Homeಕರೋನಾ ತಲ್ಲಣಡ್ರೈ ರನ್ ಎಂದರೇನು?: ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಮೂರು ಲೋಪಗಳು

ಡ್ರೈ ರನ್ ಎಂದರೇನು?: ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಮೂರು ಲೋಪಗಳು

ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳ 16 ಕೇಂದ್ರಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ.

- Advertisement -
- Advertisement -

ದೇಶದಲ್ಲಿ ಎರಡನೇ ಹಂತದ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ. ದೇಶದ 116 ಜಿಲ್ಲೆಗಳ 259 ಕೇಂದ್ರಗಳಲ್ಲಿ ಲಸಿಕೆ ತಾಲೀಮು ಆರಂಭವಾಗಿದೆ. ಅತಿ ದೊಡ್ಡ ಲಸಿಕೆ ವಿತರಣೆ ಕಾರ್ಯದ ಅಂಗವಾಗಿ ದೇಶದಲ್ಲಿ ಈ ತಾಲೀಮು ನಡೆಯುತ್ತಿದೆ.

ಮೊದಲ ತಾಲೀಮು, ಅಸ್ಸಾಂ, ಆಂಧ್ರಪ್ರದೇಶ, ಪಂಜಾಬ್ ಮತ್ತು ಗುಜರಾತ್ ನಾಲ್ಕು ರಾಜ್ಯಗಳಲ್ಲಿ ಡಿಸೆಂಬರ್ 28, 29 ರಂದು ನಡೆದಿದೆ. ಈ ಪ್ರಯೋಗದಲ್ಲಿ ಮೂರು ಪ್ರಮುಖ ಲೋಪಗಳು ಕಂಡು ಬಂದಿದ್ದು, ಅವುಗಳನ್ನು ಸರಿಪಡಿಸುವ ಕೆಲಸ ಎರಡನೇ ಹಂತದ ತಾಲೀಮಿನಲ್ಲಿ ನಡೆದಿದೆ.

ಡ್ರೈ ರನ್ ಎಂದರೇನು?

ಲಸಿಕೆ ಹೇಗೆ ಕೊಡಬೇಕೆಂದು ಪೂರ್ವತಯಾರಿ ನಡೆಸಿ ತಾಲೀಮು ನಡೆಸುವುದನ್ನು ಡ್ರೈ ರನ್ ಎನ್ನುತ್ತಾರೆ. ಲಸಿಕೆ ತಾಲೀಮಿನಲ್ಲಿ ನೈಜ್ಯ ಲಸಿಕೆಯನ್ನು ಹೊರತು ಪಡಿಸಿ ಉಳಿದೆಲ್ಲಾ ಲಸಿಕೆ ವಿತರಣೆ ಯೋಜನೆಯ ಎಲ್ಲ ಪ್ರಕ್ರಿಯೆಗಳು ನಡೆಯಲಿದೆ. ಲಸಿಕೆ ಸಂಗ್ರಹಣೆ ವ್ಯವಸ್ಥೆ, ದಾಖಲೆಗಳ ಪರಿಶೀಲನೆ, ಲಸಿಕೆ ಸಾಗಣಿಕೆ, ಭದ್ರತೆ, ಮೆಲಧಿಕಾರಿಗಳಿಗೆ ವರದಿ ಒಪ್ಪಿಸುವುದು. ಲಸಿಕೆ ವಿತರಣೆಯಲ್ಲಿ ಉಂಟಾಗುವ ಲೋಪದೋಷಗಳನ್ನು ಪರೀಕ್ಷಿಸಲು ಈ ಡ್ರೈ ರನ್ ನಡೆಸಲಾಗುತ್ತಿದೆ.

ಇದನ್ನೂ ಓದಿ: ಭಾರತದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಬಳಕೆಗೆ ಹಸಿರು ನಿಶಾನೆ

ಲಸಿಕೆ ತಾಲೀಮು ನಡೆಸಲು ಸುಮಾರು 96,000 ವ್ಯಾಕ್ಸಿನೇಟರ್‌ಗಳಿಗೆ ತರಬೇತಿ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಪೈಕಿ 2,360 ಮಂದಿಗೆ ರಾಷ್ಟ್ರೀಯ ತರಬೇತುದಾರರ ತರಬೇತಿ ಕೇಂದ್ರದಲ್ಲಿ ಮತ್ತು 57,000 ಕ್ಕೂ ಹೆಚ್ಚು ಜನರಿಗೆ ಜಿಲ್ಲಾ ಮಟ್ಟದಲ್ಲಿ 719 ಜಿಲ್ಲೆಗಳಲ್ಲಿ ತರಬೇತಿ ನೀಡಲಾಗಿದೆ.

ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳ 16 ಕೇಂದ್ರಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ. ಜಿಲ್ಲಾ ಮಟ್ಟದಲ್ಲಿ ಒಂದು ಕೇಂದ್ರ, ತಾಲೂಕು ಮಟ್ಟದಲ್ಲಿ ಒಂದು ಮತ್ತು ಗ್ರಾಮೀಣ ಮಟ್ಟದಲ್ಲಿ ಒಂದೊಂದು ಪ್ರಾಥಮಿಕ ಕೇಂದ್ರಗಳಲ್ಲಿ ಪ್ರಯೋಗ ನಡೆಯಲಿದೆ.

