Homeಕರ್ನಾಟಕ2007ರ ಆಂಧ್ರದ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ಆರೋಪಿ ಪೊಲೀಸರ ಖುಲಾಸೆ; ಪೊಲೀಸರ ತನಿಖೆಯಲ್ಲೂ ಅನ್ಯಾಯ ಎಂದ ಸಂತ್ರಸ್ತೆ

2007ರ ಆಂಧ್ರದ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ಆರೋಪಿ ಪೊಲೀಸರ ಖುಲಾಸೆ; ಪೊಲೀಸರ ತನಿಖೆಯಲ್ಲೂ ಅನ್ಯಾಯ ಎಂದ ಸಂತ್ರಸ್ತೆ

- Advertisement -
- Advertisement -

2007ರಲ್ಲಿ ಆಂಧ್ರಪ್ರದೇಶದ ಪೊಲೀಸ್ ಸಿಬ್ಬಂದಿಗಳ ಗುಂಪು ಸಾಮೂಹಿಕ ಅತ್ಯಾಚಾರವೆಸಗಿದ್ದರು ಎಂದು ಹೇಳಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಡಕಟ್ಟು ಮಹಿಳೆಯೊಬ್ಬರು, ಪೊಲೀಸರು ಇನ್ನೊಬ್ಬ ಪೋಲೀಸರ ಅಪರಾಧವನ್ನು ಎಂದಿಗೂ ತನಿಖೆ ಮಾಡುವುದಿಲ್ಲ ಎಂದು ಭಾನುವಾರ ಆರೋಪಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ವರದಿ ಮಾಡಿದೆ.

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ 2007ರ ಆಗಸ್ಟ್ 20ರಂದು 11 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ಹೊತ್ತಿದ್ದ ಎಲ್ಲ 13 ಪೊಲೀಸರನ್ನು ವಿಶಾಖಪಟ್ಟಣಂನ ಜಿಲ್ಲಾ ನ್ಯಾಯಾಲಯವು ಏಪ್ರಿಲ್ 6ರಂದು ಖುಲಾಸೆಗೊಳಿಸಿದೆ. ಈ ಪ್ರಕರಣದ ತನಿಖಾಧಿಕಾರಿ ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಲು ವಿಫಲರಾಗಿದ್ದರು ಎಂದು ದಿ ನ್ಯೂಸ್ ಮಿನಿಟ್ ಹೇಳಿದೆ.

ವಿಶೇಷ ನ್ಯಾಯಾಧೀಶ ಎಲ್.ಶ್ರೀಧರ್ ಅವರು, ತನಿಖಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಿ ಮತ್ತು ಮಹಿಳೆಯರಿಗೆ ಪರಿಹಾರ ನೀಡುವಂತೆ ಸೂಚಿಸಿದರು.

”ನಮಗೆ ಪರಿಹಾರವನ್ನು ಒದಗಿಸಲು ನ್ಯಾಯಾಲಯದ ಆದೇಶ ನೀಡಿರುವುದು ಬೆಳ್ಳಿ ರೇಖೆ ಎಳೆದಂತಾಗಿದೆ ಅಂದರೆ ನಾವು ಬಲಿಪಶುಗಳು ಎಂದು ನ್ಯಾಯಾಲಯ ನಂಬುತ್ತದೆ” ಎಂದು ಬುಡಕಟ್ಟು ಮಹಿಳೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಇದನ್ನೂ ಓದಿ: ಜಾರ್ಖಂಡ್: 4 ದಿನದ ಹಸುಗೂಸನ್ನು ತುಳಿದ ಕೊಂದ ಆರೋಪ: ಆರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಸಾಮೂಹಿಕ ಅತ್ಯಾಚಾರ ಪ್ರಕರಣ

ಆಗಸ್ಟ್ 2007ರಲ್ಲಿ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ವಾಕಪಲ್ಲಿ ಗ್ರಾಮದಲ್ಲಿ ವಿಶೇಷ ಮಾವೋವಾದಿ ವಿರೋಧಿ ತಂಡವು ನಡೆಸಿದ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ಪೊಲೀಸರು ತಮ್ಮ ಮೇಲೆ ಬಂದೂಕು ತೋರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಕೊಂಡ್ ಬುಡಕಟ್ಟು ಜನಾಂಗದ ಹನ್ನೊಂದು ಮಹಿಳೆಯರು ಆರೋಪಿಸಿದ್ದಾರೆ.

ಎಫ್‌ಐಆರ್‌ ತಡವಾಗಿ ದಾಖಲಿಸಿಕೊಳ್ಳಲಾಗಿದೆ ಹಾಗೂ ವೈದ್ಯಕೀಯ ಪರೀಕ್ಷೆಯಲ್ಲೂ ವಿಳಂಬ ಮಾಡಲಾಗಿದೆ. ಈ ಪ್ರಕರಣದ ತನಿಖೆ ಕೂಡ ನಿಧಾನಗತಿಯಲ್ಲಿ ನಡೆಸಿ ಲೋಪ ಎಸಗಲಾಗಿದೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2) (ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ) ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ಬಳಿಕ ಸರಿಸುಮಾರು 11 ವರ್ಷಗಳ ನಂತರ ಆಪಾದಿತ ಸಾಮೂಹಿಕ ಅತ್ಯಾಚಾರದ ಪ್ರಕರಣದ ವಿಚಾರಣೆಯು ಆಗಸ್ಟ್ 2018ರಲ್ಲಿ ಪ್ರಾರಂಭವಾಯಿತು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ವಿಚಾರಣೆ ಪ್ರಾರಂಭವಾಗುವ ವೇಳೆಗೆ 11 ಮಹಿಳೆಯರಲ್ಲಿ ಇಬ್ಬರು ಸಾವನ್ನಪ್ಪಿದ್ದರು.

