Homeಕರೋನಾ ತಲ್ಲಣಡ್ರೈ ರನ್ ಎಂದರೇನು?: ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಮೂರು ಲೋಪಗಳು

ಡ್ರೈ ರನ್ ಎಂದರೇನು?: ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಮೂರು ಲೋಪಗಳು

ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳ 16 ಕೇಂದ್ರಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ.

- Advertisement -
- Advertisement -

ದೇಶದಲ್ಲಿ ಎರಡನೇ ಹಂತದ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ. ದೇಶದ 116 ಜಿಲ್ಲೆಗಳ 259 ಕೇಂದ್ರಗಳಲ್ಲಿ ಲಸಿಕೆ ತಾಲೀಮು ಆರಂಭವಾಗಿದೆ. ಅತಿ ದೊಡ್ಡ ಲಸಿಕೆ ವಿತರಣೆ ಕಾರ್ಯದ ಅಂಗವಾಗಿ ದೇಶದಲ್ಲಿ ಈ ತಾಲೀಮು ನಡೆಯುತ್ತಿದೆ.

ಮೊದಲ ತಾಲೀಮು, ಅಸ್ಸಾಂ, ಆಂಧ್ರಪ್ರದೇಶ, ಪಂಜಾಬ್ ಮತ್ತು ಗುಜರಾತ್ ನಾಲ್ಕು ರಾಜ್ಯಗಳಲ್ಲಿ ಡಿಸೆಂಬರ್ 28, 29 ರಂದು ನಡೆದಿದೆ. ಈ ಪ್ರಯೋಗದಲ್ಲಿ ಮೂರು ಪ್ರಮುಖ ಲೋಪಗಳು ಕಂಡು ಬಂದಿದ್ದು, ಅವುಗಳನ್ನು ಸರಿಪಡಿಸುವ ಕೆಲಸ ಎರಡನೇ ಹಂತದ ತಾಲೀಮಿನಲ್ಲಿ ನಡೆದಿದೆ.

ಡ್ರೈ ರನ್ ಎಂದರೇನು?

ಲಸಿಕೆ ಹೇಗೆ ಕೊಡಬೇಕೆಂದು ಪೂರ್ವತಯಾರಿ ನಡೆಸಿ ತಾಲೀಮು ನಡೆಸುವುದನ್ನು ಡ್ರೈ ರನ್ ಎನ್ನುತ್ತಾರೆ. ಲಸಿಕೆ ತಾಲೀಮಿನಲ್ಲಿ ನೈಜ್ಯ ಲಸಿಕೆಯನ್ನು ಹೊರತು ಪಡಿಸಿ ಉಳಿದೆಲ್ಲಾ ಲಸಿಕೆ ವಿತರಣೆ ಯೋಜನೆಯ ಎಲ್ಲ ಪ್ರಕ್ರಿಯೆಗಳು ನಡೆಯಲಿದೆ. ಲಸಿಕೆ ಸಂಗ್ರಹಣೆ ವ್ಯವಸ್ಥೆ, ದಾಖಲೆಗಳ ಪರಿಶೀಲನೆ, ಲಸಿಕೆ ಸಾಗಣಿಕೆ, ಭದ್ರತೆ, ಮೆಲಧಿಕಾರಿಗಳಿಗೆ ವರದಿ ಒಪ್ಪಿಸುವುದು. ಲಸಿಕೆ ವಿತರಣೆಯಲ್ಲಿ ಉಂಟಾಗುವ ಲೋಪದೋಷಗಳನ್ನು ಪರೀಕ್ಷಿಸಲು ಈ ಡ್ರೈ ರನ್ ನಡೆಸಲಾಗುತ್ತಿದೆ.

ಇದನ್ನೂ ಓದಿ: ಭಾರತದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಬಳಕೆಗೆ ಹಸಿರು ನಿಶಾನೆ

ಲಸಿಕೆ ತಾಲೀಮು ನಡೆಸಲು ಸುಮಾರು 96,000 ವ್ಯಾಕ್ಸಿನೇಟರ್‌ಗಳಿಗೆ ತರಬೇತಿ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಪೈಕಿ 2,360 ಮಂದಿಗೆ ರಾಷ್ಟ್ರೀಯ ತರಬೇತುದಾರರ ತರಬೇತಿ ಕೇಂದ್ರದಲ್ಲಿ ಮತ್ತು 57,000 ಕ್ಕೂ ಹೆಚ್ಚು ಜನರಿಗೆ ಜಿಲ್ಲಾ ಮಟ್ಟದಲ್ಲಿ 719 ಜಿಲ್ಲೆಗಳಲ್ಲಿ ತರಬೇತಿ ನೀಡಲಾಗಿದೆ.

ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳ 16 ಕೇಂದ್ರಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ. ಜಿಲ್ಲಾ ಮಟ್ಟದಲ್ಲಿ ಒಂದು ಕೇಂದ್ರ, ತಾಲೂಕು ಮಟ್ಟದಲ್ಲಿ ಒಂದು ಮತ್ತು ಗ್ರಾಮೀಣ ಮಟ್ಟದಲ್ಲಿ ಒಂದೊಂದು ಪ್ರಾಥಮಿಕ ಕೇಂದ್ರಗಳಲ್ಲಿ ಪ್ರಯೋಗ ನಡೆಯಲಿದೆ.

