Homeಕರ್ನಾಟಕ2007ರ ಆಂಧ್ರದ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ಆರೋಪಿ ಪೊಲೀಸರ ಖುಲಾಸೆ; ಪೊಲೀಸರ ತನಿಖೆಯಲ್ಲೂ ಅನ್ಯಾಯ ಎಂದ ಸಂತ್ರಸ್ತೆ

2007ರ ಆಂಧ್ರದ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ಆರೋಪಿ ಪೊಲೀಸರ ಖುಲಾಸೆ; ಪೊಲೀಸರ ತನಿಖೆಯಲ್ಲೂ ಅನ್ಯಾಯ ಎಂದ ಸಂತ್ರಸ್ತೆ

- Advertisement -
- Advertisement -

2007ರಲ್ಲಿ ಆಂಧ್ರಪ್ರದೇಶದ ಪೊಲೀಸ್ ಸಿಬ್ಬಂದಿಗಳ ಗುಂಪು ಸಾಮೂಹಿಕ ಅತ್ಯಾಚಾರವೆಸಗಿದ್ದರು ಎಂದು ಹೇಳಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಡಕಟ್ಟು ಮಹಿಳೆಯೊಬ್ಬರು, ಪೊಲೀಸರು ಇನ್ನೊಬ್ಬ ಪೋಲೀಸರ ಅಪರಾಧವನ್ನು ಎಂದಿಗೂ ತನಿಖೆ ಮಾಡುವುದಿಲ್ಲ ಎಂದು ಭಾನುವಾರ ಆರೋಪಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ವರದಿ ಮಾಡಿದೆ.

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ 2007ರ ಆಗಸ್ಟ್ 20ರಂದು 11 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ಹೊತ್ತಿದ್ದ ಎಲ್ಲ 13 ಪೊಲೀಸರನ್ನು ವಿಶಾಖಪಟ್ಟಣಂನ ಜಿಲ್ಲಾ ನ್ಯಾಯಾಲಯವು ಏಪ್ರಿಲ್ 6ರಂದು ಖುಲಾಸೆಗೊಳಿಸಿದೆ. ಈ ಪ್ರಕರಣದ ತನಿಖಾಧಿಕಾರಿ ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಲು ವಿಫಲರಾಗಿದ್ದರು ಎಂದು ದಿ ನ್ಯೂಸ್ ಮಿನಿಟ್ ಹೇಳಿದೆ.

ವಿಶೇಷ ನ್ಯಾಯಾಧೀಶ ಎಲ್.ಶ್ರೀಧರ್ ಅವರು, ತನಿಖಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಿ ಮತ್ತು ಮಹಿಳೆಯರಿಗೆ ಪರಿಹಾರ ನೀಡುವಂತೆ ಸೂಚಿಸಿದರು.

”ನಮಗೆ ಪರಿಹಾರವನ್ನು ಒದಗಿಸಲು ನ್ಯಾಯಾಲಯದ ಆದೇಶ ನೀಡಿರುವುದು ಬೆಳ್ಳಿ ರೇಖೆ ಎಳೆದಂತಾಗಿದೆ ಅಂದರೆ ನಾವು ಬಲಿಪಶುಗಳು ಎಂದು ನ್ಯಾಯಾಲಯ ನಂಬುತ್ತದೆ” ಎಂದು ಬುಡಕಟ್ಟು ಮಹಿಳೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಇದನ್ನೂ ಓದಿ: ಜಾರ್ಖಂಡ್: 4 ದಿನದ ಹಸುಗೂಸನ್ನು ತುಳಿದ ಕೊಂದ ಆರೋಪ: ಆರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಸಾಮೂಹಿಕ ಅತ್ಯಾಚಾರ ಪ್ರಕರಣ

ಆಗಸ್ಟ್ 2007ರಲ್ಲಿ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ವಾಕಪಲ್ಲಿ ಗ್ರಾಮದಲ್ಲಿ ವಿಶೇಷ ಮಾವೋವಾದಿ ವಿರೋಧಿ ತಂಡವು ನಡೆಸಿದ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ಪೊಲೀಸರು ತಮ್ಮ ಮೇಲೆ ಬಂದೂಕು ತೋರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಕೊಂಡ್ ಬುಡಕಟ್ಟು ಜನಾಂಗದ ಹನ್ನೊಂದು ಮಹಿಳೆಯರು ಆರೋಪಿಸಿದ್ದಾರೆ.

ಎಫ್‌ಐಆರ್‌ ತಡವಾಗಿ ದಾಖಲಿಸಿಕೊಳ್ಳಲಾಗಿದೆ ಹಾಗೂ ವೈದ್ಯಕೀಯ ಪರೀಕ್ಷೆಯಲ್ಲೂ ವಿಳಂಬ ಮಾಡಲಾಗಿದೆ. ಈ ಪ್ರಕರಣದ ತನಿಖೆ ಕೂಡ ನಿಧಾನಗತಿಯಲ್ಲಿ ನಡೆಸಿ ಲೋಪ ಎಸಗಲಾಗಿದೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2) (ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ) ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ಬಳಿಕ ಸರಿಸುಮಾರು 11 ವರ್ಷಗಳ ನಂತರ ಆಪಾದಿತ ಸಾಮೂಹಿಕ ಅತ್ಯಾಚಾರದ ಪ್ರಕರಣದ ವಿಚಾರಣೆಯು ಆಗಸ್ಟ್ 2018ರಲ್ಲಿ ಪ್ರಾರಂಭವಾಯಿತು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ವಿಚಾರಣೆ ಪ್ರಾರಂಭವಾಗುವ ವೇಳೆಗೆ 11 ಮಹಿಳೆಯರಲ್ಲಿ ಇಬ್ಬರು ಸಾವನ್ನಪ್ಪಿದ್ದರು.