ತನಿಖೆಯಲ್ಲಿ ಲೋಪ

ಮಹಿಳೆಯರು ತಮ್ಮ ಮೇಲೆ ಅತ್ಯಾಚಾರವೆಸಗಿದ್ದಾರೆಂದು ದೂರು ನೀಡಿದ ಆರು ದಿನಗಳ ನಂತರ 2007ರ ಆಗಸ್ಟ್ 26ರಂದು ಪೊಲೀಸರು ಈ ಪ್ರಕರಣದ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವಿಶಾಕಪಟ್ಟಣಂ ಜಿಲ್ಲಾ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಹೇಳಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸುಂಕರ ರಾಜೇಂದ್ರ ಪ್ರಸಾದ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಈ ಆರೋಪಗ ತನಿಖೆಗಾಗಿ ಆಗಸ್ಟ್ 27, 2007ರಂದು ವಿಶಾಖಪಟ್ಟಣಂ ಗ್ರಾಮಾಂತರದ ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ ಆನಂದ ರಾವ್ ಅವರನ್ನು ನೇಮಿಸಿತು. ಆದರೆ, ಸೆಪ್ಟೆಂಬರ್ 8ರವರೆಗೆ ರಾವ್ ಗ್ರಾಮಕ್ಕೆ ಭೇಟಿ ನೀಡಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಅಪರಾಧದ ಸ್ಥಳವನ್ನು ಸುರಕ್ಷಿತವಾಗಿರಿಸಲಾಗಿಲ್ಲ, ಪುರಾವೆಗಳನ್ನು ಸಂಗ್ರಹಿಸಲಾಗಿಲ್ಲ ಮತ್ತು ಆರೋಪಿಗಳ ಸಾಮೂಹಿಕ ಅತ್ಯಾಚಾರದ ನಂತರ 17 ದಿನಗಳವರೆಗೆ ದೂರುದಾರರ ಹೇಳಿಕೆಗಳನ್ನು ದಾಖಲಿಸಲಾಗಿಲ್ಲ.

ಎಫ್‌ಐಆರ್ ದಾಖಲಿಸಲು ಆರು ದಿನಗಳ ವಿಳಂಬದ ನಂತರ, ಪೊಲೀಸರು ಮಹಿಳೆಯರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲು ಮತ್ತೆರೆಡು ದಿನ ವಿಳಂಬ ಮಾಡಿದ್ದರು. ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲು ಅಸಮರ್ಪಕ ಸೌಲಭ್ಯಗಳನ್ನು ಹೊಂದಿರುವ ಆಸ್ಪತ್ರೆಗೆ ಆ ಮಹಿಳೆಯರನ್ನು ಕಳುಹಿಸಲು ಪೊಲೀಸರು ಪ್ರಯತ್ನಿಸಿದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2018ರಲ್ಲಿ ವಿಚಾರಣೆ ಪ್ರಾರಂಭವಾಗುವವರೆಗೂ ಆರೋಪಿಗಳನ್ನು ಪರೀಕ್ಷೆಯನ್ನು ಮಾಡಲಾಗಿಲ್ಲ. ಈ ಘಟನೆಯ ನಂತರ ಅವರನ್ನು ತಮ್ಮ ಗ್ರಾಮದಲ್ಲಿ ಬಹಿಷ್ಕರಿಸಲಾಗಿದೆ ಎಂದು ದೂರುದಾರರಲ್ಲಿ ಒಬ್ಬ ಮಹಿಳೆ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

”ನಮ್ಮ ಗಂಡಂದಿರು ಮತ್ತು ಗ್ರಾಮದ ಹಿರಿಯರಿಂದ ನಾವು ಕ್ರೂರ ಮತ್ತು ಅಮಾನವೀಯ ಚಿಕಿತ್ಸೆಗೆ ಒಳಗಾಗಿದ್ದೇವೆ” ಎಂದು ಅವರು ಹೇಳಿದರು. ”..ನಮ್ಮ ಮಕ್ಕಳೊಂದಿಗೆ ಸಂವಹನ ನಡೆಸಲು ನಮಗೆ ಅವಕಾಶವಿರಲಿಲ್ಲ. ಹಲವಾರು ದಿನಗಳ ನಂತರ ನಮ್ಮನ್ನು ನಮ್ಮ ಮನೆಗಳಿಗೆ ಮರಳಿ ಅನುಮತಿಸಲಾಯಿತು ಮತ್ತು ಶುದ್ಧೀಕರಣ ಸ್ನಾನವನ್ನು ತೆಗೆದುಕೊಳ್ಳಬೇಕಾಯಿತು” ಎಂದು ಮಹಿಳೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...