Homeಕರೋನಾ ತಲ್ಲಣಡ್ರೈ ರನ್ ಎಂದರೇನು?: ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಮೂರು ಲೋಪಗಳು

ಡ್ರೈ ರನ್ ಎಂದರೇನು?: ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಮೂರು ಲೋಪಗಳು

ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳ 16 ಕೇಂದ್ರಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ.

- Advertisement -
- Advertisement -

ದೇಶದಲ್ಲಿ ಎರಡನೇ ಹಂತದ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ. ದೇಶದ 116 ಜಿಲ್ಲೆಗಳ 259 ಕೇಂದ್ರಗಳಲ್ಲಿ ಲಸಿಕೆ ತಾಲೀಮು ಆರಂಭವಾಗಿದೆ. ಅತಿ ದೊಡ್ಡ ಲಸಿಕೆ ವಿತರಣೆ ಕಾರ್ಯದ ಅಂಗವಾಗಿ ದೇಶದಲ್ಲಿ ಈ ತಾಲೀಮು ನಡೆಯುತ್ತಿದೆ.

ಮೊದಲ ತಾಲೀಮು, ಅಸ್ಸಾಂ, ಆಂಧ್ರಪ್ರದೇಶ, ಪಂಜಾಬ್ ಮತ್ತು ಗುಜರಾತ್ ನಾಲ್ಕು ರಾಜ್ಯಗಳಲ್ಲಿ ಡಿಸೆಂಬರ್ 28, 29 ರಂದು ನಡೆದಿದೆ. ಈ ಪ್ರಯೋಗದಲ್ಲಿ ಮೂರು ಪ್ರಮುಖ ಲೋಪಗಳು ಕಂಡು ಬಂದಿದ್ದು, ಅವುಗಳನ್ನು ಸರಿಪಡಿಸುವ ಕೆಲಸ ಎರಡನೇ ಹಂತದ ತಾಲೀಮಿನಲ್ಲಿ ನಡೆದಿದೆ.

ಡ್ರೈ ರನ್ ಎಂದರೇನು?

ಲಸಿಕೆ ಹೇಗೆ ಕೊಡಬೇಕೆಂದು ಪೂರ್ವತಯಾರಿ ನಡೆಸಿ ತಾಲೀಮು ನಡೆಸುವುದನ್ನು ಡ್ರೈ ರನ್ ಎನ್ನುತ್ತಾರೆ. ಲಸಿಕೆ ತಾಲೀಮಿನಲ್ಲಿ ನೈಜ್ಯ ಲಸಿಕೆಯನ್ನು ಹೊರತು ಪಡಿಸಿ ಉಳಿದೆಲ್ಲಾ ಲಸಿಕೆ ವಿತರಣೆ ಯೋಜನೆಯ ಎಲ್ಲ ಪ್ರಕ್ರಿಯೆಗಳು ನಡೆಯಲಿದೆ. ಲಸಿಕೆ ಸಂಗ್ರಹಣೆ ವ್ಯವಸ್ಥೆ, ದಾಖಲೆಗಳ ಪರಿಶೀಲನೆ, ಲಸಿಕೆ ಸಾಗಣಿಕೆ, ಭದ್ರತೆ, ಮೆಲಧಿಕಾರಿಗಳಿಗೆ ವರದಿ ಒಪ್ಪಿಸುವುದು. ಲಸಿಕೆ ವಿತರಣೆಯಲ್ಲಿ ಉಂಟಾಗುವ ಲೋಪದೋಷಗಳನ್ನು ಪರೀಕ್ಷಿಸಲು ಈ ಡ್ರೈ ರನ್ ನಡೆಸಲಾಗುತ್ತಿದೆ.

ಇದನ್ನೂ ಓದಿ: ಭಾರತದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಬಳಕೆಗೆ ಹಸಿರು ನಿಶಾನೆ

ಲಸಿಕೆ ತಾಲೀಮು ನಡೆಸಲು ಸುಮಾರು 96,000 ವ್ಯಾಕ್ಸಿನೇಟರ್‌ಗಳಿಗೆ ತರಬೇತಿ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಪೈಕಿ 2,360 ಮಂದಿಗೆ ರಾಷ್ಟ್ರೀಯ ತರಬೇತುದಾರರ ತರಬೇತಿ ಕೇಂದ್ರದಲ್ಲಿ ಮತ್ತು 57,000 ಕ್ಕೂ ಹೆಚ್ಚು ಜನರಿಗೆ ಜಿಲ್ಲಾ ಮಟ್ಟದಲ್ಲಿ 719 ಜಿಲ್ಲೆಗಳಲ್ಲಿ ತರಬೇತಿ ನೀಡಲಾಗಿದೆ.

ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳ 16 ಕೇಂದ್ರಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ. ಜಿಲ್ಲಾ ಮಟ್ಟದಲ್ಲಿ ಒಂದು ಕೇಂದ್ರ, ತಾಲೂಕು ಮಟ್ಟದಲ್ಲಿ ಒಂದು ಮತ್ತು ಗ್ರಾಮೀಣ ಮಟ್ಟದಲ್ಲಿ ಒಂದೊಂದು ಪ್ರಾಥಮಿಕ ಕೇಂದ್ರಗಳಲ್ಲಿ ಪ್ರಯೋಗ ನಡೆಯಲಿದೆ.

