊಳ್ಳಬೇಕಾಯಿತು” ಎಂದು ಮಹಿಳೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...