ಇದನ್ನೂ ಓದಿ: ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ಮೊದಲ ಲಸಿಕೆ ತಾಲೀಮು (ಡ್ರೈ ರನ್) ಅಸ್ಸಾಂ, ಆಂಧ್ರಪ್ರದೇಶ, ಪಂಜಾಬ್ ಮತ್ತು ಗುಜರಾತ್ ರಾಜ್ಯಗಳ ತಲಾ ನಾಲ್ಕು ಕೇಂದ್ರಗಳಲ್ಲಿ ನಡೆದಿತ್ತು. ಪ್ರತಿ ಕೇಂದ್ರದಲ್ಲಿ 100 ಜನರಿಗೆ ಲಸಿಕೆ ಹಾಕುವ ಕಾರ್ಯಕ್ರಮ ಇದಾಗಿತ್ತು. ಅಂದರೆ 16 ಕೇಂದ್ರಗಳಲ್ಲಿ 1,600 ಜನರಿಗೆ ಲಸಿಕೆ ಹಾಕುವ ಪ್ರಯೋಗ. ಈ ಸಣ್ಣ ಪ್ರಮಾಣದ ಸಂಖ್ಯೆಯಿದ್ದರೂ ಹಲವು ಲೋಪಗಳು ಕಂಡುಬಂದಿದ್ದವು.

ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಲೋಪಗಳು:

1. ದೂರದ ಗ್ರಾಮಗಳ ಪಿನ್‌ಕೋಡ್ ಸಂಖ್ಯೆ ಕೊ-ವಿನ್ ಪ್ಲಾಟ್‌ಫಾರಂಗೆ ಸರಿಯಾಗಿ ಹೊಂದಾಣಿಕೆ ಆಗದೇ ಇದ್ದಿದ್ದು. ಕೊ-ವಿನ್  ವ್ಯವಸ್ಥೆ ಲಸಿಕಾ ಕಾರ್ಯಕ್ರಮದ ಮಹತ್ತರ ಡಿಜಿಟಲ್ ವ್ಯವಸ್ಥೆಯಾಗಿದ್ದು, ಅದು ಇಡೀ ಲಸಿಕಾ ಕಾರ್ಯಕ್ರಮವನ್ನು ಟ್ರ್ಯಾಕ್ ಮಾಡುತ್ತಿರುತ್ತದೆ. ಮೊದಲ ಡ್ರೈ ರನ್‌ನಲ್ಲಿ ಕೊ-ವಿನ್ ದೂರದ ಗ್ರಾಮಗಳ ಪಿನ್‌ಕೋಡ್ ಮ್ಯಾಪಿಂಗ್‌ನಲ್ಲಿ ವಿಫಲವಾದ ನಂತರ, ಆರೋಗ್ಯಾಧಿಕಾರಿಗಳು ಮ್ಯಾನುವಲ್ ಆಗಿ ಪಿನ್‌ಕೋಡ್ ದಾಖಲಿಸಿದ್ದರು. ಈಗ ಎರಡನೇ  ತಾಲೀಮಿನಲ್ಲಿ ಸಾಫ್ಟ್‌ವೇರ್ ಅನ್ನು ಸಂಪೂರ್ಣ ಸಜ್ಜುಗೊಳಿಸಲಾಗಿದೆ ಎನ್ನಲಾಗಿದೆ.

Image
PC: ANI

2. ಲಸಿಕೆ ನೀಡುವಾಗ ಅಥವಾ ನೀಡಿದ ನಂತರ ಸಂಭವಿಸಬಹುದಾದ ಅಹಿತಕರ ಘಟನೆ ಅಥವಾ ಅಡ್ಡ ಪರಿಣಾಮಗಳನ್ನು ಆಗಲೇ (ರಿಯಲ್ ಟೈಮ್‌ನಲ್ಲಿ) ದಾಖಲಿಸಿಕೊಳ್ಳಲು ಆಗದೇ ಇದ್ದುದು. ಇಂತಹ ಘಟನೆಗಳು ಇಡೀ ಸೆಷನ್ ಮುಗಿದ ನಂತರವಷ್ಟೇ (ಮೊದಲ ಹಂತದಲ್ಲಿ 100 ಜನರಿಗೆ ಲಸಿಕೆ ನೀಡಿದ ನಂತರ) ಕೊ-ವಿನ್‌ಗೆ ಒಮ್ಮೆಲೇ ಅಪ್‌ಲೋಡ್ ಆಗುತ್ತಿದ್ದವು.

3. ಲಸಿಕಾ ತಂಡಕ್ಕೆ ಸಿಕ್ಕಿರುವ ಅಸಮರ್ಪಕ ತರಬೇತಿ. ಕೆಲವು ಕಡೆ ಐವರ ಲಸಿಕಾ ತಂಡದಲ್ಲಿ, ಯಾರು ಯಾವ ಕೆಲಸ ಮಾಡಬೇಕು ಎಂಬುದೇ ಗೊಂದಲಮಯವಾಗಿತ್ತು.

ಒಬ್ಬ ಪ್ರಿಸೈಡಿಂಗ್ ಆಫೀಸರ್ ಮತ್ತು ನಾಲ್ಕು ವ್ಯಾಕಿನೇಟರ್‌ಗಳ ನಡುವೆ ಸಾಕಷ್ಟು ಗೊಂದಲವಿತ್ತು. ಯಾರು ವ್ಯಾಕಿನೇಟರ್, ಯಾರು ಪ್ರಿಸೈಡಿಂಗ್ ಆಫೀಸರ್ ಎಂಬ ಗೊಂದಲವೂ ಮೂಡಿದ ಪ್ರಕರಣಗಳು ನಡೆದಿವೆ.  ಈ ಹಿನ್ನೆಲೆ ಎರಡನೇ ತಾಲೀಮಿಗೆ ತಯಾರಾಗಿರುವ ತಂಡಗಳಿಗೆ ಸರಿಯದ ತರಬೇತಿ ನೀಡಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಹೇಳುತ್ತಿವೆ.


ಇದನ್ನೂ ಓದಿ: ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...