ಇದನ್ನೂ ಓದಿ: ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ಮೊದಲ ಲಸಿಕೆ ತಾಲೀಮು (ಡ್ರೈ ರನ್) ಅಸ್ಸಾಂ, ಆಂಧ್ರಪ್ರದೇಶ, ಪಂಜಾಬ್ ಮತ್ತು ಗುಜರಾತ್ ರಾಜ್ಯಗಳ ತಲಾ ನಾಲ್ಕು ಕೇಂದ್ರಗಳಲ್ಲಿ ನಡೆದಿತ್ತು. ಪ್ರತಿ ಕೇಂದ್ರದಲ್ಲಿ 100 ಜನರಿಗೆ ಲಸಿಕೆ ಹಾಕುವ ಕಾರ್ಯಕ್ರಮ ಇದಾಗಿತ್ತು. ಅಂದರೆ 16 ಕೇಂದ್ರಗಳಲ್ಲಿ 1,600 ಜನರಿಗೆ ಲಸಿಕೆ ಹಾಕುವ ಪ್ರಯೋಗ. ಈ ಸಣ್ಣ ಪ್ರಮಾಣದ ಸಂಖ್ಯೆಯಿದ್ದರೂ ಹಲವು ಲೋಪಗಳು ಕಂಡುಬಂದಿದ್ದವು.

ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಲೋಪಗಳು:

1. ದೂರದ ಗ್ರಾಮಗಳ ಪಿನ್‌ಕೋಡ್ ಸಂಖ್ಯೆ ಕೊ-ವಿನ್ ಪ್ಲಾಟ್‌ಫಾರಂಗೆ ಸರಿಯಾಗಿ ಹೊಂದಾಣಿಕೆ ಆಗದೇ ಇದ್ದಿದ್ದು. ಕೊ-ವಿನ್  ವ್ಯವಸ್ಥೆ ಲಸಿಕಾ ಕಾರ್ಯಕ್ರಮದ ಮಹತ್ತರ ಡಿಜಿಟಲ್ ವ್ಯವಸ್ಥೆಯಾಗಿದ್ದು, ಅದು ಇಡೀ ಲಸಿಕಾ ಕಾರ್ಯಕ್ರಮವನ್ನು ಟ್ರ್ಯಾಕ್ ಮಾಡುತ್ತಿರುತ್ತದೆ. ಮೊದಲ ಡ್ರೈ ರನ್‌ನಲ್ಲಿ ಕೊ-ವಿನ್ ದೂರದ ಗ್ರಾಮಗಳ ಪಿನ್‌ಕೋಡ್ ಮ್ಯಾಪಿಂಗ್‌ನಲ್ಲಿ ವಿಫಲವಾದ ನಂತರ, ಆರೋಗ್ಯಾಧಿಕಾರಿಗಳು ಮ್ಯಾನುವಲ್ ಆಗಿ ಪಿನ್‌ಕೋಡ್ ದಾಖಲಿಸಿದ್ದರು. ಈಗ ಎರಡನೇ  ತಾಲೀಮಿನಲ್ಲಿ ಸಾಫ್ಟ್‌ವೇರ್ ಅನ್ನು ಸಂಪೂರ್ಣ ಸಜ್ಜುಗೊಳಿಸಲಾಗಿದೆ ಎನ್ನಲಾಗಿದೆ.

Image
PC: ANI

2. ಲಸಿಕೆ ನೀಡುವಾಗ ಅಥವಾ ನೀಡಿದ ನಂತರ ಸಂಭವಿಸಬಹುದಾದ ಅಹಿತಕರ ಘಟನೆ ಅಥವಾ ಅಡ್ಡ ಪರಿಣಾಮಗಳನ್ನು ಆಗಲೇ (ರಿಯಲ್ ಟೈಮ್‌ನಲ್ಲಿ) ದಾಖಲಿಸಿಕೊಳ್ಳಲು ಆಗದೇ ಇದ್ದುದು. ಇಂತಹ ಘಟನೆಗಳು ಇಡೀ ಸೆಷನ್ ಮುಗಿದ ನಂತರವಷ್ಟೇ (ಮೊದಲ ಹಂತದಲ್ಲಿ 100 ಜನರಿಗೆ ಲಸಿಕೆ ನೀಡಿದ ನಂತರ) ಕೊ-ವಿನ್‌ಗೆ ಒಮ್ಮೆಲೇ ಅಪ್‌ಲೋಡ್ ಆಗುತ್ತಿದ್ದವು.

3. ಲಸಿಕಾ ತಂಡಕ್ಕೆ ಸಿಕ್ಕಿರುವ ಅಸಮರ್ಪಕ ತರಬೇತಿ. ಕೆಲವು ಕಡೆ ಐವರ ಲಸಿಕಾ ತಂಡದಲ್ಲಿ, ಯಾರು ಯಾವ ಕೆಲಸ ಮಾಡಬೇಕು ಎಂಬುದೇ ಗೊಂದಲಮಯವಾಗಿತ್ತು.

ಒಬ್ಬ ಪ್ರಿಸೈಡಿಂಗ್ ಆಫೀಸರ್ ಮತ್ತು ನಾಲ್ಕು ವ್ಯಾಕಿನೇಟರ್‌ಗಳ ನಡುವೆ ಸಾಕಷ್ಟು ಗೊಂದಲವಿತ್ತು. ಯಾರು ವ್ಯಾಕಿನೇಟರ್, ಯಾರು ಪ್ರಿಸೈಡಿಂಗ್ ಆಫೀಸರ್ ಎಂಬ ಗೊಂದಲವೂ ಮೂಡಿದ ಪ್ರಕರಣಗಳು ನಡೆದಿವೆ.  ಈ ಹಿನ್ನೆಲೆ ಎರಡನೇ ತಾಲೀಮಿಗೆ ತಯಾರಾಗಿರುವ ತಂಡಗಳಿಗೆ ಸರಿಯದ ತರಬೇತಿ ನೀಡಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಹೇಳುತ್ತಿವೆ.


ಇದನ್ನೂ ಓದಿ: ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...