ಇದನ್ನೂ ಓದಿ: ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ಮೊದಲ ಲಸಿಕೆ ತಾಲೀಮು (ಡ್ರೈ ರನ್) ಅಸ್ಸಾಂ, ಆಂಧ್ರಪ್ರದೇಶ, ಪಂಜಾಬ್ ಮತ್ತು ಗುಜರಾತ್ ರಾಜ್ಯಗಳ ತಲಾ ನಾಲ್ಕು ಕೇಂದ್ರಗಳಲ್ಲಿ ನಡೆದಿತ್ತು. ಪ್ರತಿ ಕೇಂದ್ರದಲ್ಲಿ 100 ಜನರಿಗೆ ಲಸಿಕೆ ಹಾಕುವ ಕಾರ್ಯಕ್ರಮ ಇದಾಗಿತ್ತು. ಅಂದರೆ 16 ಕೇಂದ್ರಗಳಲ್ಲಿ 1,600 ಜನರಿಗೆ ಲಸಿಕೆ ಹಾಕುವ ಪ್ರಯೋಗ. ಈ ಸಣ್ಣ ಪ್ರಮಾಣದ ಸಂಖ್ಯೆಯಿದ್ದರೂ ಹಲವು ಲೋಪಗಳು ಕಂಡುಬಂದಿದ್ದವು.

ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಲೋಪಗಳು:

1. ದೂರದ ಗ್ರಾಮಗಳ ಪಿನ್‌ಕೋಡ್ ಸಂಖ್ಯೆ ಕೊ-ವಿನ್ ಪ್ಲಾಟ್‌ಫಾರಂಗೆ ಸರಿಯಾಗಿ ಹೊಂದಾಣಿಕೆ ಆಗದೇ ಇದ್ದಿದ್ದು. ಕೊ-ವಿನ್  ವ್ಯವಸ್ಥೆ ಲಸಿಕಾ ಕಾರ್ಯಕ್ರಮದ ಮಹತ್ತರ ಡಿಜಿಟಲ್ ವ್ಯವಸ್ಥೆಯಾಗಿದ್ದು, ಅದು ಇಡೀ ಲಸಿಕಾ ಕಾರ್ಯಕ್ರಮವನ್ನು ಟ್ರ್ಯಾಕ್ ಮಾಡುತ್ತಿರುತ್ತದೆ. ಮೊದಲ ಡ್ರೈ ರನ್‌ನಲ್ಲಿ ಕೊ-ವಿನ್ ದೂರದ ಗ್ರಾಮಗಳ ಪಿನ್‌ಕೋಡ್ ಮ್ಯಾಪಿಂಗ್‌ನಲ್ಲಿ ವಿಫಲವಾದ ನಂತರ, ಆರೋಗ್ಯಾಧಿಕಾರಿಗಳು ಮ್ಯಾನುವಲ್ ಆಗಿ ಪಿನ್‌ಕೋಡ್ ದಾಖಲಿಸಿದ್ದರು. ಈಗ ಎರಡನೇ  ತಾಲೀಮಿನಲ್ಲಿ ಸಾಫ್ಟ್‌ವೇರ್ ಅನ್ನು ಸಂಪೂರ್ಣ ಸಜ್ಜುಗೊಳಿಸಲಾಗಿದೆ ಎನ್ನಲಾಗಿದೆ.

Image
PC: ANI

2. ಲಸಿಕೆ ನೀಡುವಾಗ ಅಥವಾ ನೀಡಿದ ನಂತರ ಸಂಭವಿಸಬಹುದಾದ ಅಹಿತಕರ ಘಟನೆ ಅಥವಾ ಅಡ್ಡ ಪರಿಣಾಮಗಳನ್ನು ಆಗಲೇ (ರಿಯಲ್ ಟೈಮ್‌ನಲ್ಲಿ) ದಾಖಲಿಸಿಕೊಳ್ಳಲು ಆಗದೇ ಇದ್ದುದು. ಇಂತಹ ಘಟನೆಗಳು ಇಡೀ ಸೆಷನ್ ಮುಗಿದ ನಂತರವಷ್ಟೇ (ಮೊದಲ ಹಂತದಲ್ಲಿ 100 ಜನರಿಗೆ ಲಸಿಕೆ ನೀಡಿದ ನಂತರ) ಕೊ-ವಿನ್‌ಗೆ ಒಮ್ಮೆಲೇ ಅಪ್‌ಲೋಡ್ ಆಗುತ್ತಿದ್ದವು.

3. ಲಸಿಕಾ ತಂಡಕ್ಕೆ ಸಿಕ್ಕಿರುವ ಅಸಮರ್ಪಕ ತರಬೇತಿ. ಕೆಲವು ಕಡೆ ಐವರ ಲಸಿಕಾ ತಂಡದಲ್ಲಿ, ಯಾರು ಯಾವ ಕೆಲಸ ಮಾಡಬೇಕು ಎಂಬುದೇ ಗೊಂದಲಮಯವಾಗಿತ್ತು.

ಒಬ್ಬ ಪ್ರಿಸೈಡಿಂಗ್ ಆಫೀಸರ್ ಮತ್ತು ನಾಲ್ಕು ವ್ಯಾಕಿನೇಟರ್‌ಗಳ ನಡುವೆ ಸಾಕಷ್ಟು ಗೊಂದಲವಿತ್ತು. ಯಾರು ವ್ಯಾಕಿನೇಟರ್, ಯಾರು ಪ್ರಿಸೈಡಿಂಗ್ ಆಫೀಸರ್ ಎಂಬ ಗೊಂದಲವೂ ಮೂಡಿದ ಪ್ರಕರಣಗಳು ನಡೆದಿವೆ.  ಈ ಹಿನ್ನೆಲೆ ಎರಡನೇ ತಾಲೀಮಿಗೆ ತಯಾರಾಗಿರುವ ತಂಡಗಳಿಗೆ ಸರಿಯದ ತರಬೇತಿ ನೀಡಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಹೇಳುತ್ತಿವೆ.


ಇದನ್ನೂ ಓದಿ: ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....