ತನಿಖೆಯಲ್ಲಿ ಲೋಪ

ಮಹಿಳೆಯರು ತಮ್ಮ ಮೇಲೆ ಅತ್ಯಾಚಾರವೆಸಗಿದ್ದಾರೆಂದು ದೂರು ನೀಡಿದ ಆರು ದಿನಗಳ ನಂತರ 2007ರ ಆಗಸ್ಟ್ 26ರಂದು ಪೊಲೀಸರು ಈ ಪ್ರಕರಣದ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವಿಶಾಕಪಟ್ಟಣಂ ಜಿಲ್ಲಾ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಹೇಳಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸುಂಕರ ರಾಜೇಂದ್ರ ಪ್ರಸಾದ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಈ ಆರೋಪಗ ತನಿಖೆಗಾಗಿ ಆಗಸ್ಟ್ 27, 2007ರಂದು ವಿಶಾಖಪಟ್ಟಣಂ ಗ್ರಾಮಾಂತರದ ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ ಆನಂದ ರಾವ್ ಅವರನ್ನು ನೇಮಿಸಿತು. ಆದರೆ, ಸೆಪ್ಟೆಂಬರ್ 8ರವರೆಗೆ ರಾವ್ ಗ್ರಾಮಕ್ಕೆ ಭೇಟಿ ನೀಡಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಅಪರಾಧದ ಸ್ಥಳವನ್ನು ಸುರಕ್ಷಿತವಾಗಿರಿಸಲಾಗಿಲ್ಲ, ಪುರಾವೆಗಳನ್ನು ಸಂಗ್ರಹಿಸಲಾಗಿಲ್ಲ ಮತ್ತು ಆರೋಪಿಗಳ ಸಾಮೂಹಿಕ ಅತ್ಯಾಚಾರದ ನಂತರ 17 ದಿನಗಳವರೆಗೆ ದೂರುದಾರರ ಹೇಳಿಕೆಗಳನ್ನು ದಾಖಲಿಸಲಾಗಿಲ್ಲ.

ಎಫ್‌ಐಆರ್ ದಾಖಲಿಸಲು ಆರು ದಿನಗಳ ವಿಳಂಬದ ನಂತರ, ಪೊಲೀಸರು ಮಹಿಳೆಯರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲು ಮತ್ತೆರೆಡು ದಿನ ವಿಳಂಬ ಮಾಡಿದ್ದರು. ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲು ಅಸಮರ್ಪಕ ಸೌಲಭ್ಯಗಳನ್ನು ಹೊಂದಿರುವ ಆಸ್ಪತ್ರೆಗೆ ಆ ಮಹಿಳೆಯರನ್ನು ಕಳುಹಿಸಲು ಪೊಲೀಸರು ಪ್ರಯತ್ನಿಸಿದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2018ರಲ್ಲಿ ವಿಚಾರಣೆ ಪ್ರಾರಂಭವಾಗುವವರೆಗೂ ಆರೋಪಿಗಳನ್ನು ಪರೀಕ್ಷೆಯನ್ನು ಮಾಡಲಾಗಿಲ್ಲ. ಈ ಘಟನೆಯ ನಂತರ ಅವರನ್ನು ತಮ್ಮ ಗ್ರಾಮದಲ್ಲಿ ಬಹಿಷ್ಕರಿಸಲಾಗಿದೆ ಎಂದು ದೂರುದಾರರಲ್ಲಿ ಒಬ್ಬ ಮಹಿಳೆ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

”ನಮ್ಮ ಗಂಡಂದಿರು ಮತ್ತು ಗ್ರಾಮದ ಹಿರಿಯರಿಂದ ನಾವು ಕ್ರೂರ ಮತ್ತು ಅಮಾನವೀಯ ಚಿಕಿತ್ಸೆಗೆ ಒಳಗಾಗಿದ್ದೇವೆ” ಎಂದು ಅವರು ಹೇಳಿದರು. ”..ನಮ್ಮ ಮಕ್ಕಳೊಂದಿಗೆ ಸಂವಹನ ನಡೆಸಲು ನಮಗೆ ಅವಕಾಶವಿರಲಿಲ್ಲ. ಹಲವಾರು ದಿನಗಳ ನಂತರ ನಮ್ಮನ್ನು ನಮ್ಮ ಮನೆಗಳಿಗೆ ಮರಳಿ ಅನುಮತಿಸಲಾಯಿತು ಮತ್ತು ಶುದ್ಧೀಕರಣ ಸ್ನಾನವನ್ನು ತೆಗೆದುಕೊಳ್ಳಬೇಕಾಯಿತು” ಎಂದು ಮಹಿಳೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...